HomeಮುಖಪುಟPM-CARES ಸರ್ಕಾರದ ನಿಯಂತ್ರಣದಲ್ಲಿದೆ; ಆದರೆ RTI ವ್ಯಾಪ್ತಿಗೆ ಬರುವುದಿಲ್ಲ ಎಂದ ಸರ್ಕಾರ!

PM-CARES ಸರ್ಕಾರದ ನಿಯಂತ್ರಣದಲ್ಲಿದೆ; ಆದರೆ RTI ವ್ಯಾಪ್ತಿಗೆ ಬರುವುದಿಲ್ಲ ಎಂದ ಸರ್ಕಾರ!

PM-CARES ಸರ್ಕಾರ ಸ್ಥಾಪಿಸಿದೆ. ಆದರೆ, ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಮಾಹಿತಿ ಹಕ್ಕು ಕಾನೂನಿನ (RTI) ಅಡಿಯಲ್ಲಿ ಬರುವುದಿಲ್ಲ ಎಂದು ಸರ್ಕಾರ ಹೇಳಿದೆ.

- Advertisement -
- Advertisement -

ಕೊರೊನಾ ಪರಿಹಾರ ನಿಧಿ ಸಂಗ್ರಹಿಸಲೆಂದು ಸರ್ಕಾರ PM-CARES ಸ್ಥಾಪಿಸಿದೆ. ಹಾಗಾಗಿ ಅದೊಂದು ಸರ್ಕಾರಿ ಟ್ರಸ್ಟ್ ಆಗಿದೆ. ಆದರೆ ಆರ್‌ಟಿಐ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೊಸ ಆರ್‌ಟಿಐ ಅರ್ಜಿಗೆ ಸರ್ಕಾರ ಮಾಹಿತಿ ನೀಡಿದೆ.

ಸರ್ಕಾರ ತನ್ನ ವೆಬ್‌ಸೈಟ್‌ನಲ್ಲಿ ಖಾಸಗಿ ಎಂದು ಬರೆದುಕೊಂಡಿದ್ದನ್ನು ಪ್ರಶ್ನಿಸಿದ ಹೊಸ ಆರ್‌ಟಿಐ ಅರ್ಜಿಗೆ ಉತ್ತರಿಸುವಾಗ ಅದು ಉಲ್ಟಾ ಹೊಡೆದಿದೆ. ಖಾಸಗಿ ಮಾಧ್ಯಮ ಸಂಸ್ಥೆ ಸಲ್ಲಿಸಿರುವ ಆರ್‌ಟಿಐಗೆ ನೀಡಿರುವ ಪ್ರತ್ಯುತ್ತರದಲ್ಲಿ, PM-CARES “ಭಾರತ ಸರ್ಕಾರದ ಒಡೆತನದಲ್ಲಿದೆ, ಸರ್ಕಾರದಿಂದ ನಿಯಂತ್ರಿಸಲ್ಪಡುತ್ತದೆ ಮತ್ತು ಸರ್ಕಾರದಿಂದ ಸ್ಥಾಪಿಸಲ್ಪಟ್ಟಿದೆ” ಎಂದು ಹೇಳಿದೆ.

ಆದರೆ, PM-CARES ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಮಾಹಿತಿ ಹಕ್ಕು ಕಾನೂನಿನ (RTI) ಅಡಿಯಲ್ಲಿ ಬರುವುದಿಲ್ಲ ಎಂದು ಸರ್ಕಾರ ಸಮರ್ಥನೆ ನೀಡಿದೆ.

ಡಿಸೆಂಬರ್‌ 24 ರ ಆರ್‌ಟಿಐಗೆ ಉತ್ತರ ನೀಡಿರುವ ಟ್ರಸ್ಟ್, ’ ಈ ನಿಧಿಗೆ ವ್ಯಯಕ್ತಿಕವಾಗಿ ವ್ಯಕ್ತಿಗಳು, ಸಂಸ್ಥೆಗಳು, ಕಾರ್ಪೊರೇಟ್‌ಗಳು, ವಿದೇಶಿ ವ್ಯಕ್ತಿಗಳು, ವಿದೇಶಿ ಸಂಸ್ಥೆಗಳು ಸಂಪೂರ್ಣವಾಗಿ ದೇಣಿಗೆ, ಹಣಕಾಸು ಒದಗಿಸುತ್ತದೆ. ಈ ನಿಧಿಗೆ ಸರ್ಕಾರ ಹಣಕಾಸು ಒದಗಿಸುವುದಿಲ್ಲ. ಹೀಗಾಗಿ ಖಾಸಗಿ ವ್ಯಕ್ತಿಗಳು ಇದರ ಟ್ರಸ್ಟಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 2 (h) ಪ್ರಕಾರ ಈ ನಿಧಿಯನ್ನು ಸಾರ್ವಜನಿಕ ಪ್ರಾಧಿಕಾರವೆಂದು ಪರಿಗಣಿಸಲಾಗುವುದಿಲ್ಲ’ ಎಂದು ಹೇಳಿದೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ಪ್ರಧಾನಮಂತ್ರಿ ಅಧ್ಯಕ್ಷರಾಗಿರುವ PM-CARES ಟ್ರಸ್ಟ್‌ನ ನಿಧಿಯನ್ನು ದೆಹಲಿಯ ಕಂದಾಯ ಇಲಾಖೆಯಲ್ಲಿ ನೋಂದಾಯಿಸಲಾಗಿದೆ. ಆದರೆ ಸಾರ್ವಜನಿಕಗೊಂಡಿರುವ ಟ್ರಸ್ಟ್‌ನ ದಾಖಲೆ ಪತ್ರವು ಇದನ್ನು ಸರ್ಕಾರಿ ಟ್ರಸ್ಟ್ ಎಂದು ಹೇಳುವುದಿಲ್ಲ.

ಮಾರ್ಚ್ 27 ರಂದು ಈ ಟ್ರಸ್ಟ್ ನೋಂದಾಯಿಸಲಾಗಿದ್ದು, ಮಾರ್ಚ್ 28 ರಂದು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಕಾರ್ಪೊರೇಟ್ ದೇಣಿಗೆ ಸ್ವೀಕರಿಸಲು ”ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ” (CSR)ಯ  ಅರ್ಹತೆ ಇರುವ ಜ್ಞಾಪಕ ಪತ್ರವನ್ನು PM-CARESಗೆ ನೀಡಿತ್ತು.

ಪಿಎಂ ಕೇರ್ಸ್‌‌ನ ಅಧಿಕೃತ ದಾಖಲೆಗಳಲ್ಲಿ ವಿರೋಧಾಭಾಸವು ಹೊರಹೊಮ್ಮಿದ ನಂತರ ನಿಧಿಯ ಬಗೆಗಿನ ಗೊಂದಲ ಹೆಚ್ಚಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ತುರ್ತು ಪರಿಸ್ಥಿತಿಯಲ್ಲಿ ಈ ನಿಧಿಯನ್ನು ಬಳಸುವ ಸಲುವಾಗಿ ವಿವಿಧ ದಾನಿಗಳಿಂದ ದೇಣಿಗೆ ಪಡೆಯುವ ಸರ್ಕಾರಿ ಘಟಕವೆಂದು ಪಿಎಂ ಕೇರ್ಸ್ ಸ್ಥಾಪಿಸಲಾಗಿತ್ತು.

ಇದನ್ನೂ ಓದಿ: ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ ಕೇರ್ಸ್ ಬಗ್ಗೆ ಟ್ರಸ್ಟ್ ಹೇಳುವ ವಿಚಾರಕ್ಕೂ, ಸರ್ಕಾರ ನೀಡುವ ಉತ್ತರಕ್ಕೂ ಸಾಕಷ್ಟು ಗೊಂದಲಗಳಿವೆ. ಸರ್ಕಾರ ಈಗ ಇದು ಸಾರ್ವಜನಿಕ ನಿಧಿ ಎಂದು ಹೇಳುತ್ತಲೇ ಮಾಹಿತಿ ಹಕ್ಕನ್ನೂ ನಿರಾಕರಿಸಿದೆ. ಇದು ಮೊದಲೇನು ಅಲ್ಲ, ಕೋಟ್ಯಾಂತರ ರೂಪಾಯಿ ಹರಿದು ಬಂದಿರುವ ಪಿಎಂ ಕೇರ್ಸ್ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ಕೇಂದ್ರ ಸರ್ಕಾರ ಬಿಟ್ಟು ಕೊಡುತ್ತಿಲ್ಲ.

ಪಿಎಂ ಕೇರ್ಸ್ ನಿಧಿಯ ಬಳಕೆ ಬಗ್ಗೆ ಮಾಹಿತಿ ಕೇಳಿ ಹಲವಾರು ಅರ್ಜಿಗಳು ದಾಖಲಾಗಿರುವ ಪ್ರತಿ ಬಾರಿಯೂ,  ಅಂತಹ ಮಾಹಿತಿ ಒದಗಿಸುವುದು “ಕಚೇರಿಯ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ” ಕಾರಣವಾಗುತ್ತದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿದೆ.

ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮತ್ತು ಹೈಕೋರ್ಟ್‌, ಕೇಂದ್ರ ಮಾಹಿತಿ ಆಯೋಗದ ತೀರ್ಪುಗಳ ಹೊರತಾಗಿಯೂ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಪಿಎಂಒ ಕಚೇರಿ ಹೇಳುತ್ತಲೇ ಇದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ಎಡಪಕ್ಷಗಳೊಂದಿಗೆ ‘ಕೈ’ ಜೋಡಿಸಲು ಒಪ್ಪಿಗೆ – ಅಧೀರ್‌ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....