Homeಮುಖಪುಟ'PM-CARES' ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

PM-CARES ಮಾತ್ರ ದುರ್ಬಳಕೆ ಆಗಿರುವುದಲ್ಲ, ದೇಶದ ಘನತೆ ಹಾಗೂ ಪ್ರಧಾನ ಮಂತ್ರಿ ಹುದ್ದೆ ಕೂಡಾ ದುರ್ಬಳಕೆ ಆಗಿದೆ, ಒಟ್ಟಿನಲ್ಲಿ ದೇಶದವನ್ನೇ ದುರ್ಬಳಕೆ ಮಾಡಿಕೊಂಡರು ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಸಂಧರ್ಭದಲ್ಲಿ ಕೇಂದ್ರ ಸರ್ಕಾರ ಸ್ಥಾಪಿಸಿದ್ದ “PM-CARES”‌(ಪಿಎಂ-ಕೇರ್ಸ್) ನಿಧಿ ಖಾಸಗಿಯೆ ಅಥವಾ ಸರ್ಕಾರಿ ಟ್ರಸ್ಟ್‌‌ ಆಗಿದೆಯೆ ಎಂಬ ಬಗ್ಗೆ ಇದೀಗ ವಿರೋಧಾಭಾಸಗಳು ಎದ್ದಿದೆ. ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಇದನ್ನು ಸರ್ಕಾರಿ ಟ್ರಸ್ಟ್ ಎಂದು ವ್ಯಾಖ್ಯಾನಿಸಲಾಗಿದ್ದರೂ, ಟ್ರಸ್ಟ್ ದಾಖಲೆಗಳಲ್ಲಿನ ಒಂದು ಷರತ್ತು ಇದನ್ನು ”ಖಾಸಗಿ” ಎಂದು ಕರೆಯುತ್ತದೆ ಹಾಗೂ ಇದಕ್ಕೆ ಆರ್‌ಟಿಐ ಪರಿಶೀಲನೆಯಿಂದ ವಿನಾಯಿತಿ ನೀಡುತ್ತದೆ.

ಪ್ರಧಾನಮಂತ್ರಿ ಅಧ್ಯಕ್ಷರಾಗಿರುವ PM-CARES ಟ್ರಸ್ಟ್‌ನ ನಿಧಿಯನ್ನು ದೆಹಲಿಯ ಕಂದಾಯ ಇಲಾಖೆಯಲ್ಲಿ ನೋಂದಾಯಿಸಲಾಗಿದೆ. ಆದರೆ ಇದೀಗ ಸಾರ್ವಜನಿಕಗೊಂಡಿರುವ ಟ್ರಸ್ಟ್‌ನ ದಾಖಲೆ ಪತ್ರವು ಇದನ್ನು ಸರ್ಕಾರಿ ಟ್ರಸ್ಟ್ ಎಂದು ವ್ಯಾಖ್ಯಾನಿಸುವುದಿಲ್ಲ.

ಟ್ರಸ್ಟ್‌ನ ದಾಖಲೆ ಪತ್ರದ ಅಂಶವಾದ 5.3 ರಲ್ಲಿ ಹೀಗೆ ಹೇಳುತ್ತದೆ:

“ಈ ಟ್ರಸ್ಟ್‌ ಸರ್ಕಾರದ ಮಾಲೀಕತ್ವಕ್ಕೆ ಒಳಪಟ್ಟಿಲ್ಲ ಅಥವಾ ಸರ್ಕಾರದಿಂದ ಆರ್ಥಿಕ ನೆರವನ್ನು ಪಡೆದಿಲ್ಲ ಅಥವಾ ಸರ್ಕಾರದ ಯಾವುದೇ ಸಂಸ್ಥೆಯ ವ್ಯಾಪ್ತಿಗೆ ಒಳಪಟ್ಟಿಲ್ಲ ಅಥವಾ ಒಳಪಡುವ ಉದ್ದೇಶವಿಲ್ಲ. ಟ್ರಸ್ಟ್‌ನ ಯಾವುದೆ ರೀತಿಯ ಕಾರ್ಯದಲ್ಲಿ, ನೇರವಾಗಿ ಅಥವಾ ಪರೋಕ್ಷವಾಗಿ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರಗಳ ನಿಯಂತ್ರಣವಿರುವುದಿಲ್ಲ.”

ಇದನ್ನೂ ಓದಿ: ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಕೊರೊನಾ ವೈರಸ್ ಸಾಂಕ್ರಾಮಿಕದಂತಹ ತುರ್ತು ಅಥವಾ ತೊಂದರೆಯ ಸಂದರ್ಭಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿಯವರು PM-CARES ಅನ್ನು ಮಾರ್ಚ್‌ನಲ್ಲಿ ಸ್ಥಾಪಿಸಲಾಗಿತ್ತು. ಇದಕ್ಕೆ ಪ್ರಧಾನಿ ಮೋದಿ ಅಧ್ಯಕ್ಷರಾಗಿ ಮತ್ತು ಹಿರಿಯ ಕ್ಯಾಬಿನೆಟ್ ಸದಸ್ಯರನ್ನು ಟ್ರಸ್ಟಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ.

ಮಾರ್ಚ್ 27 ರಂದು ಈ ಟ್ರಸ್ಟ್ ನೋಂದಾಯಿಸಲಾಗಿದೆ. ಮಾರ್ಚ್ 28 ರಂದು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಕಾರ್ಪೊರೇಟ್ ದೇಣಿಗೆ ಸ್ವೀಕರಿಸಲು ”ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ” (CSR) ಉಪಕ್ರಮವಾಗಿ PM-CARES ‌ಗೆ ಅರ್ಹತೆ ಇರುವ ಜ್ಞಾಪಕ ಪತ್ರವನ್ನು ನೀಡಿತು.

ಕಾರ್ಪೊರೇಟ್ ದೇಣಿಗೆಗೆ ಅರ್ಹವಾದ ಚಟುವಟಿಕೆಗಳನ್ನು ವ್ಯಾಖ್ಯಾನಿಸುವ, ಕಂಪನಿಗಳ ಕಾಯ್ದೆ ಹೀಗಿದೆ:

“ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಗೆ ಅಥವಾ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಮತ್ತು ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳು ಸ್ಥಾಪಿಸಿರುವ ಯಾವುದೇ ನಿಧಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರ ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ”

ಇದನ್ನೂ ಓದಿ: ಸಂಸದೀಯ ಸಮಿತಿಯಿಂದ ಪಿಎಂ ಕೇರ್ಸ್‌ ಪರಾಮರ್ಶೆಗೆ ಬಿಜೆಪಿ ವಿರೋಧ! 

ಸಾಮಾಜಿಕ ಕಾರ್ಯಕರ್ತ ಅಂಜಲಿ ಭರದ್ವಾಜ್ ಅವರಿಗೆ ಆರ್‌ಟಿಐ ಮೂಲಕ ಸಿಕ್ಕಿರುವ ಮಾಹಿತಿಯಂತೆ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಮಾರ್ಚ್ 28 ರ ಕಚೇರಿ ಜ್ಞಾಪಕ ಪತ್ರವನ್ನು ಹೊರಡಿಸುವಾಗ, ಟ್ರಸ್ಟ್‌‌ ಅನ್ನು “ಕೇಂದ್ರ ಸರ್ಕಾರ ಸ್ಥಾಪಿಸಿದ ನಿಧಿ” ಎಂದು ವ್ಯಾಖ್ಯಾನಿಸಿದೆ.

ಆದರೆ ನಿನ್ನೆ ಟ್ರಸ್ಟ್ ದಾಖಲೆ ಪತ್ರಗಳು ಇದು ಸರ್ಕಾರದಿಂದ ನಡೆಸಲ್ಪಡುವುದಿಲ್ಲ ಎಂದು ಹೇಳಿದೆ. ಆದ್ದರಿಂದ “ಕಂಪೆನಿ ಕಾಯ್ದೆ”ಯ ಪ್ರಕಾರ ಪಿಎಂ ಕೇರ್ಸ್ ಕಾರ್ಪೊರೇಟ್ ದೇಣಿಗೆಗೆ ಅರ್ಹರಾಗುವುದಿಲ್ಲ.

PM-CARES‌ ಟ್ರಸ್ಟ್‌ ಪ್ರಾರಂಭವಾಗಿ ಸುಮಾರು ಎರಡು ತಿಂಗಳ ನಂತರ (ಮೇ 26), ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ”ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ”ಗೆ ಹೆಚ್ಚುವರಿಯಾಗಿ ”PM-CARES” ನಿಧಿಯನ್ನು ಮಾರ್ಚ್ 28 ರಿಂದ ಅನ್ವಯವಾಗುವಂತೆ ಕಂಪೆನಿ ಕಾಯ್ದೆಗೆ ಸೇರಿಸಿತು. ಇದರರ್ಥ ಟ್ರಸ್ಟ್‌‌ ಪ್ರಾರಂಭದಿಂದಲೇ ಕಾರ್ಪೊರೇಟ್ ದೇಣಿಗೆ ಪಡೆಯುವ ಖಾಸಗಿ ಘಟಕವಾಗಿತ್ತು.

ಟ್ರಸ್ಟ್ ದಾಖಲೆ ಕೋರಿ ಎನ್‌ಡಿಟಿವಿ ಈ ಹಿಂದೆ ಪ್ರಧಾನ ಮಂತ್ರಿ ಕಚೇರಿಗೆ ಆರ್‌ಟಿಐ ಅರ್ಜಿಯನ್ನು ಸಲ್ಲಿಸಿತ್ತು, ಆದರೆ ಈ ನಿಧಿ ಸರ್ಕಾರಿ ಟ್ರಸ್ಟ್‌ ಅಲ್ಲ ಎಂಬ ಕಾರಣಕ್ಕೆ ಮನವಿಯನ್ನು ತಿರಸ್ಕರಿಸಲಾಗಿತ್ತು.

ಇದನ್ನೂ ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘದ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ನಾಶ ಪಡಿಸಿ ಖಾಸಗಿ ಸಂಸ್ಥೆಗಳಿಗೆ ನೀಡುತ್ತಾ ಬಂದಿರುವ ಕೇಂದ್ರ ಸರ್ಕಾರ, ತನಗೆ ಶಕ್ತಿಯಿಲ್ಲ, ತಾನೊಂದು ಕೈಲಾಗದ ಸರ್ಕಾರ ಎಂದು ದಿನೇ ದಿನೇ ನಿರೂಪಿಸುತ್ತಾ ಇದೆ. PM-CARES ಸಾರ್ವಜನಿಕ ಸಂಸ್ಥೆಯಲ್ಲ ಎಂದು ಈ ಹಿಂದೆಯೆ ಹೇಳಿತ್ತು. ಕೊರೊನಾ ಸಂಕಷ್ಟದ ಕಾಲದಲ್ಲಿ ಪ್ರತಿಯೊಬ್ಬ ಭಾರತೀಯನೂ ಪಕ್ಷ ಬೇದವನ್ನು ಮರೆತು, ಸಂವಿಧಾನದ ಪೀಠಿಕೆಯಾದ ದೇಶದ ಐಕ್ಯತೆ ಮತ್ತು ಒಗ್ಗಟ್ಟನ್ನು ಎತ್ತಿ ಹಿಡಿದು ಅಲ್ಲಿ ಹಣವನ್ನು ಜಮೆ ಮಾಡಿದರು. ಆದರೆ ಜನರ ಇಂತಹ ನಂಬಿಕೆಗೆ ಪ್ರಧಾನ ಮಂತ್ರಿ ಮೋಸ ಮಾಡಿದ್ದಾರೆ” ಎಂದು ಹೇಳಿದರು.

ಸರೋವರ್‌ ಬೆಂಕಿಕೆರೆ

“ಪ್ರಧಾನ ಮಂತ್ರಿ ಭಾರತೀಯ ಜನರಿಗೆ ಉತ್ತರದಾಯಿಯಾಗಿರಬೇಕು, ಪ್ರಸ್ತುತ ಪಾದರ್ಶಕತೆಯಿಲ್ಲದ ಈ ಪ್ರಧಾನಿ ಜನರ ಹಣವನ್ನು ದುರ್ಬಳಕೆ ಮಾಡಿರುವುದು ಸ್ಪಷ್ಟವಾಗಿದೆ. ಈ ಪ್ರಕರಣದಲ್ಲಿ ಕೇವಲ PM-CARES ಮಾತ್ರ ದುರ್ಬಳಕೆ ಆಗಿರುವುದಲ್ಲ, ದೇಶದ ಘನತೆ ಮತ್ತು ಪ್ರಧಾನ ಮಂತ್ರಿ ಹುದ್ದೆ ಕೂಡಾ ದುರ್ಬಳಕೆ ಆಗಿದೆ. ಒಟ್ಟಿನಲ್ಲಿ ದೇಶದವನ್ನೇ ದುರ್ಬಳಕೆ ಮಾಡಿಕೊಂಡರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, “ಚೀನಾ, ಪಾಕಿಸ್ತಾನ ಮತ್ತು ಕತಾರ್‌ನಿಂದ PM Cares ನಿಧಿವರೆಗೆ “ವಿದೇಶಿ ದೇಣಿಗೆ” ಗಳ ಕುತೂಹಲಕಾರಿ ಪ್ರಕರಣ” ಎಂಬ ಸರಣಿ ಟ್ವೀಟ್ ಮಾಡುವ ಮೂಲಕ ಪ್ರಧಾನ ಮಂತ್ರಿಗೆ 10 ಪ್ರಶ್ನೆಗಳನ್ನು ಕೇಳಿದ್ದಾರೆ. ಅವುಗಳಲ್ಲಿ “ಭಾರತೀಯ ರಾಯಭಾರ ಕಚೇರಿಗಳು ಪಿಎಂ ಕೇರ್ಸ್ ಫಂಡ್‌ಗೆ ಪ್ರಚಾರವನ್ನು ಏಕೆ ನೀಡಿವೆ?, ನಿಷೇಧಿತ ಚೀನೀ ಅಪ್ಲಿಕೇಶನ್‌ಗಳಲ್ಲಿ ನಿಧಿಯನ್ನು ಏಕೆ ಪ್ರಚಾರ ಮಾಡಲಾಯಿತು? ಪಾಕಿಸ್ತಾನದಿಂದ ಎಷ್ಟು ಹಣವನ್ನು ಸ್ವೀಕರಿಸಲಾಗಿದೆ ಮತ್ತು ಯಾರು ದೇಣಿಗೆ ನೀಡಿದರು? ಕತಾರ್‌ನ ಎರಡು ಕಂಪನಿಗಳು ಯಾವುವು ನಿಧಿಗೆ ದೇಣಿಗೆ ನೀಡುತ್ತವೆ ಮತ್ತು ಎಷ್ಟು ಕೋಟಿಗಳನ್ನು ಸ್ವೀಕರಿಸಲಾಗಿದೆ? ನಿಧಿಯು ಯಾಕೆ ‘ಸಾರ್ವಜನಿಕ ಪ್ರಾಧಿಕಾರ’ ಅಲ್ಲ?” ಎಂಬ ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್‌, ಕಾರ್ಪೋರೇಟ್‌ ಜವಾಬ್ದಾರಿಯ CSR ಮತ್ತು ಖಾಸಗಿ ಲಾಬಿ: ನಾವು ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...