Homeಮುಖಪುಟಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

’ಸಂವಾದವನ್ನು ನೇರ ಹಂಚಿಕೊಳ್ಳಬಾರದು ಎಂದು ಕೇಂದ್ರ ಸರ್ಕಾರದಿಂದ ಯಾವುದೇ ಲಿಖಿತ ಅಥವಾ ಮೌಖಿಕ ಸೂಚನೆ ಬಂದಿರಲಿಲ್ಲ’- ಸಿಎಂ ಕಚೇರಿ

- Advertisement -
- Advertisement -

ದೇಶದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕದ ಎರಡನೇ ಅಲೆಯಿಂದ ಭೀಕರವಾಗಿ ಹಾನಿಗೊಳಗಾಗಿರುವ 11 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಭೆ ನಡೆಸಿದ್ದಾರೆ. ಆದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗಿನ ಚರ್ಚೆಯು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ದೆಹಲಿಯಲ್ಲಿ ಉಂಟಾಗಿರುವ ಆಮ್ಲಜನಕದ ಬಿಕ್ಕಟ್ಟಿನ ಬಗ್ಗೆ ಅರವಿಂದ್ ಕೇಜ್ರಿವಾಲ್ ಮಾತನಾಡುತ್ತಿದ್ದಂತೆ ಅದರ ನೇರ ಪ್ರಸಾರ ಎಲ್ಲ ಟೆಲಿವಿಷನ್‌ಗಳಲ್ಲಿ ಪ್ರಸಾರವಾಗಿದೆ. ಆಂತರಿಕ ಸಭೆ ನೇರ ಪ್ರಸಾರವಾಗುವುದನ್ನು ಪ್ರಧಾನಿ ನರೇಂದ್ರ ಮೋದಿ ಆಕ್ಷೇಪಿಸಿದ್ದಾರೆ, ಇದಕ್ಕೆ ಅರವಿಂದ್ ಕೇಜ್ರಿವಾಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಆದರೆ, ಅರವಿಂದ್ ಕೇಜ್ರಿವಾಲ್ ನಿಯಮಗಳನ್ನು ಮೀರಿದ್ದಾರೆ ಎಂದು ಆರೋಪಿಸಿ ಹಲವು ಬಿಜೆಪಿಗರು ಅವರನ್ನ ಟೀಕಿಸಿದ್ದಾರೆ. ಆಂತರಿಕವಾಗಿ ನಡೆಯಬೇಕಿದ್ದ ಸಭೆಯನ್ನು ಟಿವಿಗಳಲ್ಲಿ ಪ್ರಸಾರ ಮಾಡಿರುವುದರ ಹಿಂದೆ ರಾಜಕೀಯ ಕಾರಣವಿದೆ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ ಸರ್ಕಾರ ಆಮ್ಲಜನಕವನ್ನು ಕದಿಯುತ್ತಿದೆ: ಹರಿಯಾಣ ಆರೋಗ್ಯ ಸಚಿವ ಆರೋಪ

ರಾಜಕೀಯಕ್ಕಾಗಿ ಇಷ್ಟು ಕೇಳಮಟ್ಟಕ್ಕೆ ಇಳಿಯಬಹುದೇ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಟ್ವೀಟ್ ಮಾಡಿದ್ದಾರೆ.

 

ದೆಹಲಿ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ದೊಡ್ಡ ದುರಂತ ಸಂಭವಿಸಬಹುದು. ನಗರಕ್ಕೆ ಪ್ರವೇಶಿಸದಂತೆ ಆಮ್ಲಜನಕ ಟ್ಯಾಂಕರ್‌ಗಳನ್ನು ನಿಲ್ಲಿಸಲಾಗುತ್ತಿದೆ. ದಯವಿಟ್ಟು ಸಹಾಯ ಮಾಡಿ ಎಂದು ಅರವಿಂದ್ ಕೇಜ್ರಿವಾಲ್ ಕೈ ಮುಗಿದು ಕೇಳಿಕೊಂಡಿದ್ದಾರೆ.

“ದೆಹಲಿಯಲ್ಲಿ ಆಮ್ಲಜನಕ ಉತ್ಪಾದಿಸುವ ಸ್ಥಾವರವಿಲ್ಲದಿದ್ದರೆ ದೆಹಲಿಯ ಜನರಿಗೆ ಆಮ್ಲಜನಕ ಸಿಗುವುದಿಲ್ಲವೇ? ದೆಹಲಿಗೆ ಮೀಸಲಾದ ಆಮ್ಲಜನಕ ಟ್ಯಾಂಕರ್‌ಗಳಿಗೆ ಬೇರೆ ರಾಜ್ಯಗಳಲ್ಲಿ ತಡೆಯೊಡ್ಡಿದಾಗ, ನಾನು ಕೇಂದ್ರ ಸರ್ಕಾರದಲ್ಲಿ ಯಾರೊಂದಿಗೆ ಮಾತನಾಡಬೇಕು ಎಂದು ದಯವಿಟ್ಟು ಸೂಚಿಸಿ” ಎಂದು ಪ್ರಶ್ನಿಸಿದ್ದಾರೆ.

ದೆಹಲಿಯ ಆಮ್ಲಜನಕದ ಕೊರತೆಯನ್ನು ಪರಿಹರಿಸಲು ಪಶ್ಚಿಮ ಬಂಗಾಳ ಮತ್ತು ಒಡಿಶಾದಿಂದ ಆಮ್ಲಜನಕದ ವಿಮಾನ ಹಾರಾಟಕ್ಕೆ ಅನುಕೂಲವಾಗುವಂತೆ ಪ್ರಧಾನಿ ಮೋದಿ ಅವರನ್ನು ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

ಈ ಸಂವಹನವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲು ಉದ್ದೇಶಿಸಿರಲಿಲ್ಲ. ಕೇಜ್ರಿವಾಲ್ ಇಂತಹ ಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಸರ್ಕಾರದ ಮೂಲಗಳು ಆರೋಪಿಸಿವೆ.

“ಮೊದಲ ಬಾರಿಗೆ, ಮುಖ್ಯಮಂತ್ರಿಗಳೊಂದಿಗಿನ ಪ್ರಧಾನಮಂತ್ರಿಯವರ ಖಾಸಗಿ ಸಂಭಾಷಣೆಗಳನ್ನು ಪ್ರಸಾರ ಮಾಡಲಾಗುತ್ತಿದೆ. ಕೇಜ್ರಿವಾಲ್ ಅವರ ಸಂಪೂರ್ಣ ಭಾಷಣವು ಯಾವುದೇ ಪರಿಹಾರಕ್ಕಾಗಿ ಅಲ್ಲ, ಆದರೆ ರಾಜಕೀಯವನ್ನು ಮಾಡುವುದು ಮತ್ತು ಜವಾಬ್ದಾರಿಯಿಂದ ತಪ್ಪಿಸುವುದಕ್ಕೆ ಮಾಡಿದ್ದಾರೆ” ಎಂದು ಮೂಲಗಳು ತಿಳಿಸಿವೆ.

“ಇಂದು, ಮುಖ್ಯಮಂತ್ರಿಯವರ ಮಾತುಗಳನ್ನು ನೇರಪ್ರಸಾರ ಮಾಡಲಾಗಿದೆ. ಏಕೆಂದರೆ ಈ ಸಂವಾದವನ್ನು ನೇರ ಹಂಚಿಕೊಳ್ಳಬಾರದು ಎಂದು ಕೇಂದ್ರ ಸರ್ಕಾರದಿಂದ ಯಾವುದೇ ಲಿಖಿತ ಅಥವಾ ಮೌಖಿಕ ಸೂಚನೆ ಬಂದಿರಲಿಲ್ಲ. ಸಭೆಯಲ್ಲಿ ಯಾವುದೇ ಗೌಪ್ಯ ಮಾಹಿತಿಯಿಲ್ಲದ ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳನ್ನು ನೇರವಾಗಿ ಹಂಚಿಕೊಳ್ಳುವಂತಹ ಪರಸ್ಪರ ಕ್ರಿಯೆಗಳು ನಡೆದಿವೆ. ಆದರೂ, ಯಾವುದಾದರೂ ಅನಾನುಕೂಲತೆ ಉಂಟಾಗಿದ್ದರೇ ನಾವು ವಿಷಾದಿಸುತ್ತೇವೆ” ಎಂದು ದೆಹಲಿ ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟನೆ ನೀಡಿದೆ.


ಇದನ್ನೂ ಓದಿ: ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಲ್ಲಿಯವರೆಗೆ ಪತ್ರಿಕಾ ಗೋಷ್ಥಿ ಕರೆದು ವರದಿಗಾರರನ್ನೇ ಎದುರಿಸಿದ ಭಾರತದ ಪ್ರಪ್ರಥಮ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಕೇಜ್ರಿವಾಲ್‌ ಜೊತೆಯ ಮಾತುಕತೆಯ ನೇರ ಪ್ರಸಾರ ಮುಜುಗುರ ಉಂಟುಮಾಡಿರುವುದು ಆಶ್ಚರ್ಯಕರವಲ್ಲ, ಸಹಜವಾದದ್ದು. ವರದಿಗಾರರನ್ನೇ ಎದುರಿಸಿ ಉತ್ತರಿಸಲಾಗದ ಪ್ರಧಾನಿ ಮುಖ್ಯಮಂತ್ರಿಯನ್ನು ಎದುರಿಸಬಲ್ಲ ಎದೆಗಾರಿಕೆ (52″ ಈಗ ಕುಗ್ಗಿರಬೇಕು) ಎಲ್ಲಿದೆ ಹೇಳಿ?

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...