Homeಮುಖಪುಟಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ!

ಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ!

ಪ್ರಧಾನ್‌ಮಂತ್ರಿ ಆವಾಸ್ ಯೋಜನಾ ಹಲವು ಕುಖ್ಯಾತ ಕಳ್ಳರ ಪಾಲಿಗೆ ಹುಲ್ಲುಗಾವಲು ಆಗಿತ್ತು ಎಂಬುದಕ್ಕೆ ಈಗ ಬೆಳಕಿಗೆ ಬಂದಿರುವ 14 ಸಾವಿರ ಕೋಟಿ ರೂ ಹಗರಣವೇ ಸಾಕ್ಷಿಯಾಗಿದೆ.

- Advertisement -
- Advertisement -

ಇತ್ತೀಚೆಗೆ ಫೆಬ್ರುವರಿ 25ರಂದು ‘ಆತ್ಮನಿರ್ಭರ್ ಬಂಗಾಳ’ ಹೆಸರಿನಲ್ಲಿ ಪ್ರಕಟವಾದ ಜಾಹಿರಾತಿನಲ್ಲಿ ಪ್ರಧಾನಿ ಚಿತ್ರದೊಂದಿಗೆ ಕಾಣಿಸಿಕೊಂಡಿದ್ದ ಬಂಗಾಳದ ಮಹಿಳೆ ಲಕ್ಷ್ಮಿದೇವಿ ಎಂಬುವವರು, ‘ಪಿಎಂ ವಸತಿ ಯೋಜನೆಯಿಂದಾಗಿ ತಲೆ ಮೇಲೊಂದು ಸೂರು ಸಿಕ್ಕಿತು’ ಎಂದು ಹೇಳಿದ್ದರು. ಆದರೆ ವಾಸ್ತವವಾಗಿ ಅವರು ಇರುವುದು ಒಂದು ಸಾದಾ ಬಾಡಿಗೆ ಮನೆಯಲ್ಲಿ!
ಪ್ರಧಾನ್‌ಮಂತ್ರಿ ಆವಾಸ್ ಯೋಜನಾ ಹಲವು ಕುಖ್ಯಾತ ಕಳ್ಳರ ಪಾಲಿಗೆ ಹುಲ್ಲುಗಾವಲು ಆಗಿತ್ತು ಎಂಬುದಕ್ಕೆ ಈಗ ಬೆಳಕಿಗೆ ಬಂದಿರುವ 14 ಸಾವಿರ ಕೋಟಿ ರೂ ಹಗರಣವೇ ಸಾಕ್ಷಿಯಾಗಿದೆ.

ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ)ಗೆ ಸಂಬಂಧಿಸಿದ ಹಗರಣವನ್ನು ಸಿಬಿಐ ಬುಧವಾರ ಪತ್ತೆ ಹಚ್ಚಿದೆ. ಈಗಾಗಲೇ ಬಿಕ್ಕಟ್ಟಿನಲ್ಲಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (ಡಿಎಚ್‌ಎಫ್‌ಎಲ್) ನ ಪ್ರವರ್ತಕರು ಈ ಹಗರಣದ ಸೃಷ್ಟಿಕರ್ತರು ಮತ್ತು ಫಲಾನುಭವಿಗಳು ಎಂಬ ಸತ್ಯ ಹೊರಬಿದ್ದಿದೆ.

ವಂಚನೆ ಮತ್ತು ಹಣದ ಪ್ರಕರಣದಲ್ಲಿ ಜೈಲಿನಲ್ಲಿರುವ ಸಹೋದರರಾದ ಕಪಿಲ್ ಮತ್ತು ಧೀರಜ್ ವಾಧ್ವಾನ್ ವಸತಿ ಯೋಜನೆಯಲ್ಲಿ ’14 ಸಾವಿರ ಕೋಟಿ’ ನುಂಗಿದ ಫಲಾನುಭವಿಗಳಾಗಿದ್ದಾರೆ.

ಸಿಬಿಐ ಪ್ರಕಾರ, ಕಪಿಲ್ ಮತ್ತು ಧೀರಜ್ ವಾಧ್ವಾನ್ “ನಕಲಿ ಮತ್ತು ಕಾಲ್ಪನಿಕ” ಗೃಹ ಸಾಲ ಖಾತೆಗಳನ್ನು ಸೃಷ್ಟಿಸಿ ಭಾರತ ಸರ್ಕಾರದಿಂದ 1,880 ಕೋಟಿ ಬಡ್ಡಿ ಸಹಾಯಧನವನ್ನು ಪಡೆದಿದ್ದಾರೆ.

ಎಲ್ಲರಿಗೂ ವಸತಿ ಖಾತ್ರಿಪಡಿಸುವ ಕೇಂದ್ರ ಯೋಜನೆ ಪಿಎಂಎವೈ ಅನ್ನು ಅಕ್ಟೋಬರ್ 2015 ರಲ್ಲಿ ಘೋಷಿಸಲಾಯಿತು. ಯೋಜನೆಯಡಿಯಲ್ಲಿ ಆರ್ಥಿಕ ದುರ್ಬಲ ವಿಭಾಗಗಳ (ಇಡಬ್ಲ್ಯೂಎಸ್) ಮತ್ತು ಕಡಿಮೆ ಮತ್ತು ಮಧ್ಯಮ ಆದಾಯದ ಗುಂಪುಗಳಿಗೆ ನೀಡಲಾಗುವ ವಸತಿ ಸಾಲಗಳು ಕ್ರೆಡಿಟ್-ಸಂಬಂಧಿತ ಬಡ್ಡಿ ಸಹಾಯಧನಕ್ಕೆ ಅರ್ಹವಾಗಿವೆ.

ಈ ಸಾಲಗಳನ್ನು ಮಂಜೂರು ಮಾಡಿದ ಡಿಎಚ್‌ಎಫ್‌ಎಲ್‌ನಂತಹ ಹಣಕಾಸು ಸಂಸ್ಥೆಗಳಿಂದ ಸಬ್ಸಿಡಿಯನ್ನು ಪಡೆಯಬೇಕು. ಸಿಬಿಐ ಪ್ರಕಾರ, 2018 ರ ಡಿಸೆಂಬರ್‌ನಲ್ಲಿ ಡಿಎಚ್‌ಎಫ್‌ಎಲ್ ಹೂಡಿಕೆದಾರರಿಗೆ ಪಿಎಂಎವೈ ಅಡಿಯಲ್ಲಿ 88,651 ಸಾಲಗಳನ್ನು ಪ್ರಕ್ರಿಯೆಗೊಳಿಸಿದೆ ಮತ್ತು 539.4 ಕೋಟಿ ರೂ. ಸಬ್ಸಿಡಿಗಳನ್ನು ಪಡೆದುಕೊಂಡಿದೆ ಮತ್ತು ಇನ್ನೂ 1,347.8 ಕೋಟಿ ರೂ ಬಾಕಿ ಇದೆ ಎಂದು ಹೇಳಿಕೊಂಡಿದೆ.

2007-19ರ ನಡುವೆ ಡಿಎಚ್‌ಎಫ್‌ಎಲ್‌ನ ಕಪಿಲ್ ಮತ್ತು ಧೀರಜ್ ವಾಧ್ವಾನ್ ಅವರು ಮುಂಬೈನ ಅಸ್ತಿತ್ವದಲ್ಲೇ ಇಲ್ಲದ ಬಾಂದ್ರಾ ಶಾಖೆಯಲ್ಲಿ 2.6 ಲಕ್ಷ ನಕಲಿ ವಸತಿ ಸಾಲ ಖಾತೆಗಳನ್ನು ತೆರೆದಿದ್ದಾರೆ.

2007 ಮತ್ತು 2019 ರ ನಡುವೆ ಈ ಖಾತೆಗಳಿಗೆ 14,046 ಕೋಟಿ ಮೊತ್ತದ ವಸತಿ ಸಾಲಗಳನ್ನು ಈ ಖಾತೆಗಳಿಗೆ ಮಂಜೂರು ಮಾಡಲಾಗಿದೆ ಎಂದು ತೋರಿಸಲಾಗಿದೆ. ಅದರಲ್ಲಿ 11,755.79 ರೂ.ಗಳನ್ನು ಅನ್ನು ಇತರ ಕಾಲ್ಪನಿಕ ಸಂಸ್ಥೆಗಳಿಗೆ ರವಾನಿಸಲಾಗಿದೆ. ಈ ಮೊತ್ತವನ್ನು ಪಿಎಂ ವಸತಿ ಯೋಜನೆಯಲ್ಲಿ ನೀಡಲಾದ ಸಾಲಗಳು ಎಂದು ನಮೂದಿಸಿ, ಸಬ್ಸಿಡಿ ಹಣವನ್ನು ಗುಳುಂ ಮಾಡಲಾಗಿದೆ. ಈ ನಕಲಿ ಗೃಹಸಾಲ ವಿತರಣೆಗಾಗಿ ಈಗಾಗಲೇ ಡಿಎಚ್‌ಎಫ್‌ಎಲ್ 539.40 ಕೋಟಿ ರೂ ಬಡ್ಡಿ ಸಬ್ಸಿಡಿ ಪಡೆದುಕೊಂಡಿದೆ. ಇನ್ನೂ 1,347.80 ಕೋಟಿ ರೂ ಸಬ್ಸಿಡಿಗಾಗಿ ಕಾದು ಕೂತಿದೆ. ಒಟ್ಟು 1,887.20 ಕೋಟಿ ರೂ. ಸಬ್ಸಿಡಿ ಹಣ ಅದಕ್ಕೆ ದಕ್ಕಲಿದೆ. ಎಲ್ಲವೂ ಭಾರತ ಸರ್ಕಾರದ ಕೃಪೆ ಎಂಬ ಆರೋಪ ಕೇಳಿಬಂದಿದೆ.

ಇದಕ್ಕಾಗಿ ವಾಧ್ವಾನ್ ಸಹೋದರರು ಸರ್ಕಾರದ ನ್ಯಾಷನಲ್ ಹೌಸಿಂಗ್ ಬ್ಯಾಂಕ್‌ನ ಕೆಲವರೊಂದಿಗೆ ಶಾಮೀಲಾಗಿ ಈ ಕೃತ್ಯ ಎಸಗಿದ್ದಾರೆ. ಡಿಎಚ್‌ಎಫ್‌ಎಲ್‌ನಂತಹ ಕಂಪನಿಗಳು ವಸತಿ ಸಾಲ ನೀಡುತ್ತವೆ. ಸರ್ಕಾರದ ಸಬ್ಸಿಡಿ ಹಣವು ಅವುಗಳಿಗೆ ಪಾವತಿಯಾಗುತ್ತದೆ. ಆದರೆ ಫೇಕ್ ಅಕೌಂಟುಗಳನ್ನು ತೆರೆದ ಡಿಎಚ್‌ಎಫ್‌ಎಲ್ ತೆರಿಗೆದಾರರ ಹಣವನ್ನು ಸಬ್ಸಿಡಿ ರೂಪದಲ್ಲಿ ನುಂಗಿ ಕುಳಿತಿದೆ. ಹೀಗಾಗಿ ಕೊಲ್ಕೊತ್ತದ ಲಕ್ಷ್ಮಿದೇವಿಯಂತಹವರಿಗೆ ಮನೆ ಎಂಬುದು ಮರೀಚಿಕೆಯಾಗಿಯೇ ಉಳಿಯುತ್ತದೆ.

ಪಕ್ಕಾ ವಂಚಕರು!

ಕಳೆದ ವರ್ಷ ಜೂನ್‌ನಲ್ಲಿ ಸಿಬಿಐ ವಾಧ್ವಾನ್ ಸಹೋದರರು ಮತ್ತು ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು, ಕಪೂರ್ ಅವರ ಕುಟುಂಬವು ಡಿಎಚ್‌ಎಫ್‌ಎಲ್‌ನಲ್ಲಿ ಹೂಡಿಕೆ ಮಾಡಿದ್ದಕ್ಕಾಗಿ ಕಿಕ್‌ಬ್ಯಾಕ್ ಪಡೆದಿದೆ ಎಂದು ಚಾರ್ಜ್‌ಶೀಟ್ ನಲ್ಲಿ ಆರೋಪಿಸಲಾಗಿತ್ತು.

ಆ ಹಗರಣದಲ್ಲಿ 2018 ರ ಏಪ್ರಿಲ್ ಮತ್ತು ಜೂನ್ ನಡುವೆ ಯೆಸ್ ಬ್ಯಾಂಕ್ 3,700 ಕೋಟಿ ರೂ, ಸಾರ್ವಜನಿಕ ಹಣವನ್ನು ಡಿಎಚ್‌ಎಫ್‌ಎಲ್‌ನ ಅಲ್ಪಾವಧಿಯ ಡಿಬೆಂಚರ್‌ಗಳಲ್ಲಿ ಹೂಡಿಕೆ ಮಾಡಿತು. ಇದಕ್ಕೆ ಪ್ರತಿಯಾಗಿ, ವಾಧ್ವಾನ್‌ಗಳು ಕಪೂರ್ ಅವರ ಪತ್ನಿ ಮತ್ತು ಹೆಣ್ಣುಮಕ್ಕಳಿಂದ ನಿಯಂತ್ರಿಸಲ್ಪಡುವ ಸಂಸ್ಥೆಗೆ ಸಾಲ ರೂಪದಲ್ಲಿ 600 ಕೋಟಿ ರೂ. ಕಿಕ್ ಬ್ಯಾಕ್ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ವಾಧ್ವಾನ್ ಸಹೋದರರನ್ನು ಬಂಧಿಸಲಾಗಿತ್ತು. ಕಪೂರ್ ಅವರನ್ನು ಮಾರ್ಚ್‌ನಲ್ಲಿ ಬಂಧಿಸಲಾಯಿತು.


ಇದನ್ನೂ ಓದಿ: ಬಿಜೆಪಿಯ ಜಾಹೀರಾತಿನಲ್ಲಿ ಸಿಕ್ಕ ಮನೆ ಪತ್ರಿಕೆಗೆ ಮಾತ್ರ ಸೀಮಿತ- ವಾಸ್ತವದಲ್ಲಿ ಬಾಡಿಗೆ ಮನೆಯಲ್ಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....