Homeಮುಖಪುಟಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

ಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

- Advertisement -
- Advertisement -

ತುರ್ತು ಪರಿಸ್ಥಿತಿಗಳಲ್ಲಿ ಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ಪರಿಹಾರ (ಪಿಎಂ ಕೇರ್ಸ್) ನಿಧಿಯನ್ನು ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿ ಸ್ಥಾಪಿಸಲಾಗಿದೆ. ಇದನ್ನು ಸಂವಿಧಾನ ಅಥವಾ ಸಂಸದೀಯ ಕಾನೂನಿನ ಅಡಿಯಲ್ಲಿ ರಚಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ಅಫಡವಿಟ್‌ ಸಲ್ಲಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ನಂತರ, “ಯಾವುದೇ ರೀತಿಯ ತುರ್ತು ಅಥವಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಮೀಸಲಾದ ರಾಷ್ಟ್ರೀಯ ನಿಧಿ” ಎಂದು ಪಿಎಂ ಕೇರ್ಸ್‌ ಫಂಡ್ ಅನ್ನು ಮಾರ್ಚ್ 2020ರಲ್ಲಿ ಸ್ಥಾಪಿಸಲಾಯಿತು.

ಪಿಎಂ ಕೇರ್ಸ್ ನಿಧಿಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂವಿಧಾನದ 12 ನೇ ವಿಧಿಯ ಅಡಿಯಲ್ಲಿ ಅದನ್ನು ‘ಸರ್ಕಾರ’ ಎಂದು ಘೋಷಿಸಲು ಕೋರಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು ಅಫಿಡವಿಟ್ ಸಲ್ಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“‘ಯಾವುದೇ ರೀತಿಯಲ್ಲಿ ಟ್ರಸ್ಟ್‌ನ ಕಾರ್ಯನಿರ್ವಹಣೆಯ ಮೇಲೆ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರ/ಗಳ ನೇರ ಅಥವಾ ಪರೋಕ್ಷವಾದ ಯಾವುದೇ ನಿಯಂತ್ರಣವಿಲ್ಲ” ಎಂದು ಅಫಿಡವಿಟ್ ಹೇಳಿದೆ.

“ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಮಾಹಿತಿ ನೀಡಲು ಫಿಎಂ ಕೇರ್ಸ್ ಫಂಡ್ ಸಾರ್ವಜನಿಕ ಸಂಸ್ಥೆಯಲ್ಲ” ಎಂದು ಸರ್ಕಾರ ಪುನರುಚ್ಚರಿಸಿದೆ, “ಆದ್ದರಿಂದ ಅದನ್ನು ಪರಿಶೀಲನೆಗೆ ತೆಗೆದುಕೊಳ್ಳಬಾರದು” ಎಂದು ಸರ್ಕಾರ ವಾದಿಸಿದೆ.

“ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಸ್ವಯಂಪ್ರೇರಿತ ದೇಣಿಗೆಗಳನ್ನು ಮಾತ್ರ ನಿಧಿ ಸ್ವೀಕರಿಸುತ್ತದೆ” ಎಂದು ಸರ್ಕಾರ ಹೇಳಿದೆ. ಆದರೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, “ಉಪರಾಷ್ಟ್ರಪತಿಗಳಂತಹ ಸರ್ಕಾರದ ಭಾಗವಾಗಿರುವವರು ದೇಣಿಗೆ ನೀಡುವಂತೆ ರಾಜ್ಯಸಭಾ ಸದಸ್ಯರಲ್ಲಿ ಮನವಿ ಮಾಡಿದ್ದರು” ಎಂದು ಉಲ್ಲೇಖಿಸಿದ್ದಾರೆ.

“ಸರ್ಕಾರ ಭಾಗವಲ್ಲದಿದ್ದರೆ ಸರ್ಕಾರಿ ಚಿಹ್ನೆಗಳು ಅಥವಾ ಸರ್ಕಾರಿ ವೆಬ್‌ಸೈಟ್ ಹೊಂದಲು ಸಾಧ್ಯವಿಲ್ಲ. ಇದರಿಂದಾಗಿ ಸಾರ್ವಜನಿಕರು ನಿಮ್ಮನ್ನು ‘ಸರ್ಕಾರ’ ಎಂದು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಏನಿದು ಅರ್ಜಿ?

ಸರ್ಕಾರ ಸ್ಥಾಪಿಸಿದ ಮತ್ತು ನಿರ್ವಹಿಸುವ ನಿಧಿಯನ್ನು ಹಿರಿಯ ಸರ್ಕಾರಿ ಅಧಿಕಾರಿಗಳು ಪ್ರತಿನಿಧಿಸುತ್ತಿದ್ದಾರೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಿಧಿಯು ತನ್ನ ವೆಬ್‌ಸೈಟ್‌ಗಾಗಿ “gov.in” ಡೊಮೇನ್ ಹೆಸರು, ರಾಷ್ಟ್ರೀಯ ಲಾಂಛನ ಮತ್ತು “ಪ್ರಧಾನಿ” – ಎಂಬ ಪದಗಳನ್ನು ಬಳಸಿದೆ. ಸರ್ಕಾರಿ ಸಂಪನ್ಮೂಲಗಳನ್ನು ಒಳಗೊಂಡಿದೆ. ಅಧಿಕೃತ ಮತ್ತು ಅನಧಿಕೃತ ಸಂವಹನಗಳಲ್ಲಿ ತನ್ನನ್ನು ಸರ್ಕಾರವೆಂಬಂತೆ ಬಿಂಬಿಸಿಕೊಳ್ಳಲಾಗಿದೆ. ಪಿಎಂ ಕೇರ್ಸ್ ಫಂಡ್ ಕಚೇರಿಯು ಪ್ರಧಾನ ಮಂತ್ರಿ ಕಚೇರಿಯಾಗಿದೆ. ಈ ರೀತಿಯಲ್ಲಿ ನಿಧಿಯನ್ನು ಪ್ರಸ್ತುತ ಪಡಿಸಿದ ಫಲವಾಗಿ ಅಪಾರ ದೇಣಿಗೆ ದೊರೆತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪಿಎಂ ಕೇರ್ಸ್ ಫಂಡ್ ವೆಬ್‌ಸೈಟ್ ರಚಿಸಿದ ನಾಲ್ಕು ದಿನಗಳಲ್ಲಿ 3,076.62 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ ಎಂಬುದನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಸರ್ಕಾರದ ಅಫಿಡವಿಟ್‌ ಕುರಿತು ಕನ್ನಡಪರ ಹೋರಾಟಗಾರ ಎಸ್.ಸಿ.ದಿನೇಶ್‌ಕುಮಾರ್‌ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದು, “ಪಿಎಂ ಕೇರ್ಸ್ ಸ್ಥಾಪನೆಯಾಗಿದ್ದು ಕೋವಿಡ್ ಸಂಕಟದ ಕಾಲದಲ್ಲಿ. ಅಪಾರ ಸಾವು ನೋವು ಆರ್ಥಿಕ ನಷ್ಟ ಗಳಿಂದ ಕಂಗಾಲಾಗಿದ್ದ ಜನರಿಗೆ ಪಿಎಂ ಕೇರ್ಸ್ ಎಂಬುದು ಗಂಧರ್ವ ಲೋಕದಿಂದ ಬಂದ ಸಂಜೀವಿನಿ ಎಂಬಂತೆ ಬಿಂಬಿಸಲಾಗಿತ್ತು. ಸರ್ಕಾರಕ್ಕೂ ಇದಕ್ಕೂ ಸಂಬಂಧವಿಲ್ಲವೆಂದು ಅಂದೇ ಹೇಳಬಹುದಿತ್ತಲ್ಲವೇ? ಇದೊಂದು ಖಾಸಗಿ ಟ್ರಸ್ಟ್, ಇದಕ್ಕೆ ಭಾರತ ಸಂವಿಧಾನಕ್ಕೆ, ಸರ್ಕಾರಗಳಿಗೆ, ಜನರಿಗೆ ಉತ್ತರದಾಯಿ ಅಲ್ಲ ಎಂದು ಅಂದೇ ಹೇಳಬಹುದಿತ್ತಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಇದು ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪನೆಯಾಗದಿದ್ದರೂ ರಾಷ್ಟ್ರೀಯ ಲಾಂಚನ ಬಳಸಿದ್ದು ಯಾಕೆ? ಇದು ಸರ್ಕಾರದ ಅಡಿಯಲ್ಲಿ ಬರುವ ಸಂಸ್ಥೆಯಲ್ಲವಾದರೂ gov.in ಬಳಸಿದ್ದು ಯಾಕೆ? ಹಣ ವಸೂಲಿಗೆ ಸರ್ಕಾರಿ ಯಂತ್ರಾಂಗಗಳನ್ನು ಬಳಸಿಕೊಂಡಿದ್ದು ಯಾಕೆ? ಸರ್ಕಾರವನ್ನು ಮುನ್ನಡೆಸುವವರೇ ಹಣ ಕೊಡಿ ಎಂದು ಬೇಡಿದ್ದು ಯಾಕೆ? ಸ್ವತಃ ಉಪರಾಷ್ಟ್ರಪತಿಗಳೇ ರಾಜ್ಯಸಭೆಯಲ್ಲಿ ಪಿಎಂ ಕೇರ್ಸ್ ಗೆ ದೇಣಿಗೆ ಕೊಡಿ ಎಂದು ಬೇಡಿಕೊಂಡಿದ್ದು ಯಾಕೆ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

“ಒಂದು ಖಾಸಗಿ ಟ್ರಸ್ಟ್‌ಗೆ ಪಿಎಂ ಕೇರ್ಸ್ ಹೆಸರು ಬಳಸಿದ್ದು ಯಾಕೆ? ಇದರಿಂದ ದೇಶದ ಪ್ರಧಾನಿ ಹುದ್ದೆಯ ಘನತೆಯನ್ನು ಕುಗ್ಗಿಸಿದಂತೆ ಆಗಲಿಲ್ಲವೇ? ಖಾಸಗಿ ವ್ಯಕ್ತಿಗಳು ಪ್ರಧಾನಿ ಹೆಸರಲ್ಲಿ ಟ್ರಸ್ಟ್ ಮಾಡಿದರೆ ಅದು ಅಪರಾಧವಲ್ಲವೇ? ಪಿಎಂ ಕೇರ್ಸ್ ಖಾಸಗಿ ಟ್ರಸ್ಟ್ ಆದ ಮೇಲೆ, ಸರ್ಕಾರಿ ನೌಕರರ ಒಂದು ದಿನದ ಸಂಬಳವನ್ನು ಹೇಗೆ ಕಡಿತ ಮಾಡಿಕೊಂಡು ಟ್ರಸ್ಟ್ ಅಕೌಂಟಿಗೆ ಜಮಾ ಮಾಡಲಾಯಿತು? ಆದಾಯ ತೆರಿಗೆ ವಿನಾಯಿತಿಯನ್ನು ಯಾವ ಆಧಾರದಲ್ಲಿ ನೀಡಲಾಯಿತು? ಪಿಎಂ ಹೆಸರಲ್ಲಿ ಏನನ್ನು ಬೇಕಾದರೂ ಮಾಡಬಹುದೇ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಪಿಎಂ ಕೇರ್ಸ್‌ ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವಿಲ್ಲ: ಮೋದಿ ಸರ್ಕಾರ

“ದೇಶದ ಜನರು ಸಾವಿರಾರು ಕೋಟಿ ರುಪಾಯಿಗಳನ್ನು ಪಿಎಂ ಕೇರ್ಸ್‌‌ಗೆ ನೀಡಿದ್ದಾರೆ. ಈಗ ಅವರು ತಾವು ಕೊಟ್ಟ ಹಣದ ಲೆಕ್ಕ ಕೇಳುವಂತಿಲ್ಲ. ಎಷ್ಟು ಹಣ, ಯಾತಕ್ಕಾಗಿ ಖರ್ಚು ಮಾಡಿದ್ದೀರಿ ಎಂದು ಕೇಳುವಂತಿಲ್ಲ. ನಾಳೆ ಹಣವನ್ನೆಲ್ಲ ತೆಗೆದು ಅದಾನಿ ಕಂಪೆನಿಗೆ ಕೊಟ್ಟರೂ, ಭಾರತೀಯ ಜನತಾ ಪಕ್ಷ ಚುನಾವಣೆ ಖರ್ಚಿಗೋ, ಶಾಸಕರ ಖರೀದಿಗೋ ಬಳಸಿದರೂ ನಾವು ಕೇಳುವಂತಿಲ್ಲ. ಇದು ಭಾರತದ ಯಾವುದೇ ಕಾನೂನಿನ ಅಡಿಯಲ್ಲಿ ಸ್ಥಾಪಿಸಿಲ್ಲ ಎಂದು ಸರ್ಕಾರ ಹೇಳುತ್ತಿರುವುದರಿಂದ ನಾವು ಕೋರ್ಟುಗಳ ಮೊರೆ ಹೋಗುವಂತಿಲ್ಲ. ಇಂಥ ಅನೈತಿಕ ವ್ಯವಹಾರ ಯಾಕೆ ಬೇಕಿತ್ತು?” ಎಂದು ಟೀಕಿಸಿದ್ದಾರೆ.

“ಮೊದಲಿನಿಂದಲೂ ಇರುವ ಪಿಎಂ ರಿಲೀಫ್ ಫಂಡ್‌ಗೆ ಪಿಎಂ ಕೇರ್ಸ್ ಹಣ ಕೊಡುತ್ತದೆಯಂತೆ! ಈ ಡಬ್ಬಲ್ ಎಂಜಿನ್ ಯಾಕೆ ಬೇಕಿತ್ತು? ಒಂದು ಅಧಿಕೃತ ಇರುವಾಗ ಇನ್ನೊಂದು ಅನಧಿಕೃತ ಯಾಕೆ ಬೇಕಿತ್ತು? ಪಿಎಂ ರಿಲೀಫ್ ಫಂಡ್ ಮೂಲಕ ಮಾಡಲಾಗದ ಯಾವ ಘನಂದಾರಿ ಕೆಲಸವನ್ನು ಪಿಎಂ ಕೇರ್ಸ್ ಮಾಡುತ್ತದೆ? ನರೇಂದ್ರ ಮೋದಿ ಸರ್ಕಾರ ಬಿದ್ದು ಹೋಗಿ, ಹೊಸ ಸರ್ಕಾರ ಬಂತು ಎಂದಿಟ್ಟುಕೊಳ್ಳಿ. ಆಗ ಟ್ರಸ್ಟ್ ಹಣೆ ಬರೆಹವೇನು? ಹೊಸ ಪ್ರಧಾನಿಗೆ ಅಲ್ಲಿ ಪಾತ್ರವೇ ಇರುವುದಿಲ್ಲ. ಪ್ರಧಾನಿ ಬದಲಾದರೂ ಮೋದಿಯೇ ಪಿಎಂ ಕೇರ್ಸ್ ನಿರ್ವಹಿಸುತ್ತಾರೆಯೇ? ಆಗ ಪ್ರಧಾನಿಯಲ್ಲದ ವ್ಯಕ್ತಿ ಪ್ರಧಾನಿ ಹೆಸರಲ್ಲಿ ಹೇಗೆ ಟ್ರಸ್ಟ್ ನಡೆಸುತ್ತಾರೆ? ಇದೆಲ್ಲ ಗಮನಿಸಿದರೆ ಪಿಎಂ ಕೇರ್ಸ್ ಕೂಡ ಒಂದು ದೊಡ್ಡ ಫ್ರಾಡ್ ಎಂದು ಅನಿಸುವುದಿಲ್ಲವೇ? ದೇಶವನ್ನು ಮುನ್ನಡೆಸಬೇಕಾದವರೇ ಇಂಥ ದಂಧೆಗೆ ಇಳಿದರೆ ದೇಶ ಉಳಿಯಲು ಸಾಧ್ಯವೇ?” ಎಂದು ದಿನೇಶ್‌ಕುಮಾರ್‌ ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...