Homeಮುಖಪುಟಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ!

ಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ!

ಪ್ರಧಾನ್‌ಮಂತ್ರಿ ಆವಾಸ್ ಯೋಜನಾ ಹಲವು ಕುಖ್ಯಾತ ಕಳ್ಳರ ಪಾಲಿಗೆ ಹುಲ್ಲುಗಾವಲು ಆಗಿತ್ತು ಎಂಬುದಕ್ಕೆ ಈಗ ಬೆಳಕಿಗೆ ಬಂದಿರುವ 14 ಸಾವಿರ ಕೋಟಿ ರೂ ಹಗರಣವೇ ಸಾಕ್ಷಿಯಾಗಿದೆ.

- Advertisement -
- Advertisement -

ಇತ್ತೀಚೆಗೆ ಫೆಬ್ರುವರಿ 25ರಂದು ‘ಆತ್ಮನಿರ್ಭರ್ ಬಂಗಾಳ’ ಹೆಸರಿನಲ್ಲಿ ಪ್ರಕಟವಾದ ಜಾಹಿರಾತಿನಲ್ಲಿ ಪ್ರಧಾನಿ ಚಿತ್ರದೊಂದಿಗೆ ಕಾಣಿಸಿಕೊಂಡಿದ್ದ ಬಂಗಾಳದ ಮಹಿಳೆ ಲಕ್ಷ್ಮಿದೇವಿ ಎಂಬುವವರು, ‘ಪಿಎಂ ವಸತಿ ಯೋಜನೆಯಿಂದಾಗಿ ತಲೆ ಮೇಲೊಂದು ಸೂರು ಸಿಕ್ಕಿತು’ ಎಂದು ಹೇಳಿದ್ದರು. ಆದರೆ ವಾಸ್ತವವಾಗಿ ಅವರು ಇರುವುದು ಒಂದು ಸಾದಾ ಬಾಡಿಗೆ ಮನೆಯಲ್ಲಿ!
ಪ್ರಧಾನ್‌ಮಂತ್ರಿ ಆವಾಸ್ ಯೋಜನಾ ಹಲವು ಕುಖ್ಯಾತ ಕಳ್ಳರ ಪಾಲಿಗೆ ಹುಲ್ಲುಗಾವಲು ಆಗಿತ್ತು ಎಂಬುದಕ್ಕೆ ಈಗ ಬೆಳಕಿಗೆ ಬಂದಿರುವ 14 ಸಾವಿರ ಕೋಟಿ ರೂ ಹಗರಣವೇ ಸಾಕ್ಷಿಯಾಗಿದೆ.

ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ)ಗೆ ಸಂಬಂಧಿಸಿದ ಹಗರಣವನ್ನು ಸಿಬಿಐ ಬುಧವಾರ ಪತ್ತೆ ಹಚ್ಚಿದೆ. ಈಗಾಗಲೇ ಬಿಕ್ಕಟ್ಟಿನಲ್ಲಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (ಡಿಎಚ್‌ಎಫ್‌ಎಲ್) ನ ಪ್ರವರ್ತಕರು ಈ ಹಗರಣದ ಸೃಷ್ಟಿಕರ್ತರು ಮತ್ತು ಫಲಾನುಭವಿಗಳು ಎಂಬ ಸತ್ಯ ಹೊರಬಿದ್ದಿದೆ.

ವಂಚನೆ ಮತ್ತು ಹಣದ ಪ್ರಕರಣದಲ್ಲಿ ಜೈಲಿನಲ್ಲಿರುವ ಸಹೋದರರಾದ ಕಪಿಲ್ ಮತ್ತು ಧೀರಜ್ ವಾಧ್ವಾನ್ ವಸತಿ ಯೋಜನೆಯಲ್ಲಿ ’14 ಸಾವಿರ ಕೋಟಿ’ ನುಂಗಿದ ಫಲಾನುಭವಿಗಳಾಗಿದ್ದಾರೆ.

ಸಿಬಿಐ ಪ್ರಕಾರ, ಕಪಿಲ್ ಮತ್ತು ಧೀರಜ್ ವಾಧ್ವಾನ್ “ನಕಲಿ ಮತ್ತು ಕಾಲ್ಪನಿಕ” ಗೃಹ ಸಾಲ ಖಾತೆಗಳನ್ನು ಸೃಷ್ಟಿಸಿ ಭಾರತ ಸರ್ಕಾರದಿಂದ 1,880 ಕೋಟಿ ಬಡ್ಡಿ ಸಹಾಯಧನವನ್ನು ಪಡೆದಿದ್ದಾರೆ.

ಎಲ್ಲರಿಗೂ ವಸತಿ ಖಾತ್ರಿಪಡಿಸುವ ಕೇಂದ್ರ ಯೋಜನೆ ಪಿಎಂಎವೈ ಅನ್ನು ಅಕ್ಟೋಬರ್ 2015 ರಲ್ಲಿ ಘೋಷಿಸಲಾಯಿತು. ಯೋಜನೆಯಡಿಯಲ್ಲಿ ಆರ್ಥಿಕ ದುರ್ಬಲ ವಿಭಾಗಗಳ (ಇಡಬ್ಲ್ಯೂಎಸ್) ಮತ್ತು ಕಡಿಮೆ ಮತ್ತು ಮಧ್ಯಮ ಆದಾಯದ ಗುಂಪುಗಳಿಗೆ ನೀಡಲಾಗುವ ವಸತಿ ಸಾಲಗಳು ಕ್ರೆಡಿಟ್-ಸಂಬಂಧಿತ ಬಡ್ಡಿ ಸಹಾಯಧನಕ್ಕೆ ಅರ್ಹವಾಗಿವೆ.

ಈ ಸಾಲಗಳನ್ನು ಮಂಜೂರು ಮಾಡಿದ ಡಿಎಚ್‌ಎಫ್‌ಎಲ್‌ನಂತಹ ಹಣಕಾಸು ಸಂಸ್ಥೆಗಳಿಂದ ಸಬ್ಸಿಡಿಯನ್ನು ಪಡೆಯಬೇಕು. ಸಿಬಿಐ ಪ್ರಕಾರ, 2018 ರ ಡಿಸೆಂಬರ್‌ನಲ್ಲಿ ಡಿಎಚ್‌ಎಫ್‌ಎಲ್ ಹೂಡಿಕೆದಾರರಿಗೆ ಪಿಎಂಎವೈ ಅಡಿಯಲ್ಲಿ 88,651 ಸಾಲಗಳನ್ನು ಪ್ರಕ್ರಿಯೆಗೊಳಿಸಿದೆ ಮತ್ತು 539.4 ಕೋಟಿ ರೂ. ಸಬ್ಸಿಡಿಗಳನ್ನು ಪಡೆದುಕೊಂಡಿದೆ ಮತ್ತು ಇನ್ನೂ 1,347.8 ಕೋಟಿ ರೂ ಬಾಕಿ ಇದೆ ಎಂದು ಹೇಳಿಕೊಂಡಿದೆ.

2007-19ರ ನಡುವೆ ಡಿಎಚ್‌ಎಫ್‌ಎಲ್‌ನ ಕಪಿಲ್ ಮತ್ತು ಧೀರಜ್ ವಾಧ್ವಾನ್ ಅವರು ಮುಂಬೈನ ಅಸ್ತಿತ್ವದಲ್ಲೇ ಇಲ್ಲದ ಬಾಂದ್ರಾ ಶಾಖೆಯಲ್ಲಿ 2.6 ಲಕ್ಷ ನಕಲಿ ವಸತಿ ಸಾಲ ಖಾತೆಗಳನ್ನು ತೆರೆದಿದ್ದಾರೆ.

2007 ಮತ್ತು 2019 ರ ನಡುವೆ ಈ ಖಾತೆಗಳಿಗೆ 14,046 ಕೋಟಿ ಮೊತ್ತದ ವಸತಿ ಸಾಲಗಳನ್ನು ಈ ಖಾತೆಗಳಿಗೆ ಮಂಜೂರು ಮಾಡಲಾಗಿದೆ ಎಂದು ತೋರಿಸಲಾಗಿದೆ. ಅದರಲ್ಲಿ 11,755.79 ರೂ.ಗಳನ್ನು ಅನ್ನು ಇತರ ಕಾಲ್ಪನಿಕ ಸಂಸ್ಥೆಗಳಿಗೆ ರವಾನಿಸಲಾಗಿದೆ. ಈ ಮೊತ್ತವನ್ನು ಪಿಎಂ ವಸತಿ ಯೋಜನೆಯಲ್ಲಿ ನೀಡಲಾದ ಸಾಲಗಳು ಎಂದು ನಮೂದಿಸಿ, ಸಬ್ಸಿಡಿ ಹಣವನ್ನು ಗುಳುಂ ಮಾಡಲಾಗಿದೆ. ಈ ನಕಲಿ ಗೃಹಸಾಲ ವಿತರಣೆಗಾಗಿ ಈಗಾಗಲೇ ಡಿಎಚ್‌ಎಫ್‌ಎಲ್ 539.40 ಕೋಟಿ ರೂ ಬಡ್ಡಿ ಸಬ್ಸಿಡಿ ಪಡೆದುಕೊಂಡಿದೆ. ಇನ್ನೂ 1,347.80 ಕೋಟಿ ರೂ ಸಬ್ಸಿಡಿಗಾಗಿ ಕಾದು ಕೂತಿದೆ. ಒಟ್ಟು 1,887.20 ಕೋಟಿ ರೂ. ಸಬ್ಸಿಡಿ ಹಣ ಅದಕ್ಕೆ ದಕ್ಕಲಿದೆ. ಎಲ್ಲವೂ ಭಾರತ ಸರ್ಕಾರದ ಕೃಪೆ ಎಂಬ ಆರೋಪ ಕೇಳಿಬಂದಿದೆ.

ಇದಕ್ಕಾಗಿ ವಾಧ್ವಾನ್ ಸಹೋದರರು ಸರ್ಕಾರದ ನ್ಯಾಷನಲ್ ಹೌಸಿಂಗ್ ಬ್ಯಾಂಕ್‌ನ ಕೆಲವರೊಂದಿಗೆ ಶಾಮೀಲಾಗಿ ಈ ಕೃತ್ಯ ಎಸಗಿದ್ದಾರೆ. ಡಿಎಚ್‌ಎಫ್‌ಎಲ್‌ನಂತಹ ಕಂಪನಿಗಳು ವಸತಿ ಸಾಲ ನೀಡುತ್ತವೆ. ಸರ್ಕಾರದ ಸಬ್ಸಿಡಿ ಹಣವು ಅವುಗಳಿಗೆ ಪಾವತಿಯಾಗುತ್ತದೆ. ಆದರೆ ಫೇಕ್ ಅಕೌಂಟುಗಳನ್ನು ತೆರೆದ ಡಿಎಚ್‌ಎಫ್‌ಎಲ್ ತೆರಿಗೆದಾರರ ಹಣವನ್ನು ಸಬ್ಸಿಡಿ ರೂಪದಲ್ಲಿ ನುಂಗಿ ಕುಳಿತಿದೆ. ಹೀಗಾಗಿ ಕೊಲ್ಕೊತ್ತದ ಲಕ್ಷ್ಮಿದೇವಿಯಂತಹವರಿಗೆ ಮನೆ ಎಂಬುದು ಮರೀಚಿಕೆಯಾಗಿಯೇ ಉಳಿಯುತ್ತದೆ.

ಪಕ್ಕಾ ವಂಚಕರು!

ಕಳೆದ ವರ್ಷ ಜೂನ್‌ನಲ್ಲಿ ಸಿಬಿಐ ವಾಧ್ವಾನ್ ಸಹೋದರರು ಮತ್ತು ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು, ಕಪೂರ್ ಅವರ ಕುಟುಂಬವು ಡಿಎಚ್‌ಎಫ್‌ಎಲ್‌ನಲ್ಲಿ ಹೂಡಿಕೆ ಮಾಡಿದ್ದಕ್ಕಾಗಿ ಕಿಕ್‌ಬ್ಯಾಕ್ ಪಡೆದಿದೆ ಎಂದು ಚಾರ್ಜ್‌ಶೀಟ್ ನಲ್ಲಿ ಆರೋಪಿಸಲಾಗಿತ್ತು.

ಆ ಹಗರಣದಲ್ಲಿ 2018 ರ ಏಪ್ರಿಲ್ ಮತ್ತು ಜೂನ್ ನಡುವೆ ಯೆಸ್ ಬ್ಯಾಂಕ್ 3,700 ಕೋಟಿ ರೂ, ಸಾರ್ವಜನಿಕ ಹಣವನ್ನು ಡಿಎಚ್‌ಎಫ್‌ಎಲ್‌ನ ಅಲ್ಪಾವಧಿಯ ಡಿಬೆಂಚರ್‌ಗಳಲ್ಲಿ ಹೂಡಿಕೆ ಮಾಡಿತು. ಇದಕ್ಕೆ ಪ್ರತಿಯಾಗಿ, ವಾಧ್ವಾನ್‌ಗಳು ಕಪೂರ್ ಅವರ ಪತ್ನಿ ಮತ್ತು ಹೆಣ್ಣುಮಕ್ಕಳಿಂದ ನಿಯಂತ್ರಿಸಲ್ಪಡುವ ಸಂಸ್ಥೆಗೆ ಸಾಲ ರೂಪದಲ್ಲಿ 600 ಕೋಟಿ ರೂ. ಕಿಕ್ ಬ್ಯಾಕ್ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ವಾಧ್ವಾನ್ ಸಹೋದರರನ್ನು ಬಂಧಿಸಲಾಗಿತ್ತು. ಕಪೂರ್ ಅವರನ್ನು ಮಾರ್ಚ್‌ನಲ್ಲಿ ಬಂಧಿಸಲಾಯಿತು.


ಇದನ್ನೂ ಓದಿ: ಬಿಜೆಪಿಯ ಜಾಹೀರಾತಿನಲ್ಲಿ ಸಿಕ್ಕ ಮನೆ ಪತ್ರಿಕೆಗೆ ಮಾತ್ರ ಸೀಮಿತ- ವಾಸ್ತವದಲ್ಲಿ ಬಾಡಿಗೆ ಮನೆಯಲ್ಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...