Homeಮುಖಪುಟಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

ಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

- Advertisement -
- Advertisement -

ತುರ್ತು ಪರಿಸ್ಥಿತಿಗಳಲ್ಲಿ ಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ಪರಿಹಾರ (ಪಿಎಂ ಕೇರ್ಸ್) ನಿಧಿಯನ್ನು ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿ ಸ್ಥಾಪಿಸಲಾಗಿದೆ. ಇದನ್ನು ಸಂವಿಧಾನ ಅಥವಾ ಸಂಸದೀಯ ಕಾನೂನಿನ ಅಡಿಯಲ್ಲಿ ರಚಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ಅಫಡವಿಟ್‌ ಸಲ್ಲಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ನಂತರ, “ಯಾವುದೇ ರೀತಿಯ ತುರ್ತು ಅಥವಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಮೀಸಲಾದ ರಾಷ್ಟ್ರೀಯ ನಿಧಿ” ಎಂದು ಪಿಎಂ ಕೇರ್ಸ್‌ ಫಂಡ್ ಅನ್ನು ಮಾರ್ಚ್ 2020ರಲ್ಲಿ ಸ್ಥಾಪಿಸಲಾಯಿತು.

ಪಿಎಂ ಕೇರ್ಸ್ ನಿಧಿಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂವಿಧಾನದ 12 ನೇ ವಿಧಿಯ ಅಡಿಯಲ್ಲಿ ಅದನ್ನು ‘ಸರ್ಕಾರ’ ಎಂದು ಘೋಷಿಸಲು ಕೋರಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು ಅಫಿಡವಿಟ್ ಸಲ್ಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“‘ಯಾವುದೇ ರೀತಿಯಲ್ಲಿ ಟ್ರಸ್ಟ್‌ನ ಕಾರ್ಯನಿರ್ವಹಣೆಯ ಮೇಲೆ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರ/ಗಳ ನೇರ ಅಥವಾ ಪರೋಕ್ಷವಾದ ಯಾವುದೇ ನಿಯಂತ್ರಣವಿಲ್ಲ” ಎಂದು ಅಫಿಡವಿಟ್ ಹೇಳಿದೆ.

“ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಮಾಹಿತಿ ನೀಡಲು ಫಿಎಂ ಕೇರ್ಸ್ ಫಂಡ್ ಸಾರ್ವಜನಿಕ ಸಂಸ್ಥೆಯಲ್ಲ” ಎಂದು ಸರ್ಕಾರ ಪುನರುಚ್ಚರಿಸಿದೆ, “ಆದ್ದರಿಂದ ಅದನ್ನು ಪರಿಶೀಲನೆಗೆ ತೆಗೆದುಕೊಳ್ಳಬಾರದು” ಎಂದು ಸರ್ಕಾರ ವಾದಿಸಿದೆ.

“ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಸ್ವಯಂಪ್ರೇರಿತ ದೇಣಿಗೆಗಳನ್ನು ಮಾತ್ರ ನಿಧಿ ಸ್ವೀಕರಿಸುತ್ತದೆ” ಎಂದು ಸರ್ಕಾರ ಹೇಳಿದೆ. ಆದರೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, “ಉಪರಾಷ್ಟ್ರಪತಿಗಳಂತಹ ಸರ್ಕಾರದ ಭಾಗವಾಗಿರುವವರು ದೇಣಿಗೆ ನೀಡುವಂತೆ ರಾಜ್ಯಸಭಾ ಸದಸ್ಯರಲ್ಲಿ ಮನವಿ ಮಾಡಿದ್ದರು” ಎಂದು ಉಲ್ಲೇಖಿಸಿದ್ದಾರೆ.

“ಸರ್ಕಾರ ಭಾಗವಲ್ಲದಿದ್ದರೆ ಸರ್ಕಾರಿ ಚಿಹ್ನೆಗಳು ಅಥವಾ ಸರ್ಕಾರಿ ವೆಬ್‌ಸೈಟ್ ಹೊಂದಲು ಸಾಧ್ಯವಿಲ್ಲ. ಇದರಿಂದಾಗಿ ಸಾರ್ವಜನಿಕರು ನಿಮ್ಮನ್ನು ‘ಸರ್ಕಾರ’ ಎಂದು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಏನಿದು ಅರ್ಜಿ?

ಸರ್ಕಾರ ಸ್ಥಾಪಿಸಿದ ಮತ್ತು ನಿರ್ವಹಿಸುವ ನಿಧಿಯನ್ನು ಹಿರಿಯ ಸರ್ಕಾರಿ ಅಧಿಕಾರಿಗಳು ಪ್ರತಿನಿಧಿಸುತ್ತಿದ್ದಾರೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಿಧಿಯು ತನ್ನ ವೆಬ್‌ಸೈಟ್‌ಗಾಗಿ “gov.in” ಡೊಮೇನ್ ಹೆಸರು, ರಾಷ್ಟ್ರೀಯ ಲಾಂಛನ ಮತ್ತು “ಪ್ರಧಾನಿ” – ಎಂಬ ಪದಗಳನ್ನು ಬಳಸಿದೆ. ಸರ್ಕಾರಿ ಸಂಪನ್ಮೂಲಗಳನ್ನು ಒಳಗೊಂಡಿದೆ. ಅಧಿಕೃತ ಮತ್ತು ಅನಧಿಕೃತ ಸಂವಹನಗಳಲ್ಲಿ ತನ್ನನ್ನು ಸರ್ಕಾರವೆಂಬಂತೆ ಬಿಂಬಿಸಿಕೊಳ್ಳಲಾಗಿದೆ. ಪಿಎಂ ಕೇರ್ಸ್ ಫಂಡ್ ಕಚೇರಿಯು ಪ್ರಧಾನ ಮಂತ್ರಿ ಕಚೇರಿಯಾಗಿದೆ. ಈ ರೀತಿಯಲ್ಲಿ ನಿಧಿಯನ್ನು ಪ್ರಸ್ತುತ ಪಡಿಸಿದ ಫಲವಾಗಿ ಅಪಾರ ದೇಣಿಗೆ ದೊರೆತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪಿಎಂ ಕೇರ್ಸ್ ಫಂಡ್ ವೆಬ್‌ಸೈಟ್ ರಚಿಸಿದ ನಾಲ್ಕು ದಿನಗಳಲ್ಲಿ 3,076.62 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ ಎಂಬುದನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಸರ್ಕಾರದ ಅಫಿಡವಿಟ್‌ ಕುರಿತು ಕನ್ನಡಪರ ಹೋರಾಟಗಾರ ಎಸ್.ಸಿ.ದಿನೇಶ್‌ಕುಮಾರ್‌ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದು, “ಪಿಎಂ ಕೇರ್ಸ್ ಸ್ಥಾಪನೆಯಾಗಿದ್ದು ಕೋವಿಡ್ ಸಂಕಟದ ಕಾಲದಲ್ಲಿ. ಅಪಾರ ಸಾವು ನೋವು ಆರ್ಥಿಕ ನಷ್ಟ ಗಳಿಂದ ಕಂಗಾಲಾಗಿದ್ದ ಜನರಿಗೆ ಪಿಎಂ ಕೇರ್ಸ್ ಎಂಬುದು ಗಂಧರ್ವ ಲೋಕದಿಂದ ಬಂದ ಸಂಜೀವಿನಿ ಎಂಬಂತೆ ಬಿಂಬಿಸಲಾಗಿತ್ತು. ಸರ್ಕಾರಕ್ಕೂ ಇದಕ್ಕೂ ಸಂಬಂಧವಿಲ್ಲವೆಂದು ಅಂದೇ ಹೇಳಬಹುದಿತ್ತಲ್ಲವೇ? ಇದೊಂದು ಖಾಸಗಿ ಟ್ರಸ್ಟ್, ಇದಕ್ಕೆ ಭಾರತ ಸಂವಿಧಾನಕ್ಕೆ, ಸರ್ಕಾರಗಳಿಗೆ, ಜನರಿಗೆ ಉತ್ತರದಾಯಿ ಅಲ್ಲ ಎಂದು ಅಂದೇ ಹೇಳಬಹುದಿತ್ತಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಇದು ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪನೆಯಾಗದಿದ್ದರೂ ರಾಷ್ಟ್ರೀಯ ಲಾಂಚನ ಬಳಸಿದ್ದು ಯಾಕೆ? ಇದು ಸರ್ಕಾರದ ಅಡಿಯಲ್ಲಿ ಬರುವ ಸಂಸ್ಥೆಯಲ್ಲವಾದರೂ gov.in ಬಳಸಿದ್ದು ಯಾಕೆ? ಹಣ ವಸೂಲಿಗೆ ಸರ್ಕಾರಿ ಯಂತ್ರಾಂಗಗಳನ್ನು ಬಳಸಿಕೊಂಡಿದ್ದು ಯಾಕೆ? ಸರ್ಕಾರವನ್ನು ಮುನ್ನಡೆಸುವವರೇ ಹಣ ಕೊಡಿ ಎಂದು ಬೇಡಿದ್ದು ಯಾಕೆ? ಸ್ವತಃ ಉಪರಾಷ್ಟ್ರಪತಿಗಳೇ ರಾಜ್ಯಸಭೆಯಲ್ಲಿ ಪಿಎಂ ಕೇರ್ಸ್ ಗೆ ದೇಣಿಗೆ ಕೊಡಿ ಎಂದು ಬೇಡಿಕೊಂಡಿದ್ದು ಯಾಕೆ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

“ಒಂದು ಖಾಸಗಿ ಟ್ರಸ್ಟ್‌ಗೆ ಪಿಎಂ ಕೇರ್ಸ್ ಹೆಸರು ಬಳಸಿದ್ದು ಯಾಕೆ? ಇದರಿಂದ ದೇಶದ ಪ್ರಧಾನಿ ಹುದ್ದೆಯ ಘನತೆಯನ್ನು ಕುಗ್ಗಿಸಿದಂತೆ ಆಗಲಿಲ್ಲವೇ? ಖಾಸಗಿ ವ್ಯಕ್ತಿಗಳು ಪ್ರಧಾನಿ ಹೆಸರಲ್ಲಿ ಟ್ರಸ್ಟ್ ಮಾಡಿದರೆ ಅದು ಅಪರಾಧವಲ್ಲವೇ? ಪಿಎಂ ಕೇರ್ಸ್ ಖಾಸಗಿ ಟ್ರಸ್ಟ್ ಆದ ಮೇಲೆ, ಸರ್ಕಾರಿ ನೌಕರರ ಒಂದು ದಿನದ ಸಂಬಳವನ್ನು ಹೇಗೆ ಕಡಿತ ಮಾಡಿಕೊಂಡು ಟ್ರಸ್ಟ್ ಅಕೌಂಟಿಗೆ ಜಮಾ ಮಾಡಲಾಯಿತು? ಆದಾಯ ತೆರಿಗೆ ವಿನಾಯಿತಿಯನ್ನು ಯಾವ ಆಧಾರದಲ್ಲಿ ನೀಡಲಾಯಿತು? ಪಿಎಂ ಹೆಸರಲ್ಲಿ ಏನನ್ನು ಬೇಕಾದರೂ ಮಾಡಬಹುದೇ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಪಿಎಂ ಕೇರ್ಸ್‌ ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವಿಲ್ಲ: ಮೋದಿ ಸರ್ಕಾರ

“ದೇಶದ ಜನರು ಸಾವಿರಾರು ಕೋಟಿ ರುಪಾಯಿಗಳನ್ನು ಪಿಎಂ ಕೇರ್ಸ್‌‌ಗೆ ನೀಡಿದ್ದಾರೆ. ಈಗ ಅವರು ತಾವು ಕೊಟ್ಟ ಹಣದ ಲೆಕ್ಕ ಕೇಳುವಂತಿಲ್ಲ. ಎಷ್ಟು ಹಣ, ಯಾತಕ್ಕಾಗಿ ಖರ್ಚು ಮಾಡಿದ್ದೀರಿ ಎಂದು ಕೇಳುವಂತಿಲ್ಲ. ನಾಳೆ ಹಣವನ್ನೆಲ್ಲ ತೆಗೆದು ಅದಾನಿ ಕಂಪೆನಿಗೆ ಕೊಟ್ಟರೂ, ಭಾರತೀಯ ಜನತಾ ಪಕ್ಷ ಚುನಾವಣೆ ಖರ್ಚಿಗೋ, ಶಾಸಕರ ಖರೀದಿಗೋ ಬಳಸಿದರೂ ನಾವು ಕೇಳುವಂತಿಲ್ಲ. ಇದು ಭಾರತದ ಯಾವುದೇ ಕಾನೂನಿನ ಅಡಿಯಲ್ಲಿ ಸ್ಥಾಪಿಸಿಲ್ಲ ಎಂದು ಸರ್ಕಾರ ಹೇಳುತ್ತಿರುವುದರಿಂದ ನಾವು ಕೋರ್ಟುಗಳ ಮೊರೆ ಹೋಗುವಂತಿಲ್ಲ. ಇಂಥ ಅನೈತಿಕ ವ್ಯವಹಾರ ಯಾಕೆ ಬೇಕಿತ್ತು?” ಎಂದು ಟೀಕಿಸಿದ್ದಾರೆ.

“ಮೊದಲಿನಿಂದಲೂ ಇರುವ ಪಿಎಂ ರಿಲೀಫ್ ಫಂಡ್‌ಗೆ ಪಿಎಂ ಕೇರ್ಸ್ ಹಣ ಕೊಡುತ್ತದೆಯಂತೆ! ಈ ಡಬ್ಬಲ್ ಎಂಜಿನ್ ಯಾಕೆ ಬೇಕಿತ್ತು? ಒಂದು ಅಧಿಕೃತ ಇರುವಾಗ ಇನ್ನೊಂದು ಅನಧಿಕೃತ ಯಾಕೆ ಬೇಕಿತ್ತು? ಪಿಎಂ ರಿಲೀಫ್ ಫಂಡ್ ಮೂಲಕ ಮಾಡಲಾಗದ ಯಾವ ಘನಂದಾರಿ ಕೆಲಸವನ್ನು ಪಿಎಂ ಕೇರ್ಸ್ ಮಾಡುತ್ತದೆ? ನರೇಂದ್ರ ಮೋದಿ ಸರ್ಕಾರ ಬಿದ್ದು ಹೋಗಿ, ಹೊಸ ಸರ್ಕಾರ ಬಂತು ಎಂದಿಟ್ಟುಕೊಳ್ಳಿ. ಆಗ ಟ್ರಸ್ಟ್ ಹಣೆ ಬರೆಹವೇನು? ಹೊಸ ಪ್ರಧಾನಿಗೆ ಅಲ್ಲಿ ಪಾತ್ರವೇ ಇರುವುದಿಲ್ಲ. ಪ್ರಧಾನಿ ಬದಲಾದರೂ ಮೋದಿಯೇ ಪಿಎಂ ಕೇರ್ಸ್ ನಿರ್ವಹಿಸುತ್ತಾರೆಯೇ? ಆಗ ಪ್ರಧಾನಿಯಲ್ಲದ ವ್ಯಕ್ತಿ ಪ್ರಧಾನಿ ಹೆಸರಲ್ಲಿ ಹೇಗೆ ಟ್ರಸ್ಟ್ ನಡೆಸುತ್ತಾರೆ? ಇದೆಲ್ಲ ಗಮನಿಸಿದರೆ ಪಿಎಂ ಕೇರ್ಸ್ ಕೂಡ ಒಂದು ದೊಡ್ಡ ಫ್ರಾಡ್ ಎಂದು ಅನಿಸುವುದಿಲ್ಲವೇ? ದೇಶವನ್ನು ಮುನ್ನಡೆಸಬೇಕಾದವರೇ ಇಂಥ ದಂಧೆಗೆ ಇಳಿದರೆ ದೇಶ ಉಳಿಯಲು ಸಾಧ್ಯವೇ?” ಎಂದು ದಿನೇಶ್‌ಕುಮಾರ್‌ ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...