Homeಮುಖಪುಟಎರಡು ವರ್ಷಗಳ ವಿಳಂಬದ ನಂತರ ಹಣಕಾಸು ವರದಿ ಬಿಡುಗಡೆ ಮಾಡಿದ ಪಿಎಂ ಕೇರ್ಸ್

ಎರಡು ವರ್ಷಗಳ ವಿಳಂಬದ ನಂತರ ಹಣಕಾಸು ವರದಿ ಬಿಡುಗಡೆ ಮಾಡಿದ ಪಿಎಂ ಕೇರ್ಸ್

- Advertisement -
- Advertisement -

ಎರಡು ವರ್ಷಗಳ ವಿಳಂಬದ ನಂತರ ಪಿಎಂ ಕೇರ್ಸ್ ನಿಧಿಯು ತನ್ನ 2023-24 ಮತ್ತು 2024-25ರ ಹಣಕಾಸು ವರ್ಷಗಳ ಆಡಿಟ್ ವರದಿಗಳನ್ನು (ಲೆಕ್ಕಪರಿಶೋಧನಾ ವರದಿ) ಆಗಸ್ಟ್ 17ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ.

ಪಿಎಂ ಕೇರ್ಸ್‌ನ ಖಾತೆಗಳನ್ನು ಆಗಸ್ಟ್ 6 ರಂದು ಆಡಿಟ್ (ಲೆಕ್ಕಪರಿಶೋಧನೆ) ಮಾಡಲಾಗಿದ್ದು, ಆಗಸ್ಟ್ 7 ರಂದು ಆಡಿಟರ್‌ಗಳು (ಲೆಕ್ಕಪರಿಶೋಧಕರು) ಇದಕ್ಕೆ ಸಹಿ ಹಾಕಿದ್ದಾರೆ ಎಂದು ವರದಿಗಳು ಹೇಳಿವೆ.

2024-25ರ ಹಣಕಾಸು ವರ್ಷದ ವರದಿಯ ಪ್ರಕಾರ, ಪಿಎಂ ಕೇರ್ಸ್ ನಿಧಿಯು ದೇಣಿಗೆಗಳು ಮತ್ತು ಠೇವಣಿಗಳ ಮೇಲಿನ ಬಡ್ಡಿಯ ಮೂಲಕ 1,200 ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣವನ್ನು ಸ್ವೀಕರಿಸಿದೆ. ಮಾರ್ಚ್ 31, 2025ಕ್ಕೆ ಕೊನೆಗೊಂಡ ಈ ವರ್ಷದಲ್ಲಿ 87 ಲಕ್ಷ ರೂಪಾಯಿಗಳನ್ನು ವೆಚ್ಚ ಎಂದು ದಾಖಲಿಸಲಾಗಿದೆ. ಮಾರ್ಚ್ 31, 2025ರ ಅವಧಿಗೆ ಪಿಎಂ ಕೇರ್ಸ್ ಖಾತೆಗಳಲ್ಲಿ ಒಟ್ಟು 8,452 ಕೋಟಿ ರೂಪಾಯಿ ಬಾಕಿ ಉಳಿದಿದೆ.

ಕೋವಿಡ್-19 ಸಾಂಕ್ರಾಮಿಕದ ಆರಂಭದಲ್ಲಿ, ತುರ್ತು ಪರಿಸ್ಥಿತಿಗಳು ಮತ್ತು ವಿಪತ್ತುಗಳನ್ನು ಎದುರಿಸುವ ಉದ್ದೇಶದಿಂದ ಮಾರ್ಚ್ 2020ರಲ್ಲಿ ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪಿಸಲಾಯಿತು. ಇದು ತನ್ನ ಮೊದಲ ಮೂರು ವರ್ಷಗಳಲ್ಲಿ ಭಾರಿ ಪ್ರಮಾಣದ 13,000 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿತ್ತು. ಆರಂಭದ ಮೊದಲ ವಾರದಲ್ಲೇ ಸುಮಾರು 3,000 ಕೋಟಿ ರೂಪಾಯಿ ದೇಣಿಗೆಯನ್ನು ಒಟ್ಟುಗೂಡಿಸಿತ್ತು.

ಹಣ ಸಂಗ್ರಹಿಸುವ ಸಮಯದಲ್ಲಿ, ಪಿಎಂ ಕೇರ್ಸ್ ನಿಧಿಯನ್ನು ಕೇಂದ್ರ ಸರ್ಕಾರವೇ ಸ್ಥಾಪಿಸಿರುವುದರಿಂದ ಇದು ಸಿಎಸ್‌ಆರ್ (ಸಿಎಸ್‌ಆರ್ – ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ) ಹಣವನ್ನು ಸ್ವೀಕರಿಸಬಹುದು ಎಂದು ಸರ್ಕಾರ ಹೇಳಿತ್ತು. ಅಷ್ಟೇ ಅಲ್ಲದೆ, ಸಾರ್ವಜನಿಕ ಅಧಿಕಾರಿಗಳು/ಸರ್ಕಾರಿ ನೌಕರರು ತಮ್ಮ ಸಂಬಳವನ್ನು ದೇಣಿಗೆಯಾಗಿ ನೀಡುವಂತೆ ಸಚಿವರು ಮನವಿಗಳನ್ನು ಕೂಡ ಮಾಡಿದ್ದರು. ಆದರೆ, ಸಾರ್ವಜನಿಕರು ಇದರ ಬಗ್ಗೆ ಮಾಹಿತಿ ಕೇಳಲು ಪ್ರಾರಂಭಿಸಿದಾಗ, ಈ ಟ್ರಸ್ಟ್ ಒಂದು ‘ಸಾರ್ವಜನಿಕ ಪ್ರಾಧಿಕಾರ’ ಅಲ್ಲ, ಆದ್ದರಿಂದ ಇದು ಮಾಹಿತಿ ಹಕ್ಕು ಕಾಯ್ದೆಯ (ಆರ್‌ಟಿಐ) ಅಡಿಯಲ್ಲಿ ಉತ್ತರಿಸಲು ಬದ್ಧವಾಗಿಲ್ಲ ಎಂದು ಸರ್ಕಾರ ವಾದಿಸಿತ್ತು.

ಇತ್ತೀಚೆಗೆ, ಲೋಕಸಭೆಯ ಕಾರ್ಯವಿಧಾನ ಮತ್ತು ಕಾರ್ಯನಿರ್ವಹಣೆಯ ನಿಯಮಾವಳಿಗಳ ಅಡಿಯಲ್ಲಿ ಪಿಎಂ ಕೇರ್ಸ್ ನಿಧಿಗೆ ಸಂಬಂಧಿಸಿದ ಪ್ರಶ್ನೆಗಳು ಮತ್ತು ಇತರ ಸಂಸದೀಯ ಮಧ್ಯಪ್ರವೇಶಗಳಿಗೆ ಅವಕಾಶವಿಲ್ಲ ಎಂದು ಪ್ರಧಾನ ಮಂತ್ರಿ ಕಾರ್ಯಾಲಯವು (ಪಿಎಂಒ) ಲೋಕಸಭಾ ಸಚಿವಾಲಯಕ್ಕೆ ತಿಳಿಸಿತ್ತು. ಇದರೊಂದಿಗೆ, ಈ ನಿಧಿಯ ನಾಪತ್ತೆಯಾಗಿದ್ದ ಆಡಿಟ್ ವರದಿಗಳ (ಲೆಕ್ಕಪರಿಶೋಧನಾ ವರದಿಗಳು) ಕುರಿತಾಗಿಯೂ ಪ್ರಶ್ನೆಗಳನ್ನು ಎತ್ತಲಾಗಿತ್ತು.

ನ್ಯಾಯಾಲಯಗಳು ಮತ್ತು ಮಾಹಿತಿ ಆಯೋಗಗಳ ಮೂಲಕ ಪಿಎಂ ಕೇರ್ಸ್ ನಿಧಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ಪ್ರಯತ್ನಿಸಿರುವ ಅಂಜಲಿ ಭಾರದ್ವಾಜ್ ಸೇರಿದಂತೆ ಆರ್‌ಟಿಐ ಕಾರ್ಯಕರ್ತರು, ಈ ಹಿಂದೆ ಹೀಗೆ ಹೇಳಿದ್ದಾರೆ, “ಈ ಪಾರದರ್ಶಕತೆಯ ಕೊರತೆಯು ಚುನಾವಣಾ ಬಾಂಡ್‌ಗಳ ಯೋಜನೆಯ ಸುತ್ತ ಎದ್ದಿದ್ದ ಕಳವಳಗಳನ್ನು ಹೋಲುತ್ತದೆ, ಅಲ್ಲಿ ದಾನಿಗಳ ಅನಾಮಧೇಯತೆಯು ಸಾರ್ವಜನಿಕ ಹೊಣೆಗಾರಿಕೆಯನ್ನು ಸೀಮಿತಗೊಳಿಸಿತ್ತು.

ದೊಡ್ಡ ಪ್ರಮಾಣದ ದೇಣಿಗೆಗಳನ್ನು ಸಾರ್ವಜನಿಕ ಪರಿಶೀಲನೆಯಿಂದ ಮರೆಮಾಚಿದಾಗ, ಅದು ಕ್ವಿಡ್-ಪ್ರೊ-ಕ್ವೋ (ಪ್ರತಿಫಲಾಪೇಕ್ಷೆಯ ವ್ಯವಸ್ಥೆ) ಮೂಲಕ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ. ಇಂತಹ ಅಪಾರದರ್ಶಕತೆಯು, ಚುನಾವಣಾ ಬಾಂಡ್ ವಿವಾದಗಳಲ್ಲಿ ಬೆಳಕಿಗೆ ಬಂದಿದ್ದ ಅಕ್ರಮಗಳಾದ — ಪ್ರತಿಫಲಾಪೇಕ್ಷೆಯ ಒಪ್ಪಂದಗಳು, ನಿಯಂತ್ರಕ ಸಂಸ್ಥೆಗಳ ನಿಷ್ಕ್ರಿಯತೆ ಮತ್ತು ಸುಲಿಗೆಯಂತಹ ದುರುಪಯೋಗಗಳಿಗೆ ಇಡೀ ವ್ಯವಸ್ಥೆಯನ್ನು ತುತ್ತಾಗುವಂತೆ ಮಾಡಬಹುದು.

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅದಾನಿ-ಎಲ್‌ಐಸಿ ತನಿಖಾ ವರದಿ: ಪತ್ರಕರ್ತ ರವಿ ನಾಯರ್ ಮನೆಗಳ ಮೇಲೆ ಗುಜರಾತ್ ಪೊಲೀಸರ ದಾಳಿ, ಡಿಜಿಟಲ್ ಉಪಕರಣಗಳ ವಶ

ಅದಾನಿ ಸಮೂಹ ಹಾಗೂ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ (ಎಲ್‌ಐಸಿ) ನಡುವಿನ ಹೂಡಿಕೆ ವ್ಯವಹಾರಕ್ಕೆ ಸಂಬಂಧಿಸಿದಂತೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ತನಿಖಾ ವರದಿ ಪ್ರಕಟಿಸಿದ್ದ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರ ದೆಹಲಿ ಮತ್ತು ಕೇರಳದಲ್ಲಿರುವ...

ಗುಜರಾತ್ | ನಕಲಿ ಸರ್ಕಾರಿ ಕಚೇರಿಗಳನ್ನು ಸ್ಥಾಪಿಸಿ ಸರ್ಕಾರದ ಅನುದಾನ ಲೂಟಿ; ಬೃಹತ್ ಹಗರಣ ಬಯಲು

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಯ ಹೆಸರಿನಲ್ಲಿ 6 ನಕಲಿ ಸರ್ಕಾರಿ ಕಚೇರಿಗಳನ್ನು ಸೃಷ್ಟಿಸಿ, ಕೋಟ್ಯಂತರ ರೂಪಾಯಿ ಸರ್ಕಾರಿ ಅನುದಾನವನ್ನು ಲೂಟಿ ಮಾಡಿರುವುದು ಪತ್ತೆಯಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ...

ಎನ್‌ಎಎಲ್‌ಎಸ್‌ಎಆರ್‌ ಘಟಿಕೋತ್ಸವದ ಆಹ್ವಾನವನ್ನು ನಾನು ಸ್ವೀಕರಿಸಿರಲೇ ಇಲ್ಲ: ಸಿಜೆಐ ಸೂರ್ಯ ಕಾಂತ್

ಎನ್‌ಎಎಲ್‌ಎಸ್‌ಎಆರ್‌ ಕಾನೂನು ವಿಶ್ವವಿದ್ಯಾಲಯದ ಮುಂಬರುವ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಎಂದಿಗೂ ಒಪ್ಪಿಗೆ ನೀಡಿರಲಿಲ್ಲ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ...

ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೋಗಿ ಎಂದು ಕಾಲೆಳೆದ ಕಾಂಗ್ರೆಸ್

ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು...

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ...

ಮುಹಮ್ಮದ್ ದೀಪಕ್‌ಗೆ 2026 ನೇ ಸಾಲಿನ ‘ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿ’

ಆಲ್ ಇಂಡಿಯಾ ಬಾಜ್ಮ್-ಎ-ರೆಹಮತ್-ಎ-ಆಲಂ ಸಂಘಟನೆಯು, ಮುಹಮ್ಮದ್ ದೀಪಕ್ ಎಂದೇ ಜನಪ್ರಿಯರಾಗಿರುವ ದೀಪಕ್ ಕುಮಾರ್ ಅವರಿಗೆ 2026 ರ ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿಯನ್ನು ಘೋಷಿಸಿದೆ. ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆಯಾದ ಮಿಲಾದ್-ಉನ್-ನಬಿಯನ್ನು ಗುರುತಿಸಲು ಆಯೋಜಿಸಲಾದ...

ಸ್ವಾತಂತ್ರ್ಯ ದಿನಾಚರಣೆಯಲ್ಲಿ ದಲಿತರಿಗೆ ಅವಮಾನ; ಬಲವಂತವಾಗಿ ನೆಲದ ಮೇಲೆ ಕೂರಿಸಿದ ಐವರ ವಿರುದ್ಧ ಪ್ರಕರಣ ದಾಖಲು

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದಲಿತ ಸಮುದಾಯದ ಇಬ್ಬರಿಗೆ ಜಾತಿ ನಿಂದನೆ ಮಾಡಿದ್ದು, ಅವರು ಕುಳಿತಿದ್ದ ಕುರ್ಚಿಗಳನ್ನು ಖಾಲಿ ಮಾಡಿಸಿ ನೆಲದ ಮೇಲೆ ಕೂರಿಸಿದ್ದಾರೆ. ಈ ಬಗ್ಗೆ...

ಬಿಹಾರ NEET ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ AK-47 ಬಳಸಿದ್ದನ್ನು ಸುಪ್ರೀಂನಲ್ಲಿ ಒಪ್ಪಿಕೊಂಡ ಬಿಹಾರ ಸರ್ಕಾರ

ಬಿಹಾರದಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು AK-47 ರೈಫಲ್‌ನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿರುವುದಾಗಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ...

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...