HomeಮುಖಪುಟCAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

CAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.

- Advertisement -
- Advertisement -

ಕೊವಿಡ್‌-19 ವಿರುದ್ಧದ ಹೋರಾಟಕ್ಕೆ ದೇಣಿಗೆ ಸಂಗ್ರಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕೇರ್ಸ್ ನಿಧಿಯನ್ನು ಇತ್ತೀಚೆಗೆ ಆರಂಭಿಸಿದ್ದಾರೆ. ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈಗಾಗಲೇ PM CARES ನಿಧಿಗೆ ಸಾವಿರಾರು ಕೋಟಿ ರೂ ದೇಣಿಗೆ ಹರಿದುಬಂದಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ(FCRA) ಯಿಂದ ವಿನಾಯಿತಿ ಪಡೆದ ನಂತರ ದೇಣಿಗೆಯಲ್ಲಿ ಸಾಕಷ್ಟು ಹೆಚ್ಚಾಗಿದೆ ಎಂದು ಇಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ, ಪಿಎಂ ಕೇರ್ಸ್ ನಿಧಿಯಲ್ಲಿರುವ ಎಲ್ಲಾ ಹಣವನ್ನು ಈ ಹಿಂದಿನಿಂದಲೂ ಬಳಸುತ್ತಿರುವ ಪ್ರಧಾನ ಮಂತ್ರಿಗಳ “ರಾಷ್ಟ್ರೀಯ ಪರಿಹಾರ ನಿಧಿ”ಗೆ ವರ್ಗಾಯಿಸಬೇಕು. ಆ ಮೂಲಕ ದಕ್ಷತೆ, ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಲೆಕ್ಕಪರಿಶೋಧನೆಯನ್ನು ಖಚಿತಪಡಿಸಿಕೊಳ್ಳಲು ಆಗ್ರಹಿಸಿದ್ದರು. ಆದರೆ ಅವರ ಬೇಡಿಕೆಯನ್ನು ಮೋದಿಯವರು ಪರಿಗಣಿಸಿಲ್ಲ.

ವಿಡಿಯೊ ನೋಡಿ: PM CARES ಆಡಿಟ್ ಹಕ್ಕು ಸಿಎಜಿಗಿಲ್ಲ: ಹಾಗಾದರೆ ಇದೊಂದು ಹಗರಣವಲ್ಲವೇ?

 

CSR ದೇಣಿಗೆ ವಿಷಯದಲ್ಲಿಯೂ ವಿವಾದ

ಇನ್ನು ಕಾರ್ಪೊರೇಟ್‌ ಕಂಪನಿಗಳು ತಮ್ಮ ವಾರ್ಷಿಕ ಲಾಭದಲ್ಲಿ ಶೇ.2ರಷ್ಟನ್ನು ಸಾಮಾಜಿಕ ಹೊಣೆಗಾರಿಕೆಯ ದೃಷ್ಟಿಯಿಂದ ಖರ್ಚು ಮಾಡಬೇಕಿದ್ದ CSR ಹಣವನ್ನು ಪಿಎಂ ಕೇರ್ಸ್‌ಗೆ ಹಾಕಬಹುದಾಗಿದೆ. ಅಲ್ಲದೇ ವಯಕ್ತಿಕವಾಗಿ ದೇಣಿಗೆ ನೀಡುವವರಿಗೆ ತೆರಿಗೆ ವಿನಾಯಿಯಿ ನೀಡಲಾಗಿದೆ. ಆದರೆ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ CSR ಹಾಕಲು ಬರುವುದಿಲ್ಲ ಮತ್ತು ತೆರಿಗೆ ವಿನಾಯಿತಿ ಸಿಗುವುದಿಲ್ಲ ಎಂಬುದು ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಯುಪಿಎ ಸರ್ಕಾರವು ಜುಲೈ 2013 ರಲ್ಲಿ ಅಂಗೀಕರಿಸಿದ ಕಾನೂನಿನ (ಕಂಪನಿಗಳ ಕಾಯ್ದೆ) ತಿದ್ದುಪಡಿಯ ಕಾರಣದಿಂದ ರಾಜ್ಯಗಳು ಸಿಎಸ್‌ಆರ್‌ ದೇಣಿಗೆ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಹಲವು ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಆ ಕಾನೂನಿಗೆ ತಿದ್ದುಪಡಿ ತಂದು ರಾಜ್ಯಗಳ ಪರಿಹಾರ ನಿಧಿಗೂ ಕೂಡ ಸಿಎಸ್‌ಆರ್‌ ಹಣ ಹಾಕುವಂತಾಗಬೇಕು ಎಂದು ಮನವಿ ಮಾಡಿದ್ದಾರೆ. ಇದಕ್ಕೂ ಕೂಡ ಮೋದಿಯವರು ಸ್ಪಂದಿಸಿಲ್ಲ.

ಒಂದರ್ಥದಲ್ಲಿ ಹಲವು ರಾಜ್ಯಗಳು ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹಳಷ್ಟು ಮುಂದಿವೆ. ಜಾಗರೂಕತೆಯಿಂದ ಹಗಲು ಇರುಳು ಕೆಲಸ ಮಾಡುತ್ತಿದ್ದರೂ ಆರ್ಥಿಕ ಕೊರತೆ ತೀವ್ರವಾಗಿ ಕಾಡುತ್ತಿದೆ. ಕೇಂದ್ರ ಸರ್ಕಾರ ಇತ್ತ ಪರಿಹಾರ ಹಣವನ್ನೂ ನೀಡುತ್ತಿಲ್ಲ, ಅತ್ತ ಸಿಎಸ್‌ಆರ್‌ ಹಣ ಹಾಕಲು ಬಿಡುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿವೆ.

ಉದಾಹರಣಗೆ ಏಪ್ರಿಲ್‌ 15ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ದೇಶದ ಆರ್ಥಿಕ ರಾಜಧಾನಿ ಎಂದೇ ಕರೆಯಲ್ಪಡುವ ಮಹಾರಾಷ್ಟ್ರ ರಾಜ್ಯಕ್ಕೆ 247 ಕೋಟಿ ರೂ ಮಾತ್ರ ಸಂಗ್ರಹವಾಗಿದೆ. ಆದರೆ ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ:  ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ?


ಪಿಎಂ ಕೇರ್ಸ್‌ ಆಡಿಟ್‌ ಯಾರು ಮಾಡುತ್ತಾರೆ?

ದೇಶದ ಬಹುಮುಖ್ಯ ಹಣಕಾಸು ವ್ಯವಹಾರಗಳನ್ನು ಪ್ರಖ್ಯಾತ CAG ನಡೆಸುತ್ತಿದೆ. 2G ಸ್ಪೆಕ್ಟ್ರಮ್‌ ಹಗರಣ ಸೇರಿದಂತೆ ದೊಡ್ಡ ಹಗರಣಗಳನ್ನು ಅದು ಬಯಲಿಗೆಳೆದಿದೆ. ಅಂತಹ ಸಂಸ್ಥೆ ಪಿಎಂ ಕೇರ್ಸ್‌‌ ಅನ್ನು ಆಡಿಟ್‌ ಮಾಡುವುದಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಬದಲಿಗೆ ಪಿಎಂ ಕೇರ್ಸ್ ನಿಧಿಯನ್ನು ಟ್ರಸ್ಟಿಗಳು ನೇಮಕ ಮಾಡುವ ಒಬ್ಬ ಅಥವಾ ಅದಕ್ಕಿಂತ ಹೆಚ್ಚಿನ ಅರ್ಹ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿತ್‌ ಮಾಡುವುದು ಎಂದು ಸರ್ಕಾರ ಷರತ್ತು ವಿಧಿಸಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದುವರೆಗೂ ಕೇಂದ್ರ ಸರ್ಕಾರ ಕೊವಿಡ್‌ ಪ್ಯಾಕೇಜ್‌ಗಳಿಗೆ ತನ್ನ ಸರ್ಕಾರದ ಖಾತೆಯಿಂದ ಹಣ ನೀಡಿದೆಯೇ ಹೊರತು ಪಿಎಂ ಕೇರ್ಸ್‌‌ನಿಂದಲ್ಲ. ಹಾಗಾದರೆ ಈ ಹಣವನ್ನು ಯಾವಾಗ ಬಳಸುತ್ತಾರೆ ಎಂಬ ಪ್ರಶ್ನೆಯೂ ಎದ್ದಿದೆ.

ಕೋವಿಡ್ -19 ರ ವಿರುದ್ಧ ಹೋರಾಡುವ ಹೆಸರಿನಲ್ಲಿ, ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಹೊಂದಿರುವ ನರೇಂದ್ರ ಮೋದಿ ನೇತೃತ್ವದ ಈ ಚಾರಿಟಬಲ್ ಟ್ರಸ್ಟ್ ಹಣವನ್ನು ಸಂಗ್ರಹಿಸಿ ನಂತರ ಅವುಗಳನ್ನು ಸ್ವಂತವಾಗಿ ಖರ್ಚು ಮಾಡುತ್ತದೆ. ಈ ನಿಧಿ ಖಾಸಗಿಯಾಗಿರುವುದರಿಂದ ಅದು ಆರ್‌ಟಿಐ ಅಡಿಯಲ್ಲಿ ಬರುವುದಿಲ್ಲ. ಈ ನಿಧಿಯು ಸಿಎಜಿಯ ವ್ಯಾಪ್ತಿಯಿಂದ ಹೊರಗಿರುವುದರಿಂದ, ಯಾವುದೇ ಸರ್ಕಾರಿ ಸಂಸ್ಥೆಯು ಈ ನಿಧಿಯನ್ನು ಲೆಕ್ಕಪರಿಶೋಧಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಇದು ಹಗರಣವೇ? ಭಾರತದ ಜನರು ನಿರ್ಧರಿಸಬೇಕಾಗುತ್ತದೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...