Homeಮುಖಪುಟಪಿಎಂ ಕಿಸಾನ್ ಸನ್ಮಾನ್ ಯೋಜನೆ: 20.48 ಲಕ್ಷ ಅನರ್ಹ ಫಲನುಭವಿಗಳಿಗೆ 1,364 ಕೋಟಿ ಪಾವತಿ

ಪಿಎಂ ಕಿಸಾನ್ ಸನ್ಮಾನ್ ಯೋಜನೆ: 20.48 ಲಕ್ಷ ಅನರ್ಹ ಫಲನುಭವಿಗಳಿಗೆ 1,364 ಕೋಟಿ ಪಾವತಿ

ಜುಲೈ 31 ರವರೆಗೆ 1,364.13 ಕೋಟಿ ರೂಪಾಯಿಗಳನ್ನು ಅನರ್ಹ ವ್ಯಕ್ತಿಗಳಿಗೆ ಮತ್ತು ಆದಾಯ ತೆರಿಗೆ ಪಾವತಿಸುವ ರೈತರಿಗೆ ಪಾವತಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ಯೋಜನೆಯಡಿ 20.48 ಲಕ್ಷ ಅನರ್ಹ ಫಲಾನುಭವಿಗಳಿಗೆ 1,364 ಕೋಟಿ ರೂಪಾಯಿಗಳನ್ನು ಪಾವತಿ ಮಾಡಿದೆ ಎಂದು ಮಾಹಿತಿ ಹಕ್ಕು ಅರ್ಜಿಯಲ್ಲಿ ಕೇಳಿದ ಪ್ರಶ್ನೆಗಳಿಗೆ ಕೇಂದ್ರ ಕೃಷಿ ಸಚಿವಾಲಯ ಉತ್ತರಿಸಿದೆ ಎಂದು ದಿವೈರ್.ಇನ್ ವರದಿ ಮಾಡಿದೆ.

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು 2019 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿ ಮೂರು ಸಮಾನ ಕಂತುಗಳಲ್ಲಿ ವಾರ್ಷಿಕ 6 ಸಾವಿರ ರೂಪಾಯಿ ಪ್ರೋತ್ಸಾಹ ಧನವನ್ನು ಐದು ಎಕರೆಯೊಳಗೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ ನೀಡುತ್ತಾ ಬರಲಾಗುತ್ತಿದೆ.

ಆರ್.ಟಿ.ಐ ಅರ್ಜಿಗೆ ಉತ್ತರಿಸಿರುವ ಕೇಂದ್ರ ಕೃಷಿ ಸಚಿವಾಲಯವು ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಅನರ್ಹ ರೈತರು ಮತ್ತು ಆದಾಯ ತೆರಿಗೆ ಪಾವತಿಸುವವ ರೈತರಿಗೆ ಪ್ರೋತ್ಸಾಹಧನವನ್ನು ನೀಡಿದ್ದು ಇವರು ಎರಡು ವರ್ಗದ ಅನರ್ಹ ಫಲಾನುಭವಿಗಳು ಎಂಬುದನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

ಸರ್ಕಾರದಿಂದ ಮಾಹಿತಿ ಪಡೆದಿರುವ ಕಾಮನ್ವೆಲ್ತ್ ಮಾನವ ಹಕ್ಕುಗಳ ಉಪಕ್ರಮದ ಆರ್.ಟಿ.ಐ. ಅರ್ಜಿದಾರ ವೆಂಕಟೇಶ್ ನಾಯಕ್ “ಈ ಅನರ್ಹ ರೈತರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಆದಾಯ ತೆರಿಗೆ ಪಾವತಿದಾರರ ವರ್ಗಕ್ಕೆ ಸೇರಿದವರು. ಉಳಿದ 44.41ರಷ್ಟು ರೈತರು ಅನರ್ಹ ರೈತ ವರ್ಗಕ್ಕೆ ಸೇರಿದವರು ಎಂದು ಹೇಳಿದ್ದಾರೆಂದು ವರದಿ ತಿಳಿಸಿದೆ.

ಮಾಧ್ಯಮ ವರದಿಗಳ ಪ್ರಕಾರ ಅನರ್ಹ ರೈತರಿಗೆ ವರ್ಗಾಯಿಸಲಾದ ಇಷ್ಟೊಂದು ಪ್ರಮಾಣದ ಹಣವನ್ನು ವಾಪಸ್ ಪಡೆಯಲು ಕ್ರಮಗಳನ್ನು ಆರಂಭಿಸಲಾಗಿದೆ ಎಂದು ನಾಯಕ್ ಹೇಳಿದ್ದಾರೆ ಎಂದು ದಿವೈರ್.ಇನ್ ವರದಿಯಲ್ಲಿ ಉಲ್ಲೇಖಿಸಿದೆ.

ಆರ್.ಟಿ.ಐ ಕಾಯ್ದೆ 2005ರ ಅಡಿಯಲ್ಲಿ ದತ್ತಾಂಶ ಪಡೆದಿದ್ದು 2019ರಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆ ಆರಂಭಗೊಂಡಾಗಿನಿಂದ ಜುಲೈ 31 ರವರೆಗೆ 1,364.13 ಕೋಟಿ ರೂಪಾಯಿಗಳನ್ನು ಅನರ್ಹ ವ್ಯಕ್ತಿಗಳಿಗೆ ಮತ್ತು ಆದಾಯ ತೆರಿಗೆ ಪಾವತಿಸುವ ರೈತರಿಗೆ ಪಾವತಿಸಲಾಗಿದೆ. ಸರ್ಕಾರ ನೀಡಿದ ದತ್ತಾಂಶದಿಂದ ಹಣ ಅರ್ಹ ಫಲಾನುಭವಿಗಳಿಗೆ ಸಿಕ್ಕಿಲ್ಲ ಎಂಬ ಅಂಶ ಬೆಳಕಿಗೆ ಬರುತ್ತದೆ.

ಪಂಜಾಬ್, ಅಸ್ಸಾಂ, ಮಹಾರಾಷ್ಟ್ರ, ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ಅನರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದುನ್ನು ವರದಿ ಬೊಟ್ಟು ಮಾಡಿದೆ. ದೇಶಾದ್ಯಂತ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ಶೇ.23.16ರಷ್ಟು (4.74ಲಕ್ಷ) ಪಂಜಾಬ್ ರಾಜ್ಯದ ಅನರ್ಹ ರೈತರು ಹಣ ಪಡೆದಿದ್ದು ಮೊದಲ ಸ್ಥಾನದಲ್ಲಿದೆ. ಅಸ್ಸಾಂ 16.87ರಷ್ಟು (3.45) ಮಂದಿ, ಮಹಾರಾಷ್ಟ್ರ ಶೇ.13.99ರಷ್ಟು ಅನರ್ಹ ವ್ಯಕ್ತಿಗಳು ಹಣ ಪಡೆದಿದ್ದಾರೆ ಎಂದು ಆರ್.ಟಿ.ಐ. ಅರ್ಜಿಯಿಂದ ಬಹಿರಂಗಗೊಂಡಿದೆ. ಈ ಮೂರು ರಾಜ್ಯಗಳು ಅರ್ಧಕ್ಕಿಂತ ಹೆಚ್ಚು ಅಂದರೆ ಶೇ.54.03ರಷ್ಟು ಪಾಲನ್ನು ಪಡೆದಿವೆ. ಗುಜರಾತ್ ಶೇ.8.05ರಷ್ಟು ಅಂದರೆ 1.64 ಲಕ್ಷ, ಉತ್ತರಪ್ರದೇಶ ಶೇ.8.01ರಷ್ಟು ಅಂದರೆ 1.64 ಲಕ್ಷ ಅನರ್ಹ ಫಲಾನುಭವಿಗಳು ಹಣವನ್ನು ಪಡೆದಿದ್ದು ನಾಲ್ಕು ಮತ್ತು ಐದನೇ ಸ್ಥಾನವನ್ನು ಪಡೆದಿವೆ.

ಇದನ್ನೂ ಓದಿ: ರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ಸಿಕ್ಕಿಂ ರಾಜ್ಯದಲ್ಲಿ ಕೇವಲ ಒಂದು ಶೇಕಡ ಅನರ್ಹ ಫಲಾನುಭವಿ ಹಣ ಪಡೆದಿದ್ದಾರೆ. ಈ ರಾಜ್ಯಗಳಲ್ಲಿ 1,364.13 ಕೋಟಿ ರೂಗಳನ್ನು 68.20 ಲಕ್ಷ ಕಂತುಗಳಲ್ಲಿ ಪಾವತಿಸಲಾಗಿದೆ. ಇದರಲ್ಲಿ 49.25 ಲಕ್ಷ ಕಂತುಗಳನ್ನು ಆದಾಯ ತೆರಿಗೆ ಪಾವತಿಸುವ ರೈತರಿಗೆ ನೀಡಿದ್ದರೆ, ದೇಶಾದ್ಯಂತ ಅನರ್ಹ ರೈತರಿಗೆ 18.95 ಲಕ್ಷ ಕಂತುಗಳನ್ನು ಪಾವತಿಸಲಾಗಿದೆ ಎಂದು ಆರ್.ಟಿ.ಐ ಅಂಕಿಅಂಶಗಳನ್ನು ಉಲ್ಲೇಖಿಸಿ ತಿಳಿಸಿದೆ.

ಈ ಯೋಜನೆಯಡಿಯಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ 2 ಸಾವಿರ ರೂಗಳನ್ನು ಮೂರು ಕಂತುಗಳಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ. ಇದು ಅಧಿಕ ಆದಾಯವನ್ನು ಹೊಂದಿರುವವರನ್ನು ಹೊರಗಿಡುವ ಮಾನದಂಡಗಳಿಗೆ ಒಳಪಟ್ಟಿರುತ್ತದೆ ಎಂದು ಹೇಳಲಾಗಿದೆ.

ಸ್ಥಾಂಸ್ಥಿಕ ಭೂಮಾಲಿಕರು ಮಾತ್ರವಲ್ಲದೆ, ಒಂದು ಅಥವಾ ಹೆಚ್ಚಿನ ಸದಸ್ಯರು ಫಲಾನುಭವಿಗಳಲ್ಲಿರುವ ರೈತ ಕುಟುಂಬಗಳು, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರು, ಮಾಜಿ ಮತ್ತು ಪ್ರಸ್ತುತ ಸಚಿವರು, ಸಂಸದರು, ಶಾಸಕರು, ಎಂಎಲ್‌ಸಿಗಳು, ಮೇಯರ್‌‌ಗಳು, ಮತ್ತು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಹಾಲಿ ಮತ್ತು ನಿವೃತ್ತ ಸರ್ಕಾರಿ ನೌಕರರು ಆದಾಯ ತೆರಿಗೆ ಪಾವತಿದಾರರು, ವೈದ್ಯರು, ಇಂಜಿನಿಯರ್‌ಗಳು ಸೇರಿದಂತೆ ಹಲವಾರು ವರ್ಗದ ರೈತರನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...