HomeಮುಖಪುಟCAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

CAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.

- Advertisement -
- Advertisement -

ಕೊವಿಡ್‌-19 ವಿರುದ್ಧದ ಹೋರಾಟಕ್ಕೆ ದೇಣಿಗೆ ಸಂಗ್ರಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕೇರ್ಸ್ ನಿಧಿಯನ್ನು ಇತ್ತೀಚೆಗೆ ಆರಂಭಿಸಿದ್ದಾರೆ. ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈಗಾಗಲೇ PM CARES ನಿಧಿಗೆ ಸಾವಿರಾರು ಕೋಟಿ ರೂ ದೇಣಿಗೆ ಹರಿದುಬಂದಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ(FCRA) ಯಿಂದ ವಿನಾಯಿತಿ ಪಡೆದ ನಂತರ ದೇಣಿಗೆಯಲ್ಲಿ ಸಾಕಷ್ಟು ಹೆಚ್ಚಾಗಿದೆ ಎಂದು ಇಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ, ಪಿಎಂ ಕೇರ್ಸ್ ನಿಧಿಯಲ್ಲಿರುವ ಎಲ್ಲಾ ಹಣವನ್ನು ಈ ಹಿಂದಿನಿಂದಲೂ ಬಳಸುತ್ತಿರುವ ಪ್ರಧಾನ ಮಂತ್ರಿಗಳ “ರಾಷ್ಟ್ರೀಯ ಪರಿಹಾರ ನಿಧಿ”ಗೆ ವರ್ಗಾಯಿಸಬೇಕು. ಆ ಮೂಲಕ ದಕ್ಷತೆ, ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಲೆಕ್ಕಪರಿಶೋಧನೆಯನ್ನು ಖಚಿತಪಡಿಸಿಕೊಳ್ಳಲು ಆಗ್ರಹಿಸಿದ್ದರು. ಆದರೆ ಅವರ ಬೇಡಿಕೆಯನ್ನು ಮೋದಿಯವರು ಪರಿಗಣಿಸಿಲ್ಲ.

ವಿಡಿಯೊ ನೋಡಿ: PM CARES ಆಡಿಟ್ ಹಕ್ಕು ಸಿಎಜಿಗಿಲ್ಲ: ಹಾಗಾದರೆ ಇದೊಂದು ಹಗರಣವಲ್ಲವೇ?

 

CSR ದೇಣಿಗೆ ವಿಷಯದಲ್ಲಿಯೂ ವಿವಾದ

ಇನ್ನು ಕಾರ್ಪೊರೇಟ್‌ ಕಂಪನಿಗಳು ತಮ್ಮ ವಾರ್ಷಿಕ ಲಾಭದಲ್ಲಿ ಶೇ.2ರಷ್ಟನ್ನು ಸಾಮಾಜಿಕ ಹೊಣೆಗಾರಿಕೆಯ ದೃಷ್ಟಿಯಿಂದ ಖರ್ಚು ಮಾಡಬೇಕಿದ್ದ CSR ಹಣವನ್ನು ಪಿಎಂ ಕೇರ್ಸ್‌ಗೆ ಹಾಕಬಹುದಾಗಿದೆ. ಅಲ್ಲದೇ ವಯಕ್ತಿಕವಾಗಿ ದೇಣಿಗೆ ನೀಡುವವರಿಗೆ ತೆರಿಗೆ ವಿನಾಯಿಯಿ ನೀಡಲಾಗಿದೆ. ಆದರೆ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ CSR ಹಾಕಲು ಬರುವುದಿಲ್ಲ ಮತ್ತು ತೆರಿಗೆ ವಿನಾಯಿತಿ ಸಿಗುವುದಿಲ್ಲ ಎಂಬುದು ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಯುಪಿಎ ಸರ್ಕಾರವು ಜುಲೈ 2013 ರಲ್ಲಿ ಅಂಗೀಕರಿಸಿದ ಕಾನೂನಿನ (ಕಂಪನಿಗಳ ಕಾಯ್ದೆ) ತಿದ್ದುಪಡಿಯ ಕಾರಣದಿಂದ ರಾಜ್ಯಗಳು ಸಿಎಸ್‌ಆರ್‌ ದೇಣಿಗೆ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಹಲವು ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಆ ಕಾನೂನಿಗೆ ತಿದ್ದುಪಡಿ ತಂದು ರಾಜ್ಯಗಳ ಪರಿಹಾರ ನಿಧಿಗೂ ಕೂಡ ಸಿಎಸ್‌ಆರ್‌ ಹಣ ಹಾಕುವಂತಾಗಬೇಕು ಎಂದು ಮನವಿ ಮಾಡಿದ್ದಾರೆ. ಇದಕ್ಕೂ ಕೂಡ ಮೋದಿಯವರು ಸ್ಪಂದಿಸಿಲ್ಲ.

ಒಂದರ್ಥದಲ್ಲಿ ಹಲವು ರಾಜ್ಯಗಳು ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹಳಷ್ಟು ಮುಂದಿವೆ. ಜಾಗರೂಕತೆಯಿಂದ ಹಗಲು ಇರುಳು ಕೆಲಸ ಮಾಡುತ್ತಿದ್ದರೂ ಆರ್ಥಿಕ ಕೊರತೆ ತೀವ್ರವಾಗಿ ಕಾಡುತ್ತಿದೆ. ಕೇಂದ್ರ ಸರ್ಕಾರ ಇತ್ತ ಪರಿಹಾರ ಹಣವನ್ನೂ ನೀಡುತ್ತಿಲ್ಲ, ಅತ್ತ ಸಿಎಸ್‌ಆರ್‌ ಹಣ ಹಾಕಲು ಬಿಡುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿವೆ.

ಉದಾಹರಣಗೆ ಏಪ್ರಿಲ್‌ 15ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ದೇಶದ ಆರ್ಥಿಕ ರಾಜಧಾನಿ ಎಂದೇ ಕರೆಯಲ್ಪಡುವ ಮಹಾರಾಷ್ಟ್ರ ರಾಜ್ಯಕ್ಕೆ 247 ಕೋಟಿ ರೂ ಮಾತ್ರ ಸಂಗ್ರಹವಾಗಿದೆ. ಆದರೆ ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ:  ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ?


ಪಿಎಂ ಕೇರ್ಸ್‌ ಆಡಿಟ್‌ ಯಾರು ಮಾಡುತ್ತಾರೆ?

ದೇಶದ ಬಹುಮುಖ್ಯ ಹಣಕಾಸು ವ್ಯವಹಾರಗಳನ್ನು ಪ್ರಖ್ಯಾತ CAG ನಡೆಸುತ್ತಿದೆ. 2G ಸ್ಪೆಕ್ಟ್ರಮ್‌ ಹಗರಣ ಸೇರಿದಂತೆ ದೊಡ್ಡ ಹಗರಣಗಳನ್ನು ಅದು ಬಯಲಿಗೆಳೆದಿದೆ. ಅಂತಹ ಸಂಸ್ಥೆ ಪಿಎಂ ಕೇರ್ಸ್‌‌ ಅನ್ನು ಆಡಿಟ್‌ ಮಾಡುವುದಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಬದಲಿಗೆ ಪಿಎಂ ಕೇರ್ಸ್ ನಿಧಿಯನ್ನು ಟ್ರಸ್ಟಿಗಳು ನೇಮಕ ಮಾಡುವ ಒಬ್ಬ ಅಥವಾ ಅದಕ್ಕಿಂತ ಹೆಚ್ಚಿನ ಅರ್ಹ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿತ್‌ ಮಾಡುವುದು ಎಂದು ಸರ್ಕಾರ ಷರತ್ತು ವಿಧಿಸಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದುವರೆಗೂ ಕೇಂದ್ರ ಸರ್ಕಾರ ಕೊವಿಡ್‌ ಪ್ಯಾಕೇಜ್‌ಗಳಿಗೆ ತನ್ನ ಸರ್ಕಾರದ ಖಾತೆಯಿಂದ ಹಣ ನೀಡಿದೆಯೇ ಹೊರತು ಪಿಎಂ ಕೇರ್ಸ್‌‌ನಿಂದಲ್ಲ. ಹಾಗಾದರೆ ಈ ಹಣವನ್ನು ಯಾವಾಗ ಬಳಸುತ್ತಾರೆ ಎಂಬ ಪ್ರಶ್ನೆಯೂ ಎದ್ದಿದೆ.

ಕೋವಿಡ್ -19 ರ ವಿರುದ್ಧ ಹೋರಾಡುವ ಹೆಸರಿನಲ್ಲಿ, ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಹೊಂದಿರುವ ನರೇಂದ್ರ ಮೋದಿ ನೇತೃತ್ವದ ಈ ಚಾರಿಟಬಲ್ ಟ್ರಸ್ಟ್ ಹಣವನ್ನು ಸಂಗ್ರಹಿಸಿ ನಂತರ ಅವುಗಳನ್ನು ಸ್ವಂತವಾಗಿ ಖರ್ಚು ಮಾಡುತ್ತದೆ. ಈ ನಿಧಿ ಖಾಸಗಿಯಾಗಿರುವುದರಿಂದ ಅದು ಆರ್‌ಟಿಐ ಅಡಿಯಲ್ಲಿ ಬರುವುದಿಲ್ಲ. ಈ ನಿಧಿಯು ಸಿಎಜಿಯ ವ್ಯಾಪ್ತಿಯಿಂದ ಹೊರಗಿರುವುದರಿಂದ, ಯಾವುದೇ ಸರ್ಕಾರಿ ಸಂಸ್ಥೆಯು ಈ ನಿಧಿಯನ್ನು ಲೆಕ್ಕಪರಿಶೋಧಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಇದು ಹಗರಣವೇ? ಭಾರತದ ಜನರು ನಿರ್ಧರಿಸಬೇಕಾಗುತ್ತದೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...