Homeಮುಖಪುಟಪಿಎಂ ಕಿಸಾನ್ ಸನ್ಮಾನ್ ಯೋಜನೆ: 20.48 ಲಕ್ಷ ಅನರ್ಹ ಫಲನುಭವಿಗಳಿಗೆ 1,364 ಕೋಟಿ ಪಾವತಿ

ಪಿಎಂ ಕಿಸಾನ್ ಸನ್ಮಾನ್ ಯೋಜನೆ: 20.48 ಲಕ್ಷ ಅನರ್ಹ ಫಲನುಭವಿಗಳಿಗೆ 1,364 ಕೋಟಿ ಪಾವತಿ

ಜುಲೈ 31 ರವರೆಗೆ 1,364.13 ಕೋಟಿ ರೂಪಾಯಿಗಳನ್ನು ಅನರ್ಹ ವ್ಯಕ್ತಿಗಳಿಗೆ ಮತ್ತು ಆದಾಯ ತೆರಿಗೆ ಪಾವತಿಸುವ ರೈತರಿಗೆ ಪಾವತಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ಯೋಜನೆಯಡಿ 20.48 ಲಕ್ಷ ಅನರ್ಹ ಫಲಾನುಭವಿಗಳಿಗೆ 1,364 ಕೋಟಿ ರೂಪಾಯಿಗಳನ್ನು ಪಾವತಿ ಮಾಡಿದೆ ಎಂದು ಮಾಹಿತಿ ಹಕ್ಕು ಅರ್ಜಿಯಲ್ಲಿ ಕೇಳಿದ ಪ್ರಶ್ನೆಗಳಿಗೆ ಕೇಂದ್ರ ಕೃಷಿ ಸಚಿವಾಲಯ ಉತ್ತರಿಸಿದೆ ಎಂದು ದಿವೈರ್.ಇನ್ ವರದಿ ಮಾಡಿದೆ.

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು 2019 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿ ಮೂರು ಸಮಾನ ಕಂತುಗಳಲ್ಲಿ ವಾರ್ಷಿಕ 6 ಸಾವಿರ ರೂಪಾಯಿ ಪ್ರೋತ್ಸಾಹ ಧನವನ್ನು ಐದು ಎಕರೆಯೊಳಗೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ ನೀಡುತ್ತಾ ಬರಲಾಗುತ್ತಿದೆ.

ಆರ್.ಟಿ.ಐ ಅರ್ಜಿಗೆ ಉತ್ತರಿಸಿರುವ ಕೇಂದ್ರ ಕೃಷಿ ಸಚಿವಾಲಯವು ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಅನರ್ಹ ರೈತರು ಮತ್ತು ಆದಾಯ ತೆರಿಗೆ ಪಾವತಿಸುವವ ರೈತರಿಗೆ ಪ್ರೋತ್ಸಾಹಧನವನ್ನು ನೀಡಿದ್ದು ಇವರು ಎರಡು ವರ್ಗದ ಅನರ್ಹ ಫಲಾನುಭವಿಗಳು ಎಂಬುದನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

ಸರ್ಕಾರದಿಂದ ಮಾಹಿತಿ ಪಡೆದಿರುವ ಕಾಮನ್ವೆಲ್ತ್ ಮಾನವ ಹಕ್ಕುಗಳ ಉಪಕ್ರಮದ ಆರ್.ಟಿ.ಐ. ಅರ್ಜಿದಾರ ವೆಂಕಟೇಶ್ ನಾಯಕ್ “ಈ ಅನರ್ಹ ರೈತರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಆದಾಯ ತೆರಿಗೆ ಪಾವತಿದಾರರ ವರ್ಗಕ್ಕೆ ಸೇರಿದವರು. ಉಳಿದ 44.41ರಷ್ಟು ರೈತರು ಅನರ್ಹ ರೈತ ವರ್ಗಕ್ಕೆ ಸೇರಿದವರು ಎಂದು ಹೇಳಿದ್ದಾರೆಂದು ವರದಿ ತಿಳಿಸಿದೆ.

ಮಾಧ್ಯಮ ವರದಿಗಳ ಪ್ರಕಾರ ಅನರ್ಹ ರೈತರಿಗೆ ವರ್ಗಾಯಿಸಲಾದ ಇಷ್ಟೊಂದು ಪ್ರಮಾಣದ ಹಣವನ್ನು ವಾಪಸ್ ಪಡೆಯಲು ಕ್ರಮಗಳನ್ನು ಆರಂಭಿಸಲಾಗಿದೆ ಎಂದು ನಾಯಕ್ ಹೇಳಿದ್ದಾರೆ ಎಂದು ದಿವೈರ್.ಇನ್ ವರದಿಯಲ್ಲಿ ಉಲ್ಲೇಖಿಸಿದೆ.

ಆರ್.ಟಿ.ಐ ಕಾಯ್ದೆ 2005ರ ಅಡಿಯಲ್ಲಿ ದತ್ತಾಂಶ ಪಡೆದಿದ್ದು 2019ರಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆ ಆರಂಭಗೊಂಡಾಗಿನಿಂದ ಜುಲೈ 31 ರವರೆಗೆ 1,364.13 ಕೋಟಿ ರೂಪಾಯಿಗಳನ್ನು ಅನರ್ಹ ವ್ಯಕ್ತಿಗಳಿಗೆ ಮತ್ತು ಆದಾಯ ತೆರಿಗೆ ಪಾವತಿಸುವ ರೈತರಿಗೆ ಪಾವತಿಸಲಾಗಿದೆ. ಸರ್ಕಾರ ನೀಡಿದ ದತ್ತಾಂಶದಿಂದ ಹಣ ಅರ್ಹ ಫಲಾನುಭವಿಗಳಿಗೆ ಸಿಕ್ಕಿಲ್ಲ ಎಂಬ ಅಂಶ ಬೆಳಕಿಗೆ ಬರುತ್ತದೆ.

ಪಂಜಾಬ್, ಅಸ್ಸಾಂ, ಮಹಾರಾಷ್ಟ್ರ, ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ಅನರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದುನ್ನು ವರದಿ ಬೊಟ್ಟು ಮಾಡಿದೆ. ದೇಶಾದ್ಯಂತ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ಶೇ.23.16ರಷ್ಟು (4.74ಲಕ್ಷ) ಪಂಜಾಬ್ ರಾಜ್ಯದ ಅನರ್ಹ ರೈತರು ಹಣ ಪಡೆದಿದ್ದು ಮೊದಲ ಸ್ಥಾನದಲ್ಲಿದೆ. ಅಸ್ಸಾಂ 16.87ರಷ್ಟು (3.45) ಮಂದಿ, ಮಹಾರಾಷ್ಟ್ರ ಶೇ.13.99ರಷ್ಟು ಅನರ್ಹ ವ್ಯಕ್ತಿಗಳು ಹಣ ಪಡೆದಿದ್ದಾರೆ ಎಂದು ಆರ್.ಟಿ.ಐ. ಅರ್ಜಿಯಿಂದ ಬಹಿರಂಗಗೊಂಡಿದೆ. ಈ ಮೂರು ರಾಜ್ಯಗಳು ಅರ್ಧಕ್ಕಿಂತ ಹೆಚ್ಚು ಅಂದರೆ ಶೇ.54.03ರಷ್ಟು ಪಾಲನ್ನು ಪಡೆದಿವೆ. ಗುಜರಾತ್ ಶೇ.8.05ರಷ್ಟು ಅಂದರೆ 1.64 ಲಕ್ಷ, ಉತ್ತರಪ್ರದೇಶ ಶೇ.8.01ರಷ್ಟು ಅಂದರೆ 1.64 ಲಕ್ಷ ಅನರ್ಹ ಫಲಾನುಭವಿಗಳು ಹಣವನ್ನು ಪಡೆದಿದ್ದು ನಾಲ್ಕು ಮತ್ತು ಐದನೇ ಸ್ಥಾನವನ್ನು ಪಡೆದಿವೆ.

ಇದನ್ನೂ ಓದಿ: ರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ಸಿಕ್ಕಿಂ ರಾಜ್ಯದಲ್ಲಿ ಕೇವಲ ಒಂದು ಶೇಕಡ ಅನರ್ಹ ಫಲಾನುಭವಿ ಹಣ ಪಡೆದಿದ್ದಾರೆ. ಈ ರಾಜ್ಯಗಳಲ್ಲಿ 1,364.13 ಕೋಟಿ ರೂಗಳನ್ನು 68.20 ಲಕ್ಷ ಕಂತುಗಳಲ್ಲಿ ಪಾವತಿಸಲಾಗಿದೆ. ಇದರಲ್ಲಿ 49.25 ಲಕ್ಷ ಕಂತುಗಳನ್ನು ಆದಾಯ ತೆರಿಗೆ ಪಾವತಿಸುವ ರೈತರಿಗೆ ನೀಡಿದ್ದರೆ, ದೇಶಾದ್ಯಂತ ಅನರ್ಹ ರೈತರಿಗೆ 18.95 ಲಕ್ಷ ಕಂತುಗಳನ್ನು ಪಾವತಿಸಲಾಗಿದೆ ಎಂದು ಆರ್.ಟಿ.ಐ ಅಂಕಿಅಂಶಗಳನ್ನು ಉಲ್ಲೇಖಿಸಿ ತಿಳಿಸಿದೆ.

ಈ ಯೋಜನೆಯಡಿಯಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ 2 ಸಾವಿರ ರೂಗಳನ್ನು ಮೂರು ಕಂತುಗಳಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ. ಇದು ಅಧಿಕ ಆದಾಯವನ್ನು ಹೊಂದಿರುವವರನ್ನು ಹೊರಗಿಡುವ ಮಾನದಂಡಗಳಿಗೆ ಒಳಪಟ್ಟಿರುತ್ತದೆ ಎಂದು ಹೇಳಲಾಗಿದೆ.

ಸ್ಥಾಂಸ್ಥಿಕ ಭೂಮಾಲಿಕರು ಮಾತ್ರವಲ್ಲದೆ, ಒಂದು ಅಥವಾ ಹೆಚ್ಚಿನ ಸದಸ್ಯರು ಫಲಾನುಭವಿಗಳಲ್ಲಿರುವ ರೈತ ಕುಟುಂಬಗಳು, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರು, ಮಾಜಿ ಮತ್ತು ಪ್ರಸ್ತುತ ಸಚಿವರು, ಸಂಸದರು, ಶಾಸಕರು, ಎಂಎಲ್‌ಸಿಗಳು, ಮೇಯರ್‌‌ಗಳು, ಮತ್ತು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಹಾಲಿ ಮತ್ತು ನಿವೃತ್ತ ಸರ್ಕಾರಿ ನೌಕರರು ಆದಾಯ ತೆರಿಗೆ ಪಾವತಿದಾರರು, ವೈದ್ಯರು, ಇಂಜಿನಿಯರ್‌ಗಳು ಸೇರಿದಂತೆ ಹಲವಾರು ವರ್ಗದ ರೈತರನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...