Homeಮುಖಪುಟಸೈನಿಕರ ವೇತನ ಲೂಟಿ ಮಾಡಿ ಕೋಟ್ಯಾಂತರ ರೂ.ಗಳನ್ನು ಸಂಗ್ರಹಿಸಿದ PM-CARES?

ಸೈನಿಕರ ವೇತನ ಲೂಟಿ ಮಾಡಿ ಕೋಟ್ಯಾಂತರ ರೂ.ಗಳನ್ನು ಸಂಗ್ರಹಿಸಿದ PM-CARES?

ಭಾರತೀಯ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆ ಸೇರಿ ತಮ್ಮ ನೌಕರರ ದೈನಂದಿನ ವೇತನದಿಂದ 203.67 ಕೋಟಿ ರೂ.ಗಳನ್ನು ನೀಡಿದೆ ಎಂಬ ಮಾಹಿತಿ ಹೊರಬಿದ್ದಿದೆ

- Advertisement -
- Advertisement -

ದೇಶದ ಮೂರು ಸೇನಾ ವಿಭಾಗಗಳಿಂದ ಕೋಟ್ಯಾಂತರ ರೂಪಾಯಿಗಳನ್ನು ಪಿಎಂ-ಕೇರ್ಸ್‌(PM-CARES)ಗೆ ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ. ಸಾರ್ವಜನಿಕ ವಲಯದ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳು ಮಾತ್ರವಲ್ಲದೆ ಮೂರು ಸಶಸ್ತ್ರ ಪಡೆಗಳೂ ಪಿಎಂ-ಕೇರ್ಸ್‌ಗೆ ಹಣವನ್ನು ನೀಡಿವೆ ಎಂದು ತಿಳಿದು ಬಂದಿದೆ.

ಭಾರತೀಯ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆ ಸೇರಿ ತಮ್ಮ ನೌಕರರ ದೈನಂದಿನ ವೇತನದಿಂದ 203.67 ಕೋಟಿ ರೂ.ಗಳನ್ನು ನೀಡಿದೆ. ವಾಯುಪಡೆಯು ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ PM-CARES ‌ಗೆ ಒಟ್ಟು 29.18 ಕೋಟಿ ರೂ. ಗಳನ್ನು ನೀಡಿರುವುದಾಗಿ ವಾಯುಪಡೆಯ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಂ.ಕಾಮ್ ವರದಿ ಮಾಡಿದೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ಈ ಹಿಂದೆ ಆರ್‌ಟಿಐ ಸಿಕ್ಕಿದ ದಾಖಲೆಗಳ ಪ್ರಕಾರ, ರಿಸರ್ವ್ ಬ್ಯಾಂಕ್‌ ಹಾಗೂ ಏಳು ಸಾರ್ವಜನಿಕ ವಲಯದ ಬ್ಯಾಂಕುಗಳು ಸೇರಿದಂತೆ ಇತರ ಹಣಕಾಸು ಸಂಸ್ಥೆಗಳಿಂದ 204.75 ಕೋಟಿ ರೂ. ಹಣವನ್ನು PM-CARES ‌ಗೆ ನೀಡಲಾಗಿತ್ತು. ಅನೇಕ ಕೇಂದ್ರ ಶಿಕ್ಷಣ ಸಂಸ್ಥೆಗಳು ತಮ್ಮ ನೌಕರರ ವೇತನದಿಂದ 21.81 ಕೋಟಿ ರೂ.ಗಳನ್ನು PM-CARES ‌ಗೆ ನೀಡಲಾಗಿತ್ತು. ಈ ಹಣವನ್ನು ಮಾಸಿಕ ದೇಣಿಗೆಯ ರೂಪದಲ್ಲಿ ಪಾವತಿಸಲಾಗಿದೆ ಎನ್ನಲಾಗಿದೆ.

ಏಪ್ರಿಲ್‌ನಲ್ಲಿ 25.03 ಕೋಟಿ, ಮೇ ತಿಂಗಳಲ್ಲಿ 75.24 ಲಕ್ಷ, ಜೂನ್‌ನಲ್ಲಿ 1.08 ಕೋಟಿ, ಜುಲೈನಲ್ಲಿ 73.93 ಲಕ್ಷ, ಆಗಸ್ಟ್‌ನಲ್ಲಿ 61.18 ಲಕ್ಷ, ಸೆಪ್ಟೆಂಬರ್‌ನಲ್ಲಿ 50.27 ಲಕ್ಷ ಮತ್ತು ಅಕ್ಟೋಬರ್‌ನಲ್ಲಿ 46.70 ಲಕ್ಷ ರೂ. ಗಳನ್ನಾಗಿದೆ ವಾಯುಸೇನೆ PM-CARES ‌ಗೆ ನೀಡಿದೆ.

ಡಿಸೆಂಬರ್ 9 ರಂದು ನೌಕಾಪಡೆ ನೀಡಿದ ಪ್ರತಿಕ್ರಿಯೆಯಲ್ಲಿ, ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ PM-CARES ‌ಗೆ 12.41 ಕೋಟಿ ಪಾವತಿಸಿದೆ. ಭಾರತೀಯ ಸೇನೆಯ ಎಡಿಜಿ ಪಿಐ (ಸಾರ್ವಜನಿಕ ಮಾಹಿತಿ ಹೆಚ್ಚುವರಿ ನಿರ್ದೇಶನಾಲಯ) ಮಾಡಿರುವ ಟ್ವೀಟ್ ಪ್ರಕಾರ, ಸೇನಾ ಸಿಬ್ಬಂದಿ 2020 ರ ಏಪ್ರಿಲ್‌ನಲ್ಲಿ 157.71 ಕೋಟಿ. ರೂ. ಗಳನ್ನು ಸ್ವಯಂಪ್ರೇರಣೆಯಿಂದ ನೀಡಿದ್ದಾಗಿ ಮಾಹಿತಿ ನೀಡಿದೆ.

ಇದನ್ನೂ ಓದಿ: PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?

ಮಾರ್ಚ್ 29 ರಂದು ರಕ್ಷಣಾ ಸಚಿವಾಲಯ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ, “ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಕ್ಷಣಾ ಸಚಿವಾಲಯದ ನೌಕರರು ಪ್ರಧಾನಮಂತ್ರಿಗೆ ಒಂದು ದಿನದ ವೇತನವನ್ನು ನೀಡುವ ಪ್ರಸ್ತಾಪವನ್ನು ಅಂಗೀಕರಿಸಿದ್ದಾರೆ” ಎಂದು ಹೇಳಲಾಗಿತ್ತು. ಕೊರೊನಾ ವಿರುದ್ದ ಹೋರಾಡಲು PM-CARES ‌ಗೆ ಭೂಸೇನೆ, ನೌಕಾಪಡೆ, ವಾಯುಪಡೆ ಮತ್ತು ಇತರ ರಕ್ಷಣಾ ವಿಭಾಗಗಳ ವಿವಿಧ ಕ್ಷೇತ್ರಗಳಿಂದ ಸುಮಾರು 500 ಕೋಟಿ ರೂ.ಗಳನ್ನು ಸ್ವಯಂಪ್ರೇರಿತವಾಗಿ ಸಂಗ್ರಹಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

ಕೊರೊನಾ ಸಂಧರ್ಭದಲ್ಲಿ ಕೇಂದ್ರ ಸರ್ಕಾರ ಸ್ಥಾಪಿಸಿದ್ದ PM-CARES ನಿಧಿ ಖಾಸಗಿಯೆ ಅಥವಾ ಸರ್ಕಾರಿ ಟ್ರಸ್ಟ್‌‌ ಆಗಿದೆಯೆ ಎಂಬ ಬಗ್ಗೆ ಇದೀಗ ವಿರೋಧಾಭಾಸಗಳು ಎದ್ದಿದೆ. ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಇದನ್ನು ಸರ್ಕಾರಿ ಟ್ರಸ್ಟ್ ಎಂದು ವ್ಯಾಖ್ಯಾನಿಸಲಾಗಿದ್ದರೂ, ಟ್ರಸ್ಟ್ ದಾಖಲೆಗಳಲ್ಲಿನ ಒಂದು ಷರತ್ತು ಇದನ್ನು ”ಖಾಸಗಿ” ಎಂದು ಕರೆಯುತ್ತದೆ.

ಇದನ್ನೂ ಓದಿ: ಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ ಕಂಪನಿ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...