Homeಮುಖಪುಟಪಿಎಂ ಕೇರ್ಸ್‌ ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವಿಲ್ಲ: ಮೋದಿ ಸರ್ಕಾರ

ಪಿಎಂ ಕೇರ್ಸ್‌ ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವಿಲ್ಲ: ಮೋದಿ ಸರ್ಕಾರ

- Advertisement -
- Advertisement -

ಪಿಎಂ ಕೇರ್ಸ್‌ ನಿಧಿಯು ಭಾರತ ಸರ್ಕಾರದ ನಿಧಿಯಲ್ಲ, ಅದನ್ನು ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ)ಯ ಅಡಿಯಲ್ಲಿ ತರಲು ಸಾಧ್ಯವಿಲ್ಲ ಎಂದು ಒಕ್ಕೂಟ ಸರ್ಕಾರ ಮತ್ತು ಪ್ರಧಾನ ಮಂತ್ರಿ ಕಚೇರಿ ದೆಹಲಿ ಹೈಕೋರ್ಟ್‌ಗೆ ಗುರುವಾರ ತಿಳಿಸಿದೆ. “ಪಿಎಂ ಕೇರ್ಸ್‌ ನಿಧಿಯು ಒಂದು ಚಾರಿಟೇಬಲ್ ಟ್ರಸ್ಟ್‌ ಆಗಿದ್ದು, ಅದು ಭಾರತದ ಸಂವಿಧಾನದ ಅಡಿಯಲ್ಲೋ ಅಥವಾ ಸಂಸತ್ತಿನಿಂದಲೋ ಅಥವಾ ಯಾವುದೇ ರಾಜ್ಯದ ಶಾಸಕಾಂಗದಿಂದ ರಚಿಸಲ್ಪಟ್ಟದ್ದಲ್ಲ” ಎಂದು ಪ್ರಧಾನ ಮಂತ್ರಿಗಳ ಕಚೇರಿಯ ಅಧೀನ ಕಾರ್ಯದರ್ಶಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಲಾಗಿದೆ.

ತಾನು ಒಕ್ಕೂಟ ಸರ್ಕಾರದ ಅಧಿಕಾರಿಯಾಗಿದ್ದರೂ ಗೌರವಾರ್ಥವಾಗಿ ಪಿಎಂ ಕೇರ್ಸ್‌ ಟ್ರಸ್ಟ್‌ನಲ್ಲಿ ಕಾರ್ಯಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶ್ರೀವಾಸ್ತವ ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೀಸಲು ಸೌಲಭ್ಯ – ಭಾಗ 3; ಬೇಜವಾಬುದಾರಿ ಭಾರತೀಯರು ಮತ್ತು ಅವರ ಬಾಹ್ಯ ಕಾಳಜಿ

“ಪಿಎಂ ಕೇರ್ಸ್‌ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುತ್ತದೆ. ಅದರ ಹಣವನ್ನು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಸಿದ್ಧಪಡಿಸಿದ ಸಮಿತಿಯಿಂದ ಚಾರ್ಟರ್ಡ್ ಅಕೌಂಟೆಂಟ್‌‌ ಮೂಲಕ ಲೆಕ್ಕಪರಿಶೋಧನೆ ಮಾಡಲಾಗುತ್ತದೆ. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಆಡಿಟ್ ಮಾಡಿದ ವರದಿಯನ್ನು ಟ್ರಸ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಹಾಗೂ ಟ್ರಸ್ಟ್ ಸ್ವೀಕರಿಸಿದ ನಿಧಿಯ ಬಳಕೆಯ ವಿವರಗಳನ್ನು ಸೇರಿಸಲಾಗಿದೆ” ಎಂದು ಅಧೀನ ಕಾರ್ಯದರ್ಶಿ ಶ್ರೀವಾಸ್ತವ ಅವರು ಹೇಳಿದ್ದಾರೆ.

ಆರ್‌ಟಿಐ ಅಡಿಯಲ್ಲಿ ಪಿಎಂ ಕೇರ್ಸ್ ಅನ್ನು ‘ಸಾರ್ವಜನಿಕ ಪ್ರಾಧಿಕಾರ’ ಎಂದು ಘೋಷಿಸಲು ಕೋರಿ ಹೈಕೋರ್ಟ್‌ನಲ್ಲಿ ಸಮ್ಯಕ್ ಗಂಗ್ವಾಲ್ ಎಂಬವರು ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಒಕ್ಕೂಟ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ.

“PM CARES ಪಾರದರ್ಶಕತೆ ಮತ್ತು ಸಾರ್ವಜನಿಕ ಹಿತದ ತತ್ವಗಳ ಮೇಲೆ ಕಾರ್ಯನಿರ್ವಹಿಸುತ್ತದೆ. ಬೇರೆ ಚಾರಿಟಬಲ್ ಟ್ರಸ್ಟ್‌ಗಳಂತೆ ಸಾರ್ವಜನಿಕ ಹಿತಾಸಕ್ತಿಗಳನ್ನು ಹೊಂದಿದೆ. ಪಾರದರ್ಶಕತೆ ಖಚಿತಪಡಿಸಿಕೊಳ್ಳಲು ತನ್ನ ಎಲ್ಲಾ ನಿರ್ಣಯಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ಯಾವುದೇ ಆಕ್ಷೇಪವಿಲ್ಲ” ಎಂದು ಒಕ್ಕೂಟ ಸರ್ಕಾರವು ಅಫಿಡವಿಟ್‌ನಲ್ಲಿ ಹೆಚ್ಚುವರಿಯಾಗಿ ಹೇಳಲಾಗಿದೆ.

ಇದನ್ನೂ ಓದಿ: ಕೆಲವು ಫೋಟೊಗಳನ್ನು ಕಾಪಿ ಮಾಡೋದು ಕಷ್ಟ: ಮೋದಿ ಫೋಟೊಗೆ ಕಾಂಗ್ರೆಸ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...