Homeಮುಖಪುಟಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

ಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

- Advertisement -
- Advertisement -

ತುರ್ತು ಪರಿಸ್ಥಿತಿಗಳಲ್ಲಿ ಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ಪರಿಹಾರ (ಪಿಎಂ ಕೇರ್ಸ್) ನಿಧಿಯನ್ನು ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿ ಸ್ಥಾಪಿಸಲಾಗಿದೆ. ಇದನ್ನು ಸಂವಿಧಾನ ಅಥವಾ ಸಂಸದೀಯ ಕಾನೂನಿನ ಅಡಿಯಲ್ಲಿ ರಚಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ಅಫಡವಿಟ್‌ ಸಲ್ಲಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ನಂತರ, “ಯಾವುದೇ ರೀತಿಯ ತುರ್ತು ಅಥವಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಮೀಸಲಾದ ರಾಷ್ಟ್ರೀಯ ನಿಧಿ” ಎಂದು ಪಿಎಂ ಕೇರ್ಸ್‌ ಫಂಡ್ ಅನ್ನು ಮಾರ್ಚ್ 2020ರಲ್ಲಿ ಸ್ಥಾಪಿಸಲಾಯಿತು.

ಪಿಎಂ ಕೇರ್ಸ್ ನಿಧಿಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂವಿಧಾನದ 12 ನೇ ವಿಧಿಯ ಅಡಿಯಲ್ಲಿ ಅದನ್ನು ‘ಸರ್ಕಾರ’ ಎಂದು ಘೋಷಿಸಲು ಕೋರಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು ಅಫಿಡವಿಟ್ ಸಲ್ಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“‘ಯಾವುದೇ ರೀತಿಯಲ್ಲಿ ಟ್ರಸ್ಟ್‌ನ ಕಾರ್ಯನಿರ್ವಹಣೆಯ ಮೇಲೆ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರ/ಗಳ ನೇರ ಅಥವಾ ಪರೋಕ್ಷವಾದ ಯಾವುದೇ ನಿಯಂತ್ರಣವಿಲ್ಲ” ಎಂದು ಅಫಿಡವಿಟ್ ಹೇಳಿದೆ.

“ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಮಾಹಿತಿ ನೀಡಲು ಫಿಎಂ ಕೇರ್ಸ್ ಫಂಡ್ ಸಾರ್ವಜನಿಕ ಸಂಸ್ಥೆಯಲ್ಲ” ಎಂದು ಸರ್ಕಾರ ಪುನರುಚ್ಚರಿಸಿದೆ, “ಆದ್ದರಿಂದ ಅದನ್ನು ಪರಿಶೀಲನೆಗೆ ತೆಗೆದುಕೊಳ್ಳಬಾರದು” ಎಂದು ಸರ್ಕಾರ ವಾದಿಸಿದೆ.

“ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಸ್ವಯಂಪ್ರೇರಿತ ದೇಣಿಗೆಗಳನ್ನು ಮಾತ್ರ ನಿಧಿ ಸ್ವೀಕರಿಸುತ್ತದೆ” ಎಂದು ಸರ್ಕಾರ ಹೇಳಿದೆ. ಆದರೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, “ಉಪರಾಷ್ಟ್ರಪತಿಗಳಂತಹ ಸರ್ಕಾರದ ಭಾಗವಾಗಿರುವವರು ದೇಣಿಗೆ ನೀಡುವಂತೆ ರಾಜ್ಯಸಭಾ ಸದಸ್ಯರಲ್ಲಿ ಮನವಿ ಮಾಡಿದ್ದರು” ಎಂದು ಉಲ್ಲೇಖಿಸಿದ್ದಾರೆ.

“ಸರ್ಕಾರ ಭಾಗವಲ್ಲದಿದ್ದರೆ ಸರ್ಕಾರಿ ಚಿಹ್ನೆಗಳು ಅಥವಾ ಸರ್ಕಾರಿ ವೆಬ್‌ಸೈಟ್ ಹೊಂದಲು ಸಾಧ್ಯವಿಲ್ಲ. ಇದರಿಂದಾಗಿ ಸಾರ್ವಜನಿಕರು ನಿಮ್ಮನ್ನು ‘ಸರ್ಕಾರ’ ಎಂದು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಏನಿದು ಅರ್ಜಿ?

ಸರ್ಕಾರ ಸ್ಥಾಪಿಸಿದ ಮತ್ತು ನಿರ್ವಹಿಸುವ ನಿಧಿಯನ್ನು ಹಿರಿಯ ಸರ್ಕಾರಿ ಅಧಿಕಾರಿಗಳು ಪ್ರತಿನಿಧಿಸುತ್ತಿದ್ದಾರೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಿಧಿಯು ತನ್ನ ವೆಬ್‌ಸೈಟ್‌ಗಾಗಿ “gov.in” ಡೊಮೇನ್ ಹೆಸರು, ರಾಷ್ಟ್ರೀಯ ಲಾಂಛನ ಮತ್ತು “ಪ್ರಧಾನಿ” – ಎಂಬ ಪದಗಳನ್ನು ಬಳಸಿದೆ. ಸರ್ಕಾರಿ ಸಂಪನ್ಮೂಲಗಳನ್ನು ಒಳಗೊಂಡಿದೆ. ಅಧಿಕೃತ ಮತ್ತು ಅನಧಿಕೃತ ಸಂವಹನಗಳಲ್ಲಿ ತನ್ನನ್ನು ಸರ್ಕಾರವೆಂಬಂತೆ ಬಿಂಬಿಸಿಕೊಳ್ಳಲಾಗಿದೆ. ಪಿಎಂ ಕೇರ್ಸ್ ಫಂಡ್ ಕಚೇರಿಯು ಪ್ರಧಾನ ಮಂತ್ರಿ ಕಚೇರಿಯಾಗಿದೆ. ಈ ರೀತಿಯಲ್ಲಿ ನಿಧಿಯನ್ನು ಪ್ರಸ್ತುತ ಪಡಿಸಿದ ಫಲವಾಗಿ ಅಪಾರ ದೇಣಿಗೆ ದೊರೆತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪಿಎಂ ಕೇರ್ಸ್ ಫಂಡ್ ವೆಬ್‌ಸೈಟ್ ರಚಿಸಿದ ನಾಲ್ಕು ದಿನಗಳಲ್ಲಿ 3,076.62 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ ಎಂಬುದನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಸರ್ಕಾರದ ಅಫಿಡವಿಟ್‌ ಕುರಿತು ಕನ್ನಡಪರ ಹೋರಾಟಗಾರ ಎಸ್.ಸಿ.ದಿನೇಶ್‌ಕುಮಾರ್‌ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದು, “ಪಿಎಂ ಕೇರ್ಸ್ ಸ್ಥಾಪನೆಯಾಗಿದ್ದು ಕೋವಿಡ್ ಸಂಕಟದ ಕಾಲದಲ್ಲಿ. ಅಪಾರ ಸಾವು ನೋವು ಆರ್ಥಿಕ ನಷ್ಟ ಗಳಿಂದ ಕಂಗಾಲಾಗಿದ್ದ ಜನರಿಗೆ ಪಿಎಂ ಕೇರ್ಸ್ ಎಂಬುದು ಗಂಧರ್ವ ಲೋಕದಿಂದ ಬಂದ ಸಂಜೀವಿನಿ ಎಂಬಂತೆ ಬಿಂಬಿಸಲಾಗಿತ್ತು. ಸರ್ಕಾರಕ್ಕೂ ಇದಕ್ಕೂ ಸಂಬಂಧವಿಲ್ಲವೆಂದು ಅಂದೇ ಹೇಳಬಹುದಿತ್ತಲ್ಲವೇ? ಇದೊಂದು ಖಾಸಗಿ ಟ್ರಸ್ಟ್, ಇದಕ್ಕೆ ಭಾರತ ಸಂವಿಧಾನಕ್ಕೆ, ಸರ್ಕಾರಗಳಿಗೆ, ಜನರಿಗೆ ಉತ್ತರದಾಯಿ ಅಲ್ಲ ಎಂದು ಅಂದೇ ಹೇಳಬಹುದಿತ್ತಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಇದು ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪನೆಯಾಗದಿದ್ದರೂ ರಾಷ್ಟ್ರೀಯ ಲಾಂಚನ ಬಳಸಿದ್ದು ಯಾಕೆ? ಇದು ಸರ್ಕಾರದ ಅಡಿಯಲ್ಲಿ ಬರುವ ಸಂಸ್ಥೆಯಲ್ಲವಾದರೂ gov.in ಬಳಸಿದ್ದು ಯಾಕೆ? ಹಣ ವಸೂಲಿಗೆ ಸರ್ಕಾರಿ ಯಂತ್ರಾಂಗಗಳನ್ನು ಬಳಸಿಕೊಂಡಿದ್ದು ಯಾಕೆ? ಸರ್ಕಾರವನ್ನು ಮುನ್ನಡೆಸುವವರೇ ಹಣ ಕೊಡಿ ಎಂದು ಬೇಡಿದ್ದು ಯಾಕೆ? ಸ್ವತಃ ಉಪರಾಷ್ಟ್ರಪತಿಗಳೇ ರಾಜ್ಯಸಭೆಯಲ್ಲಿ ಪಿಎಂ ಕೇರ್ಸ್ ಗೆ ದೇಣಿಗೆ ಕೊಡಿ ಎಂದು ಬೇಡಿಕೊಂಡಿದ್ದು ಯಾಕೆ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

“ಒಂದು ಖಾಸಗಿ ಟ್ರಸ್ಟ್‌ಗೆ ಪಿಎಂ ಕೇರ್ಸ್ ಹೆಸರು ಬಳಸಿದ್ದು ಯಾಕೆ? ಇದರಿಂದ ದೇಶದ ಪ್ರಧಾನಿ ಹುದ್ದೆಯ ಘನತೆಯನ್ನು ಕುಗ್ಗಿಸಿದಂತೆ ಆಗಲಿಲ್ಲವೇ? ಖಾಸಗಿ ವ್ಯಕ್ತಿಗಳು ಪ್ರಧಾನಿ ಹೆಸರಲ್ಲಿ ಟ್ರಸ್ಟ್ ಮಾಡಿದರೆ ಅದು ಅಪರಾಧವಲ್ಲವೇ? ಪಿಎಂ ಕೇರ್ಸ್ ಖಾಸಗಿ ಟ್ರಸ್ಟ್ ಆದ ಮೇಲೆ, ಸರ್ಕಾರಿ ನೌಕರರ ಒಂದು ದಿನದ ಸಂಬಳವನ್ನು ಹೇಗೆ ಕಡಿತ ಮಾಡಿಕೊಂಡು ಟ್ರಸ್ಟ್ ಅಕೌಂಟಿಗೆ ಜಮಾ ಮಾಡಲಾಯಿತು? ಆದಾಯ ತೆರಿಗೆ ವಿನಾಯಿತಿಯನ್ನು ಯಾವ ಆಧಾರದಲ್ಲಿ ನೀಡಲಾಯಿತು? ಪಿಎಂ ಹೆಸರಲ್ಲಿ ಏನನ್ನು ಬೇಕಾದರೂ ಮಾಡಬಹುದೇ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಪಿಎಂ ಕೇರ್ಸ್‌ ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವಿಲ್ಲ: ಮೋದಿ ಸರ್ಕಾರ

“ದೇಶದ ಜನರು ಸಾವಿರಾರು ಕೋಟಿ ರುಪಾಯಿಗಳನ್ನು ಪಿಎಂ ಕೇರ್ಸ್‌‌ಗೆ ನೀಡಿದ್ದಾರೆ. ಈಗ ಅವರು ತಾವು ಕೊಟ್ಟ ಹಣದ ಲೆಕ್ಕ ಕೇಳುವಂತಿಲ್ಲ. ಎಷ್ಟು ಹಣ, ಯಾತಕ್ಕಾಗಿ ಖರ್ಚು ಮಾಡಿದ್ದೀರಿ ಎಂದು ಕೇಳುವಂತಿಲ್ಲ. ನಾಳೆ ಹಣವನ್ನೆಲ್ಲ ತೆಗೆದು ಅದಾನಿ ಕಂಪೆನಿಗೆ ಕೊಟ್ಟರೂ, ಭಾರತೀಯ ಜನತಾ ಪಕ್ಷ ಚುನಾವಣೆ ಖರ್ಚಿಗೋ, ಶಾಸಕರ ಖರೀದಿಗೋ ಬಳಸಿದರೂ ನಾವು ಕೇಳುವಂತಿಲ್ಲ. ಇದು ಭಾರತದ ಯಾವುದೇ ಕಾನೂನಿನ ಅಡಿಯಲ್ಲಿ ಸ್ಥಾಪಿಸಿಲ್ಲ ಎಂದು ಸರ್ಕಾರ ಹೇಳುತ್ತಿರುವುದರಿಂದ ನಾವು ಕೋರ್ಟುಗಳ ಮೊರೆ ಹೋಗುವಂತಿಲ್ಲ. ಇಂಥ ಅನೈತಿಕ ವ್ಯವಹಾರ ಯಾಕೆ ಬೇಕಿತ್ತು?” ಎಂದು ಟೀಕಿಸಿದ್ದಾರೆ.

“ಮೊದಲಿನಿಂದಲೂ ಇರುವ ಪಿಎಂ ರಿಲೀಫ್ ಫಂಡ್‌ಗೆ ಪಿಎಂ ಕೇರ್ಸ್ ಹಣ ಕೊಡುತ್ತದೆಯಂತೆ! ಈ ಡಬ್ಬಲ್ ಎಂಜಿನ್ ಯಾಕೆ ಬೇಕಿತ್ತು? ಒಂದು ಅಧಿಕೃತ ಇರುವಾಗ ಇನ್ನೊಂದು ಅನಧಿಕೃತ ಯಾಕೆ ಬೇಕಿತ್ತು? ಪಿಎಂ ರಿಲೀಫ್ ಫಂಡ್ ಮೂಲಕ ಮಾಡಲಾಗದ ಯಾವ ಘನಂದಾರಿ ಕೆಲಸವನ್ನು ಪಿಎಂ ಕೇರ್ಸ್ ಮಾಡುತ್ತದೆ? ನರೇಂದ್ರ ಮೋದಿ ಸರ್ಕಾರ ಬಿದ್ದು ಹೋಗಿ, ಹೊಸ ಸರ್ಕಾರ ಬಂತು ಎಂದಿಟ್ಟುಕೊಳ್ಳಿ. ಆಗ ಟ್ರಸ್ಟ್ ಹಣೆ ಬರೆಹವೇನು? ಹೊಸ ಪ್ರಧಾನಿಗೆ ಅಲ್ಲಿ ಪಾತ್ರವೇ ಇರುವುದಿಲ್ಲ. ಪ್ರಧಾನಿ ಬದಲಾದರೂ ಮೋದಿಯೇ ಪಿಎಂ ಕೇರ್ಸ್ ನಿರ್ವಹಿಸುತ್ತಾರೆಯೇ? ಆಗ ಪ್ರಧಾನಿಯಲ್ಲದ ವ್ಯಕ್ತಿ ಪ್ರಧಾನಿ ಹೆಸರಲ್ಲಿ ಹೇಗೆ ಟ್ರಸ್ಟ್ ನಡೆಸುತ್ತಾರೆ? ಇದೆಲ್ಲ ಗಮನಿಸಿದರೆ ಪಿಎಂ ಕೇರ್ಸ್ ಕೂಡ ಒಂದು ದೊಡ್ಡ ಫ್ರಾಡ್ ಎಂದು ಅನಿಸುವುದಿಲ್ಲವೇ? ದೇಶವನ್ನು ಮುನ್ನಡೆಸಬೇಕಾದವರೇ ಇಂಥ ದಂಧೆಗೆ ಇಳಿದರೆ ದೇಶ ಉಳಿಯಲು ಸಾಧ್ಯವೇ?” ಎಂದು ದಿನೇಶ್‌ಕುಮಾರ್‌ ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...