Homeಮುಖಪುಟಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

ಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

- Advertisement -
- Advertisement -

ತುರ್ತು ಪರಿಸ್ಥಿತಿಗಳಲ್ಲಿ ಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ಪರಿಹಾರ (ಪಿಎಂ ಕೇರ್ಸ್) ನಿಧಿಯನ್ನು ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿ ಸ್ಥಾಪಿಸಲಾಗಿದೆ. ಇದನ್ನು ಸಂವಿಧಾನ ಅಥವಾ ಸಂಸದೀಯ ಕಾನೂನಿನ ಅಡಿಯಲ್ಲಿ ರಚಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ಅಫಡವಿಟ್‌ ಸಲ್ಲಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ನಂತರ, “ಯಾವುದೇ ರೀತಿಯ ತುರ್ತು ಅಥವಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಮೀಸಲಾದ ರಾಷ್ಟ್ರೀಯ ನಿಧಿ” ಎಂದು ಪಿಎಂ ಕೇರ್ಸ್‌ ಫಂಡ್ ಅನ್ನು ಮಾರ್ಚ್ 2020ರಲ್ಲಿ ಸ್ಥಾಪಿಸಲಾಯಿತು.

ಪಿಎಂ ಕೇರ್ಸ್ ನಿಧಿಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂವಿಧಾನದ 12 ನೇ ವಿಧಿಯ ಅಡಿಯಲ್ಲಿ ಅದನ್ನು ‘ಸರ್ಕಾರ’ ಎಂದು ಘೋಷಿಸಲು ಕೋರಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು ಅಫಿಡವಿಟ್ ಸಲ್ಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“‘ಯಾವುದೇ ರೀತಿಯಲ್ಲಿ ಟ್ರಸ್ಟ್‌ನ ಕಾರ್ಯನಿರ್ವಹಣೆಯ ಮೇಲೆ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರ/ಗಳ ನೇರ ಅಥವಾ ಪರೋಕ್ಷವಾದ ಯಾವುದೇ ನಿಯಂತ್ರಣವಿಲ್ಲ” ಎಂದು ಅಫಿಡವಿಟ್ ಹೇಳಿದೆ.

“ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಮಾಹಿತಿ ನೀಡಲು ಫಿಎಂ ಕೇರ್ಸ್ ಫಂಡ್ ಸಾರ್ವಜನಿಕ ಸಂಸ್ಥೆಯಲ್ಲ” ಎಂದು ಸರ್ಕಾರ ಪುನರುಚ್ಚರಿಸಿದೆ, “ಆದ್ದರಿಂದ ಅದನ್ನು ಪರಿಶೀಲನೆಗೆ ತೆಗೆದುಕೊಳ್ಳಬಾರದು” ಎಂದು ಸರ್ಕಾರ ವಾದಿಸಿದೆ.

“ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಸ್ವಯಂಪ್ರೇರಿತ ದೇಣಿಗೆಗಳನ್ನು ಮಾತ್ರ ನಿಧಿ ಸ್ವೀಕರಿಸುತ್ತದೆ” ಎಂದು ಸರ್ಕಾರ ಹೇಳಿದೆ. ಆದರೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, “ಉಪರಾಷ್ಟ್ರಪತಿಗಳಂತಹ ಸರ್ಕಾರದ ಭಾಗವಾಗಿರುವವರು ದೇಣಿಗೆ ನೀಡುವಂತೆ ರಾಜ್ಯಸಭಾ ಸದಸ್ಯರಲ್ಲಿ ಮನವಿ ಮಾಡಿದ್ದರು” ಎಂದು ಉಲ್ಲೇಖಿಸಿದ್ದಾರೆ.

“ಸರ್ಕಾರ ಭಾಗವಲ್ಲದಿದ್ದರೆ ಸರ್ಕಾರಿ ಚಿಹ್ನೆಗಳು ಅಥವಾ ಸರ್ಕಾರಿ ವೆಬ್‌ಸೈಟ್ ಹೊಂದಲು ಸಾಧ್ಯವಿಲ್ಲ. ಇದರಿಂದಾಗಿ ಸಾರ್ವಜನಿಕರು ನಿಮ್ಮನ್ನು ‘ಸರ್ಕಾರ’ ಎಂದು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಏನಿದು ಅರ್ಜಿ?

ಸರ್ಕಾರ ಸ್ಥಾಪಿಸಿದ ಮತ್ತು ನಿರ್ವಹಿಸುವ ನಿಧಿಯನ್ನು ಹಿರಿಯ ಸರ್ಕಾರಿ ಅಧಿಕಾರಿಗಳು ಪ್ರತಿನಿಧಿಸುತ್ತಿದ್ದಾರೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಿಧಿಯು ತನ್ನ ವೆಬ್‌ಸೈಟ್‌ಗಾಗಿ “gov.in” ಡೊಮೇನ್ ಹೆಸರು, ರಾಷ್ಟ್ರೀಯ ಲಾಂಛನ ಮತ್ತು “ಪ್ರಧಾನಿ” – ಎಂಬ ಪದಗಳನ್ನು ಬಳಸಿದೆ. ಸರ್ಕಾರಿ ಸಂಪನ್ಮೂಲಗಳನ್ನು ಒಳಗೊಂಡಿದೆ. ಅಧಿಕೃತ ಮತ್ತು ಅನಧಿಕೃತ ಸಂವಹನಗಳಲ್ಲಿ ತನ್ನನ್ನು ಸರ್ಕಾರವೆಂಬಂತೆ ಬಿಂಬಿಸಿಕೊಳ್ಳಲಾಗಿದೆ. ಪಿಎಂ ಕೇರ್ಸ್ ಫಂಡ್ ಕಚೇರಿಯು ಪ್ರಧಾನ ಮಂತ್ರಿ ಕಚೇರಿಯಾಗಿದೆ. ಈ ರೀತಿಯಲ್ಲಿ ನಿಧಿಯನ್ನು ಪ್ರಸ್ತುತ ಪಡಿಸಿದ ಫಲವಾಗಿ ಅಪಾರ ದೇಣಿಗೆ ದೊರೆತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪಿಎಂ ಕೇರ್ಸ್ ಫಂಡ್ ವೆಬ್‌ಸೈಟ್ ರಚಿಸಿದ ನಾಲ್ಕು ದಿನಗಳಲ್ಲಿ 3,076.62 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ ಎಂಬುದನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಸರ್ಕಾರದ ಅಫಿಡವಿಟ್‌ ಕುರಿತು ಕನ್ನಡಪರ ಹೋರಾಟಗಾರ ಎಸ್.ಸಿ.ದಿನೇಶ್‌ಕುಮಾರ್‌ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದು, “ಪಿಎಂ ಕೇರ್ಸ್ ಸ್ಥಾಪನೆಯಾಗಿದ್ದು ಕೋವಿಡ್ ಸಂಕಟದ ಕಾಲದಲ್ಲಿ. ಅಪಾರ ಸಾವು ನೋವು ಆರ್ಥಿಕ ನಷ್ಟ ಗಳಿಂದ ಕಂಗಾಲಾಗಿದ್ದ ಜನರಿಗೆ ಪಿಎಂ ಕೇರ್ಸ್ ಎಂಬುದು ಗಂಧರ್ವ ಲೋಕದಿಂದ ಬಂದ ಸಂಜೀವಿನಿ ಎಂಬಂತೆ ಬಿಂಬಿಸಲಾಗಿತ್ತು. ಸರ್ಕಾರಕ್ಕೂ ಇದಕ್ಕೂ ಸಂಬಂಧವಿಲ್ಲವೆಂದು ಅಂದೇ ಹೇಳಬಹುದಿತ್ತಲ್ಲವೇ? ಇದೊಂದು ಖಾಸಗಿ ಟ್ರಸ್ಟ್, ಇದಕ್ಕೆ ಭಾರತ ಸಂವಿಧಾನಕ್ಕೆ, ಸರ್ಕಾರಗಳಿಗೆ, ಜನರಿಗೆ ಉತ್ತರದಾಯಿ ಅಲ್ಲ ಎಂದು ಅಂದೇ ಹೇಳಬಹುದಿತ್ತಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಇದು ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪನೆಯಾಗದಿದ್ದರೂ ರಾಷ್ಟ್ರೀಯ ಲಾಂಚನ ಬಳಸಿದ್ದು ಯಾಕೆ? ಇದು ಸರ್ಕಾರದ ಅಡಿಯಲ್ಲಿ ಬರುವ ಸಂಸ್ಥೆಯಲ್ಲವಾದರೂ gov.in ಬಳಸಿದ್ದು ಯಾಕೆ? ಹಣ ವಸೂಲಿಗೆ ಸರ್ಕಾರಿ ಯಂತ್ರಾಂಗಗಳನ್ನು ಬಳಸಿಕೊಂಡಿದ್ದು ಯಾಕೆ? ಸರ್ಕಾರವನ್ನು ಮುನ್ನಡೆಸುವವರೇ ಹಣ ಕೊಡಿ ಎಂದು ಬೇಡಿದ್ದು ಯಾಕೆ? ಸ್ವತಃ ಉಪರಾಷ್ಟ್ರಪತಿಗಳೇ ರಾಜ್ಯಸಭೆಯಲ್ಲಿ ಪಿಎಂ ಕೇರ್ಸ್ ಗೆ ದೇಣಿಗೆ ಕೊಡಿ ಎಂದು ಬೇಡಿಕೊಂಡಿದ್ದು ಯಾಕೆ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

“ಒಂದು ಖಾಸಗಿ ಟ್ರಸ್ಟ್‌ಗೆ ಪಿಎಂ ಕೇರ್ಸ್ ಹೆಸರು ಬಳಸಿದ್ದು ಯಾಕೆ? ಇದರಿಂದ ದೇಶದ ಪ್ರಧಾನಿ ಹುದ್ದೆಯ ಘನತೆಯನ್ನು ಕುಗ್ಗಿಸಿದಂತೆ ಆಗಲಿಲ್ಲವೇ? ಖಾಸಗಿ ವ್ಯಕ್ತಿಗಳು ಪ್ರಧಾನಿ ಹೆಸರಲ್ಲಿ ಟ್ರಸ್ಟ್ ಮಾಡಿದರೆ ಅದು ಅಪರಾಧವಲ್ಲವೇ? ಪಿಎಂ ಕೇರ್ಸ್ ಖಾಸಗಿ ಟ್ರಸ್ಟ್ ಆದ ಮೇಲೆ, ಸರ್ಕಾರಿ ನೌಕರರ ಒಂದು ದಿನದ ಸಂಬಳವನ್ನು ಹೇಗೆ ಕಡಿತ ಮಾಡಿಕೊಂಡು ಟ್ರಸ್ಟ್ ಅಕೌಂಟಿಗೆ ಜಮಾ ಮಾಡಲಾಯಿತು? ಆದಾಯ ತೆರಿಗೆ ವಿನಾಯಿತಿಯನ್ನು ಯಾವ ಆಧಾರದಲ್ಲಿ ನೀಡಲಾಯಿತು? ಪಿಎಂ ಹೆಸರಲ್ಲಿ ಏನನ್ನು ಬೇಕಾದರೂ ಮಾಡಬಹುದೇ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಪಿಎಂ ಕೇರ್ಸ್‌ ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವಿಲ್ಲ: ಮೋದಿ ಸರ್ಕಾರ

“ದೇಶದ ಜನರು ಸಾವಿರಾರು ಕೋಟಿ ರುಪಾಯಿಗಳನ್ನು ಪಿಎಂ ಕೇರ್ಸ್‌‌ಗೆ ನೀಡಿದ್ದಾರೆ. ಈಗ ಅವರು ತಾವು ಕೊಟ್ಟ ಹಣದ ಲೆಕ್ಕ ಕೇಳುವಂತಿಲ್ಲ. ಎಷ್ಟು ಹಣ, ಯಾತಕ್ಕಾಗಿ ಖರ್ಚು ಮಾಡಿದ್ದೀರಿ ಎಂದು ಕೇಳುವಂತಿಲ್ಲ. ನಾಳೆ ಹಣವನ್ನೆಲ್ಲ ತೆಗೆದು ಅದಾನಿ ಕಂಪೆನಿಗೆ ಕೊಟ್ಟರೂ, ಭಾರತೀಯ ಜನತಾ ಪಕ್ಷ ಚುನಾವಣೆ ಖರ್ಚಿಗೋ, ಶಾಸಕರ ಖರೀದಿಗೋ ಬಳಸಿದರೂ ನಾವು ಕೇಳುವಂತಿಲ್ಲ. ಇದು ಭಾರತದ ಯಾವುದೇ ಕಾನೂನಿನ ಅಡಿಯಲ್ಲಿ ಸ್ಥಾಪಿಸಿಲ್ಲ ಎಂದು ಸರ್ಕಾರ ಹೇಳುತ್ತಿರುವುದರಿಂದ ನಾವು ಕೋರ್ಟುಗಳ ಮೊರೆ ಹೋಗುವಂತಿಲ್ಲ. ಇಂಥ ಅನೈತಿಕ ವ್ಯವಹಾರ ಯಾಕೆ ಬೇಕಿತ್ತು?” ಎಂದು ಟೀಕಿಸಿದ್ದಾರೆ.

“ಮೊದಲಿನಿಂದಲೂ ಇರುವ ಪಿಎಂ ರಿಲೀಫ್ ಫಂಡ್‌ಗೆ ಪಿಎಂ ಕೇರ್ಸ್ ಹಣ ಕೊಡುತ್ತದೆಯಂತೆ! ಈ ಡಬ್ಬಲ್ ಎಂಜಿನ್ ಯಾಕೆ ಬೇಕಿತ್ತು? ಒಂದು ಅಧಿಕೃತ ಇರುವಾಗ ಇನ್ನೊಂದು ಅನಧಿಕೃತ ಯಾಕೆ ಬೇಕಿತ್ತು? ಪಿಎಂ ರಿಲೀಫ್ ಫಂಡ್ ಮೂಲಕ ಮಾಡಲಾಗದ ಯಾವ ಘನಂದಾರಿ ಕೆಲಸವನ್ನು ಪಿಎಂ ಕೇರ್ಸ್ ಮಾಡುತ್ತದೆ? ನರೇಂದ್ರ ಮೋದಿ ಸರ್ಕಾರ ಬಿದ್ದು ಹೋಗಿ, ಹೊಸ ಸರ್ಕಾರ ಬಂತು ಎಂದಿಟ್ಟುಕೊಳ್ಳಿ. ಆಗ ಟ್ರಸ್ಟ್ ಹಣೆ ಬರೆಹವೇನು? ಹೊಸ ಪ್ರಧಾನಿಗೆ ಅಲ್ಲಿ ಪಾತ್ರವೇ ಇರುವುದಿಲ್ಲ. ಪ್ರಧಾನಿ ಬದಲಾದರೂ ಮೋದಿಯೇ ಪಿಎಂ ಕೇರ್ಸ್ ನಿರ್ವಹಿಸುತ್ತಾರೆಯೇ? ಆಗ ಪ್ರಧಾನಿಯಲ್ಲದ ವ್ಯಕ್ತಿ ಪ್ರಧಾನಿ ಹೆಸರಲ್ಲಿ ಹೇಗೆ ಟ್ರಸ್ಟ್ ನಡೆಸುತ್ತಾರೆ? ಇದೆಲ್ಲ ಗಮನಿಸಿದರೆ ಪಿಎಂ ಕೇರ್ಸ್ ಕೂಡ ಒಂದು ದೊಡ್ಡ ಫ್ರಾಡ್ ಎಂದು ಅನಿಸುವುದಿಲ್ಲವೇ? ದೇಶವನ್ನು ಮುನ್ನಡೆಸಬೇಕಾದವರೇ ಇಂಥ ದಂಧೆಗೆ ಇಳಿದರೆ ದೇಶ ಉಳಿಯಲು ಸಾಧ್ಯವೇ?” ಎಂದು ದಿನೇಶ್‌ಕುಮಾರ್‌ ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...