Homeಮುಖಪುಟಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

ಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

- Advertisement -
- Advertisement -

ತುರ್ತು ಪರಿಸ್ಥಿತಿಗಳಲ್ಲಿ ಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ಪರಿಹಾರ (ಪಿಎಂ ಕೇರ್ಸ್) ನಿಧಿಯನ್ನು ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿ ಸ್ಥಾಪಿಸಲಾಗಿದೆ. ಇದನ್ನು ಸಂವಿಧಾನ ಅಥವಾ ಸಂಸದೀಯ ಕಾನೂನಿನ ಅಡಿಯಲ್ಲಿ ರಚಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ಅಫಡವಿಟ್‌ ಸಲ್ಲಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ನಂತರ, “ಯಾವುದೇ ರೀತಿಯ ತುರ್ತು ಅಥವಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಮೀಸಲಾದ ರಾಷ್ಟ್ರೀಯ ನಿಧಿ” ಎಂದು ಪಿಎಂ ಕೇರ್ಸ್‌ ಫಂಡ್ ಅನ್ನು ಮಾರ್ಚ್ 2020ರಲ್ಲಿ ಸ್ಥಾಪಿಸಲಾಯಿತು.

ಪಿಎಂ ಕೇರ್ಸ್ ನಿಧಿಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂವಿಧಾನದ 12 ನೇ ವಿಧಿಯ ಅಡಿಯಲ್ಲಿ ಅದನ್ನು ‘ಸರ್ಕಾರ’ ಎಂದು ಘೋಷಿಸಲು ಕೋರಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು ಅಫಿಡವಿಟ್ ಸಲ್ಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“‘ಯಾವುದೇ ರೀತಿಯಲ್ಲಿ ಟ್ರಸ್ಟ್‌ನ ಕಾರ್ಯನಿರ್ವಹಣೆಯ ಮೇಲೆ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರ/ಗಳ ನೇರ ಅಥವಾ ಪರೋಕ್ಷವಾದ ಯಾವುದೇ ನಿಯಂತ್ರಣವಿಲ್ಲ” ಎಂದು ಅಫಿಡವಿಟ್ ಹೇಳಿದೆ.

“ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಮಾಹಿತಿ ನೀಡಲು ಫಿಎಂ ಕೇರ್ಸ್ ಫಂಡ್ ಸಾರ್ವಜನಿಕ ಸಂಸ್ಥೆಯಲ್ಲ” ಎಂದು ಸರ್ಕಾರ ಪುನರುಚ್ಚರಿಸಿದೆ, “ಆದ್ದರಿಂದ ಅದನ್ನು ಪರಿಶೀಲನೆಗೆ ತೆಗೆದುಕೊಳ್ಳಬಾರದು” ಎಂದು ಸರ್ಕಾರ ವಾದಿಸಿದೆ.

“ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಸ್ವಯಂಪ್ರೇರಿತ ದೇಣಿಗೆಗಳನ್ನು ಮಾತ್ರ ನಿಧಿ ಸ್ವೀಕರಿಸುತ್ತದೆ” ಎಂದು ಸರ್ಕಾರ ಹೇಳಿದೆ. ಆದರೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, “ಉಪರಾಷ್ಟ್ರಪತಿಗಳಂತಹ ಸರ್ಕಾರದ ಭಾಗವಾಗಿರುವವರು ದೇಣಿಗೆ ನೀಡುವಂತೆ ರಾಜ್ಯಸಭಾ ಸದಸ್ಯರಲ್ಲಿ ಮನವಿ ಮಾಡಿದ್ದರು” ಎಂದು ಉಲ್ಲೇಖಿಸಿದ್ದಾರೆ.

“ಸರ್ಕಾರ ಭಾಗವಲ್ಲದಿದ್ದರೆ ಸರ್ಕಾರಿ ಚಿಹ್ನೆಗಳು ಅಥವಾ ಸರ್ಕಾರಿ ವೆಬ್‌ಸೈಟ್ ಹೊಂದಲು ಸಾಧ್ಯವಿಲ್ಲ. ಇದರಿಂದಾಗಿ ಸಾರ್ವಜನಿಕರು ನಿಮ್ಮನ್ನು ‘ಸರ್ಕಾರ’ ಎಂದು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಏನಿದು ಅರ್ಜಿ?

ಸರ್ಕಾರ ಸ್ಥಾಪಿಸಿದ ಮತ್ತು ನಿರ್ವಹಿಸುವ ನಿಧಿಯನ್ನು ಹಿರಿಯ ಸರ್ಕಾರಿ ಅಧಿಕಾರಿಗಳು ಪ್ರತಿನಿಧಿಸುತ್ತಿದ್ದಾರೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಿಧಿಯು ತನ್ನ ವೆಬ್‌ಸೈಟ್‌ಗಾಗಿ “gov.in” ಡೊಮೇನ್ ಹೆಸರು, ರಾಷ್ಟ್ರೀಯ ಲಾಂಛನ ಮತ್ತು “ಪ್ರಧಾನಿ” – ಎಂಬ ಪದಗಳನ್ನು ಬಳಸಿದೆ. ಸರ್ಕಾರಿ ಸಂಪನ್ಮೂಲಗಳನ್ನು ಒಳಗೊಂಡಿದೆ. ಅಧಿಕೃತ ಮತ್ತು ಅನಧಿಕೃತ ಸಂವಹನಗಳಲ್ಲಿ ತನ್ನನ್ನು ಸರ್ಕಾರವೆಂಬಂತೆ ಬಿಂಬಿಸಿಕೊಳ್ಳಲಾಗಿದೆ. ಪಿಎಂ ಕೇರ್ಸ್ ಫಂಡ್ ಕಚೇರಿಯು ಪ್ರಧಾನ ಮಂತ್ರಿ ಕಚೇರಿಯಾಗಿದೆ. ಈ ರೀತಿಯಲ್ಲಿ ನಿಧಿಯನ್ನು ಪ್ರಸ್ತುತ ಪಡಿಸಿದ ಫಲವಾಗಿ ಅಪಾರ ದೇಣಿಗೆ ದೊರೆತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪಿಎಂ ಕೇರ್ಸ್ ಫಂಡ್ ವೆಬ್‌ಸೈಟ್ ರಚಿಸಿದ ನಾಲ್ಕು ದಿನಗಳಲ್ಲಿ 3,076.62 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ ಎಂಬುದನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಸರ್ಕಾರದ ಅಫಿಡವಿಟ್‌ ಕುರಿತು ಕನ್ನಡಪರ ಹೋರಾಟಗಾರ ಎಸ್.ಸಿ.ದಿನೇಶ್‌ಕುಮಾರ್‌ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದು, “ಪಿಎಂ ಕೇರ್ಸ್ ಸ್ಥಾಪನೆಯಾಗಿದ್ದು ಕೋವಿಡ್ ಸಂಕಟದ ಕಾಲದಲ್ಲಿ. ಅಪಾರ ಸಾವು ನೋವು ಆರ್ಥಿಕ ನಷ್ಟ ಗಳಿಂದ ಕಂಗಾಲಾಗಿದ್ದ ಜನರಿಗೆ ಪಿಎಂ ಕೇರ್ಸ್ ಎಂಬುದು ಗಂಧರ್ವ ಲೋಕದಿಂದ ಬಂದ ಸಂಜೀವಿನಿ ಎಂಬಂತೆ ಬಿಂಬಿಸಲಾಗಿತ್ತು. ಸರ್ಕಾರಕ್ಕೂ ಇದಕ್ಕೂ ಸಂಬಂಧವಿಲ್ಲವೆಂದು ಅಂದೇ ಹೇಳಬಹುದಿತ್ತಲ್ಲವೇ? ಇದೊಂದು ಖಾಸಗಿ ಟ್ರಸ್ಟ್, ಇದಕ್ಕೆ ಭಾರತ ಸಂವಿಧಾನಕ್ಕೆ, ಸರ್ಕಾರಗಳಿಗೆ, ಜನರಿಗೆ ಉತ್ತರದಾಯಿ ಅಲ್ಲ ಎಂದು ಅಂದೇ ಹೇಳಬಹುದಿತ್ತಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಇದು ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪನೆಯಾಗದಿದ್ದರೂ ರಾಷ್ಟ್ರೀಯ ಲಾಂಚನ ಬಳಸಿದ್ದು ಯಾಕೆ? ಇದು ಸರ್ಕಾರದ ಅಡಿಯಲ್ಲಿ ಬರುವ ಸಂಸ್ಥೆಯಲ್ಲವಾದರೂ gov.in ಬಳಸಿದ್ದು ಯಾಕೆ? ಹಣ ವಸೂಲಿಗೆ ಸರ್ಕಾರಿ ಯಂತ್ರಾಂಗಗಳನ್ನು ಬಳಸಿಕೊಂಡಿದ್ದು ಯಾಕೆ? ಸರ್ಕಾರವನ್ನು ಮುನ್ನಡೆಸುವವರೇ ಹಣ ಕೊಡಿ ಎಂದು ಬೇಡಿದ್ದು ಯಾಕೆ? ಸ್ವತಃ ಉಪರಾಷ್ಟ್ರಪತಿಗಳೇ ರಾಜ್ಯಸಭೆಯಲ್ಲಿ ಪಿಎಂ ಕೇರ್ಸ್ ಗೆ ದೇಣಿಗೆ ಕೊಡಿ ಎಂದು ಬೇಡಿಕೊಂಡಿದ್ದು ಯಾಕೆ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

“ಒಂದು ಖಾಸಗಿ ಟ್ರಸ್ಟ್‌ಗೆ ಪಿಎಂ ಕೇರ್ಸ್ ಹೆಸರು ಬಳಸಿದ್ದು ಯಾಕೆ? ಇದರಿಂದ ದೇಶದ ಪ್ರಧಾನಿ ಹುದ್ದೆಯ ಘನತೆಯನ್ನು ಕುಗ್ಗಿಸಿದಂತೆ ಆಗಲಿಲ್ಲವೇ? ಖಾಸಗಿ ವ್ಯಕ್ತಿಗಳು ಪ್ರಧಾನಿ ಹೆಸರಲ್ಲಿ ಟ್ರಸ್ಟ್ ಮಾಡಿದರೆ ಅದು ಅಪರಾಧವಲ್ಲವೇ? ಪಿಎಂ ಕೇರ್ಸ್ ಖಾಸಗಿ ಟ್ರಸ್ಟ್ ಆದ ಮೇಲೆ, ಸರ್ಕಾರಿ ನೌಕರರ ಒಂದು ದಿನದ ಸಂಬಳವನ್ನು ಹೇಗೆ ಕಡಿತ ಮಾಡಿಕೊಂಡು ಟ್ರಸ್ಟ್ ಅಕೌಂಟಿಗೆ ಜಮಾ ಮಾಡಲಾಯಿತು? ಆದಾಯ ತೆರಿಗೆ ವಿನಾಯಿತಿಯನ್ನು ಯಾವ ಆಧಾರದಲ್ಲಿ ನೀಡಲಾಯಿತು? ಪಿಎಂ ಹೆಸರಲ್ಲಿ ಏನನ್ನು ಬೇಕಾದರೂ ಮಾಡಬಹುದೇ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಪಿಎಂ ಕೇರ್ಸ್‌ ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವಿಲ್ಲ: ಮೋದಿ ಸರ್ಕಾರ

“ದೇಶದ ಜನರು ಸಾವಿರಾರು ಕೋಟಿ ರುಪಾಯಿಗಳನ್ನು ಪಿಎಂ ಕೇರ್ಸ್‌‌ಗೆ ನೀಡಿದ್ದಾರೆ. ಈಗ ಅವರು ತಾವು ಕೊಟ್ಟ ಹಣದ ಲೆಕ್ಕ ಕೇಳುವಂತಿಲ್ಲ. ಎಷ್ಟು ಹಣ, ಯಾತಕ್ಕಾಗಿ ಖರ್ಚು ಮಾಡಿದ್ದೀರಿ ಎಂದು ಕೇಳುವಂತಿಲ್ಲ. ನಾಳೆ ಹಣವನ್ನೆಲ್ಲ ತೆಗೆದು ಅದಾನಿ ಕಂಪೆನಿಗೆ ಕೊಟ್ಟರೂ, ಭಾರತೀಯ ಜನತಾ ಪಕ್ಷ ಚುನಾವಣೆ ಖರ್ಚಿಗೋ, ಶಾಸಕರ ಖರೀದಿಗೋ ಬಳಸಿದರೂ ನಾವು ಕೇಳುವಂತಿಲ್ಲ. ಇದು ಭಾರತದ ಯಾವುದೇ ಕಾನೂನಿನ ಅಡಿಯಲ್ಲಿ ಸ್ಥಾಪಿಸಿಲ್ಲ ಎಂದು ಸರ್ಕಾರ ಹೇಳುತ್ತಿರುವುದರಿಂದ ನಾವು ಕೋರ್ಟುಗಳ ಮೊರೆ ಹೋಗುವಂತಿಲ್ಲ. ಇಂಥ ಅನೈತಿಕ ವ್ಯವಹಾರ ಯಾಕೆ ಬೇಕಿತ್ತು?” ಎಂದು ಟೀಕಿಸಿದ್ದಾರೆ.

“ಮೊದಲಿನಿಂದಲೂ ಇರುವ ಪಿಎಂ ರಿಲೀಫ್ ಫಂಡ್‌ಗೆ ಪಿಎಂ ಕೇರ್ಸ್ ಹಣ ಕೊಡುತ್ತದೆಯಂತೆ! ಈ ಡಬ್ಬಲ್ ಎಂಜಿನ್ ಯಾಕೆ ಬೇಕಿತ್ತು? ಒಂದು ಅಧಿಕೃತ ಇರುವಾಗ ಇನ್ನೊಂದು ಅನಧಿಕೃತ ಯಾಕೆ ಬೇಕಿತ್ತು? ಪಿಎಂ ರಿಲೀಫ್ ಫಂಡ್ ಮೂಲಕ ಮಾಡಲಾಗದ ಯಾವ ಘನಂದಾರಿ ಕೆಲಸವನ್ನು ಪಿಎಂ ಕೇರ್ಸ್ ಮಾಡುತ್ತದೆ? ನರೇಂದ್ರ ಮೋದಿ ಸರ್ಕಾರ ಬಿದ್ದು ಹೋಗಿ, ಹೊಸ ಸರ್ಕಾರ ಬಂತು ಎಂದಿಟ್ಟುಕೊಳ್ಳಿ. ಆಗ ಟ್ರಸ್ಟ್ ಹಣೆ ಬರೆಹವೇನು? ಹೊಸ ಪ್ರಧಾನಿಗೆ ಅಲ್ಲಿ ಪಾತ್ರವೇ ಇರುವುದಿಲ್ಲ. ಪ್ರಧಾನಿ ಬದಲಾದರೂ ಮೋದಿಯೇ ಪಿಎಂ ಕೇರ್ಸ್ ನಿರ್ವಹಿಸುತ್ತಾರೆಯೇ? ಆಗ ಪ್ರಧಾನಿಯಲ್ಲದ ವ್ಯಕ್ತಿ ಪ್ರಧಾನಿ ಹೆಸರಲ್ಲಿ ಹೇಗೆ ಟ್ರಸ್ಟ್ ನಡೆಸುತ್ತಾರೆ? ಇದೆಲ್ಲ ಗಮನಿಸಿದರೆ ಪಿಎಂ ಕೇರ್ಸ್ ಕೂಡ ಒಂದು ದೊಡ್ಡ ಫ್ರಾಡ್ ಎಂದು ಅನಿಸುವುದಿಲ್ಲವೇ? ದೇಶವನ್ನು ಮುನ್ನಡೆಸಬೇಕಾದವರೇ ಇಂಥ ದಂಧೆಗೆ ಇಳಿದರೆ ದೇಶ ಉಳಿಯಲು ಸಾಧ್ಯವೇ?” ಎಂದು ದಿನೇಶ್‌ಕುಮಾರ್‌ ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...