Homeಮುಖಪುಟಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ!

ಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ!

ಪ್ರಧಾನ್‌ಮಂತ್ರಿ ಆವಾಸ್ ಯೋಜನಾ ಹಲವು ಕುಖ್ಯಾತ ಕಳ್ಳರ ಪಾಲಿಗೆ ಹುಲ್ಲುಗಾವಲು ಆಗಿತ್ತು ಎಂಬುದಕ್ಕೆ ಈಗ ಬೆಳಕಿಗೆ ಬಂದಿರುವ 14 ಸಾವಿರ ಕೋಟಿ ರೂ ಹಗರಣವೇ ಸಾಕ್ಷಿಯಾಗಿದೆ.

- Advertisement -
- Advertisement -

ಇತ್ತೀಚೆಗೆ ಫೆಬ್ರುವರಿ 25ರಂದು ‘ಆತ್ಮನಿರ್ಭರ್ ಬಂಗಾಳ’ ಹೆಸರಿನಲ್ಲಿ ಪ್ರಕಟವಾದ ಜಾಹಿರಾತಿನಲ್ಲಿ ಪ್ರಧಾನಿ ಚಿತ್ರದೊಂದಿಗೆ ಕಾಣಿಸಿಕೊಂಡಿದ್ದ ಬಂಗಾಳದ ಮಹಿಳೆ ಲಕ್ಷ್ಮಿದೇವಿ ಎಂಬುವವರು, ‘ಪಿಎಂ ವಸತಿ ಯೋಜನೆಯಿಂದಾಗಿ ತಲೆ ಮೇಲೊಂದು ಸೂರು ಸಿಕ್ಕಿತು’ ಎಂದು ಹೇಳಿದ್ದರು. ಆದರೆ ವಾಸ್ತವವಾಗಿ ಅವರು ಇರುವುದು ಒಂದು ಸಾದಾ ಬಾಡಿಗೆ ಮನೆಯಲ್ಲಿ!
ಪ್ರಧಾನ್‌ಮಂತ್ರಿ ಆವಾಸ್ ಯೋಜನಾ ಹಲವು ಕುಖ್ಯಾತ ಕಳ್ಳರ ಪಾಲಿಗೆ ಹುಲ್ಲುಗಾವಲು ಆಗಿತ್ತು ಎಂಬುದಕ್ಕೆ ಈಗ ಬೆಳಕಿಗೆ ಬಂದಿರುವ 14 ಸಾವಿರ ಕೋಟಿ ರೂ ಹಗರಣವೇ ಸಾಕ್ಷಿಯಾಗಿದೆ.

ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ)ಗೆ ಸಂಬಂಧಿಸಿದ ಹಗರಣವನ್ನು ಸಿಬಿಐ ಬುಧವಾರ ಪತ್ತೆ ಹಚ್ಚಿದೆ. ಈಗಾಗಲೇ ಬಿಕ್ಕಟ್ಟಿನಲ್ಲಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (ಡಿಎಚ್‌ಎಫ್‌ಎಲ್) ನ ಪ್ರವರ್ತಕರು ಈ ಹಗರಣದ ಸೃಷ್ಟಿಕರ್ತರು ಮತ್ತು ಫಲಾನುಭವಿಗಳು ಎಂಬ ಸತ್ಯ ಹೊರಬಿದ್ದಿದೆ.

ವಂಚನೆ ಮತ್ತು ಹಣದ ಪ್ರಕರಣದಲ್ಲಿ ಜೈಲಿನಲ್ಲಿರುವ ಸಹೋದರರಾದ ಕಪಿಲ್ ಮತ್ತು ಧೀರಜ್ ವಾಧ್ವಾನ್ ವಸತಿ ಯೋಜನೆಯಲ್ಲಿ ’14 ಸಾವಿರ ಕೋಟಿ’ ನುಂಗಿದ ಫಲಾನುಭವಿಗಳಾಗಿದ್ದಾರೆ.

ಸಿಬಿಐ ಪ್ರಕಾರ, ಕಪಿಲ್ ಮತ್ತು ಧೀರಜ್ ವಾಧ್ವಾನ್ “ನಕಲಿ ಮತ್ತು ಕಾಲ್ಪನಿಕ” ಗೃಹ ಸಾಲ ಖಾತೆಗಳನ್ನು ಸೃಷ್ಟಿಸಿ ಭಾರತ ಸರ್ಕಾರದಿಂದ 1,880 ಕೋಟಿ ಬಡ್ಡಿ ಸಹಾಯಧನವನ್ನು ಪಡೆದಿದ್ದಾರೆ.

ಎಲ್ಲರಿಗೂ ವಸತಿ ಖಾತ್ರಿಪಡಿಸುವ ಕೇಂದ್ರ ಯೋಜನೆ ಪಿಎಂಎವೈ ಅನ್ನು ಅಕ್ಟೋಬರ್ 2015 ರಲ್ಲಿ ಘೋಷಿಸಲಾಯಿತು. ಯೋಜನೆಯಡಿಯಲ್ಲಿ ಆರ್ಥಿಕ ದುರ್ಬಲ ವಿಭಾಗಗಳ (ಇಡಬ್ಲ್ಯೂಎಸ್) ಮತ್ತು ಕಡಿಮೆ ಮತ್ತು ಮಧ್ಯಮ ಆದಾಯದ ಗುಂಪುಗಳಿಗೆ ನೀಡಲಾಗುವ ವಸತಿ ಸಾಲಗಳು ಕ್ರೆಡಿಟ್-ಸಂಬಂಧಿತ ಬಡ್ಡಿ ಸಹಾಯಧನಕ್ಕೆ ಅರ್ಹವಾಗಿವೆ.

ಈ ಸಾಲಗಳನ್ನು ಮಂಜೂರು ಮಾಡಿದ ಡಿಎಚ್‌ಎಫ್‌ಎಲ್‌ನಂತಹ ಹಣಕಾಸು ಸಂಸ್ಥೆಗಳಿಂದ ಸಬ್ಸಿಡಿಯನ್ನು ಪಡೆಯಬೇಕು. ಸಿಬಿಐ ಪ್ರಕಾರ, 2018 ರ ಡಿಸೆಂಬರ್‌ನಲ್ಲಿ ಡಿಎಚ್‌ಎಫ್‌ಎಲ್ ಹೂಡಿಕೆದಾರರಿಗೆ ಪಿಎಂಎವೈ ಅಡಿಯಲ್ಲಿ 88,651 ಸಾಲಗಳನ್ನು ಪ್ರಕ್ರಿಯೆಗೊಳಿಸಿದೆ ಮತ್ತು 539.4 ಕೋಟಿ ರೂ. ಸಬ್ಸಿಡಿಗಳನ್ನು ಪಡೆದುಕೊಂಡಿದೆ ಮತ್ತು ಇನ್ನೂ 1,347.8 ಕೋಟಿ ರೂ ಬಾಕಿ ಇದೆ ಎಂದು ಹೇಳಿಕೊಂಡಿದೆ.

2007-19ರ ನಡುವೆ ಡಿಎಚ್‌ಎಫ್‌ಎಲ್‌ನ ಕಪಿಲ್ ಮತ್ತು ಧೀರಜ್ ವಾಧ್ವಾನ್ ಅವರು ಮುಂಬೈನ ಅಸ್ತಿತ್ವದಲ್ಲೇ ಇಲ್ಲದ ಬಾಂದ್ರಾ ಶಾಖೆಯಲ್ಲಿ 2.6 ಲಕ್ಷ ನಕಲಿ ವಸತಿ ಸಾಲ ಖಾತೆಗಳನ್ನು ತೆರೆದಿದ್ದಾರೆ.

2007 ಮತ್ತು 2019 ರ ನಡುವೆ ಈ ಖಾತೆಗಳಿಗೆ 14,046 ಕೋಟಿ ಮೊತ್ತದ ವಸತಿ ಸಾಲಗಳನ್ನು ಈ ಖಾತೆಗಳಿಗೆ ಮಂಜೂರು ಮಾಡಲಾಗಿದೆ ಎಂದು ತೋರಿಸಲಾಗಿದೆ. ಅದರಲ್ಲಿ 11,755.79 ರೂ.ಗಳನ್ನು ಅನ್ನು ಇತರ ಕಾಲ್ಪನಿಕ ಸಂಸ್ಥೆಗಳಿಗೆ ರವಾನಿಸಲಾಗಿದೆ. ಈ ಮೊತ್ತವನ್ನು ಪಿಎಂ ವಸತಿ ಯೋಜನೆಯಲ್ಲಿ ನೀಡಲಾದ ಸಾಲಗಳು ಎಂದು ನಮೂದಿಸಿ, ಸಬ್ಸಿಡಿ ಹಣವನ್ನು ಗುಳುಂ ಮಾಡಲಾಗಿದೆ. ಈ ನಕಲಿ ಗೃಹಸಾಲ ವಿತರಣೆಗಾಗಿ ಈಗಾಗಲೇ ಡಿಎಚ್‌ಎಫ್‌ಎಲ್ 539.40 ಕೋಟಿ ರೂ ಬಡ್ಡಿ ಸಬ್ಸಿಡಿ ಪಡೆದುಕೊಂಡಿದೆ. ಇನ್ನೂ 1,347.80 ಕೋಟಿ ರೂ ಸಬ್ಸಿಡಿಗಾಗಿ ಕಾದು ಕೂತಿದೆ. ಒಟ್ಟು 1,887.20 ಕೋಟಿ ರೂ. ಸಬ್ಸಿಡಿ ಹಣ ಅದಕ್ಕೆ ದಕ್ಕಲಿದೆ. ಎಲ್ಲವೂ ಭಾರತ ಸರ್ಕಾರದ ಕೃಪೆ ಎಂಬ ಆರೋಪ ಕೇಳಿಬಂದಿದೆ.

ಇದಕ್ಕಾಗಿ ವಾಧ್ವಾನ್ ಸಹೋದರರು ಸರ್ಕಾರದ ನ್ಯಾಷನಲ್ ಹೌಸಿಂಗ್ ಬ್ಯಾಂಕ್‌ನ ಕೆಲವರೊಂದಿಗೆ ಶಾಮೀಲಾಗಿ ಈ ಕೃತ್ಯ ಎಸಗಿದ್ದಾರೆ. ಡಿಎಚ್‌ಎಫ್‌ಎಲ್‌ನಂತಹ ಕಂಪನಿಗಳು ವಸತಿ ಸಾಲ ನೀಡುತ್ತವೆ. ಸರ್ಕಾರದ ಸಬ್ಸಿಡಿ ಹಣವು ಅವುಗಳಿಗೆ ಪಾವತಿಯಾಗುತ್ತದೆ. ಆದರೆ ಫೇಕ್ ಅಕೌಂಟುಗಳನ್ನು ತೆರೆದ ಡಿಎಚ್‌ಎಫ್‌ಎಲ್ ತೆರಿಗೆದಾರರ ಹಣವನ್ನು ಸಬ್ಸಿಡಿ ರೂಪದಲ್ಲಿ ನುಂಗಿ ಕುಳಿತಿದೆ. ಹೀಗಾಗಿ ಕೊಲ್ಕೊತ್ತದ ಲಕ್ಷ್ಮಿದೇವಿಯಂತಹವರಿಗೆ ಮನೆ ಎಂಬುದು ಮರೀಚಿಕೆಯಾಗಿಯೇ ಉಳಿಯುತ್ತದೆ.

ಪಕ್ಕಾ ವಂಚಕರು!

ಕಳೆದ ವರ್ಷ ಜೂನ್‌ನಲ್ಲಿ ಸಿಬಿಐ ವಾಧ್ವಾನ್ ಸಹೋದರರು ಮತ್ತು ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು, ಕಪೂರ್ ಅವರ ಕುಟುಂಬವು ಡಿಎಚ್‌ಎಫ್‌ಎಲ್‌ನಲ್ಲಿ ಹೂಡಿಕೆ ಮಾಡಿದ್ದಕ್ಕಾಗಿ ಕಿಕ್‌ಬ್ಯಾಕ್ ಪಡೆದಿದೆ ಎಂದು ಚಾರ್ಜ್‌ಶೀಟ್ ನಲ್ಲಿ ಆರೋಪಿಸಲಾಗಿತ್ತು.

ಆ ಹಗರಣದಲ್ಲಿ 2018 ರ ಏಪ್ರಿಲ್ ಮತ್ತು ಜೂನ್ ನಡುವೆ ಯೆಸ್ ಬ್ಯಾಂಕ್ 3,700 ಕೋಟಿ ರೂ, ಸಾರ್ವಜನಿಕ ಹಣವನ್ನು ಡಿಎಚ್‌ಎಫ್‌ಎಲ್‌ನ ಅಲ್ಪಾವಧಿಯ ಡಿಬೆಂಚರ್‌ಗಳಲ್ಲಿ ಹೂಡಿಕೆ ಮಾಡಿತು. ಇದಕ್ಕೆ ಪ್ರತಿಯಾಗಿ, ವಾಧ್ವಾನ್‌ಗಳು ಕಪೂರ್ ಅವರ ಪತ್ನಿ ಮತ್ತು ಹೆಣ್ಣುಮಕ್ಕಳಿಂದ ನಿಯಂತ್ರಿಸಲ್ಪಡುವ ಸಂಸ್ಥೆಗೆ ಸಾಲ ರೂಪದಲ್ಲಿ 600 ಕೋಟಿ ರೂ. ಕಿಕ್ ಬ್ಯಾಕ್ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ವಾಧ್ವಾನ್ ಸಹೋದರರನ್ನು ಬಂಧಿಸಲಾಗಿತ್ತು. ಕಪೂರ್ ಅವರನ್ನು ಮಾರ್ಚ್‌ನಲ್ಲಿ ಬಂಧಿಸಲಾಯಿತು.


ಇದನ್ನೂ ಓದಿ: ಬಿಜೆಪಿಯ ಜಾಹೀರಾತಿನಲ್ಲಿ ಸಿಕ್ಕ ಮನೆ ಪತ್ರಿಕೆಗೆ ಮಾತ್ರ ಸೀಮಿತ- ವಾಸ್ತವದಲ್ಲಿ ಬಾಡಿಗೆ ಮನೆಯಲ್ಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...