Homeಮುಖಪುಟಮಣಿಪುರ ಹಿಂಸಾಚಾರ ಕುರಿತು ಸಂಸತ್ತಿನಲ್ಲಿ ಮಾತನಾಡದ ಪ್ರಧಾನಿ: ಮುಂದುವರೆದ ಪ್ರತಿಪಕ್ಷಗಳ ಪ್ರತಿಭಟನೆ

ಮಣಿಪುರ ಹಿಂಸಾಚಾರ ಕುರಿತು ಸಂಸತ್ತಿನಲ್ಲಿ ಮಾತನಾಡದ ಪ್ರಧಾನಿ: ಮುಂದುವರೆದ ಪ್ರತಿಪಕ್ಷಗಳ ಪ್ರತಿಭಟನೆ

- Advertisement -
- Advertisement -

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕು ಎಂಬ ಬೇಡಿಕೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದು, ಸತತ ನಾಲ್ಕನೇ ದಿನವೂ ಸಂಸತ್ತಿನಲ್ಲಿ ಕಲಾಪ ಪ್ರತಿಭಟನೆಯಲ್ಲಿಯೇ ಮುಂದುವರೆದಿದೆ.

ಸದನದ ಕಲಾಪದಲ್ಲಿ ಈಶಾನ್ಯ ರಾಜ್ಯದ ಪರಿಸ್ಥಿತಿ ಕುರಿತು ಚರ್ಚಿಸಬೇಕು ಎಂದು ಸಭಾಪತಿ ಜಗದೀಪ್ ಧನಕರ್ ಅವರಿಗೆ 50 ನೋಟಿಸ್‌ಗಳನ್ನು ನೀಡಲಾಯಿತು. ಆನಂತರ ರಾಜ್ಯಸಭೆಯನ್ನು ಮಧ್ಯಾಹ್ನ 12ಗಂಟೆಗೆ ಸದನವನ್ನು ಮುಂದೂಡಲಾಯಿತು.

ಲೋಕಸಭೆಯ ಕಲಾಪದಲ್ಲೂ ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟಿಸಿದ್ದಕ್ಕೆ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ಮೇ 3ರಿಂದ ಮಣಿಪುರದಲ್ಲಿ ಕುಕಿಗಳು ಮತ್ತು ಮೈತಿ ಸಮುದಾಯಗಳ ನಡುವೆ ಆರಂಭವಾಗಿ, ಇಡೀ ರಾಜ್ಯ ಹೊತ್ತಿಯುರಿಯುತ್ತಿದೆ. ಈ ಹಿಂಸಾಚಾರದಲ್ಲಿ ಈವರೆಗೂ 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಕಳೆದ ವಾರ ಇಬ್ಬರು ಕುಕಿ ಮಹಿಳೆಯರನ್ನು ಬೆತ್ತಲೆಯಾಗಿಸಿ ಮೆರವಣಿಗೆ ಮಾಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಆ ಬಳಿಕ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದವು.

ಇದನ್ನೂ ಓದಿ: ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಏಳನೇ ಆರೋಪಿ ಬಂಧನ

ಮಂಗಳವಾರ, INDIA ಮೈತ್ರಿಕೂಟದ ಭಾಗವಾಗಿರುವ ಕೆಲವು ವಿರೋಧ ಪಕ್ಷಗಳು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಸಭೆ ನಡೆಸಿದರು. ವರದಿಗಳ ಪ್ರಕಾರ ಅವರು ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದ್ದಾರೆ.

”ನಮ್ಮ ಹಲವಾರು ಮನವಿಗಳ ಹೊರತಾಗಿಯೂ, ಮಣಿಪುರದ ಬೆಳವಣಿಗೆಗಳು ಮತ್ತು ಕೇಂದ್ರದ ಕ್ರಮಗಳ ಬಗ್ಗೆ ಹೇಳಿಕೆ ನೀಡಲು ಮೋದಿ ನಿರಾಕರಿಸಿದ್ದಾರೆ. ಪ್ರಧಾನಿ ಪರಿಸ್ಥಿತಿಯ ಬಗ್ಗೆ ಹೇಳಿಕೆ ನೀಡುವಂತೆ ಒತ್ತಾಯಿಸಲು ಇದು [ಅವಿಶ್ವಾಸ ನಿರ್ಣಯ] ನಮಗೆ ಲಭ್ಯವಿರುವ ಏಕೈಕ ಸಂಸದೀಯ ಸಾಧನವಾಗಿದೆ” ಎಂದು ಹೆಸರು ಹೇಳಲಿಚ್ಚಿಸದ ವಿರೋಧ ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ಶಶಿ ತರೂರ್, ”ಮಣಿಪುರವು ”ತೀವ್ರ ಬಿಕ್ಕಟ್ಟಿನಿಂದ” ಬಳಲುತ್ತಿದೆ ಮತ್ತು ಮೋದಿಯವರಿಗೆ ಆ ವಿಚಾರಕ್ಕಿಂತ ಹೆಚ್ಚು ಮಹತ್ವದ ವಿಷಯ ಬೇರೆ ಇರಲು ಸಾಧ್ಯವಿಲ್ಲ” ಎಂದು ಹೇಳಿದರು.

”ಭೀಕರ ಪ್ರಾಣಹಾನಿ ಸಂಭವಿಸಿದೆ… ಅತ್ಯಾಚಾರಗಳು ಮತ್ತು ಹಿಂಸಾಚಾರಗಳು ಮತ್ತು ಸ್ಥಳಾಂತರಗಳು ನಡೆದಿವೆ. ಈ ವಿಚಾರಗಳು ಕಾಡ್ಗಿಚ್ಚಿನಂತೆ ಎಲ್ಲೆಡೆ ಹರಡುತ್ತಿದೆ. ಈಗಾಗಲೇ ಮಿಜೋರಾಂನಲ್ಲಿ ಹಿನ್ನಡೆ ಉಂಟಾಗಿದೆ ಮತ್ತು ಮೈತಿಗಳು ರಾಜ್ಯದಿಂದ ಪಲಾಯನ ಮಾಡುತ್ತಿದ್ದಾರೆ.” ಎಂದು ಅವರು ಹೇಳಿದ್ದಾರೆ.

”ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಂಸತ್ತಿನಲ್ಲಿ ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ಅಪರಾಧಗಳನ್ನು ಎತ್ತಿ ತೋರಿಸಿದರು. ಈ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಬೇಕು” ಎಂದು ತರೂರ್ ಹೇಳಿದರು.

ಮಣಿಪುರ ರಾಜ್ಯದಲ್ಲಿ ಸುಮಾರು 80 ದಿನಗಳಿಂದ ಹಿಂಸಾಚಾರ ನಡೆಯುತ್ತಿದ್ದರೂ ಕೂಡ ಪ್ರಧಾನಿ ಮೋದಿ ಮೌನವಾಗಿದ್ದರು. ಆದರೆ ಲೈಂಗಿಕ ದೌರ್ಜನ್ಯದ ಬಗ್ಗೆ ದೇಶದ್ಯಂತ ಆಕ್ರೋಶ ಹೆಚ್ಚಾದ ಬಳಿಕ ಜುಲೈ 20ರಂದು ಅವರು ಮಣಿಪುರದ ವಿಚಾರದಲ್ಲಿ ಮೌನ ಮುರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...