Homeನಿಜವೋ ಸುಳ್ಳೋಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

ಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

- Advertisement -
- Advertisement -

ನೀವು ಮನೆಯಲ್ಲಿಯೇ ಕೂತು ಆರ್ಡರ್‌ ಮಾಡಿದರೆ ಸಾಕು ನಿಮ್ಮ ಮನೆಬಾಗಿಲಿಗೆ ಉಚಿತವಾಗಿ ಮಾಸ್ಕ್‌ ಬರಲಿದೆ. ಇದು ನರೇಂದ್ರ ಮೋದಿಯವರ ಹೊಚ್ಚಹೊಸ ಪ್ಲಾನ್‌ ಎಂಬ ಸಂದೇಶಗಳು ವೈರಲ್‌ ಆಗಿವೆ.

ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ‘ಪಿಎಂ ಮಾಸ್ಕ್ ಯೋಜನೆ’ ಎಂಬುಂದು ಇಲ್ಲ. ವೈರಲ್‌ ಆಗಿರುವ ಮಾಹಿತಿಯೂ ನಕಲಿ ಎಂದು ಪಿಐಬಿ (ಪ್ರೆಸ್‌ ಇನ್ಫರ್ಮೇಷನ್‌ ಬ್ಯೂರೋ) ಫ್ಯಾಕ್ಟ್ ಚೆಕ್ ಹೇಳಿದೆ.

‘ಪಿಎಂ ಮಾಸ್ಕ್ ಯೋಜನೆ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶಗಳು ನಕಲಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಖಚಿತಪಡಿಸಿದೆ. ಸರಕಾರಿ ಫ್ಯಾಕ್ಟ್ ಚೆಕಿಂಗ್ ಹ್ಯಾಂಡಲ್ ಅಂತಹ ಉಚಿತವಾಗಿ ಮಾಸ್ಕ್ ಗಳನ್ನು ಆರ್ಡರ್ ಮಾಡಬಹುದಾದ ಯಾವುದೇ ಯೋಜನೆ ಇಲ್ಲ. ಹಾಗೂ ಅದಕ್ಕೆ ಸಂಬಂಧಿತ ಯಾವುದೆ ಲಿಂಕ್ ಇಲ್ಲ ಎಂದು ಅದು ಹೇಳಿದೆ. ಟ್ವಿಟ್ಟರ್‌ನಲ್ಲಿ ಪಿಐಬಿ ಫ್ಯಾಕ್ಟ್ ಚೆಕ್ ಪೋಸ್ಟ್ ಮಾಡಿದ ಚಿತ್ರದಲ್ಲಿ, ಮಾಸ್ಕನ್ನು ಆರ್ಡರ್ ಮಾಡಬಹುದಾದ ಲಿಂಕ್ www.narendramodiawasyojna ನೊಂದಿಗೆ ಈ ಸಂದೇಶಗಳು ಪ್ರಾರಂಭವಾಗುತ್ತದೆ.

ಈ ತಪ್ಪು ಮಾಹಿತಿಯು ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್ ಗಳಲ್ಲಿ ಹರಡಲಾಗುತ್ತಿತ್ತು. “ಅಂತಹ ಯಾವುದೇ ಯೋಜನೆಯನ್ನು ಭಾರತ ಸರ್ಕಾರ ಪ್ರಾರಂಭಿಸಿಲ್ಲ. ನಿಮ್ಮ ವೈಯಕ್ತಿಕ ಮಾಹಿತಿ / ಶುಲ್ಕವನ್ನು ಸಂಗ್ರಹಿಸುವ ಇಂತಹ ನಕಲಿ ಮತ್ತು ಮೋಸದ ಸೈಟ್‌ಗಳ ಬಗ್ಗೆ ಎಚ್ಚರದಿಂದಿರಿ ”ಎಂದು ಪಿಬಿಐ ಟ್ವೀಟ್ ಮಾಡಿದೆ.

ತಪ್ಪು ಮಾಹಿತಿ ಮತ್ತು ಮೋಸದ ಲಿಂಕ್‌ಗಳನ್ನು ಹರಡುವುದು ಹೊಸತಲ್ಲ ಅಲ್ಲದೆ ಅನೇಕರು ಇದಕ್ಕೆ ಬಲಿಯಾಗಿದ್ದಾರೆ. ಆದ್ದರಿಂದ ಮಾಹಿತಿಯನ್ನು ಪರಿಶೀಲಿಸಿದ ನಂತರ ವಿಶೇಷವಾಗಿ ಸಾಂಕ್ರಾಮಿಕ ಸಮಯದಲ್ಲಿ ಇಂತಹವುಗಳನ್ನು ಖಚಿತಪಡಿಸಿಕೊಂಡ ನಂತರವೇ ಅದನ್ನು ರವಾನಿಸಲು ನಾವು ಬಳಕೆದಾರರಿಗೆ ಶಿಫಾರಸು ಮಾಡುತ್ತೇವೆ. ತೀರಾ ಇತ್ತೀಚೆಗೆ, ಎಲ್ಲಾ ಪಡಿತರ ಚೀಟಿ ಹೊಂದಿರುವವರಿಗೆ 50,000 ರೂ.ಗಳ ಆನ್‌ಲೈನ್ ವರ್ಗಾವಣೆಯನ್ನು ಒದಗಿಸುವ ರಾಷ್ಟ್ರೀಯ ಶಿಕ್ಷಿತ್ ಬೆರೋಜ್ಗಾರ್ ಯೋಜನೆ ಇಲ್ಲ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಸ್ಪಷ್ಟಪಡಿಸಿದೆ. ಅಂತಹ ಸೈಟ್‌ಗಳು ನಿಮ್ಮ ಬ್ಯಾಂಕಿಂಗ್ ಡೇಟಾವನ್ನು ಹಿಡಿದಿಟ್ಟುಕೊಂಡು ನಿಮ್ಮನ್ನು ಮೋಸಗೊಳಿಸಬಹುದು ಎಂದು ಟ್ವಿಟರ್ ಪೋಸ್ಟ್‌ಗಳಲ್ಲಿ ಪಿಐಬಿ ಹೇಳಿದೆ.

ಕಳೆದ ತಿಂಗಳು, ವಾಟ್ಸಪ್ ನಲ್ಲಿನ ನಮ್ಮ ಸಂದೇಶಗಳನ್ನು ಸರಕಾರ ಗಮನಿಸುತ್ತಿದೆ ಎಂದು ಸೂಚಿಸಲು ಮೂರನೇ ಟಿಕ್ ಅನ್ನು ತೋರಿಸಲಾಗುತ್ತಿದೆ ಎಂಬ ಸಂದೇಶ ಹರಿದಾಡಿತ್ತು. ಇದರ ಬಗ್ಗೆ ಕೂಡಾ ಪಿಐಬಿ ಫ್ಯಾಕ್ಟ್ ಚೆಕ್ ನಡೆಸಿ ವಾಟ್ಸಾಪ್ ಸಂದೇಶಗಳನ್ನು ಸರ್ಕಾರ ಬೇಹುಗಾರಿಕೆ ಮಾಡುತ್ತಿಲ್ಲ ಎಂದು ಪಿಐಬಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Please check the headline. It’s not PBI. It’s PIB.
    These kind of mistakes will bring down the credibility of your articles and concern over the issues.

    Please take note. Thanks.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...