Homeಮುಖಪುಟಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

’ಸಂವಾದವನ್ನು ನೇರ ಹಂಚಿಕೊಳ್ಳಬಾರದು ಎಂದು ಕೇಂದ್ರ ಸರ್ಕಾರದಿಂದ ಯಾವುದೇ ಲಿಖಿತ ಅಥವಾ ಮೌಖಿಕ ಸೂಚನೆ ಬಂದಿರಲಿಲ್ಲ’- ಸಿಎಂ ಕಚೇರಿ

- Advertisement -
- Advertisement -

ದೇಶದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕದ ಎರಡನೇ ಅಲೆಯಿಂದ ಭೀಕರವಾಗಿ ಹಾನಿಗೊಳಗಾಗಿರುವ 11 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಭೆ ನಡೆಸಿದ್ದಾರೆ. ಆದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗಿನ ಚರ್ಚೆಯು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ದೆಹಲಿಯಲ್ಲಿ ಉಂಟಾಗಿರುವ ಆಮ್ಲಜನಕದ ಬಿಕ್ಕಟ್ಟಿನ ಬಗ್ಗೆ ಅರವಿಂದ್ ಕೇಜ್ರಿವಾಲ್ ಮಾತನಾಡುತ್ತಿದ್ದಂತೆ ಅದರ ನೇರ ಪ್ರಸಾರ ಎಲ್ಲ ಟೆಲಿವಿಷನ್‌ಗಳಲ್ಲಿ ಪ್ರಸಾರವಾಗಿದೆ. ಆಂತರಿಕ ಸಭೆ ನೇರ ಪ್ರಸಾರವಾಗುವುದನ್ನು ಪ್ರಧಾನಿ ನರೇಂದ್ರ ಮೋದಿ ಆಕ್ಷೇಪಿಸಿದ್ದಾರೆ, ಇದಕ್ಕೆ ಅರವಿಂದ್ ಕೇಜ್ರಿವಾಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಆದರೆ, ಅರವಿಂದ್ ಕೇಜ್ರಿವಾಲ್ ನಿಯಮಗಳನ್ನು ಮೀರಿದ್ದಾರೆ ಎಂದು ಆರೋಪಿಸಿ ಹಲವು ಬಿಜೆಪಿಗರು ಅವರನ್ನ ಟೀಕಿಸಿದ್ದಾರೆ. ಆಂತರಿಕವಾಗಿ ನಡೆಯಬೇಕಿದ್ದ ಸಭೆಯನ್ನು ಟಿವಿಗಳಲ್ಲಿ ಪ್ರಸಾರ ಮಾಡಿರುವುದರ ಹಿಂದೆ ರಾಜಕೀಯ ಕಾರಣವಿದೆ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ ಸರ್ಕಾರ ಆಮ್ಲಜನಕವನ್ನು ಕದಿಯುತ್ತಿದೆ: ಹರಿಯಾಣ ಆರೋಗ್ಯ ಸಚಿವ ಆರೋಪ

ರಾಜಕೀಯಕ್ಕಾಗಿ ಇಷ್ಟು ಕೇಳಮಟ್ಟಕ್ಕೆ ಇಳಿಯಬಹುದೇ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಟ್ವೀಟ್ ಮಾಡಿದ್ದಾರೆ.

 

ದೆಹಲಿ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ದೊಡ್ಡ ದುರಂತ ಸಂಭವಿಸಬಹುದು. ನಗರಕ್ಕೆ ಪ್ರವೇಶಿಸದಂತೆ ಆಮ್ಲಜನಕ ಟ್ಯಾಂಕರ್‌ಗಳನ್ನು ನಿಲ್ಲಿಸಲಾಗುತ್ತಿದೆ. ದಯವಿಟ್ಟು ಸಹಾಯ ಮಾಡಿ ಎಂದು ಅರವಿಂದ್ ಕೇಜ್ರಿವಾಲ್ ಕೈ ಮುಗಿದು ಕೇಳಿಕೊಂಡಿದ್ದಾರೆ.

“ದೆಹಲಿಯಲ್ಲಿ ಆಮ್ಲಜನಕ ಉತ್ಪಾದಿಸುವ ಸ್ಥಾವರವಿಲ್ಲದಿದ್ದರೆ ದೆಹಲಿಯ ಜನರಿಗೆ ಆಮ್ಲಜನಕ ಸಿಗುವುದಿಲ್ಲವೇ? ದೆಹಲಿಗೆ ಮೀಸಲಾದ ಆಮ್ಲಜನಕ ಟ್ಯಾಂಕರ್‌ಗಳಿಗೆ ಬೇರೆ ರಾಜ್ಯಗಳಲ್ಲಿ ತಡೆಯೊಡ್ಡಿದಾಗ, ನಾನು ಕೇಂದ್ರ ಸರ್ಕಾರದಲ್ಲಿ ಯಾರೊಂದಿಗೆ ಮಾತನಾಡಬೇಕು ಎಂದು ದಯವಿಟ್ಟು ಸೂಚಿಸಿ” ಎಂದು ಪ್ರಶ್ನಿಸಿದ್ದಾರೆ.

ದೆಹಲಿಯ ಆಮ್ಲಜನಕದ ಕೊರತೆಯನ್ನು ಪರಿಹರಿಸಲು ಪಶ್ಚಿಮ ಬಂಗಾಳ ಮತ್ತು ಒಡಿಶಾದಿಂದ ಆಮ್ಲಜನಕದ ವಿಮಾನ ಹಾರಾಟಕ್ಕೆ ಅನುಕೂಲವಾಗುವಂತೆ ಪ್ರಧಾನಿ ಮೋದಿ ಅವರನ್ನು ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

ಈ ಸಂವಹನವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲು ಉದ್ದೇಶಿಸಿರಲಿಲ್ಲ. ಕೇಜ್ರಿವಾಲ್ ಇಂತಹ ಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಸರ್ಕಾರದ ಮೂಲಗಳು ಆರೋಪಿಸಿವೆ.

“ಮೊದಲ ಬಾರಿಗೆ, ಮುಖ್ಯಮಂತ್ರಿಗಳೊಂದಿಗಿನ ಪ್ರಧಾನಮಂತ್ರಿಯವರ ಖಾಸಗಿ ಸಂಭಾಷಣೆಗಳನ್ನು ಪ್ರಸಾರ ಮಾಡಲಾಗುತ್ತಿದೆ. ಕೇಜ್ರಿವಾಲ್ ಅವರ ಸಂಪೂರ್ಣ ಭಾಷಣವು ಯಾವುದೇ ಪರಿಹಾರಕ್ಕಾಗಿ ಅಲ್ಲ, ಆದರೆ ರಾಜಕೀಯವನ್ನು ಮಾಡುವುದು ಮತ್ತು ಜವಾಬ್ದಾರಿಯಿಂದ ತಪ್ಪಿಸುವುದಕ್ಕೆ ಮಾಡಿದ್ದಾರೆ” ಎಂದು ಮೂಲಗಳು ತಿಳಿಸಿವೆ.

“ಇಂದು, ಮುಖ್ಯಮಂತ್ರಿಯವರ ಮಾತುಗಳನ್ನು ನೇರಪ್ರಸಾರ ಮಾಡಲಾಗಿದೆ. ಏಕೆಂದರೆ ಈ ಸಂವಾದವನ್ನು ನೇರ ಹಂಚಿಕೊಳ್ಳಬಾರದು ಎಂದು ಕೇಂದ್ರ ಸರ್ಕಾರದಿಂದ ಯಾವುದೇ ಲಿಖಿತ ಅಥವಾ ಮೌಖಿಕ ಸೂಚನೆ ಬಂದಿರಲಿಲ್ಲ. ಸಭೆಯಲ್ಲಿ ಯಾವುದೇ ಗೌಪ್ಯ ಮಾಹಿತಿಯಿಲ್ಲದ ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳನ್ನು ನೇರವಾಗಿ ಹಂಚಿಕೊಳ್ಳುವಂತಹ ಪರಸ್ಪರ ಕ್ರಿಯೆಗಳು ನಡೆದಿವೆ. ಆದರೂ, ಯಾವುದಾದರೂ ಅನಾನುಕೂಲತೆ ಉಂಟಾಗಿದ್ದರೇ ನಾವು ವಿಷಾದಿಸುತ್ತೇವೆ” ಎಂದು ದೆಹಲಿ ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟನೆ ನೀಡಿದೆ.


ಇದನ್ನೂ ಓದಿ: ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಲ್ಲಿಯವರೆಗೆ ಪತ್ರಿಕಾ ಗೋಷ್ಥಿ ಕರೆದು ವರದಿಗಾರರನ್ನೇ ಎದುರಿಸಿದ ಭಾರತದ ಪ್ರಪ್ರಥಮ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಕೇಜ್ರಿವಾಲ್‌ ಜೊತೆಯ ಮಾತುಕತೆಯ ನೇರ ಪ್ರಸಾರ ಮುಜುಗುರ ಉಂಟುಮಾಡಿರುವುದು ಆಶ್ಚರ್ಯಕರವಲ್ಲ, ಸಹಜವಾದದ್ದು. ವರದಿಗಾರರನ್ನೇ ಎದುರಿಸಿ ಉತ್ತರಿಸಲಾಗದ ಪ್ರಧಾನಿ ಮುಖ್ಯಮಂತ್ರಿಯನ್ನು ಎದುರಿಸಬಲ್ಲ ಎದೆಗಾರಿಕೆ (52″ ಈಗ ಕುಗ್ಗಿರಬೇಕು) ಎಲ್ಲಿದೆ ಹೇಳಿ?

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...