Homeಮುಖಪುಟಪಿಎಂ ಕಿಸಾನ್ ಸನ್ಮಾನ್ ಯೋಜನೆ: 20.48 ಲಕ್ಷ ಅನರ್ಹ ಫಲನುಭವಿಗಳಿಗೆ 1,364 ಕೋಟಿ ಪಾವತಿ

ಪಿಎಂ ಕಿಸಾನ್ ಸನ್ಮಾನ್ ಯೋಜನೆ: 20.48 ಲಕ್ಷ ಅನರ್ಹ ಫಲನುಭವಿಗಳಿಗೆ 1,364 ಕೋಟಿ ಪಾವತಿ

ಜುಲೈ 31 ರವರೆಗೆ 1,364.13 ಕೋಟಿ ರೂಪಾಯಿಗಳನ್ನು ಅನರ್ಹ ವ್ಯಕ್ತಿಗಳಿಗೆ ಮತ್ತು ಆದಾಯ ತೆರಿಗೆ ಪಾವತಿಸುವ ರೈತರಿಗೆ ಪಾವತಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ಯೋಜನೆಯಡಿ 20.48 ಲಕ್ಷ ಅನರ್ಹ ಫಲಾನುಭವಿಗಳಿಗೆ 1,364 ಕೋಟಿ ರೂಪಾಯಿಗಳನ್ನು ಪಾವತಿ ಮಾಡಿದೆ ಎಂದು ಮಾಹಿತಿ ಹಕ್ಕು ಅರ್ಜಿಯಲ್ಲಿ ಕೇಳಿದ ಪ್ರಶ್ನೆಗಳಿಗೆ ಕೇಂದ್ರ ಕೃಷಿ ಸಚಿವಾಲಯ ಉತ್ತರಿಸಿದೆ ಎಂದು ದಿವೈರ್.ಇನ್ ವರದಿ ಮಾಡಿದೆ.

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು 2019 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿ ಮೂರು ಸಮಾನ ಕಂತುಗಳಲ್ಲಿ ವಾರ್ಷಿಕ 6 ಸಾವಿರ ರೂಪಾಯಿ ಪ್ರೋತ್ಸಾಹ ಧನವನ್ನು ಐದು ಎಕರೆಯೊಳಗೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ ನೀಡುತ್ತಾ ಬರಲಾಗುತ್ತಿದೆ.

ಆರ್.ಟಿ.ಐ ಅರ್ಜಿಗೆ ಉತ್ತರಿಸಿರುವ ಕೇಂದ್ರ ಕೃಷಿ ಸಚಿವಾಲಯವು ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಅನರ್ಹ ರೈತರು ಮತ್ತು ಆದಾಯ ತೆರಿಗೆ ಪಾವತಿಸುವವ ರೈತರಿಗೆ ಪ್ರೋತ್ಸಾಹಧನವನ್ನು ನೀಡಿದ್ದು ಇವರು ಎರಡು ವರ್ಗದ ಅನರ್ಹ ಫಲಾನುಭವಿಗಳು ಎಂಬುದನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

ಸರ್ಕಾರದಿಂದ ಮಾಹಿತಿ ಪಡೆದಿರುವ ಕಾಮನ್ವೆಲ್ತ್ ಮಾನವ ಹಕ್ಕುಗಳ ಉಪಕ್ರಮದ ಆರ್.ಟಿ.ಐ. ಅರ್ಜಿದಾರ ವೆಂಕಟೇಶ್ ನಾಯಕ್ “ಈ ಅನರ್ಹ ರೈತರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಆದಾಯ ತೆರಿಗೆ ಪಾವತಿದಾರರ ವರ್ಗಕ್ಕೆ ಸೇರಿದವರು. ಉಳಿದ 44.41ರಷ್ಟು ರೈತರು ಅನರ್ಹ ರೈತ ವರ್ಗಕ್ಕೆ ಸೇರಿದವರು ಎಂದು ಹೇಳಿದ್ದಾರೆಂದು ವರದಿ ತಿಳಿಸಿದೆ.

ಮಾಧ್ಯಮ ವರದಿಗಳ ಪ್ರಕಾರ ಅನರ್ಹ ರೈತರಿಗೆ ವರ್ಗಾಯಿಸಲಾದ ಇಷ್ಟೊಂದು ಪ್ರಮಾಣದ ಹಣವನ್ನು ವಾಪಸ್ ಪಡೆಯಲು ಕ್ರಮಗಳನ್ನು ಆರಂಭಿಸಲಾಗಿದೆ ಎಂದು ನಾಯಕ್ ಹೇಳಿದ್ದಾರೆ ಎಂದು ದಿವೈರ್.ಇನ್ ವರದಿಯಲ್ಲಿ ಉಲ್ಲೇಖಿಸಿದೆ.

ಆರ್.ಟಿ.ಐ ಕಾಯ್ದೆ 2005ರ ಅಡಿಯಲ್ಲಿ ದತ್ತಾಂಶ ಪಡೆದಿದ್ದು 2019ರಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆ ಆರಂಭಗೊಂಡಾಗಿನಿಂದ ಜುಲೈ 31 ರವರೆಗೆ 1,364.13 ಕೋಟಿ ರೂಪಾಯಿಗಳನ್ನು ಅನರ್ಹ ವ್ಯಕ್ತಿಗಳಿಗೆ ಮತ್ತು ಆದಾಯ ತೆರಿಗೆ ಪಾವತಿಸುವ ರೈತರಿಗೆ ಪಾವತಿಸಲಾಗಿದೆ. ಸರ್ಕಾರ ನೀಡಿದ ದತ್ತಾಂಶದಿಂದ ಹಣ ಅರ್ಹ ಫಲಾನುಭವಿಗಳಿಗೆ ಸಿಕ್ಕಿಲ್ಲ ಎಂಬ ಅಂಶ ಬೆಳಕಿಗೆ ಬರುತ್ತದೆ.

ಪಂಜಾಬ್, ಅಸ್ಸಾಂ, ಮಹಾರಾಷ್ಟ್ರ, ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ಅನರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದುನ್ನು ವರದಿ ಬೊಟ್ಟು ಮಾಡಿದೆ. ದೇಶಾದ್ಯಂತ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ಶೇ.23.16ರಷ್ಟು (4.74ಲಕ್ಷ) ಪಂಜಾಬ್ ರಾಜ್ಯದ ಅನರ್ಹ ರೈತರು ಹಣ ಪಡೆದಿದ್ದು ಮೊದಲ ಸ್ಥಾನದಲ್ಲಿದೆ. ಅಸ್ಸಾಂ 16.87ರಷ್ಟು (3.45) ಮಂದಿ, ಮಹಾರಾಷ್ಟ್ರ ಶೇ.13.99ರಷ್ಟು ಅನರ್ಹ ವ್ಯಕ್ತಿಗಳು ಹಣ ಪಡೆದಿದ್ದಾರೆ ಎಂದು ಆರ್.ಟಿ.ಐ. ಅರ್ಜಿಯಿಂದ ಬಹಿರಂಗಗೊಂಡಿದೆ. ಈ ಮೂರು ರಾಜ್ಯಗಳು ಅರ್ಧಕ್ಕಿಂತ ಹೆಚ್ಚು ಅಂದರೆ ಶೇ.54.03ರಷ್ಟು ಪಾಲನ್ನು ಪಡೆದಿವೆ. ಗುಜರಾತ್ ಶೇ.8.05ರಷ್ಟು ಅಂದರೆ 1.64 ಲಕ್ಷ, ಉತ್ತರಪ್ರದೇಶ ಶೇ.8.01ರಷ್ಟು ಅಂದರೆ 1.64 ಲಕ್ಷ ಅನರ್ಹ ಫಲಾನುಭವಿಗಳು ಹಣವನ್ನು ಪಡೆದಿದ್ದು ನಾಲ್ಕು ಮತ್ತು ಐದನೇ ಸ್ಥಾನವನ್ನು ಪಡೆದಿವೆ.

ಇದನ್ನೂ ಓದಿ: ರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ಸಿಕ್ಕಿಂ ರಾಜ್ಯದಲ್ಲಿ ಕೇವಲ ಒಂದು ಶೇಕಡ ಅನರ್ಹ ಫಲಾನುಭವಿ ಹಣ ಪಡೆದಿದ್ದಾರೆ. ಈ ರಾಜ್ಯಗಳಲ್ಲಿ 1,364.13 ಕೋಟಿ ರೂಗಳನ್ನು 68.20 ಲಕ್ಷ ಕಂತುಗಳಲ್ಲಿ ಪಾವತಿಸಲಾಗಿದೆ. ಇದರಲ್ಲಿ 49.25 ಲಕ್ಷ ಕಂತುಗಳನ್ನು ಆದಾಯ ತೆರಿಗೆ ಪಾವತಿಸುವ ರೈತರಿಗೆ ನೀಡಿದ್ದರೆ, ದೇಶಾದ್ಯಂತ ಅನರ್ಹ ರೈತರಿಗೆ 18.95 ಲಕ್ಷ ಕಂತುಗಳನ್ನು ಪಾವತಿಸಲಾಗಿದೆ ಎಂದು ಆರ್.ಟಿ.ಐ ಅಂಕಿಅಂಶಗಳನ್ನು ಉಲ್ಲೇಖಿಸಿ ತಿಳಿಸಿದೆ.

ಈ ಯೋಜನೆಯಡಿಯಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ 2 ಸಾವಿರ ರೂಗಳನ್ನು ಮೂರು ಕಂತುಗಳಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ. ಇದು ಅಧಿಕ ಆದಾಯವನ್ನು ಹೊಂದಿರುವವರನ್ನು ಹೊರಗಿಡುವ ಮಾನದಂಡಗಳಿಗೆ ಒಳಪಟ್ಟಿರುತ್ತದೆ ಎಂದು ಹೇಳಲಾಗಿದೆ.

ಸ್ಥಾಂಸ್ಥಿಕ ಭೂಮಾಲಿಕರು ಮಾತ್ರವಲ್ಲದೆ, ಒಂದು ಅಥವಾ ಹೆಚ್ಚಿನ ಸದಸ್ಯರು ಫಲಾನುಭವಿಗಳಲ್ಲಿರುವ ರೈತ ಕುಟುಂಬಗಳು, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರು, ಮಾಜಿ ಮತ್ತು ಪ್ರಸ್ತುತ ಸಚಿವರು, ಸಂಸದರು, ಶಾಸಕರು, ಎಂಎಲ್‌ಸಿಗಳು, ಮೇಯರ್‌‌ಗಳು, ಮತ್ತು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಹಾಲಿ ಮತ್ತು ನಿವೃತ್ತ ಸರ್ಕಾರಿ ನೌಕರರು ಆದಾಯ ತೆರಿಗೆ ಪಾವತಿದಾರರು, ವೈದ್ಯರು, ಇಂಜಿನಿಯರ್‌ಗಳು ಸೇರಿದಂತೆ ಹಲವಾರು ವರ್ಗದ ರೈತರನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...