Homeಮುಖಪುಟಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ!

ಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ!

ಪ್ರಧಾನ್‌ಮಂತ್ರಿ ಆವಾಸ್ ಯೋಜನಾ ಹಲವು ಕುಖ್ಯಾತ ಕಳ್ಳರ ಪಾಲಿಗೆ ಹುಲ್ಲುಗಾವಲು ಆಗಿತ್ತು ಎಂಬುದಕ್ಕೆ ಈಗ ಬೆಳಕಿಗೆ ಬಂದಿರುವ 14 ಸಾವಿರ ಕೋಟಿ ರೂ ಹಗರಣವೇ ಸಾಕ್ಷಿಯಾಗಿದೆ.

- Advertisement -
- Advertisement -

ಇತ್ತೀಚೆಗೆ ಫೆಬ್ರುವರಿ 25ರಂದು ‘ಆತ್ಮನಿರ್ಭರ್ ಬಂಗಾಳ’ ಹೆಸರಿನಲ್ಲಿ ಪ್ರಕಟವಾದ ಜಾಹಿರಾತಿನಲ್ಲಿ ಪ್ರಧಾನಿ ಚಿತ್ರದೊಂದಿಗೆ ಕಾಣಿಸಿಕೊಂಡಿದ್ದ ಬಂಗಾಳದ ಮಹಿಳೆ ಲಕ್ಷ್ಮಿದೇವಿ ಎಂಬುವವರು, ‘ಪಿಎಂ ವಸತಿ ಯೋಜನೆಯಿಂದಾಗಿ ತಲೆ ಮೇಲೊಂದು ಸೂರು ಸಿಕ್ಕಿತು’ ಎಂದು ಹೇಳಿದ್ದರು. ಆದರೆ ವಾಸ್ತವವಾಗಿ ಅವರು ಇರುವುದು ಒಂದು ಸಾದಾ ಬಾಡಿಗೆ ಮನೆಯಲ್ಲಿ!
ಪ್ರಧಾನ್‌ಮಂತ್ರಿ ಆವಾಸ್ ಯೋಜನಾ ಹಲವು ಕುಖ್ಯಾತ ಕಳ್ಳರ ಪಾಲಿಗೆ ಹುಲ್ಲುಗಾವಲು ಆಗಿತ್ತು ಎಂಬುದಕ್ಕೆ ಈಗ ಬೆಳಕಿಗೆ ಬಂದಿರುವ 14 ಸಾವಿರ ಕೋಟಿ ರೂ ಹಗರಣವೇ ಸಾಕ್ಷಿಯಾಗಿದೆ.

ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ)ಗೆ ಸಂಬಂಧಿಸಿದ ಹಗರಣವನ್ನು ಸಿಬಿಐ ಬುಧವಾರ ಪತ್ತೆ ಹಚ್ಚಿದೆ. ಈಗಾಗಲೇ ಬಿಕ್ಕಟ್ಟಿನಲ್ಲಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (ಡಿಎಚ್‌ಎಫ್‌ಎಲ್) ನ ಪ್ರವರ್ತಕರು ಈ ಹಗರಣದ ಸೃಷ್ಟಿಕರ್ತರು ಮತ್ತು ಫಲಾನುಭವಿಗಳು ಎಂಬ ಸತ್ಯ ಹೊರಬಿದ್ದಿದೆ.

ವಂಚನೆ ಮತ್ತು ಹಣದ ಪ್ರಕರಣದಲ್ಲಿ ಜೈಲಿನಲ್ಲಿರುವ ಸಹೋದರರಾದ ಕಪಿಲ್ ಮತ್ತು ಧೀರಜ್ ವಾಧ್ವಾನ್ ವಸತಿ ಯೋಜನೆಯಲ್ಲಿ ’14 ಸಾವಿರ ಕೋಟಿ’ ನುಂಗಿದ ಫಲಾನುಭವಿಗಳಾಗಿದ್ದಾರೆ.

ಸಿಬಿಐ ಪ್ರಕಾರ, ಕಪಿಲ್ ಮತ್ತು ಧೀರಜ್ ವಾಧ್ವಾನ್ “ನಕಲಿ ಮತ್ತು ಕಾಲ್ಪನಿಕ” ಗೃಹ ಸಾಲ ಖಾತೆಗಳನ್ನು ಸೃಷ್ಟಿಸಿ ಭಾರತ ಸರ್ಕಾರದಿಂದ 1,880 ಕೋಟಿ ಬಡ್ಡಿ ಸಹಾಯಧನವನ್ನು ಪಡೆದಿದ್ದಾರೆ.

ಎಲ್ಲರಿಗೂ ವಸತಿ ಖಾತ್ರಿಪಡಿಸುವ ಕೇಂದ್ರ ಯೋಜನೆ ಪಿಎಂಎವೈ ಅನ್ನು ಅಕ್ಟೋಬರ್ 2015 ರಲ್ಲಿ ಘೋಷಿಸಲಾಯಿತು. ಯೋಜನೆಯಡಿಯಲ್ಲಿ ಆರ್ಥಿಕ ದುರ್ಬಲ ವಿಭಾಗಗಳ (ಇಡಬ್ಲ್ಯೂಎಸ್) ಮತ್ತು ಕಡಿಮೆ ಮತ್ತು ಮಧ್ಯಮ ಆದಾಯದ ಗುಂಪುಗಳಿಗೆ ನೀಡಲಾಗುವ ವಸತಿ ಸಾಲಗಳು ಕ್ರೆಡಿಟ್-ಸಂಬಂಧಿತ ಬಡ್ಡಿ ಸಹಾಯಧನಕ್ಕೆ ಅರ್ಹವಾಗಿವೆ.

ಈ ಸಾಲಗಳನ್ನು ಮಂಜೂರು ಮಾಡಿದ ಡಿಎಚ್‌ಎಫ್‌ಎಲ್‌ನಂತಹ ಹಣಕಾಸು ಸಂಸ್ಥೆಗಳಿಂದ ಸಬ್ಸಿಡಿಯನ್ನು ಪಡೆಯಬೇಕು. ಸಿಬಿಐ ಪ್ರಕಾರ, 2018 ರ ಡಿಸೆಂಬರ್‌ನಲ್ಲಿ ಡಿಎಚ್‌ಎಫ್‌ಎಲ್ ಹೂಡಿಕೆದಾರರಿಗೆ ಪಿಎಂಎವೈ ಅಡಿಯಲ್ಲಿ 88,651 ಸಾಲಗಳನ್ನು ಪ್ರಕ್ರಿಯೆಗೊಳಿಸಿದೆ ಮತ್ತು 539.4 ಕೋಟಿ ರೂ. ಸಬ್ಸಿಡಿಗಳನ್ನು ಪಡೆದುಕೊಂಡಿದೆ ಮತ್ತು ಇನ್ನೂ 1,347.8 ಕೋಟಿ ರೂ ಬಾಕಿ ಇದೆ ಎಂದು ಹೇಳಿಕೊಂಡಿದೆ.

2007-19ರ ನಡುವೆ ಡಿಎಚ್‌ಎಫ್‌ಎಲ್‌ನ ಕಪಿಲ್ ಮತ್ತು ಧೀರಜ್ ವಾಧ್ವಾನ್ ಅವರು ಮುಂಬೈನ ಅಸ್ತಿತ್ವದಲ್ಲೇ ಇಲ್ಲದ ಬಾಂದ್ರಾ ಶಾಖೆಯಲ್ಲಿ 2.6 ಲಕ್ಷ ನಕಲಿ ವಸತಿ ಸಾಲ ಖಾತೆಗಳನ್ನು ತೆರೆದಿದ್ದಾರೆ.

2007 ಮತ್ತು 2019 ರ ನಡುವೆ ಈ ಖಾತೆಗಳಿಗೆ 14,046 ಕೋಟಿ ಮೊತ್ತದ ವಸತಿ ಸಾಲಗಳನ್ನು ಈ ಖಾತೆಗಳಿಗೆ ಮಂಜೂರು ಮಾಡಲಾಗಿದೆ ಎಂದು ತೋರಿಸಲಾಗಿದೆ. ಅದರಲ್ಲಿ 11,755.79 ರೂ.ಗಳನ್ನು ಅನ್ನು ಇತರ ಕಾಲ್ಪನಿಕ ಸಂಸ್ಥೆಗಳಿಗೆ ರವಾನಿಸಲಾಗಿದೆ. ಈ ಮೊತ್ತವನ್ನು ಪಿಎಂ ವಸತಿ ಯೋಜನೆಯಲ್ಲಿ ನೀಡಲಾದ ಸಾಲಗಳು ಎಂದು ನಮೂದಿಸಿ, ಸಬ್ಸಿಡಿ ಹಣವನ್ನು ಗುಳುಂ ಮಾಡಲಾಗಿದೆ. ಈ ನಕಲಿ ಗೃಹಸಾಲ ವಿತರಣೆಗಾಗಿ ಈಗಾಗಲೇ ಡಿಎಚ್‌ಎಫ್‌ಎಲ್ 539.40 ಕೋಟಿ ರೂ ಬಡ್ಡಿ ಸಬ್ಸಿಡಿ ಪಡೆದುಕೊಂಡಿದೆ. ಇನ್ನೂ 1,347.80 ಕೋಟಿ ರೂ ಸಬ್ಸಿಡಿಗಾಗಿ ಕಾದು ಕೂತಿದೆ. ಒಟ್ಟು 1,887.20 ಕೋಟಿ ರೂ. ಸಬ್ಸಿಡಿ ಹಣ ಅದಕ್ಕೆ ದಕ್ಕಲಿದೆ. ಎಲ್ಲವೂ ಭಾರತ ಸರ್ಕಾರದ ಕೃಪೆ ಎಂಬ ಆರೋಪ ಕೇಳಿಬಂದಿದೆ.

ಇದಕ್ಕಾಗಿ ವಾಧ್ವಾನ್ ಸಹೋದರರು ಸರ್ಕಾರದ ನ್ಯಾಷನಲ್ ಹೌಸಿಂಗ್ ಬ್ಯಾಂಕ್‌ನ ಕೆಲವರೊಂದಿಗೆ ಶಾಮೀಲಾಗಿ ಈ ಕೃತ್ಯ ಎಸಗಿದ್ದಾರೆ. ಡಿಎಚ್‌ಎಫ್‌ಎಲ್‌ನಂತಹ ಕಂಪನಿಗಳು ವಸತಿ ಸಾಲ ನೀಡುತ್ತವೆ. ಸರ್ಕಾರದ ಸಬ್ಸಿಡಿ ಹಣವು ಅವುಗಳಿಗೆ ಪಾವತಿಯಾಗುತ್ತದೆ. ಆದರೆ ಫೇಕ್ ಅಕೌಂಟುಗಳನ್ನು ತೆರೆದ ಡಿಎಚ್‌ಎಫ್‌ಎಲ್ ತೆರಿಗೆದಾರರ ಹಣವನ್ನು ಸಬ್ಸಿಡಿ ರೂಪದಲ್ಲಿ ನುಂಗಿ ಕುಳಿತಿದೆ. ಹೀಗಾಗಿ ಕೊಲ್ಕೊತ್ತದ ಲಕ್ಷ್ಮಿದೇವಿಯಂತಹವರಿಗೆ ಮನೆ ಎಂಬುದು ಮರೀಚಿಕೆಯಾಗಿಯೇ ಉಳಿಯುತ್ತದೆ.

ಪಕ್ಕಾ ವಂಚಕರು!

ಕಳೆದ ವರ್ಷ ಜೂನ್‌ನಲ್ಲಿ ಸಿಬಿಐ ವಾಧ್ವಾನ್ ಸಹೋದರರು ಮತ್ತು ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು, ಕಪೂರ್ ಅವರ ಕುಟುಂಬವು ಡಿಎಚ್‌ಎಫ್‌ಎಲ್‌ನಲ್ಲಿ ಹೂಡಿಕೆ ಮಾಡಿದ್ದಕ್ಕಾಗಿ ಕಿಕ್‌ಬ್ಯಾಕ್ ಪಡೆದಿದೆ ಎಂದು ಚಾರ್ಜ್‌ಶೀಟ್ ನಲ್ಲಿ ಆರೋಪಿಸಲಾಗಿತ್ತು.

ಆ ಹಗರಣದಲ್ಲಿ 2018 ರ ಏಪ್ರಿಲ್ ಮತ್ತು ಜೂನ್ ನಡುವೆ ಯೆಸ್ ಬ್ಯಾಂಕ್ 3,700 ಕೋಟಿ ರೂ, ಸಾರ್ವಜನಿಕ ಹಣವನ್ನು ಡಿಎಚ್‌ಎಫ್‌ಎಲ್‌ನ ಅಲ್ಪಾವಧಿಯ ಡಿಬೆಂಚರ್‌ಗಳಲ್ಲಿ ಹೂಡಿಕೆ ಮಾಡಿತು. ಇದಕ್ಕೆ ಪ್ರತಿಯಾಗಿ, ವಾಧ್ವಾನ್‌ಗಳು ಕಪೂರ್ ಅವರ ಪತ್ನಿ ಮತ್ತು ಹೆಣ್ಣುಮಕ್ಕಳಿಂದ ನಿಯಂತ್ರಿಸಲ್ಪಡುವ ಸಂಸ್ಥೆಗೆ ಸಾಲ ರೂಪದಲ್ಲಿ 600 ಕೋಟಿ ರೂ. ಕಿಕ್ ಬ್ಯಾಕ್ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ವಾಧ್ವಾನ್ ಸಹೋದರರನ್ನು ಬಂಧಿಸಲಾಗಿತ್ತು. ಕಪೂರ್ ಅವರನ್ನು ಮಾರ್ಚ್‌ನಲ್ಲಿ ಬಂಧಿಸಲಾಯಿತು.


ಇದನ್ನೂ ಓದಿ: ಬಿಜೆಪಿಯ ಜಾಹೀರಾತಿನಲ್ಲಿ ಸಿಕ್ಕ ಮನೆ ಪತ್ರಿಕೆಗೆ ಮಾತ್ರ ಸೀಮಿತ- ವಾಸ್ತವದಲ್ಲಿ ಬಾಡಿಗೆ ಮನೆಯಲ್ಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...