HomeಮುಖಪುಟCAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

CAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.

- Advertisement -
- Advertisement -

ಕೊವಿಡ್‌-19 ವಿರುದ್ಧದ ಹೋರಾಟಕ್ಕೆ ದೇಣಿಗೆ ಸಂಗ್ರಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕೇರ್ಸ್ ನಿಧಿಯನ್ನು ಇತ್ತೀಚೆಗೆ ಆರಂಭಿಸಿದ್ದಾರೆ. ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈಗಾಗಲೇ PM CARES ನಿಧಿಗೆ ಸಾವಿರಾರು ಕೋಟಿ ರೂ ದೇಣಿಗೆ ಹರಿದುಬಂದಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ(FCRA) ಯಿಂದ ವಿನಾಯಿತಿ ಪಡೆದ ನಂತರ ದೇಣಿಗೆಯಲ್ಲಿ ಸಾಕಷ್ಟು ಹೆಚ್ಚಾಗಿದೆ ಎಂದು ಇಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ, ಪಿಎಂ ಕೇರ್ಸ್ ನಿಧಿಯಲ್ಲಿರುವ ಎಲ್ಲಾ ಹಣವನ್ನು ಈ ಹಿಂದಿನಿಂದಲೂ ಬಳಸುತ್ತಿರುವ ಪ್ರಧಾನ ಮಂತ್ರಿಗಳ “ರಾಷ್ಟ್ರೀಯ ಪರಿಹಾರ ನಿಧಿ”ಗೆ ವರ್ಗಾಯಿಸಬೇಕು. ಆ ಮೂಲಕ ದಕ್ಷತೆ, ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಲೆಕ್ಕಪರಿಶೋಧನೆಯನ್ನು ಖಚಿತಪಡಿಸಿಕೊಳ್ಳಲು ಆಗ್ರಹಿಸಿದ್ದರು. ಆದರೆ ಅವರ ಬೇಡಿಕೆಯನ್ನು ಮೋದಿಯವರು ಪರಿಗಣಿಸಿಲ್ಲ.

ವಿಡಿಯೊ ನೋಡಿ: PM CARES ಆಡಿಟ್ ಹಕ್ಕು ಸಿಎಜಿಗಿಲ್ಲ: ಹಾಗಾದರೆ ಇದೊಂದು ಹಗರಣವಲ್ಲವೇ?

 

CSR ದೇಣಿಗೆ ವಿಷಯದಲ್ಲಿಯೂ ವಿವಾದ

ಇನ್ನು ಕಾರ್ಪೊರೇಟ್‌ ಕಂಪನಿಗಳು ತಮ್ಮ ವಾರ್ಷಿಕ ಲಾಭದಲ್ಲಿ ಶೇ.2ರಷ್ಟನ್ನು ಸಾಮಾಜಿಕ ಹೊಣೆಗಾರಿಕೆಯ ದೃಷ್ಟಿಯಿಂದ ಖರ್ಚು ಮಾಡಬೇಕಿದ್ದ CSR ಹಣವನ್ನು ಪಿಎಂ ಕೇರ್ಸ್‌ಗೆ ಹಾಕಬಹುದಾಗಿದೆ. ಅಲ್ಲದೇ ವಯಕ್ತಿಕವಾಗಿ ದೇಣಿಗೆ ನೀಡುವವರಿಗೆ ತೆರಿಗೆ ವಿನಾಯಿಯಿ ನೀಡಲಾಗಿದೆ. ಆದರೆ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ CSR ಹಾಕಲು ಬರುವುದಿಲ್ಲ ಮತ್ತು ತೆರಿಗೆ ವಿನಾಯಿತಿ ಸಿಗುವುದಿಲ್ಲ ಎಂಬುದು ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಯುಪಿಎ ಸರ್ಕಾರವು ಜುಲೈ 2013 ರಲ್ಲಿ ಅಂಗೀಕರಿಸಿದ ಕಾನೂನಿನ (ಕಂಪನಿಗಳ ಕಾಯ್ದೆ) ತಿದ್ದುಪಡಿಯ ಕಾರಣದಿಂದ ರಾಜ್ಯಗಳು ಸಿಎಸ್‌ಆರ್‌ ದೇಣಿಗೆ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಹಲವು ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಆ ಕಾನೂನಿಗೆ ತಿದ್ದುಪಡಿ ತಂದು ರಾಜ್ಯಗಳ ಪರಿಹಾರ ನಿಧಿಗೂ ಕೂಡ ಸಿಎಸ್‌ಆರ್‌ ಹಣ ಹಾಕುವಂತಾಗಬೇಕು ಎಂದು ಮನವಿ ಮಾಡಿದ್ದಾರೆ. ಇದಕ್ಕೂ ಕೂಡ ಮೋದಿಯವರು ಸ್ಪಂದಿಸಿಲ್ಲ.

ಒಂದರ್ಥದಲ್ಲಿ ಹಲವು ರಾಜ್ಯಗಳು ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹಳಷ್ಟು ಮುಂದಿವೆ. ಜಾಗರೂಕತೆಯಿಂದ ಹಗಲು ಇರುಳು ಕೆಲಸ ಮಾಡುತ್ತಿದ್ದರೂ ಆರ್ಥಿಕ ಕೊರತೆ ತೀವ್ರವಾಗಿ ಕಾಡುತ್ತಿದೆ. ಕೇಂದ್ರ ಸರ್ಕಾರ ಇತ್ತ ಪರಿಹಾರ ಹಣವನ್ನೂ ನೀಡುತ್ತಿಲ್ಲ, ಅತ್ತ ಸಿಎಸ್‌ಆರ್‌ ಹಣ ಹಾಕಲು ಬಿಡುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿವೆ.

ಉದಾಹರಣಗೆ ಏಪ್ರಿಲ್‌ 15ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೇವಲ 138 ಕೋಟಿ ರೂ ದೇಣಿಗೆ ಬಂದಿದ್ದರೆ, ದೇಶದ ಆರ್ಥಿಕ ರಾಜಧಾನಿ ಎಂದೇ ಕರೆಯಲ್ಪಡುವ ಮಹಾರಾಷ್ಟ್ರ ರಾಜ್ಯಕ್ಕೆ 247 ಕೋಟಿ ರೂ ಮಾತ್ರ ಸಂಗ್ರಹವಾಗಿದೆ. ಆದರೆ ಇದೇ ಅವಧಿಯಲ್ಲಿ ಪಿಎಂ ಕೇರ್ಸ್‌‌ಗೆ 10,000 ಕೋಟಿಗೂ ಹೆಚ್ಚು ದೇಣಿಗೆ ಹರಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ:  ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ?


ಪಿಎಂ ಕೇರ್ಸ್‌ ಆಡಿಟ್‌ ಯಾರು ಮಾಡುತ್ತಾರೆ?

ದೇಶದ ಬಹುಮುಖ್ಯ ಹಣಕಾಸು ವ್ಯವಹಾರಗಳನ್ನು ಪ್ರಖ್ಯಾತ CAG ನಡೆಸುತ್ತಿದೆ. 2G ಸ್ಪೆಕ್ಟ್ರಮ್‌ ಹಗರಣ ಸೇರಿದಂತೆ ದೊಡ್ಡ ಹಗರಣಗಳನ್ನು ಅದು ಬಯಲಿಗೆಳೆದಿದೆ. ಅಂತಹ ಸಂಸ್ಥೆ ಪಿಎಂ ಕೇರ್ಸ್‌‌ ಅನ್ನು ಆಡಿಟ್‌ ಮಾಡುವುದಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಬದಲಿಗೆ ಪಿಎಂ ಕೇರ್ಸ್ ನಿಧಿಯನ್ನು ಟ್ರಸ್ಟಿಗಳು ನೇಮಕ ಮಾಡುವ ಒಬ್ಬ ಅಥವಾ ಅದಕ್ಕಿಂತ ಹೆಚ್ಚಿನ ಅರ್ಹ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿತ್‌ ಮಾಡುವುದು ಎಂದು ಸರ್ಕಾರ ಷರತ್ತು ವಿಧಿಸಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದುವರೆಗೂ ಕೇಂದ್ರ ಸರ್ಕಾರ ಕೊವಿಡ್‌ ಪ್ಯಾಕೇಜ್‌ಗಳಿಗೆ ತನ್ನ ಸರ್ಕಾರದ ಖಾತೆಯಿಂದ ಹಣ ನೀಡಿದೆಯೇ ಹೊರತು ಪಿಎಂ ಕೇರ್ಸ್‌‌ನಿಂದಲ್ಲ. ಹಾಗಾದರೆ ಈ ಹಣವನ್ನು ಯಾವಾಗ ಬಳಸುತ್ತಾರೆ ಎಂಬ ಪ್ರಶ್ನೆಯೂ ಎದ್ದಿದೆ.

ಕೋವಿಡ್ -19 ರ ವಿರುದ್ಧ ಹೋರಾಡುವ ಹೆಸರಿನಲ್ಲಿ, ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಹೊಂದಿರುವ ನರೇಂದ್ರ ಮೋದಿ ನೇತೃತ್ವದ ಈ ಚಾರಿಟಬಲ್ ಟ್ರಸ್ಟ್ ಹಣವನ್ನು ಸಂಗ್ರಹಿಸಿ ನಂತರ ಅವುಗಳನ್ನು ಸ್ವಂತವಾಗಿ ಖರ್ಚು ಮಾಡುತ್ತದೆ. ಈ ನಿಧಿ ಖಾಸಗಿಯಾಗಿರುವುದರಿಂದ ಅದು ಆರ್‌ಟಿಐ ಅಡಿಯಲ್ಲಿ ಬರುವುದಿಲ್ಲ. ಈ ನಿಧಿಯು ಸಿಎಜಿಯ ವ್ಯಾಪ್ತಿಯಿಂದ ಹೊರಗಿರುವುದರಿಂದ, ಯಾವುದೇ ಸರ್ಕಾರಿ ಸಂಸ್ಥೆಯು ಈ ನಿಧಿಯನ್ನು ಲೆಕ್ಕಪರಿಶೋಧಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಇದು ಹಗರಣವೇ? ಭಾರತದ ಜನರು ನಿರ್ಧರಿಸಬೇಕಾಗುತ್ತದೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...