Homeಮುಖಪುಟಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

ಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

- Advertisement -
- Advertisement -

ತುರ್ತು ಪರಿಸ್ಥಿತಿಗಳಲ್ಲಿ ಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ಪರಿಹಾರ (ಪಿಎಂ ಕೇರ್ಸ್) ನಿಧಿಯನ್ನು ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿ ಸ್ಥಾಪಿಸಲಾಗಿದೆ. ಇದನ್ನು ಸಂವಿಧಾನ ಅಥವಾ ಸಂಸದೀಯ ಕಾನೂನಿನ ಅಡಿಯಲ್ಲಿ ರಚಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ಅಫಡವಿಟ್‌ ಸಲ್ಲಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ನಂತರ, “ಯಾವುದೇ ರೀತಿಯ ತುರ್ತು ಅಥವಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಮೀಸಲಾದ ರಾಷ್ಟ್ರೀಯ ನಿಧಿ” ಎಂದು ಪಿಎಂ ಕೇರ್ಸ್‌ ಫಂಡ್ ಅನ್ನು ಮಾರ್ಚ್ 2020ರಲ್ಲಿ ಸ್ಥಾಪಿಸಲಾಯಿತು.

ಪಿಎಂ ಕೇರ್ಸ್ ನಿಧಿಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂವಿಧಾನದ 12 ನೇ ವಿಧಿಯ ಅಡಿಯಲ್ಲಿ ಅದನ್ನು ‘ಸರ್ಕಾರ’ ಎಂದು ಘೋಷಿಸಲು ಕೋರಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು ಅಫಿಡವಿಟ್ ಸಲ್ಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“‘ಯಾವುದೇ ರೀತಿಯಲ್ಲಿ ಟ್ರಸ್ಟ್‌ನ ಕಾರ್ಯನಿರ್ವಹಣೆಯ ಮೇಲೆ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರ/ಗಳ ನೇರ ಅಥವಾ ಪರೋಕ್ಷವಾದ ಯಾವುದೇ ನಿಯಂತ್ರಣವಿಲ್ಲ” ಎಂದು ಅಫಿಡವಿಟ್ ಹೇಳಿದೆ.

“ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಮಾಹಿತಿ ನೀಡಲು ಫಿಎಂ ಕೇರ್ಸ್ ಫಂಡ್ ಸಾರ್ವಜನಿಕ ಸಂಸ್ಥೆಯಲ್ಲ” ಎಂದು ಸರ್ಕಾರ ಪುನರುಚ್ಚರಿಸಿದೆ, “ಆದ್ದರಿಂದ ಅದನ್ನು ಪರಿಶೀಲನೆಗೆ ತೆಗೆದುಕೊಳ್ಳಬಾರದು” ಎಂದು ಸರ್ಕಾರ ವಾದಿಸಿದೆ.

“ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಸ್ವಯಂಪ್ರೇರಿತ ದೇಣಿಗೆಗಳನ್ನು ಮಾತ್ರ ನಿಧಿ ಸ್ವೀಕರಿಸುತ್ತದೆ” ಎಂದು ಸರ್ಕಾರ ಹೇಳಿದೆ. ಆದರೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, “ಉಪರಾಷ್ಟ್ರಪತಿಗಳಂತಹ ಸರ್ಕಾರದ ಭಾಗವಾಗಿರುವವರು ದೇಣಿಗೆ ನೀಡುವಂತೆ ರಾಜ್ಯಸಭಾ ಸದಸ್ಯರಲ್ಲಿ ಮನವಿ ಮಾಡಿದ್ದರು” ಎಂದು ಉಲ್ಲೇಖಿಸಿದ್ದಾರೆ.

“ಸರ್ಕಾರ ಭಾಗವಲ್ಲದಿದ್ದರೆ ಸರ್ಕಾರಿ ಚಿಹ್ನೆಗಳು ಅಥವಾ ಸರ್ಕಾರಿ ವೆಬ್‌ಸೈಟ್ ಹೊಂದಲು ಸಾಧ್ಯವಿಲ್ಲ. ಇದರಿಂದಾಗಿ ಸಾರ್ವಜನಿಕರು ನಿಮ್ಮನ್ನು ‘ಸರ್ಕಾರ’ ಎಂದು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಏನಿದು ಅರ್ಜಿ?

ಸರ್ಕಾರ ಸ್ಥಾಪಿಸಿದ ಮತ್ತು ನಿರ್ವಹಿಸುವ ನಿಧಿಯನ್ನು ಹಿರಿಯ ಸರ್ಕಾರಿ ಅಧಿಕಾರಿಗಳು ಪ್ರತಿನಿಧಿಸುತ್ತಿದ್ದಾರೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಿಧಿಯು ತನ್ನ ವೆಬ್‌ಸೈಟ್‌ಗಾಗಿ “gov.in” ಡೊಮೇನ್ ಹೆಸರು, ರಾಷ್ಟ್ರೀಯ ಲಾಂಛನ ಮತ್ತು “ಪ್ರಧಾನಿ” – ಎಂಬ ಪದಗಳನ್ನು ಬಳಸಿದೆ. ಸರ್ಕಾರಿ ಸಂಪನ್ಮೂಲಗಳನ್ನು ಒಳಗೊಂಡಿದೆ. ಅಧಿಕೃತ ಮತ್ತು ಅನಧಿಕೃತ ಸಂವಹನಗಳಲ್ಲಿ ತನ್ನನ್ನು ಸರ್ಕಾರವೆಂಬಂತೆ ಬಿಂಬಿಸಿಕೊಳ್ಳಲಾಗಿದೆ. ಪಿಎಂ ಕೇರ್ಸ್ ಫಂಡ್ ಕಚೇರಿಯು ಪ್ರಧಾನ ಮಂತ್ರಿ ಕಚೇರಿಯಾಗಿದೆ. ಈ ರೀತಿಯಲ್ಲಿ ನಿಧಿಯನ್ನು ಪ್ರಸ್ತುತ ಪಡಿಸಿದ ಫಲವಾಗಿ ಅಪಾರ ದೇಣಿಗೆ ದೊರೆತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪಿಎಂ ಕೇರ್ಸ್ ಫಂಡ್ ವೆಬ್‌ಸೈಟ್ ರಚಿಸಿದ ನಾಲ್ಕು ದಿನಗಳಲ್ಲಿ 3,076.62 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ ಎಂಬುದನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಸರ್ಕಾರದ ಅಫಿಡವಿಟ್‌ ಕುರಿತು ಕನ್ನಡಪರ ಹೋರಾಟಗಾರ ಎಸ್.ಸಿ.ದಿನೇಶ್‌ಕುಮಾರ್‌ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದು, “ಪಿಎಂ ಕೇರ್ಸ್ ಸ್ಥಾಪನೆಯಾಗಿದ್ದು ಕೋವಿಡ್ ಸಂಕಟದ ಕಾಲದಲ್ಲಿ. ಅಪಾರ ಸಾವು ನೋವು ಆರ್ಥಿಕ ನಷ್ಟ ಗಳಿಂದ ಕಂಗಾಲಾಗಿದ್ದ ಜನರಿಗೆ ಪಿಎಂ ಕೇರ್ಸ್ ಎಂಬುದು ಗಂಧರ್ವ ಲೋಕದಿಂದ ಬಂದ ಸಂಜೀವಿನಿ ಎಂಬಂತೆ ಬಿಂಬಿಸಲಾಗಿತ್ತು. ಸರ್ಕಾರಕ್ಕೂ ಇದಕ್ಕೂ ಸಂಬಂಧವಿಲ್ಲವೆಂದು ಅಂದೇ ಹೇಳಬಹುದಿತ್ತಲ್ಲವೇ? ಇದೊಂದು ಖಾಸಗಿ ಟ್ರಸ್ಟ್, ಇದಕ್ಕೆ ಭಾರತ ಸಂವಿಧಾನಕ್ಕೆ, ಸರ್ಕಾರಗಳಿಗೆ, ಜನರಿಗೆ ಉತ್ತರದಾಯಿ ಅಲ್ಲ ಎಂದು ಅಂದೇ ಹೇಳಬಹುದಿತ್ತಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಇದು ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪನೆಯಾಗದಿದ್ದರೂ ರಾಷ್ಟ್ರೀಯ ಲಾಂಚನ ಬಳಸಿದ್ದು ಯಾಕೆ? ಇದು ಸರ್ಕಾರದ ಅಡಿಯಲ್ಲಿ ಬರುವ ಸಂಸ್ಥೆಯಲ್ಲವಾದರೂ gov.in ಬಳಸಿದ್ದು ಯಾಕೆ? ಹಣ ವಸೂಲಿಗೆ ಸರ್ಕಾರಿ ಯಂತ್ರಾಂಗಗಳನ್ನು ಬಳಸಿಕೊಂಡಿದ್ದು ಯಾಕೆ? ಸರ್ಕಾರವನ್ನು ಮುನ್ನಡೆಸುವವರೇ ಹಣ ಕೊಡಿ ಎಂದು ಬೇಡಿದ್ದು ಯಾಕೆ? ಸ್ವತಃ ಉಪರಾಷ್ಟ್ರಪತಿಗಳೇ ರಾಜ್ಯಸಭೆಯಲ್ಲಿ ಪಿಎಂ ಕೇರ್ಸ್ ಗೆ ದೇಣಿಗೆ ಕೊಡಿ ಎಂದು ಬೇಡಿಕೊಂಡಿದ್ದು ಯಾಕೆ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

“ಒಂದು ಖಾಸಗಿ ಟ್ರಸ್ಟ್‌ಗೆ ಪಿಎಂ ಕೇರ್ಸ್ ಹೆಸರು ಬಳಸಿದ್ದು ಯಾಕೆ? ಇದರಿಂದ ದೇಶದ ಪ್ರಧಾನಿ ಹುದ್ದೆಯ ಘನತೆಯನ್ನು ಕುಗ್ಗಿಸಿದಂತೆ ಆಗಲಿಲ್ಲವೇ? ಖಾಸಗಿ ವ್ಯಕ್ತಿಗಳು ಪ್ರಧಾನಿ ಹೆಸರಲ್ಲಿ ಟ್ರಸ್ಟ್ ಮಾಡಿದರೆ ಅದು ಅಪರಾಧವಲ್ಲವೇ? ಪಿಎಂ ಕೇರ್ಸ್ ಖಾಸಗಿ ಟ್ರಸ್ಟ್ ಆದ ಮೇಲೆ, ಸರ್ಕಾರಿ ನೌಕರರ ಒಂದು ದಿನದ ಸಂಬಳವನ್ನು ಹೇಗೆ ಕಡಿತ ಮಾಡಿಕೊಂಡು ಟ್ರಸ್ಟ್ ಅಕೌಂಟಿಗೆ ಜಮಾ ಮಾಡಲಾಯಿತು? ಆದಾಯ ತೆರಿಗೆ ವಿನಾಯಿತಿಯನ್ನು ಯಾವ ಆಧಾರದಲ್ಲಿ ನೀಡಲಾಯಿತು? ಪಿಎಂ ಹೆಸರಲ್ಲಿ ಏನನ್ನು ಬೇಕಾದರೂ ಮಾಡಬಹುದೇ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಪಿಎಂ ಕೇರ್ಸ್‌ ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವಿಲ್ಲ: ಮೋದಿ ಸರ್ಕಾರ

“ದೇಶದ ಜನರು ಸಾವಿರಾರು ಕೋಟಿ ರುಪಾಯಿಗಳನ್ನು ಪಿಎಂ ಕೇರ್ಸ್‌‌ಗೆ ನೀಡಿದ್ದಾರೆ. ಈಗ ಅವರು ತಾವು ಕೊಟ್ಟ ಹಣದ ಲೆಕ್ಕ ಕೇಳುವಂತಿಲ್ಲ. ಎಷ್ಟು ಹಣ, ಯಾತಕ್ಕಾಗಿ ಖರ್ಚು ಮಾಡಿದ್ದೀರಿ ಎಂದು ಕೇಳುವಂತಿಲ್ಲ. ನಾಳೆ ಹಣವನ್ನೆಲ್ಲ ತೆಗೆದು ಅದಾನಿ ಕಂಪೆನಿಗೆ ಕೊಟ್ಟರೂ, ಭಾರತೀಯ ಜನತಾ ಪಕ್ಷ ಚುನಾವಣೆ ಖರ್ಚಿಗೋ, ಶಾಸಕರ ಖರೀದಿಗೋ ಬಳಸಿದರೂ ನಾವು ಕೇಳುವಂತಿಲ್ಲ. ಇದು ಭಾರತದ ಯಾವುದೇ ಕಾನೂನಿನ ಅಡಿಯಲ್ಲಿ ಸ್ಥಾಪಿಸಿಲ್ಲ ಎಂದು ಸರ್ಕಾರ ಹೇಳುತ್ತಿರುವುದರಿಂದ ನಾವು ಕೋರ್ಟುಗಳ ಮೊರೆ ಹೋಗುವಂತಿಲ್ಲ. ಇಂಥ ಅನೈತಿಕ ವ್ಯವಹಾರ ಯಾಕೆ ಬೇಕಿತ್ತು?” ಎಂದು ಟೀಕಿಸಿದ್ದಾರೆ.

“ಮೊದಲಿನಿಂದಲೂ ಇರುವ ಪಿಎಂ ರಿಲೀಫ್ ಫಂಡ್‌ಗೆ ಪಿಎಂ ಕೇರ್ಸ್ ಹಣ ಕೊಡುತ್ತದೆಯಂತೆ! ಈ ಡಬ್ಬಲ್ ಎಂಜಿನ್ ಯಾಕೆ ಬೇಕಿತ್ತು? ಒಂದು ಅಧಿಕೃತ ಇರುವಾಗ ಇನ್ನೊಂದು ಅನಧಿಕೃತ ಯಾಕೆ ಬೇಕಿತ್ತು? ಪಿಎಂ ರಿಲೀಫ್ ಫಂಡ್ ಮೂಲಕ ಮಾಡಲಾಗದ ಯಾವ ಘನಂದಾರಿ ಕೆಲಸವನ್ನು ಪಿಎಂ ಕೇರ್ಸ್ ಮಾಡುತ್ತದೆ? ನರೇಂದ್ರ ಮೋದಿ ಸರ್ಕಾರ ಬಿದ್ದು ಹೋಗಿ, ಹೊಸ ಸರ್ಕಾರ ಬಂತು ಎಂದಿಟ್ಟುಕೊಳ್ಳಿ. ಆಗ ಟ್ರಸ್ಟ್ ಹಣೆ ಬರೆಹವೇನು? ಹೊಸ ಪ್ರಧಾನಿಗೆ ಅಲ್ಲಿ ಪಾತ್ರವೇ ಇರುವುದಿಲ್ಲ. ಪ್ರಧಾನಿ ಬದಲಾದರೂ ಮೋದಿಯೇ ಪಿಎಂ ಕೇರ್ಸ್ ನಿರ್ವಹಿಸುತ್ತಾರೆಯೇ? ಆಗ ಪ್ರಧಾನಿಯಲ್ಲದ ವ್ಯಕ್ತಿ ಪ್ರಧಾನಿ ಹೆಸರಲ್ಲಿ ಹೇಗೆ ಟ್ರಸ್ಟ್ ನಡೆಸುತ್ತಾರೆ? ಇದೆಲ್ಲ ಗಮನಿಸಿದರೆ ಪಿಎಂ ಕೇರ್ಸ್ ಕೂಡ ಒಂದು ದೊಡ್ಡ ಫ್ರಾಡ್ ಎಂದು ಅನಿಸುವುದಿಲ್ಲವೇ? ದೇಶವನ್ನು ಮುನ್ನಡೆಸಬೇಕಾದವರೇ ಇಂಥ ದಂಧೆಗೆ ಇಳಿದರೆ ದೇಶ ಉಳಿಯಲು ಸಾಧ್ಯವೇ?” ಎಂದು ದಿನೇಶ್‌ಕುಮಾರ್‌ ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...