Homeಮುಖಪುಟಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

ಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

- Advertisement -
- Advertisement -

ತುರ್ತು ಪರಿಸ್ಥಿತಿಗಳಲ್ಲಿ ಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ಪರಿಹಾರ (ಪಿಎಂ ಕೇರ್ಸ್) ನಿಧಿಯನ್ನು ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿ ಸ್ಥಾಪಿಸಲಾಗಿದೆ. ಇದನ್ನು ಸಂವಿಧಾನ ಅಥವಾ ಸಂಸದೀಯ ಕಾನೂನಿನ ಅಡಿಯಲ್ಲಿ ರಚಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ಅಫಡವಿಟ್‌ ಸಲ್ಲಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ನಂತರ, “ಯಾವುದೇ ರೀತಿಯ ತುರ್ತು ಅಥವಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಮೀಸಲಾದ ರಾಷ್ಟ್ರೀಯ ನಿಧಿ” ಎಂದು ಪಿಎಂ ಕೇರ್ಸ್‌ ಫಂಡ್ ಅನ್ನು ಮಾರ್ಚ್ 2020ರಲ್ಲಿ ಸ್ಥಾಪಿಸಲಾಯಿತು.

ಪಿಎಂ ಕೇರ್ಸ್ ನಿಧಿಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂವಿಧಾನದ 12 ನೇ ವಿಧಿಯ ಅಡಿಯಲ್ಲಿ ಅದನ್ನು ‘ಸರ್ಕಾರ’ ಎಂದು ಘೋಷಿಸಲು ಕೋರಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು ಅಫಿಡವಿಟ್ ಸಲ್ಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“‘ಯಾವುದೇ ರೀತಿಯಲ್ಲಿ ಟ್ರಸ್ಟ್‌ನ ಕಾರ್ಯನಿರ್ವಹಣೆಯ ಮೇಲೆ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರ/ಗಳ ನೇರ ಅಥವಾ ಪರೋಕ್ಷವಾದ ಯಾವುದೇ ನಿಯಂತ್ರಣವಿಲ್ಲ” ಎಂದು ಅಫಿಡವಿಟ್ ಹೇಳಿದೆ.

“ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಮಾಹಿತಿ ನೀಡಲು ಫಿಎಂ ಕೇರ್ಸ್ ಫಂಡ್ ಸಾರ್ವಜನಿಕ ಸಂಸ್ಥೆಯಲ್ಲ” ಎಂದು ಸರ್ಕಾರ ಪುನರುಚ್ಚರಿಸಿದೆ, “ಆದ್ದರಿಂದ ಅದನ್ನು ಪರಿಶೀಲನೆಗೆ ತೆಗೆದುಕೊಳ್ಳಬಾರದು” ಎಂದು ಸರ್ಕಾರ ವಾದಿಸಿದೆ.

“ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಸ್ವಯಂಪ್ರೇರಿತ ದೇಣಿಗೆಗಳನ್ನು ಮಾತ್ರ ನಿಧಿ ಸ್ವೀಕರಿಸುತ್ತದೆ” ಎಂದು ಸರ್ಕಾರ ಹೇಳಿದೆ. ಆದರೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, “ಉಪರಾಷ್ಟ್ರಪತಿಗಳಂತಹ ಸರ್ಕಾರದ ಭಾಗವಾಗಿರುವವರು ದೇಣಿಗೆ ನೀಡುವಂತೆ ರಾಜ್ಯಸಭಾ ಸದಸ್ಯರಲ್ಲಿ ಮನವಿ ಮಾಡಿದ್ದರು” ಎಂದು ಉಲ್ಲೇಖಿಸಿದ್ದಾರೆ.

“ಸರ್ಕಾರ ಭಾಗವಲ್ಲದಿದ್ದರೆ ಸರ್ಕಾರಿ ಚಿಹ್ನೆಗಳು ಅಥವಾ ಸರ್ಕಾರಿ ವೆಬ್‌ಸೈಟ್ ಹೊಂದಲು ಸಾಧ್ಯವಿಲ್ಲ. ಇದರಿಂದಾಗಿ ಸಾರ್ವಜನಿಕರು ನಿಮ್ಮನ್ನು ‘ಸರ್ಕಾರ’ ಎಂದು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಏನಿದು ಅರ್ಜಿ?

ಸರ್ಕಾರ ಸ್ಥಾಪಿಸಿದ ಮತ್ತು ನಿರ್ವಹಿಸುವ ನಿಧಿಯನ್ನು ಹಿರಿಯ ಸರ್ಕಾರಿ ಅಧಿಕಾರಿಗಳು ಪ್ರತಿನಿಧಿಸುತ್ತಿದ್ದಾರೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಿಧಿಯು ತನ್ನ ವೆಬ್‌ಸೈಟ್‌ಗಾಗಿ “gov.in” ಡೊಮೇನ್ ಹೆಸರು, ರಾಷ್ಟ್ರೀಯ ಲಾಂಛನ ಮತ್ತು “ಪ್ರಧಾನಿ” – ಎಂಬ ಪದಗಳನ್ನು ಬಳಸಿದೆ. ಸರ್ಕಾರಿ ಸಂಪನ್ಮೂಲಗಳನ್ನು ಒಳಗೊಂಡಿದೆ. ಅಧಿಕೃತ ಮತ್ತು ಅನಧಿಕೃತ ಸಂವಹನಗಳಲ್ಲಿ ತನ್ನನ್ನು ಸರ್ಕಾರವೆಂಬಂತೆ ಬಿಂಬಿಸಿಕೊಳ್ಳಲಾಗಿದೆ. ಪಿಎಂ ಕೇರ್ಸ್ ಫಂಡ್ ಕಚೇರಿಯು ಪ್ರಧಾನ ಮಂತ್ರಿ ಕಚೇರಿಯಾಗಿದೆ. ಈ ರೀತಿಯಲ್ಲಿ ನಿಧಿಯನ್ನು ಪ್ರಸ್ತುತ ಪಡಿಸಿದ ಫಲವಾಗಿ ಅಪಾರ ದೇಣಿಗೆ ದೊರೆತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪಿಎಂ ಕೇರ್ಸ್ ಫಂಡ್ ವೆಬ್‌ಸೈಟ್ ರಚಿಸಿದ ನಾಲ್ಕು ದಿನಗಳಲ್ಲಿ 3,076.62 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ ಎಂಬುದನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಸರ್ಕಾರದ ಅಫಿಡವಿಟ್‌ ಕುರಿತು ಕನ್ನಡಪರ ಹೋರಾಟಗಾರ ಎಸ್.ಸಿ.ದಿನೇಶ್‌ಕುಮಾರ್‌ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದು, “ಪಿಎಂ ಕೇರ್ಸ್ ಸ್ಥಾಪನೆಯಾಗಿದ್ದು ಕೋವಿಡ್ ಸಂಕಟದ ಕಾಲದಲ್ಲಿ. ಅಪಾರ ಸಾವು ನೋವು ಆರ್ಥಿಕ ನಷ್ಟ ಗಳಿಂದ ಕಂಗಾಲಾಗಿದ್ದ ಜನರಿಗೆ ಪಿಎಂ ಕೇರ್ಸ್ ಎಂಬುದು ಗಂಧರ್ವ ಲೋಕದಿಂದ ಬಂದ ಸಂಜೀವಿನಿ ಎಂಬಂತೆ ಬಿಂಬಿಸಲಾಗಿತ್ತು. ಸರ್ಕಾರಕ್ಕೂ ಇದಕ್ಕೂ ಸಂಬಂಧವಿಲ್ಲವೆಂದು ಅಂದೇ ಹೇಳಬಹುದಿತ್ತಲ್ಲವೇ? ಇದೊಂದು ಖಾಸಗಿ ಟ್ರಸ್ಟ್, ಇದಕ್ಕೆ ಭಾರತ ಸಂವಿಧಾನಕ್ಕೆ, ಸರ್ಕಾರಗಳಿಗೆ, ಜನರಿಗೆ ಉತ್ತರದಾಯಿ ಅಲ್ಲ ಎಂದು ಅಂದೇ ಹೇಳಬಹುದಿತ್ತಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಇದು ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪನೆಯಾಗದಿದ್ದರೂ ರಾಷ್ಟ್ರೀಯ ಲಾಂಚನ ಬಳಸಿದ್ದು ಯಾಕೆ? ಇದು ಸರ್ಕಾರದ ಅಡಿಯಲ್ಲಿ ಬರುವ ಸಂಸ್ಥೆಯಲ್ಲವಾದರೂ gov.in ಬಳಸಿದ್ದು ಯಾಕೆ? ಹಣ ವಸೂಲಿಗೆ ಸರ್ಕಾರಿ ಯಂತ್ರಾಂಗಗಳನ್ನು ಬಳಸಿಕೊಂಡಿದ್ದು ಯಾಕೆ? ಸರ್ಕಾರವನ್ನು ಮುನ್ನಡೆಸುವವರೇ ಹಣ ಕೊಡಿ ಎಂದು ಬೇಡಿದ್ದು ಯಾಕೆ? ಸ್ವತಃ ಉಪರಾಷ್ಟ್ರಪತಿಗಳೇ ರಾಜ್ಯಸಭೆಯಲ್ಲಿ ಪಿಎಂ ಕೇರ್ಸ್ ಗೆ ದೇಣಿಗೆ ಕೊಡಿ ಎಂದು ಬೇಡಿಕೊಂಡಿದ್ದು ಯಾಕೆ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

“ಒಂದು ಖಾಸಗಿ ಟ್ರಸ್ಟ್‌ಗೆ ಪಿಎಂ ಕೇರ್ಸ್ ಹೆಸರು ಬಳಸಿದ್ದು ಯಾಕೆ? ಇದರಿಂದ ದೇಶದ ಪ್ರಧಾನಿ ಹುದ್ದೆಯ ಘನತೆಯನ್ನು ಕುಗ್ಗಿಸಿದಂತೆ ಆಗಲಿಲ್ಲವೇ? ಖಾಸಗಿ ವ್ಯಕ್ತಿಗಳು ಪ್ರಧಾನಿ ಹೆಸರಲ್ಲಿ ಟ್ರಸ್ಟ್ ಮಾಡಿದರೆ ಅದು ಅಪರಾಧವಲ್ಲವೇ? ಪಿಎಂ ಕೇರ್ಸ್ ಖಾಸಗಿ ಟ್ರಸ್ಟ್ ಆದ ಮೇಲೆ, ಸರ್ಕಾರಿ ನೌಕರರ ಒಂದು ದಿನದ ಸಂಬಳವನ್ನು ಹೇಗೆ ಕಡಿತ ಮಾಡಿಕೊಂಡು ಟ್ರಸ್ಟ್ ಅಕೌಂಟಿಗೆ ಜಮಾ ಮಾಡಲಾಯಿತು? ಆದಾಯ ತೆರಿಗೆ ವಿನಾಯಿತಿಯನ್ನು ಯಾವ ಆಧಾರದಲ್ಲಿ ನೀಡಲಾಯಿತು? ಪಿಎಂ ಹೆಸರಲ್ಲಿ ಏನನ್ನು ಬೇಕಾದರೂ ಮಾಡಬಹುದೇ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಪಿಎಂ ಕೇರ್ಸ್‌ ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವಿಲ್ಲ: ಮೋದಿ ಸರ್ಕಾರ

“ದೇಶದ ಜನರು ಸಾವಿರಾರು ಕೋಟಿ ರುಪಾಯಿಗಳನ್ನು ಪಿಎಂ ಕೇರ್ಸ್‌‌ಗೆ ನೀಡಿದ್ದಾರೆ. ಈಗ ಅವರು ತಾವು ಕೊಟ್ಟ ಹಣದ ಲೆಕ್ಕ ಕೇಳುವಂತಿಲ್ಲ. ಎಷ್ಟು ಹಣ, ಯಾತಕ್ಕಾಗಿ ಖರ್ಚು ಮಾಡಿದ್ದೀರಿ ಎಂದು ಕೇಳುವಂತಿಲ್ಲ. ನಾಳೆ ಹಣವನ್ನೆಲ್ಲ ತೆಗೆದು ಅದಾನಿ ಕಂಪೆನಿಗೆ ಕೊಟ್ಟರೂ, ಭಾರತೀಯ ಜನತಾ ಪಕ್ಷ ಚುನಾವಣೆ ಖರ್ಚಿಗೋ, ಶಾಸಕರ ಖರೀದಿಗೋ ಬಳಸಿದರೂ ನಾವು ಕೇಳುವಂತಿಲ್ಲ. ಇದು ಭಾರತದ ಯಾವುದೇ ಕಾನೂನಿನ ಅಡಿಯಲ್ಲಿ ಸ್ಥಾಪಿಸಿಲ್ಲ ಎಂದು ಸರ್ಕಾರ ಹೇಳುತ್ತಿರುವುದರಿಂದ ನಾವು ಕೋರ್ಟುಗಳ ಮೊರೆ ಹೋಗುವಂತಿಲ್ಲ. ಇಂಥ ಅನೈತಿಕ ವ್ಯವಹಾರ ಯಾಕೆ ಬೇಕಿತ್ತು?” ಎಂದು ಟೀಕಿಸಿದ್ದಾರೆ.

“ಮೊದಲಿನಿಂದಲೂ ಇರುವ ಪಿಎಂ ರಿಲೀಫ್ ಫಂಡ್‌ಗೆ ಪಿಎಂ ಕೇರ್ಸ್ ಹಣ ಕೊಡುತ್ತದೆಯಂತೆ! ಈ ಡಬ್ಬಲ್ ಎಂಜಿನ್ ಯಾಕೆ ಬೇಕಿತ್ತು? ಒಂದು ಅಧಿಕೃತ ಇರುವಾಗ ಇನ್ನೊಂದು ಅನಧಿಕೃತ ಯಾಕೆ ಬೇಕಿತ್ತು? ಪಿಎಂ ರಿಲೀಫ್ ಫಂಡ್ ಮೂಲಕ ಮಾಡಲಾಗದ ಯಾವ ಘನಂದಾರಿ ಕೆಲಸವನ್ನು ಪಿಎಂ ಕೇರ್ಸ್ ಮಾಡುತ್ತದೆ? ನರೇಂದ್ರ ಮೋದಿ ಸರ್ಕಾರ ಬಿದ್ದು ಹೋಗಿ, ಹೊಸ ಸರ್ಕಾರ ಬಂತು ಎಂದಿಟ್ಟುಕೊಳ್ಳಿ. ಆಗ ಟ್ರಸ್ಟ್ ಹಣೆ ಬರೆಹವೇನು? ಹೊಸ ಪ್ರಧಾನಿಗೆ ಅಲ್ಲಿ ಪಾತ್ರವೇ ಇರುವುದಿಲ್ಲ. ಪ್ರಧಾನಿ ಬದಲಾದರೂ ಮೋದಿಯೇ ಪಿಎಂ ಕೇರ್ಸ್ ನಿರ್ವಹಿಸುತ್ತಾರೆಯೇ? ಆಗ ಪ್ರಧಾನಿಯಲ್ಲದ ವ್ಯಕ್ತಿ ಪ್ರಧಾನಿ ಹೆಸರಲ್ಲಿ ಹೇಗೆ ಟ್ರಸ್ಟ್ ನಡೆಸುತ್ತಾರೆ? ಇದೆಲ್ಲ ಗಮನಿಸಿದರೆ ಪಿಎಂ ಕೇರ್ಸ್ ಕೂಡ ಒಂದು ದೊಡ್ಡ ಫ್ರಾಡ್ ಎಂದು ಅನಿಸುವುದಿಲ್ಲವೇ? ದೇಶವನ್ನು ಮುನ್ನಡೆಸಬೇಕಾದವರೇ ಇಂಥ ದಂಧೆಗೆ ಇಳಿದರೆ ದೇಶ ಉಳಿಯಲು ಸಾಧ್ಯವೇ?” ಎಂದು ದಿನೇಶ್‌ಕುಮಾರ್‌ ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...