Homeಮುಖಪುಟಪಿಎಂ ಕೇರ್ಸ್‌, ಕಾರ್ಪೋರೇಟ್‌ ಜವಾಬ್ದಾರಿಯ CSR ಮತ್ತು ಖಾಸಗಿ ಲಾಬಿ: ನಾವು ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವೆ

ಪಿಎಂ ಕೇರ್ಸ್‌, ಕಾರ್ಪೋರೇಟ್‌ ಜವಾಬ್ದಾರಿಯ CSR ಮತ್ತು ಖಾಸಗಿ ಲಾಬಿ: ನಾವು ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವೆ

ಕಳೆದ ವರ್ಷ ಕೇವಲ ಈ 10 ಕಂಪೆನಿಗಳು ಈ ದೇಶದಲ್ಲಿ ಗಳಿಸಿರುವ ಲಾಭದ ಪ್ರಮಾಣ ಮಾತ್ರ 223.2 ಬಿಲಿಯನ್ ಡಾಲರ್. ಅಂದರೆ ಉಳಿದ ಕಂಪೆನಿಗಳ ಲಾಭವೂ ಸೇರಿದಂತೆ ಒಂದು ವರ್ಷಕ್ಕೆ CSR FUND ಅಡಿಯಲ್ಲಿ ಸಾಮಾಜಿಕ ಕಾರ್ಯಕ್ಕೆ ಸಂಗ್ರಹವಾಗಬೇಕಾದ ಹಣ ಎಷ್ಟು?

- Advertisement -
- Advertisement -

ಕೊರೋನಾ ವೈರಸ್ ದೇಶದಲ್ಲಿ ಭೀತಿಯನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪಿಎಂ ಕೇರ್ಸ್ (PM CARES) ಮತ್ತು CSR ಸಾಕಷ್ಟು ಸುದ್ದಿ ಮಾಡುತ್ತಿವೆ. ಅಸಲಿಗೆ ದೇಶದಲ್ಲಿ ಎಲ್ಲೇ ಪ್ರಕೃತಿ ವಿಕೋಪಗಳು ಸಂಭವಿಸಿದರೂ ಸಹ ದೇಣಿಗೆ ಸಂಗ್ರಹಿಸಲು ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿ ಪರಿಹಾರ ನಿಧಿ ಇದೆ. ಕಳೆದ ವರ್ಷ ಕನಾಟಕ ಮತ್ತು ಕೇರಳದಲ್ಲಿ ದೊಡ್ಡ ಮಟ್ಟದ ಪ್ರವಾಹ ಆಗಿದ್ದಾಗ ಸಾಕಷ್ಟು ಜನ ಇದಕ್ಕೆ ದೇಣಿಗೆ ನೀಡಿದ್ದರು. ಈ ಹಣವನ್ನು ಪರಿಹಾರ ಕಾರ್ಯಕ್ಕೆ ಬಳಸಲಾಗಿತ್ತು. ಆದರೂ PM CARES ಅಗತ್ಯ ಏನಿತ್ತು? ಇದು ಮೂಲ ಪ್ರಶ್ನೆ.

ಪ್ರಧಾನಿ ನರೇಂದ್ರ ಮೋದಿ PM CARES ಆರಂಭಿಸುತ್ತಿದ್ದಂತೆ ಈ ವರೆಗೆ 10,000 ಕೋಟಿಗೂ ಹೆಚ್ಚು ಹಣ ದೇಣಿಗೆ ರೂಪದಲ್ಲಿ ಸಂಗ್ರಹವಾಗಿದೆ. ಆದರೆ, ಕೊರೋನಾದಿಂದ ನಿಜಕ್ಕೂ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರಗಳ ನಿಧಿಗೆ ಹರಿದುಬಂದಿರುವ ಹಣ ತೀರಾ ಅಲ್ಪ. ಸಿಎಂ ಯಡಿಯೂರಪ್ಪ ಮನವಿ ಮಾಡಿ ಎರಡು ತಿಂಗಳ ಅವಧಿಯಲ್ಲಿ ಈ ವರೆಗೆ ಸಿಎಂ ಪರಿಹಾರ ನಿಧಿಗೆ ಸಂಗ್ರಹವಾಗಿರುವ ಹಣ ಕೇವಲ 138 ಕೋಟಿ. ಇನ್ನೂ ಆರ್ಥಿಕ ರಾಜಧಾನಿ ಮಹಾರಾಷ್ಟ್ರದಲ್ಲಿ ಸಂಗ್ರಹವಾಗಿರುವ ಹಣ ಕೇವಲ 247 ಕೋಟಿ ಮಾತ್ರ.

ಅಸಲಿಗೆ ಕೇಂದ್ರ ಸರ್ಕಾರದ PM CARES ಗೆ ಈ ಪ್ರಮಾಣದ ಹಣ ಹರಿದು ಬರಲು ಪ್ರಮುಖ ಕಾರಣ CSR ಫಂಡ್ ಅಂದರೆ ಕಾರ್ಪೋರೇಟ್ ಕಂಪೆನಿಗಳು ನೀಡಿರುವ ದೇಣಿಗೆ ರೂಪದ ಹಣ. ಈ ದೇಶದ ನೆಲ-ಜಲ ಮತ್ತು ಸಂಪನ್ಮೂಲವನ್ನು ಬಳಸುವ ಎಲ್ಲಾ ಕಾರ್ಪೊರೇಟ್ ಕಂಪೆನಿಗಳು ತಮ್ಮ ಲಾಭದ ಕನಿಷ್ಟ ಶೆ.2 ರಷ್ಟು ಹಣವನ್ನು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಸಮಾಜದ ಕೆಲಸಕ್ಕೆ ನೀಡಲೇಬೇಕು ಎನ್ನುತ್ತದೆ ಕಾನೂನು.

ಆದರೆ, ಈ ಹಣವನ್ನು ಇದೀಗ ರಚಿಸಲಾಗಿರುವ PM CARES ಗೆ ಮಾತ್ರ ನೀಡಲು ಸಾಧ್ಯ. ರಾಜ್ಯ ಸರ್ಕಾರಗಳಿಗೆ ಈ ಹಣ ನೀಡಲು ಸಾಧ್ಯವಿಲ್ಲದಂತೆ ತಿದ್ದುಪಡಿ ಮಾಡಲಾಗಿದೆ. ಪರಿಣಾಮ ರಾಜ್ಯಗಳ ಪಾಲಿಗೆ ಇತ್ತ ನ್ಯಾಯಯುತವಾಗಿ ಸಿಗಬೇಕಾದ ಜಿಎಸ್ಟಿ ಪಾಲು ಇಲ್ಲ, ಅತ್ತ ರಾಜ್ಯ ನಿಧಿಗೆ ಹರಿದು ಬರಬೇಕಾದ ಹಣವೂ ಇಲ್ಲ ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಏನಿದು CSR FUND? ಈ ಕುರಿತು ಕಾನೂನು ಏನು ಹೇಳುತ್ತದೆ? ಕಾರ್ಪೋರೇಟ್ ಕಂಪೆನಿಗಳ ಸಾಮಾಜಿಕ ಜವಾಬ್ದಾರಿ ಎಂದರೆ ಏನು? ಭಾರತದಲ್ಲಿ ಒಟ್ಟು ಒಂದು ವರ್ಷಕ್ಕೆ ಸಂಗ್ರಹವಾಗುವ CSR FUND ಹಣ ಎಷ್ಟು? ಈ ಹಣವನ್ನು ಯಾವುದಕ್ಕೆಲ್ಲಾ ಬಳಸಬಹುದು? ಹೀಗೆ ಸಾಕಷ್ಟು ಅಂಶಗಳನ್ನೂ ಇಲ್ಲಿ ಕೂಲಂಕುಷವಾಗಿ ತಿಳಿಸುವ ಪ್ರಯತ್ನ ನಡೆಸಲಾಗಿದೆ.

ಕಾರ್ಪೋರೇಟ್ ಜಗತ್ತು

ಕಾರ್ಪೊರೇಟ್ ಪ್ರಸ್ತುತ ಇಡೀ ಜಗತ್ತನ್ನು ಆಳ್ವಿಕೆ ಮಾಡುತ್ತಿರುವ ನೂತನ ವಸಾಹತುಶಾಹಿ ವ್ಯವಸ್ಥೆ (new colonial system). ಇಂದು ಇಡೀ ವಿಶ್ವವನ್ನು ಈ ಹೊಸ ವ್ಯವಸ್ಥೆ ಪರೋಕ್ಷವಾಗಿ ಆಳ್ವಿಕೆ ನಡೆಸುತ್ತಿದೆ. ಒಂದರ್ಥದಲ್ಲಿ ಶಬ್ಧವಿಲ್ಲದ ಯುದ್ಧ ನಡೆಯುತ್ತಿದೆ. 1992ರಲ್ಲಿ ಅಂದಿನ ಪ್ರಧಾನ ಮಂತ್ರಿ ಪಿ.ವಿ. ನರಸಿಂಹರಾವ್ ಮುಕ್ತ ಆರ್ಥಿಕ ವ್ಯವಸ್ಥೆಗೆ ಅಂಗೀಕಾರ ನೀಡಿದ ನಂತರ ಇಂತಹ ನೂತನ ವಸಾಹತುಶಾಹಿಗೆ ಭಾರತವೂ ಹೊರತಾಗಿಲ್ಲ.

ವಿದೇಶಿ ನೇರ ಬಂಡವಾಳ ಹೂಡಿಕೆಯ ಅಡಿಯಲ್ಲಿ ಇಂದು ಭಾರತದಲ್ಲಿ ನೂರಾರು ವಿದೇಶಿ ಕಂಪೆನಿಗಳು ಬಂಡವಾಳ ಹೂಡಿವೆ. ದೊಡ್ಡ ದೊಡ್ಡ ಕಂಪೆನಿಗಳನ್ನು-ಕಾರ್ಖಾನೆಗಳನ್ನು ಆರಂಭಿಸಿವೆ. ಅಲ್ಲದೆ, ಇಲ್ಲಿನ ನೆಲ-ಜಲ ಮತ್ತು ಸಂಪನ್ಮೂಲಗನ್ನು ಬಳಸಿ ಸಾವಿರಾರು ಕೋಟಿ ಹಣವನ್ನು ಲಾಭವಾಗಿ ಗಳಿಸುತ್ತಿವೆ. ಆದರೆ, ಹೀಗೆ ಲಾಭ ಗಳಿಸುವ ಕಾರ್ಪೊರೇಟ್ ಕಂಪೆನಿಗಳಿಗೆ ಹತ್ತಾರು ಜವಾಬ್ದಾರಿಗಳೂ ಇವೆ.

ಮುಕ್ತ ಆರ್ಥಿಕತೆಯ ಅಡಿಯಲ್ಲಿ ಭಾರತ ಯಾವ ದೇಶದಲ್ಲಿ ಬಂಡವಾಳ ಹೂಡಿದೆ ಎಂಬ ಕುರಿತು ಯಾವುದೇ ಮಾಹಿತಿ ಇಲ್ಲ. ಆದರೆ, ಭಾರತದಲ್ಲಿ ಬಂಡವಾಳ ಹೂಡಲು ಮುಂದಾಗುವ ವಿದೇಶಿ ಕಂಪೆನಿಗಳಿಗೇನು ಕೊರತೆ ಇಲ್ಲ. ಇಲ್ಲಿನ ಸಂಪನ್ಮೂಲಗಳನ್ನು ಅನುಭವಿಸುತ್ತಿರುವ ಕಾರ್ಪೊರೇಟ್ ಕಂಪೆನಿಗಳು ಈ ನೆಲದ ಸಾಮಾಜಿಕ ಜವಾಬ್ದಾರಿಯನ್ನೂ ಹೊರಬೇಕು ಎಂಬುದು ಪ್ರಜಾಪ್ರಭುತ್ವ ಸಮಾಜವಾದಿ ಜಾತ್ಯಾತೀತ ಗಣರಾಜ್ಯ ದೇಶದ ಕಾನೂನು ಅಥವಾ ಆಶಯ ಹೇಳುತ್ತದೆ.

ಇದನ್ನೇ ಆಧಾರವಾಗಿಟ್ಟುಕೊಂಡು ದೇಶದಲ್ಲಿ ಹೊಸದಾಗಿ ರಚಿಸಲಾದ ಶಾಸನವೇ “ಕಾರ್ಪೊರೇಟ್ ಕಂಪೆನಿಗಳ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಗಳ” ಶಾಸನ. ಅಸಲಿಗೆ ಈ ಶಾಸನದ ಉದ್ದೇಶ-ಆದರ್ಶಗಳೇನು? ದೇಶದಲ್ಲಿ ಕಾರ್ಪೊರೇಟ್ ಕಂಪೆನಿಗಳ ಜವಾಬ್ದಾರಿ-ಕರ್ತವ್ಯಗಳೇನು? ನಿಜಕ್ಕೂ ಈ ಶಾಸನ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತಿದೆಯೇ? ನೋಡೋಣ ಬನ್ನಿ

ಕಾರ್ಪೊರೇಟ್ ಕಂಪೆನಿಗಳ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಗಳ ಶಾಸನ (CSR)

ದೇಶದಲ್ಲಿ ಕಾರ್ಪೊರೇಟ್ ಕಂಪೆನಿಗಳ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಗಳ ಶಾಸನ ದಶಕಗಳಿಂದ ಇದೆಯಾದರೂ ಇದಕ್ಕೆ ಹೆಚ್ಚಿನ ಮೌಲ್ಯ ಇರಲಿಲ್ಲ. ಅಥವಾ ಇದನ್ನು ಪರಿಣಾಮಕಾರಿಯಾಗಿ ಪಾಲಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿತ್ತು ಎನ್ನಬಹುದು. Corporate Social Responsibility (CSR) ಅರ್ಥಾತ್ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಭಾರತದಲ್ಲಿ ಸಾಂಪ್ರದಾಯಿಕವಾಗಿ ಜನೋಪಕಾರಿ ಚಟುವಟಿಕೆಯ ರೂಪದಲ್ಲಿದ್ದು ಅಷ್ಟಾಗಿ ಚರ್ಚೆಗೆ ಒಳಗಾಗದ ವಿಷಯವಾಗಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಇದರ ಸ್ವರೂಪ ಬದಲಾಗಿದೆ.

ಈ ಶಾಸನ ನೆಪಮಾತ್ರಕ್ಕೆ ಇದ್ದಾಗ್ಯೂ 2014 ಫೆಬ್ರವರಿ 27 ರಂದು ಪ್ರಕಟಗೊಂಡ ಹೊಸ Companies ACT ಈ ಶಾಸನಕ್ಕೆ ಮತ್ತಷ್ಟು ಬಲ ತಂದಿತ್ತು. ಈ Companies ACT 2013 ಸೆಕ್ಷನ್ 35 ಭಾರತದಲ್ಲಿ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯನ್ನು ಕಡ್ಡಾಯಗೊಳಿಸಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿತ್ತು.

ಈ ಶಾಸನ 2014ರ ಏಪ್ರಿಲ್ ಮೊದಲ ದಿನದಿಂದ ಜಾರಿಗೆ ಬಂದಿದೆ. ಇದರ ಪ್ರಕಾರ 500 ಕೋಟಿ ರೂ. ಅಥವಾ ಅದಕ್ಕಿಂತ ಹೆಚ್ಚಿನ ಬಂಡವಾಳ ಹೊಂದಿರುವ-ವಾರ್ಷಿಕ 1000 ಕೋಟಿ ರೂ ಅಥವಾ ಅದಕ್ಕಿಂತ ಹೆಚ್ಚಿನ ವ್ಯವಹಾರ ನಡೆಸುವ ಮತ್ತು ವಾರ್ಷಿಕ 5 ಕೋಟಿ ರೂ ಅಥವಾ ಅದಕ್ಕಿಂತ ಹೆಚ್ಚಿನ ಲಾಭ ಗಳಿಸುವ ಕಂಪೆನಿಗಳು ತಮ್ಮ ನಿವ್ವಳ ಲಾಭದ ಶೇ.2ರಷ್ಟು ಹಣವನ್ನು CSR ಚಟುವಟಿಕೆಗಳಿಗೆ ವ್ಯಯಿಸಬೇಕು. ಅಲ್ಲದೆ, ಇದಕ್ಕಾಗಿ ಕಂಪೆನಿಯ ಆಡಳಿತ ಮಂಡಳಿಯು ಕನಿಷ್ಟ ಓರ್ವ ಸ್ವತಂತ್ರ್ಯ ನಿರ್ದೇಶಕರೂ ಸೇರಿದಂತೆ ಮೂರು ಅಥವಾ ಹೆಚ್ಚಿನ ನಿರ್ದೇಶಕರನ್ನೊಳಗೊಂಡ CSR ಕಮಿಟಿಯನ್ನು ನೇಮಿಸಬೇಕು ಎನ್ನುತ್ತದೆ ಈ ಶಾಸನ.

ಏನಿದು CSR ಚಟುವಟಿಕೆ?

ಭಾರತದಲ್ಲಿ ನೂರಾರು ಕಾರ್ಪೊರೇಟ್ ಕಂಪೆನಿಗಳು ಇವೆ. ಈ ಪೈಕಿ ಕಳೆದ ವರ್ಷ ಅತಿಹೆಚ್ಚು ಲಾಭ ಗಳಿಸಿದ TOP-10 ಕಂಪೆನಿಗಳ ಪಟ್ಟಿಯನ್ನು ಸ್ವತಃ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಕಳೆದ ವರ್ಷ ಬಿಡುಗಡೆ ಮಾಡಿದೆ. ಈ ಮಾಹಿತಿಯ ಪ್ರಕಾರ ಕಳೆದ ವರ್ಷ ಕೇವಲ ಈ 10 ಕಂಪೆನಿಗಳು ಈ ದೇಶದಲ್ಲಿ ಗಳಿಸಿರುವ ಲಾಭದ ಪ್ರಮಾಣ ಮಾತ್ರ 223.2 ಬಿಲಿಯನ್ ಡಾಲರ್. ಅಂದರೆ ಉಳಿದ ಕಂಪೆನಿಗಳ ಲಾಭವೂ ಸೇರಿದಂತೆ ಒಂದು ವರ್ಷಕ್ಕೆ CSR FUND ಅಡಿಯಲ್ಲಿ ಸಾಮಾಜಿಕ ಕಾರ್ಯಕ್ಕೆ ಸಂಗ್ರಹವಾಗಬೇಕಾದ ಹಣ ಎಷ್ಟು? ಎಂಬುದನ್ನು ನೀವೆ ಊಹಿಸಿಕೊಳ್ಳಿ.

ಹೀಗೆ ಸಂಗ್ರಹವಾಗುವ ಹಣವನ್ನು ದೇಶದ ಶಿಕ್ಷಣ, ವೈದ್ಯಕೀಯ ಮತ್ತು ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಬಳಸಬೇಕು ಎಂಬುದನ್ನೂ ಸಹ ಈ ಕಾನೂನು ಸ್ಪಷ್ಟವಾಗಿ ಹೇಳುತ್ತದೆ. ಒಂದು ಅಂದಾಜಿನ ಪ್ರಕಾರ ದೇಶದಲ್ಲಿ ಕಾರ್ಪೊರೇಟ್ ಕಂಪೆನಿಗಳ ಲಾಭದಿಂದ ಸಂಗ್ರಹಿಸುವ ಶೇ.2 ರಷ್ಟು ಹಣದಲ್ಲಿ ಇಡೀ ದೇಶದಲ್ಲಿರುವ ಎಲ್ಲಾ ಸರ್ಕಾರ ಶಾಲೆಗಳನ್ನು ಹೊಸದಾಗಿ ನಿರ್ಮಿಸಿ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನೀಡಬಹುದು, ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿಯವರೂ ನಾಚುವಂತೆ ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ನೀಡಬಹುದು ಎನ್ನುತ್ತವೆ ಅಂಕಿಅಂಶಗಳು. ಆದರೆ, ಇವೆಲ್ಲಾ ಈ ದೇಶದಲ್ಲಿ ಸಾಧ್ಯವಾಗಿದೆಯಾ? ಎಂದು ಹುಡುಕುತ್ತಾ ಹೋದರೆ ಹತ್ತಾರು ಹುಳುಕುಗಳು ಕಾಣಿಸಿಕೊಳ್ಳುತ್ತವೆ.

ಕಾರ್ಪೊರೇಟ್ ಸಾಲಮನ್ನಾ ಎಂಬ ಗಿಮಿಕ್

CSR FUND ಅಡಿಯಲ್ಲಿ ಕಾರ್ಪೊರೇಟ್ ಕಂಪೆನಿಗಳಿಂದ ಸಾಮಾಜಿಕ ಕಾರ್ಯಕ್ಕೆ ವರ್ಷಕ್ಕೆ ಸಾವಿರಾರು ಕೋಟಿ ಸಂದಾಯವಾಗಬೇಕು. ಆದರೆ, ಈ ಹಣವನ್ನು ಸಂಗ್ರಹಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎನ್ನಲಾಗುತ್ತಿದೆ. ಈ ನಡುವೆ ಕಾರ್ಪೋರೇಟ್ ಕಂಪೆನಿಗಳು ನಷ್ಟದಲ್ಲಿವೆ ಎಂದು ಕಳೆದ ವರ್ಷ ಕೇಂದ್ರ ಸರ್ಕಾರ ಮನ್ನಾ ಮಾಡಿರುವ ಕಾರ್ಪೊರೇಟ್ ಸಾಲ ಮಾತ್ರ 1.8 ಲಕ್ಷ ಕೋಟಿ ಎಂದರೆ ಪರಿಸ್ಥಿತಿಯನ್ನು ನೀವೆ ಊಹಿಸಬಹುದು.

ನೂರಾರು ಸಂಖ್ಯೆಯಲ್ಲಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದರೂ ಸಹ ರೈತರ ಸಾಲವನ್ನು ಮನ್ನಾ ಮಾಡಲು ಹಿಂದೂ ಮುಂದೂ ನೋಡುವ ಇದೇ ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪೆನಿಗಳ ಸಾಲವನ್ನು ಅನಾಯಾಸವಾಗಿ ಮನ್ನಾ ಮಾಡುತ್ತದೆ ಎಂದಾದರೆ ಈ ದೇಶದ ವ್ಯವಸ್ಥೆ ಮತ್ತು ಪರಿಸ್ಥಿತಿ ಯಾವ ಹಂತದಲ್ಲಿದೆ ಎಂಬುದನ್ನು ಮನಗಾಣಬಹುದು. ಇನ್ನೂ ನಿಜಕ್ಕೂ ಕಾರ್ಪೊರೇಟ್ ಕಂಪೆನಿಗಳು ಸಮಾಜಿಕ ಕಾರ್ಯಕ್ಕೆ ಹಣ ಖರ್ಚು ಮಾಡಿವೆಯೇ? ಎಂಬ ಪ್ರಶ್ನೆಗೆ ಉತ್ತರವನ್ನು ನೀವೆ ಹುಡುಕಿಕೊಳ್ಳಿ.

ಖಾಸಗಿ ಲಾಭಿ

ಭಾರತದಲ್ಲಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆಯನ್ನು ಲಾಭಕ್ಕೆ ಬಳಸಿಕೊಳ್ಳುವಂತಿಲ್ಲ ಎಂದು ಕಾನೂನು ಹೇಳುತ್ತವೆ. ಆದರೆ ವಿಪರ್ಯಾಸ ನೋಡಿ ಭಾರತದ ಮಟ್ಟಿಗೆ ಇಂದಿನ ದಿನಗಳಲ್ಲಿ ಅತ್ಯಂತ ಯಶಸ್ವಿ ಉದ್ಯಮ ಎಂದರೆ ಶಿಕ್ಷಣ ಮತ್ತು ಆರೋಗ್ಯ ವಿಭಾಗ. ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲೂ ಮುಕ್ತ ವಿದೇಶ ಹೂಡಿಕೆಗೆ ಅವಕಾಶ ಕಲ್ಪಿಸಿರುವುದು ಈ ಉದ್ಯಮ ಇನ್ನಷ್ಟು ಬೆಳೆಯಲು ಸಹಕಾರಿಯಾಗಿದೆ.

ಒಂದು ಅಂದಾಜಿನ ಪ್ರಕಾರ ಭಾರತದಲ್ಲಿ ವರ್ಷವೊಂದಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳು ಮಾಡಿಕೊಳ್ಳುವ ಲಾಭ ಲಕ್ಷಾಂತರ ಕೋಟಿಯನ್ನು ದಾಟುತ್ತಿದೆ.

2016ರ ಅಂಕಿಅಂಶದ ಪ್ರಕಾರ ಭಾರತದಲ್ಲಿ TOP-10 ಆಸ್ಪತ್ರೆ ಒಕ್ಕೂಟಗಳು ಒಂದು ವರ್ಷಕ್ಕೆ ಗಳಿಸಿರುವ ಲಾಭ 163 ಮಿಲಿಯನ್ ಅಮೆರಿಕನ್ ಡಾಲರ್. ಈ ಪ್ರಮಾಣ 2019ರ ವೇಳೆಗೆ ಶೇ.30 ರಷ್ಟು ಅಧಿಕವಾಗಿದೆ ಎನ್ನಲಾಗುತ್ತಿದೆ. ಇನ್ನೂ ಶಿಕ್ಷಣ ಸಂಸ್ಥೆಯ ಲಾಭ 200 ಮಿಲಿಯನ್ ಡಾಲರ್ ವ್ಯವಹಾರವನ್ನು ದಾಟುತ್ತಿದೆ ಎನ್ನುತ್ತಿವೆ ಅಧಿಕೃತ ಮಾಹಿತಿಗಳು.

ಖಾಸಗಿ ವಲಯದಲ್ಲಿ ಶಿಕ್ಷಣ ಹಾಗೂ ಆಸ್ಪತ್ರೆ ಕ್ಷೇತ್ರಗಳು ಈ ಪ್ರಮಾಣದ ಲಾಭ ಗಳಿಸುತ್ತಿರುವ ಕಾರಣದಿಂದಲೇ ಇಂದು ಖಾಸಗಿ ಲಾಭಿ ಅಧಿಕವಾಗಿದೆ. ಪರಿಣಾಮ ಸಾರ್ವಜನಿಕ ವಲಯದಲ್ಲಿ ಸೇವೆ ಎಂದೇ ಪರಿಗಣಿಸಲಾಗಿರುವ ಸರ್ಕಾರಿ ಆಸ್ಪತ್ರೆಗಳು ಹಾಗೂ ಶಿಕ್ಷಣ ಸಂಸ್ಥೆಗಳು ಮೂಲಭೂತ ಸೌಲಭ್ಯಗಳು ಇಲ್ಲದೆ ಇಂದು ಹಳ್ಳಹಿಡಿದಿವೆ. ಇದರ ಹಿಂದೆ ಖಾಸಗಿ ಲಾಭಿ ಇಲ್ಲ ಎಂದು ಹೇಳುವಷ್ಟು ಮತ್ತು ಅದನ್ನು ನಂಬುವಷ್ಟು ಮೂರ್ಖರಲ್ಲ ಭಾರತೀಯರು. ಇನ್ನೂ ಇದೇ ಕಾರಣಕ್ಕೆ CSR FUND ಸಹ ಸರಿಯಾಗಿ ಸಂಗ್ರಹಿಸಲಾಗುತ್ತಿಲ್ಲ ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ.


ಇದನ್ನೂ ಓದಿ: CAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಿಎಸ್ಆರ್ ನಿಧಿ ಬಗ್ಗೆ ಪಿಎಂ ಕೆಆರ್ಎಸ್ ಬಗ್ಗೆ ಇಷ್ಟೆಲ್ಲಾ ಬರೆಯುತ್ತಿರಿ ಅವರನ್ನೆಲ್ಲ ಹೇಳ್ತೀರಾ ಆದರೆ ನೀವು ನಿಮ್ಮ ಈ ವರದಿಗಳಿಗೆ ದುಡ್ಡುಕೇಳುತ್ತಿದ್ದೀರಾ ಇದಕ್ಕೆ ಮೊದಲು ಲೆಕ್ಕ ಕೊಡಿ ಆಮೇಲೆ ಬೇರೆಯವರ ಬಗ್ಗೆ ಮಾತನಾಡುವ ಕೆಲಸ ಮಾಡಿ

  2. ಪ್ರಧಾನಮಂತ್ರಿ ಪರಿಹಾರ ನಿಧಿಯ ಬದಲು ಪಿಎಂ ಕೇರ್ಸ್ ತಂದ ಕಾರಣ ತಿಳಿದು ಗಾಬರಿಯಾಗುತ್ತದೆ. ಟ್ರಾನ್ಸಪರೆನ್ಸಿ ಇಲ್ಲದ ಹಣ ಕೂಡುವಿಕೆ absolute ಪವರ್ ಹೊಂದಿರುವ ಜನರ ಕೈಯಲ್ಲಿ ಏನಾಗಬಹುದು? ಹಲ-ಕೆಲವು ವರ್ಷಗಳಿಂದ ಅಧಿಕಾರ ಕೇಂದ್ರೀಕೃತಗೊಳ್ಳುತ್ತಿದೆ ಮತ್ತು ಅದು ಎಂದಿದ್ದರೂ ವಿನಾಶಕಾರಿಯೆ! ಒಂದು ವಿಷಯ: ಕರೆನ್ಸಿಯನ್ನು ಭಾರತೀಯ ರುಪಾಯಿಯಲ್ಲಿ ಮತ್ತು, ಈ ಕಾನೂನಿಗೆ ಒಳಪಡುವ ಕಂಪನಿಗಳಿಂದ ಒಟ್ಟಾಗಬಹುದಾದ ಅಂದಾಜು ಹಣ ಹೇಳಬಹುದಿತ್ತೇ? ಲೇಖನ ಕಣ್ಣು ತೆರೆಸುವಂತಿದೆ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....