HomeಮುಖಪುಟCAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

CAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.

- Advertisement -
- Advertisement -

ಕೊವಿಡ್‌-19 ವಿರುದ್ಧದ ಹೋರಾಟಕ್ಕೆ ದೇಣಿಗೆ ಸಂಗ್ರಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕೇರ್ಸ್ ನಿಧಿಯನ್ನು ಇತ್ತೀಚೆಗೆ ಆರಂಭಿಸಿದ್ದಾರೆ. ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈಗಾಗಲೇ PM CARES ನಿಧಿಗೆ ಸಾವಿರಾರು ಕೋಟಿ ರೂ ದೇಣಿಗೆ ಹರಿದುಬಂದಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ(FCRA) ಯಿಂದ ವಿನಾಯಿತಿ ಪಡೆದ ನಂತರ ದೇಣಿಗೆಯಲ್ಲಿ ಸಾಕಷ್ಟು ಹೆಚ್ಚಾಗಿದೆ ಎಂದು ಇಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ, ಪಿಎಂ ಕೇರ್ಸ್ ನಿಧಿಯಲ್ಲಿರುವ ಎಲ್ಲಾ ಹಣವನ್ನು ಈ ಹಿಂದಿನಿಂದಲೂ ಬಳಸುತ್ತಿರುವ ಪ್ರಧಾನ ಮಂತ್ರಿಗಳ “ರಾಷ್ಟ್ರೀಯ ಪರಿಹಾರ ನಿಧಿ”ಗೆ ವರ್ಗಾಯಿಸಬೇಕು. ಆ ಮೂಲಕ ದಕ್ಷತೆ, ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಲೆಕ್ಕಪರಿಶೋಧನೆಯನ್ನು ಖಚಿತಪಡಿಸಿಕೊಳ್ಳಲು ಆಗ್ರಹಿಸಿದ್ದರು. ಆದರೆ ಅವರ ಬೇಡಿಕೆಯನ್ನು ಮೋದಿಯವರು ಪರಿಗಣಿಸಿಲ್ಲ.

ವಿಡಿಯೊ ನೋಡಿ: PM CARES ಆಡಿಟ್ ಹಕ್ಕು ಸಿಎಜಿಗಿಲ್ಲ: ಹಾಗಾದರೆ ಇದೊಂದು ಹಗರಣವಲ್ಲವೇ?

 

CSR ದೇಣಿಗೆ ವಿಷಯದಲ್ಲಿಯೂ ವಿವಾದ

ಇನ್ನು ಕಾರ್ಪೊರೇಟ್‌ ಕಂಪನಿಗಳು ತಮ್ಮ ವಾರ್ಷಿಕ ಲಾಭದಲ್ಲಿ ಶೇ.2ರಷ್ಟನ್ನು ಸಾಮಾಜಿಕ ಹೊಣೆಗಾರಿಕೆಯ ದೃಷ್ಟಿಯಿಂದ ಖರ್ಚು ಮಾಡಬೇಕಿದ್ದ CSR ಹಣವನ್ನು ಪಿಎಂ ಕೇರ್ಸ್‌ಗೆ ಹಾಕಬಹುದಾಗಿದೆ. ಅಲ್ಲದೇ ವಯಕ್ತಿಕವಾಗಿ ದೇಣಿಗೆ ನೀಡುವವರಿಗೆ ತೆರಿಗೆ ವಿನಾಯಿಯಿ ನೀಡಲಾಗಿದೆ. ಆದರೆ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ CSR ಹಾಕಲು ಬರುವುದಿಲ್ಲ ಮತ್ತು ತೆರಿಗೆ ವಿನಾಯಿತಿ ಸಿಗುವುದಿಲ್ಲ ಎಂಬುದು ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಯುಪಿಎ ಸರ್ಕಾರವು ಜುಲೈ 2013 ರಲ್ಲಿ ಅಂಗೀಕರಿಸಿದ ಕಾನೂನಿನ (ಕಂಪನಿಗಳ ಕಾಯ್ದೆ) ತಿದ್ದುಪಡಿಯ ಕಾರಣದಿಂದ ರಾಜ್ಯಗಳು ಸಿಎಸ್‌ಆರ್‌ ದೇಣಿಗೆ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಹಲವು ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಆ ಕಾನೂನಿಗೆ ತಿದ್ದುಪಡಿ ತಂದು ರಾಜ್ಯಗಳ ಪರಿಹಾರ ನಿಧಿಗೂ ಕೂಡ ಸಿಎಸ್‌ಆರ್‌ ಹಣ ಹಾಕುವಂತಾಗಬೇಕು ಎಂದು ಮನವಿ ಮಾಡಿದ್ದಾರೆ. ಇದಕ್ಕೂ ಕೂಡ ಮೋದಿಯವರು ಸ್ಪಂದಿಸಿಲ್ಲ.

ಒಂದರ್ಥದಲ್ಲಿ ಹಲವು ರಾಜ್ಯಗಳು ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹಳಷ್ಟು ಮುಂದಿವೆ. ಜಾಗರೂಕತೆಯಿಂದ ಹಗಲು ಇರುಳು ಕೆಲಸ ಮಾಡುತ್ತಿದ್ದರೂ ಆರ್ಥಿಕ ಕೊರತೆ ತೀವ್ರವಾಗಿ ಕಾಡುತ್ತಿದೆ. ಕೇಂದ್ರ ಸರ್ಕಾರ ಇತ್ತ ಪರಿಹಾರ ಹಣವನ್ನೂ ನೀಡುತ್ತಿಲ್ಲ, ಅತ್ತ ಸಿಎಸ್‌ಆರ್‌ ಹಣ ಹಾಕಲು ಬಿಡುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿವೆ.

ಉದಾಹರಣಗೆ ಏಪ್ರಿಲ್‌ 15ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ದೇಶದ ಆರ್ಥಿಕ ರಾಜಧಾನಿ ಎಂದೇ ಕರೆಯಲ್ಪಡುವ ಮಹಾರಾಷ್ಟ್ರ ರಾಜ್ಯಕ್ಕೆ 247 ಕೋಟಿ ರೂ ಮಾತ್ರ ಸಂಗ್ರಹವಾಗಿದೆ. ಆದರೆ ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ:  ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ?


ಪಿಎಂ ಕೇರ್ಸ್‌ ಆಡಿಟ್‌ ಯಾರು ಮಾಡುತ್ತಾರೆ?

ದೇಶದ ಬಹುಮುಖ್ಯ ಹಣಕಾಸು ವ್ಯವಹಾರಗಳನ್ನು ಪ್ರಖ್ಯಾತ CAG ನಡೆಸುತ್ತಿದೆ. 2G ಸ್ಪೆಕ್ಟ್ರಮ್‌ ಹಗರಣ ಸೇರಿದಂತೆ ದೊಡ್ಡ ಹಗರಣಗಳನ್ನು ಅದು ಬಯಲಿಗೆಳೆದಿದೆ. ಅಂತಹ ಸಂಸ್ಥೆ ಪಿಎಂ ಕೇರ್ಸ್‌‌ ಅನ್ನು ಆಡಿಟ್‌ ಮಾಡುವುದಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಬದಲಿಗೆ ಪಿಎಂ ಕೇರ್ಸ್ ನಿಧಿಯನ್ನು ಟ್ರಸ್ಟಿಗಳು ನೇಮಕ ಮಾಡುವ ಒಬ್ಬ ಅಥವಾ ಅದಕ್ಕಿಂತ ಹೆಚ್ಚಿನ ಅರ್ಹ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿತ್‌ ಮಾಡುವುದು ಎಂದು ಸರ್ಕಾರ ಷರತ್ತು ವಿಧಿಸಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದುವರೆಗೂ ಕೇಂದ್ರ ಸರ್ಕಾರ ಕೊವಿಡ್‌ ಪ್ಯಾಕೇಜ್‌ಗಳಿಗೆ ತನ್ನ ಸರ್ಕಾರದ ಖಾತೆಯಿಂದ ಹಣ ನೀಡಿದೆಯೇ ಹೊರತು ಪಿಎಂ ಕೇರ್ಸ್‌‌ನಿಂದಲ್ಲ. ಹಾಗಾದರೆ ಈ ಹಣವನ್ನು ಯಾವಾಗ ಬಳಸುತ್ತಾರೆ ಎಂಬ ಪ್ರಶ್ನೆಯೂ ಎದ್ದಿದೆ.

ಕೋವಿಡ್ -19 ರ ವಿರುದ್ಧ ಹೋರಾಡುವ ಹೆಸರಿನಲ್ಲಿ, ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಹೊಂದಿರುವ ನರೇಂದ್ರ ಮೋದಿ ನೇತೃತ್ವದ ಈ ಚಾರಿಟಬಲ್ ಟ್ರಸ್ಟ್ ಹಣವನ್ನು ಸಂಗ್ರಹಿಸಿ ನಂತರ ಅವುಗಳನ್ನು ಸ್ವಂತವಾಗಿ ಖರ್ಚು ಮಾಡುತ್ತದೆ. ಈ ನಿಧಿ ಖಾಸಗಿಯಾಗಿರುವುದರಿಂದ ಅದು ಆರ್‌ಟಿಐ ಅಡಿಯಲ್ಲಿ ಬರುವುದಿಲ್ಲ. ಈ ನಿಧಿಯು ಸಿಎಜಿಯ ವ್ಯಾಪ್ತಿಯಿಂದ ಹೊರಗಿರುವುದರಿಂದ, ಯಾವುದೇ ಸರ್ಕಾರಿ ಸಂಸ್ಥೆಯು ಈ ನಿಧಿಯನ್ನು ಲೆಕ್ಕಪರಿಶೋಧಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಇದು ಹಗರಣವೇ? ಭಾರತದ ಜನರು ನಿರ್ಧರಿಸಬೇಕಾಗುತ್ತದೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...