Homeಮುಖಪುಟಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

ಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

- Advertisement -
- Advertisement -

ತುರ್ತು ಪರಿಸ್ಥಿತಿಗಳಲ್ಲಿ ಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ಪರಿಹಾರ (ಪಿಎಂ ಕೇರ್ಸ್) ನಿಧಿಯನ್ನು ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿ ಸ್ಥಾಪಿಸಲಾಗಿದೆ. ಇದನ್ನು ಸಂವಿಧಾನ ಅಥವಾ ಸಂಸದೀಯ ಕಾನೂನಿನ ಅಡಿಯಲ್ಲಿ ರಚಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ಅಫಡವಿಟ್‌ ಸಲ್ಲಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ನಂತರ, “ಯಾವುದೇ ರೀತಿಯ ತುರ್ತು ಅಥವಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಮೀಸಲಾದ ರಾಷ್ಟ್ರೀಯ ನಿಧಿ” ಎಂದು ಪಿಎಂ ಕೇರ್ಸ್‌ ಫಂಡ್ ಅನ್ನು ಮಾರ್ಚ್ 2020ರಲ್ಲಿ ಸ್ಥಾಪಿಸಲಾಯಿತು.

ಪಿಎಂ ಕೇರ್ಸ್ ನಿಧಿಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂವಿಧಾನದ 12 ನೇ ವಿಧಿಯ ಅಡಿಯಲ್ಲಿ ಅದನ್ನು ‘ಸರ್ಕಾರ’ ಎಂದು ಘೋಷಿಸಲು ಕೋರಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು ಅಫಿಡವಿಟ್ ಸಲ್ಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“‘ಯಾವುದೇ ರೀತಿಯಲ್ಲಿ ಟ್ರಸ್ಟ್‌ನ ಕಾರ್ಯನಿರ್ವಹಣೆಯ ಮೇಲೆ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರ/ಗಳ ನೇರ ಅಥವಾ ಪರೋಕ್ಷವಾದ ಯಾವುದೇ ನಿಯಂತ್ರಣವಿಲ್ಲ” ಎಂದು ಅಫಿಡವಿಟ್ ಹೇಳಿದೆ.

“ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಮಾಹಿತಿ ನೀಡಲು ಫಿಎಂ ಕೇರ್ಸ್ ಫಂಡ್ ಸಾರ್ವಜನಿಕ ಸಂಸ್ಥೆಯಲ್ಲ” ಎಂದು ಸರ್ಕಾರ ಪುನರುಚ್ಚರಿಸಿದೆ, “ಆದ್ದರಿಂದ ಅದನ್ನು ಪರಿಶೀಲನೆಗೆ ತೆಗೆದುಕೊಳ್ಳಬಾರದು” ಎಂದು ಸರ್ಕಾರ ವಾದಿಸಿದೆ.

“ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಸ್ವಯಂಪ್ರೇರಿತ ದೇಣಿಗೆಗಳನ್ನು ಮಾತ್ರ ನಿಧಿ ಸ್ವೀಕರಿಸುತ್ತದೆ” ಎಂದು ಸರ್ಕಾರ ಹೇಳಿದೆ. ಆದರೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, “ಉಪರಾಷ್ಟ್ರಪತಿಗಳಂತಹ ಸರ್ಕಾರದ ಭಾಗವಾಗಿರುವವರು ದೇಣಿಗೆ ನೀಡುವಂತೆ ರಾಜ್ಯಸಭಾ ಸದಸ್ಯರಲ್ಲಿ ಮನವಿ ಮಾಡಿದ್ದರು” ಎಂದು ಉಲ್ಲೇಖಿಸಿದ್ದಾರೆ.

“ಸರ್ಕಾರ ಭಾಗವಲ್ಲದಿದ್ದರೆ ಸರ್ಕಾರಿ ಚಿಹ್ನೆಗಳು ಅಥವಾ ಸರ್ಕಾರಿ ವೆಬ್‌ಸೈಟ್ ಹೊಂದಲು ಸಾಧ್ಯವಿಲ್ಲ. ಇದರಿಂದಾಗಿ ಸಾರ್ವಜನಿಕರು ನಿಮ್ಮನ್ನು ‘ಸರ್ಕಾರ’ ಎಂದು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಏನಿದು ಅರ್ಜಿ?

ಸರ್ಕಾರ ಸ್ಥಾಪಿಸಿದ ಮತ್ತು ನಿರ್ವಹಿಸುವ ನಿಧಿಯನ್ನು ಹಿರಿಯ ಸರ್ಕಾರಿ ಅಧಿಕಾರಿಗಳು ಪ್ರತಿನಿಧಿಸುತ್ತಿದ್ದಾರೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಿಧಿಯು ತನ್ನ ವೆಬ್‌ಸೈಟ್‌ಗಾಗಿ “gov.in” ಡೊಮೇನ್ ಹೆಸರು, ರಾಷ್ಟ್ರೀಯ ಲಾಂಛನ ಮತ್ತು “ಪ್ರಧಾನಿ” – ಎಂಬ ಪದಗಳನ್ನು ಬಳಸಿದೆ. ಸರ್ಕಾರಿ ಸಂಪನ್ಮೂಲಗಳನ್ನು ಒಳಗೊಂಡಿದೆ. ಅಧಿಕೃತ ಮತ್ತು ಅನಧಿಕೃತ ಸಂವಹನಗಳಲ್ಲಿ ತನ್ನನ್ನು ಸರ್ಕಾರವೆಂಬಂತೆ ಬಿಂಬಿಸಿಕೊಳ್ಳಲಾಗಿದೆ. ಪಿಎಂ ಕೇರ್ಸ್ ಫಂಡ್ ಕಚೇರಿಯು ಪ್ರಧಾನ ಮಂತ್ರಿ ಕಚೇರಿಯಾಗಿದೆ. ಈ ರೀತಿಯಲ್ಲಿ ನಿಧಿಯನ್ನು ಪ್ರಸ್ತುತ ಪಡಿಸಿದ ಫಲವಾಗಿ ಅಪಾರ ದೇಣಿಗೆ ದೊರೆತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪಿಎಂ ಕೇರ್ಸ್ ಫಂಡ್ ವೆಬ್‌ಸೈಟ್ ರಚಿಸಿದ ನಾಲ್ಕು ದಿನಗಳಲ್ಲಿ 3,076.62 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ ಎಂಬುದನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಸರ್ಕಾರದ ಅಫಿಡವಿಟ್‌ ಕುರಿತು ಕನ್ನಡಪರ ಹೋರಾಟಗಾರ ಎಸ್.ಸಿ.ದಿನೇಶ್‌ಕುಮಾರ್‌ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದು, “ಪಿಎಂ ಕೇರ್ಸ್ ಸ್ಥಾಪನೆಯಾಗಿದ್ದು ಕೋವಿಡ್ ಸಂಕಟದ ಕಾಲದಲ್ಲಿ. ಅಪಾರ ಸಾವು ನೋವು ಆರ್ಥಿಕ ನಷ್ಟ ಗಳಿಂದ ಕಂಗಾಲಾಗಿದ್ದ ಜನರಿಗೆ ಪಿಎಂ ಕೇರ್ಸ್ ಎಂಬುದು ಗಂಧರ್ವ ಲೋಕದಿಂದ ಬಂದ ಸಂಜೀವಿನಿ ಎಂಬಂತೆ ಬಿಂಬಿಸಲಾಗಿತ್ತು. ಸರ್ಕಾರಕ್ಕೂ ಇದಕ್ಕೂ ಸಂಬಂಧವಿಲ್ಲವೆಂದು ಅಂದೇ ಹೇಳಬಹುದಿತ್ತಲ್ಲವೇ? ಇದೊಂದು ಖಾಸಗಿ ಟ್ರಸ್ಟ್, ಇದಕ್ಕೆ ಭಾರತ ಸಂವಿಧಾನಕ್ಕೆ, ಸರ್ಕಾರಗಳಿಗೆ, ಜನರಿಗೆ ಉತ್ತರದಾಯಿ ಅಲ್ಲ ಎಂದು ಅಂದೇ ಹೇಳಬಹುದಿತ್ತಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಇದು ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪನೆಯಾಗದಿದ್ದರೂ ರಾಷ್ಟ್ರೀಯ ಲಾಂಚನ ಬಳಸಿದ್ದು ಯಾಕೆ? ಇದು ಸರ್ಕಾರದ ಅಡಿಯಲ್ಲಿ ಬರುವ ಸಂಸ್ಥೆಯಲ್ಲವಾದರೂ gov.in ಬಳಸಿದ್ದು ಯಾಕೆ? ಹಣ ವಸೂಲಿಗೆ ಸರ್ಕಾರಿ ಯಂತ್ರಾಂಗಗಳನ್ನು ಬಳಸಿಕೊಂಡಿದ್ದು ಯಾಕೆ? ಸರ್ಕಾರವನ್ನು ಮುನ್ನಡೆಸುವವರೇ ಹಣ ಕೊಡಿ ಎಂದು ಬೇಡಿದ್ದು ಯಾಕೆ? ಸ್ವತಃ ಉಪರಾಷ್ಟ್ರಪತಿಗಳೇ ರಾಜ್ಯಸಭೆಯಲ್ಲಿ ಪಿಎಂ ಕೇರ್ಸ್ ಗೆ ದೇಣಿಗೆ ಕೊಡಿ ಎಂದು ಬೇಡಿಕೊಂಡಿದ್ದು ಯಾಕೆ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

“ಒಂದು ಖಾಸಗಿ ಟ್ರಸ್ಟ್‌ಗೆ ಪಿಎಂ ಕೇರ್ಸ್ ಹೆಸರು ಬಳಸಿದ್ದು ಯಾಕೆ? ಇದರಿಂದ ದೇಶದ ಪ್ರಧಾನಿ ಹುದ್ದೆಯ ಘನತೆಯನ್ನು ಕುಗ್ಗಿಸಿದಂತೆ ಆಗಲಿಲ್ಲವೇ? ಖಾಸಗಿ ವ್ಯಕ್ತಿಗಳು ಪ್ರಧಾನಿ ಹೆಸರಲ್ಲಿ ಟ್ರಸ್ಟ್ ಮಾಡಿದರೆ ಅದು ಅಪರಾಧವಲ್ಲವೇ? ಪಿಎಂ ಕೇರ್ಸ್ ಖಾಸಗಿ ಟ್ರಸ್ಟ್ ಆದ ಮೇಲೆ, ಸರ್ಕಾರಿ ನೌಕರರ ಒಂದು ದಿನದ ಸಂಬಳವನ್ನು ಹೇಗೆ ಕಡಿತ ಮಾಡಿಕೊಂಡು ಟ್ರಸ್ಟ್ ಅಕೌಂಟಿಗೆ ಜಮಾ ಮಾಡಲಾಯಿತು? ಆದಾಯ ತೆರಿಗೆ ವಿನಾಯಿತಿಯನ್ನು ಯಾವ ಆಧಾರದಲ್ಲಿ ನೀಡಲಾಯಿತು? ಪಿಎಂ ಹೆಸರಲ್ಲಿ ಏನನ್ನು ಬೇಕಾದರೂ ಮಾಡಬಹುದೇ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಪಿಎಂ ಕೇರ್ಸ್‌ ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವಿಲ್ಲ: ಮೋದಿ ಸರ್ಕಾರ

“ದೇಶದ ಜನರು ಸಾವಿರಾರು ಕೋಟಿ ರುಪಾಯಿಗಳನ್ನು ಪಿಎಂ ಕೇರ್ಸ್‌‌ಗೆ ನೀಡಿದ್ದಾರೆ. ಈಗ ಅವರು ತಾವು ಕೊಟ್ಟ ಹಣದ ಲೆಕ್ಕ ಕೇಳುವಂತಿಲ್ಲ. ಎಷ್ಟು ಹಣ, ಯಾತಕ್ಕಾಗಿ ಖರ್ಚು ಮಾಡಿದ್ದೀರಿ ಎಂದು ಕೇಳುವಂತಿಲ್ಲ. ನಾಳೆ ಹಣವನ್ನೆಲ್ಲ ತೆಗೆದು ಅದಾನಿ ಕಂಪೆನಿಗೆ ಕೊಟ್ಟರೂ, ಭಾರತೀಯ ಜನತಾ ಪಕ್ಷ ಚುನಾವಣೆ ಖರ್ಚಿಗೋ, ಶಾಸಕರ ಖರೀದಿಗೋ ಬಳಸಿದರೂ ನಾವು ಕೇಳುವಂತಿಲ್ಲ. ಇದು ಭಾರತದ ಯಾವುದೇ ಕಾನೂನಿನ ಅಡಿಯಲ್ಲಿ ಸ್ಥಾಪಿಸಿಲ್ಲ ಎಂದು ಸರ್ಕಾರ ಹೇಳುತ್ತಿರುವುದರಿಂದ ನಾವು ಕೋರ್ಟುಗಳ ಮೊರೆ ಹೋಗುವಂತಿಲ್ಲ. ಇಂಥ ಅನೈತಿಕ ವ್ಯವಹಾರ ಯಾಕೆ ಬೇಕಿತ್ತು?” ಎಂದು ಟೀಕಿಸಿದ್ದಾರೆ.

“ಮೊದಲಿನಿಂದಲೂ ಇರುವ ಪಿಎಂ ರಿಲೀಫ್ ಫಂಡ್‌ಗೆ ಪಿಎಂ ಕೇರ್ಸ್ ಹಣ ಕೊಡುತ್ತದೆಯಂತೆ! ಈ ಡಬ್ಬಲ್ ಎಂಜಿನ್ ಯಾಕೆ ಬೇಕಿತ್ತು? ಒಂದು ಅಧಿಕೃತ ಇರುವಾಗ ಇನ್ನೊಂದು ಅನಧಿಕೃತ ಯಾಕೆ ಬೇಕಿತ್ತು? ಪಿಎಂ ರಿಲೀಫ್ ಫಂಡ್ ಮೂಲಕ ಮಾಡಲಾಗದ ಯಾವ ಘನಂದಾರಿ ಕೆಲಸವನ್ನು ಪಿಎಂ ಕೇರ್ಸ್ ಮಾಡುತ್ತದೆ? ನರೇಂದ್ರ ಮೋದಿ ಸರ್ಕಾರ ಬಿದ್ದು ಹೋಗಿ, ಹೊಸ ಸರ್ಕಾರ ಬಂತು ಎಂದಿಟ್ಟುಕೊಳ್ಳಿ. ಆಗ ಟ್ರಸ್ಟ್ ಹಣೆ ಬರೆಹವೇನು? ಹೊಸ ಪ್ರಧಾನಿಗೆ ಅಲ್ಲಿ ಪಾತ್ರವೇ ಇರುವುದಿಲ್ಲ. ಪ್ರಧಾನಿ ಬದಲಾದರೂ ಮೋದಿಯೇ ಪಿಎಂ ಕೇರ್ಸ್ ನಿರ್ವಹಿಸುತ್ತಾರೆಯೇ? ಆಗ ಪ್ರಧಾನಿಯಲ್ಲದ ವ್ಯಕ್ತಿ ಪ್ರಧಾನಿ ಹೆಸರಲ್ಲಿ ಹೇಗೆ ಟ್ರಸ್ಟ್ ನಡೆಸುತ್ತಾರೆ? ಇದೆಲ್ಲ ಗಮನಿಸಿದರೆ ಪಿಎಂ ಕೇರ್ಸ್ ಕೂಡ ಒಂದು ದೊಡ್ಡ ಫ್ರಾಡ್ ಎಂದು ಅನಿಸುವುದಿಲ್ಲವೇ? ದೇಶವನ್ನು ಮುನ್ನಡೆಸಬೇಕಾದವರೇ ಇಂಥ ದಂಧೆಗೆ ಇಳಿದರೆ ದೇಶ ಉಳಿಯಲು ಸಾಧ್ಯವೇ?” ಎಂದು ದಿನೇಶ್‌ಕುಮಾರ್‌ ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...