Homeಮುಖಪುಟಮಾಂಸಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ; ವೈಯಕ್ತಿಕ ಟೀಕೆಗಿಳಿದ ಮೋದಿ

ಮಾಂಸಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ; ವೈಯಕ್ತಿಕ ಟೀಕೆಗಿಳಿದ ಮೋದಿ

- Advertisement -
- Advertisement -

‘ಶ್ರಾವಣ ಮಾಸದಲ್ಲಿ ಕುರಿ ಮಾಂಸ ತಿಂದಿದ್ದಾರೆ’ ಎಂಬ ಕಾರಣಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಮೊಘಲರಿಗೆ ಹೋಲಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ವೈಯಕ್ತಿಯ ವಿಚಾರಗಳನ್ನು ಇಟ್ಟುಕೊಂಡು ಟೀಕೆ ಮಾಡುತ್ತಿದ್ದಾರೆ.

‘ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ದೇಶದಾದ್ಯಂತ ಜಾತಿ ಗಣತಿ ನಡೆಸುತ್ತೇವೆ’ ಎಂಬ ಕಾಂಗ್ರೆಸ್ ಭರವಸೆಯನ್ನು ಮುಸ್ಲಿಂ ಲೀಗ್‌ ಚಿಂತನೆಗಳಿಗೆ ಹೋಲಿಸಿದ್ದ ಪ್ರಧಾನಿ ಮೋದಿ, ಇದೀಗ ರಾಹುಲ್ ಮತ್ತು ಲಾಲು ಅವರ ಆಹಾರ ಸಂಸ್ಕೃತಿಯನ್ನೂ ತಮ್ಮ ಚುನಾವಣಾ ಪ್ರಚಾರದ ವೇದಿಕೆಗಳಲ್ಲಿ ಟೀಕಿಸಿದ್ದಾರೆ.

‘ಶ್ರಾವಣ ಮಾಸದಲ್ಲಿ ಕುರಿ ಮಾಂಸ ತಿಂದಿದ್ದಾರೆ; ಅವರು  ಬಹುಸಂಖ್ಯಾತರ ಭಾವನೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ’ ಎಂದು ಇಬ್ಬರು ನಾಯಕರ ಹೆಸರನ್ನು ನೇರವಾಗಿ ಹೇಳದೆ ಟೀಕೆ ಮಾಡಿರುವ ಮೋದಿ, ಇಬ್ಬರನ್ನೂ ಮೊಘಲರೊಂದಿಗೆ ಹೋಲಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾದ, ರಾಹುಲ್ ಮತ್ತು ಲಾಲು ಅವರು ಅಡುಗೆ ಮಾಡುವ ವೀಡಿಯೊ ಸಾಕಷ್ಟು ವೈರಲ್ ಆಗಿತ್ತು.

“ಕಾಂಗ್ರೆಸ್ ಮತ್ತು ಇಂಡಿಯಾ ಮುಖಂಡರು ದೇಶದ ಬಹುಪಾಲು ಜನರ ಭಾವನೆಗಳ ಬಗ್ಗೆ ಕಾಳಜಿ ವಹಿಸುವುದಿಲ್ಲ. ಅವರು ಜನರ ಭಾವನೆಗಳೊಂದಿಗೆ ಆಟವಾಡುವುದನ್ನು ಆನಂದಿಸುತ್ತಾರೆ. ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದ ಮತ್ತು ಜಾಮೀನಿನ ಮೇಲೆ ಇರುವ ವ್ಯಕ್ತಿ ಅವರು, ಅಂತಹ ಅಪರಾಧಿಯ ಮನೆಗೆ ಭೇಟಿ ನೀಡುತ್ತಾರೆ ಮತ್ತು ಶ್ರಾವಣ ಮಾಸದಲ್ಲಿ ಕುರಿ ಮಾಂಸವನ್ನು ಬೇಯಿಸುತ್ತಾರೆ. ದೇಶದ ಜನರನ್ನು ಕೀಟಲೆ ಮಾಡಲು ಅವರು ಅದನ್ನು ವೀಡಿಯೊ ಮಾಡುತ್ತಾರೆ” ಎಂದು ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದರು.

“ಈ ಜನರ ಉದ್ದೇಶಗಳು ದೇಶದ ಜನರನ್ನು ಮೊಘಲರಂತೆಯೇ ಕೀಟಲೆ ಮಾಡುವುದು. ಕಾನೂನು ಯಾರನ್ನೂ ತಿನ್ನುವುದನ್ನು ತಡೆಯುವುದಿಲ್ಲ. ಆದರೆ, ಈ ಜನರ ಉದ್ದೇಶಗಳು ಬೇರೇನೋ, ಮೊಘಲರು ಇಲ್ಲಿ ದಾಳಿ ಮಾಡಿದಾಗ, ಅವರು ದೇವಾಲಯಗಳನ್ನು ಕೆಡವುವವರೆಗೂ ಅವರು ತೃಪ್ತಿ ಹೊಂದಲಿಲ್ಲ, ಅವರು ಮೊಘಲರಂತೆಯೇ, ಶ್ರಾವಣ ಮಾಸದಲ್ಲಿ ವೀಡಿಯೋ ತೋರಿಸುವ ಮೂಲಕ ದೇಶದ ಜನರನ್ನು ಲೇವಡಿ ಮಾಡಲು ಬಯಸುತ್ತಾರೆ” ಎಂದು ಟೀಕಿಸಿದ್ದಾರೆ.

ಅಯೋಧ್ಯೆ ರಾಮನ ಮಂದಿರದ ವಿಚಾರವಾಗಿಯೂ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. “ಬಿಜೆಪಿಗೆ ರಾಮಮಂದಿರ ಚುನಾವಣಾ ವಿಷಯ ಎಂದು ಕಾಂಗ್ರೆಸ್ ಹೇಳುತ್ತಿದೆ, ರಾಮಮಂದಿರ ಎಂದಿಗೂ ಚುನಾವಣಾ ವಿಷಯವಾಗಿರಲಿಲ್ಲ. ಚುನಾವಣಾ ವಿಷಯವೂ ಆಗುವುದಿಲ್ಲ ಎಂದು ನಾನು ಹೇಳಬಯಸುತ್ತೇನೆ. ಬಿಜೆಪಿ ಹುಟ್ಟುವ ಮೊದಲೇ ರಾಮಮಂದಿರಕ್ಕಾಗಿ ಹೋರಾಟ ನಡೆಯುತ್ತಿತ್ತು. ವಿದೇಶಿ ಆಕ್ರಮಣಕಾರರು ನಮ್ಮ ದೇವಾಲಯಗಳನ್ನು ನಾಶಪಡಿಸಿದಾಗ, ಭಾರತದ ಜನರು ತಮ್ಮ ಧಾರ್ಮಿಕ ಸ್ಥಳಗಳನ್ನು ಉಳಿಸಲು ಹೋರಾಡಿದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ನಾಯಕರು ದೊಡ್ಡ ಬಂಗಲೆಗಳಲ್ಲಿ ವಾಸಿಸುತ್ತಿದ್ದರು. ಆದರೆ, ರಾಮ್ ಲಲ್ಲಾನ ಡೇರೆಯನ್ನು ಬದಲಾಯಿಸುವ ವಿಷಯ ಬಂದಾಗ ಅವರು ಬೆನ್ನು ತಿರುಗಿಸುತ್ತಿದ್ದರು” ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರಳಿ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿ, ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡಡೆಯುವ ದಿನಗಳು ದೂರವಿಲ್ಲ ಎಂದರು.

ಇದನ್ನೂ ಓದಿ; ‘ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಪ್ರಯತ್ನಿಸುತ್ತಿದೆ..’; ಆತಂಕ ವ್ಯಕ್ತಪಡಿಸಿದ ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...