Homeಮುಖಪುಟಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

’ಸಂವಾದವನ್ನು ನೇರ ಹಂಚಿಕೊಳ್ಳಬಾರದು ಎಂದು ಕೇಂದ್ರ ಸರ್ಕಾರದಿಂದ ಯಾವುದೇ ಲಿಖಿತ ಅಥವಾ ಮೌಖಿಕ ಸೂಚನೆ ಬಂದಿರಲಿಲ್ಲ’- ಸಿಎಂ ಕಚೇರಿ

- Advertisement -
- Advertisement -

ದೇಶದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕದ ಎರಡನೇ ಅಲೆಯಿಂದ ಭೀಕರವಾಗಿ ಹಾನಿಗೊಳಗಾಗಿರುವ 11 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಭೆ ನಡೆಸಿದ್ದಾರೆ. ಆದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗಿನ ಚರ್ಚೆಯು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ದೆಹಲಿಯಲ್ಲಿ ಉಂಟಾಗಿರುವ ಆಮ್ಲಜನಕದ ಬಿಕ್ಕಟ್ಟಿನ ಬಗ್ಗೆ ಅರವಿಂದ್ ಕೇಜ್ರಿವಾಲ್ ಮಾತನಾಡುತ್ತಿದ್ದಂತೆ ಅದರ ನೇರ ಪ್ರಸಾರ ಎಲ್ಲ ಟೆಲಿವಿಷನ್‌ಗಳಲ್ಲಿ ಪ್ರಸಾರವಾಗಿದೆ. ಆಂತರಿಕ ಸಭೆ ನೇರ ಪ್ರಸಾರವಾಗುವುದನ್ನು ಪ್ರಧಾನಿ ನರೇಂದ್ರ ಮೋದಿ ಆಕ್ಷೇಪಿಸಿದ್ದಾರೆ, ಇದಕ್ಕೆ ಅರವಿಂದ್ ಕೇಜ್ರಿವಾಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಆದರೆ, ಅರವಿಂದ್ ಕೇಜ್ರಿವಾಲ್ ನಿಯಮಗಳನ್ನು ಮೀರಿದ್ದಾರೆ ಎಂದು ಆರೋಪಿಸಿ ಹಲವು ಬಿಜೆಪಿಗರು ಅವರನ್ನ ಟೀಕಿಸಿದ್ದಾರೆ. ಆಂತರಿಕವಾಗಿ ನಡೆಯಬೇಕಿದ್ದ ಸಭೆಯನ್ನು ಟಿವಿಗಳಲ್ಲಿ ಪ್ರಸಾರ ಮಾಡಿರುವುದರ ಹಿಂದೆ ರಾಜಕೀಯ ಕಾರಣವಿದೆ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ ಸರ್ಕಾರ ಆಮ್ಲಜನಕವನ್ನು ಕದಿಯುತ್ತಿದೆ: ಹರಿಯಾಣ ಆರೋಗ್ಯ ಸಚಿವ ಆರೋಪ

ರಾಜಕೀಯಕ್ಕಾಗಿ ಇಷ್ಟು ಕೇಳಮಟ್ಟಕ್ಕೆ ಇಳಿಯಬಹುದೇ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಟ್ವೀಟ್ ಮಾಡಿದ್ದಾರೆ.

 

ದೆಹಲಿ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ದೊಡ್ಡ ದುರಂತ ಸಂಭವಿಸಬಹುದು. ನಗರಕ್ಕೆ ಪ್ರವೇಶಿಸದಂತೆ ಆಮ್ಲಜನಕ ಟ್ಯಾಂಕರ್‌ಗಳನ್ನು ನಿಲ್ಲಿಸಲಾಗುತ್ತಿದೆ. ದಯವಿಟ್ಟು ಸಹಾಯ ಮಾಡಿ ಎಂದು ಅರವಿಂದ್ ಕೇಜ್ರಿವಾಲ್ ಕೈ ಮುಗಿದು ಕೇಳಿಕೊಂಡಿದ್ದಾರೆ.

“ದೆಹಲಿಯಲ್ಲಿ ಆಮ್ಲಜನಕ ಉತ್ಪಾದಿಸುವ ಸ್ಥಾವರವಿಲ್ಲದಿದ್ದರೆ ದೆಹಲಿಯ ಜನರಿಗೆ ಆಮ್ಲಜನಕ ಸಿಗುವುದಿಲ್ಲವೇ? ದೆಹಲಿಗೆ ಮೀಸಲಾದ ಆಮ್ಲಜನಕ ಟ್ಯಾಂಕರ್‌ಗಳಿಗೆ ಬೇರೆ ರಾಜ್ಯಗಳಲ್ಲಿ ತಡೆಯೊಡ್ಡಿದಾಗ, ನಾನು ಕೇಂದ್ರ ಸರ್ಕಾರದಲ್ಲಿ ಯಾರೊಂದಿಗೆ ಮಾತನಾಡಬೇಕು ಎಂದು ದಯವಿಟ್ಟು ಸೂಚಿಸಿ” ಎಂದು ಪ್ರಶ್ನಿಸಿದ್ದಾರೆ.

ದೆಹಲಿಯ ಆಮ್ಲಜನಕದ ಕೊರತೆಯನ್ನು ಪರಿಹರಿಸಲು ಪಶ್ಚಿಮ ಬಂಗಾಳ ಮತ್ತು ಒಡಿಶಾದಿಂದ ಆಮ್ಲಜನಕದ ವಿಮಾನ ಹಾರಾಟಕ್ಕೆ ಅನುಕೂಲವಾಗುವಂತೆ ಪ್ರಧಾನಿ ಮೋದಿ ಅವರನ್ನು ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

ಈ ಸಂವಹನವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲು ಉದ್ದೇಶಿಸಿರಲಿಲ್ಲ. ಕೇಜ್ರಿವಾಲ್ ಇಂತಹ ಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಸರ್ಕಾರದ ಮೂಲಗಳು ಆರೋಪಿಸಿವೆ.

“ಮೊದಲ ಬಾರಿಗೆ, ಮುಖ್ಯಮಂತ್ರಿಗಳೊಂದಿಗಿನ ಪ್ರಧಾನಮಂತ್ರಿಯವರ ಖಾಸಗಿ ಸಂಭಾಷಣೆಗಳನ್ನು ಪ್ರಸಾರ ಮಾಡಲಾಗುತ್ತಿದೆ. ಕೇಜ್ರಿವಾಲ್ ಅವರ ಸಂಪೂರ್ಣ ಭಾಷಣವು ಯಾವುದೇ ಪರಿಹಾರಕ್ಕಾಗಿ ಅಲ್ಲ, ಆದರೆ ರಾಜಕೀಯವನ್ನು ಮಾಡುವುದು ಮತ್ತು ಜವಾಬ್ದಾರಿಯಿಂದ ತಪ್ಪಿಸುವುದಕ್ಕೆ ಮಾಡಿದ್ದಾರೆ” ಎಂದು ಮೂಲಗಳು ತಿಳಿಸಿವೆ.

“ಇಂದು, ಮುಖ್ಯಮಂತ್ರಿಯವರ ಮಾತುಗಳನ್ನು ನೇರಪ್ರಸಾರ ಮಾಡಲಾಗಿದೆ. ಏಕೆಂದರೆ ಈ ಸಂವಾದವನ್ನು ನೇರ ಹಂಚಿಕೊಳ್ಳಬಾರದು ಎಂದು ಕೇಂದ್ರ ಸರ್ಕಾರದಿಂದ ಯಾವುದೇ ಲಿಖಿತ ಅಥವಾ ಮೌಖಿಕ ಸೂಚನೆ ಬಂದಿರಲಿಲ್ಲ. ಸಭೆಯಲ್ಲಿ ಯಾವುದೇ ಗೌಪ್ಯ ಮಾಹಿತಿಯಿಲ್ಲದ ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳನ್ನು ನೇರವಾಗಿ ಹಂಚಿಕೊಳ್ಳುವಂತಹ ಪರಸ್ಪರ ಕ್ರಿಯೆಗಳು ನಡೆದಿವೆ. ಆದರೂ, ಯಾವುದಾದರೂ ಅನಾನುಕೂಲತೆ ಉಂಟಾಗಿದ್ದರೇ ನಾವು ವಿಷಾದಿಸುತ್ತೇವೆ” ಎಂದು ದೆಹಲಿ ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟನೆ ನೀಡಿದೆ.


ಇದನ್ನೂ ಓದಿ: ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಲ್ಲಿಯವರೆಗೆ ಪತ್ರಿಕಾ ಗೋಷ್ಥಿ ಕರೆದು ವರದಿಗಾರರನ್ನೇ ಎದುರಿಸಿದ ಭಾರತದ ಪ್ರಪ್ರಥಮ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಕೇಜ್ರಿವಾಲ್‌ ಜೊತೆಯ ಮಾತುಕತೆಯ ನೇರ ಪ್ರಸಾರ ಮುಜುಗುರ ಉಂಟುಮಾಡಿರುವುದು ಆಶ್ಚರ್ಯಕರವಲ್ಲ, ಸಹಜವಾದದ್ದು. ವರದಿಗಾರರನ್ನೇ ಎದುರಿಸಿ ಉತ್ತರಿಸಲಾಗದ ಪ್ರಧಾನಿ ಮುಖ್ಯಮಂತ್ರಿಯನ್ನು ಎದುರಿಸಬಲ್ಲ ಎದೆಗಾರಿಕೆ (52″ ಈಗ ಕುಗ್ಗಿರಬೇಕು) ಎಲ್ಲಿದೆ ಹೇಳಿ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...