Homeನಿಜವೋ ಸುಳ್ಳೋಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

ಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

- Advertisement -
- Advertisement -

ನೀವು ಮನೆಯಲ್ಲಿಯೇ ಕೂತು ಆರ್ಡರ್‌ ಮಾಡಿದರೆ ಸಾಕು ನಿಮ್ಮ ಮನೆಬಾಗಿಲಿಗೆ ಉಚಿತವಾಗಿ ಮಾಸ್ಕ್‌ ಬರಲಿದೆ. ಇದು ನರೇಂದ್ರ ಮೋದಿಯವರ ಹೊಚ್ಚಹೊಸ ಪ್ಲಾನ್‌ ಎಂಬ ಸಂದೇಶಗಳು ವೈರಲ್‌ ಆಗಿವೆ.

ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ‘ಪಿಎಂ ಮಾಸ್ಕ್ ಯೋಜನೆ’ ಎಂಬುಂದು ಇಲ್ಲ. ವೈರಲ್‌ ಆಗಿರುವ ಮಾಹಿತಿಯೂ ನಕಲಿ ಎಂದು ಪಿಐಬಿ (ಪ್ರೆಸ್‌ ಇನ್ಫರ್ಮೇಷನ್‌ ಬ್ಯೂರೋ) ಫ್ಯಾಕ್ಟ್ ಚೆಕ್ ಹೇಳಿದೆ.

‘ಪಿಎಂ ಮಾಸ್ಕ್ ಯೋಜನೆ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶಗಳು ನಕಲಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಖಚಿತಪಡಿಸಿದೆ. ಸರಕಾರಿ ಫ್ಯಾಕ್ಟ್ ಚೆಕಿಂಗ್ ಹ್ಯಾಂಡಲ್ ಅಂತಹ ಉಚಿತವಾಗಿ ಮಾಸ್ಕ್ ಗಳನ್ನು ಆರ್ಡರ್ ಮಾಡಬಹುದಾದ ಯಾವುದೇ ಯೋಜನೆ ಇಲ್ಲ. ಹಾಗೂ ಅದಕ್ಕೆ ಸಂಬಂಧಿತ ಯಾವುದೆ ಲಿಂಕ್ ಇಲ್ಲ ಎಂದು ಅದು ಹೇಳಿದೆ. ಟ್ವಿಟ್ಟರ್‌ನಲ್ಲಿ ಪಿಐಬಿ ಫ್ಯಾಕ್ಟ್ ಚೆಕ್ ಪೋಸ್ಟ್ ಮಾಡಿದ ಚಿತ್ರದಲ್ಲಿ, ಮಾಸ್ಕನ್ನು ಆರ್ಡರ್ ಮಾಡಬಹುದಾದ ಲಿಂಕ್ www.narendramodiawasyojna ನೊಂದಿಗೆ ಈ ಸಂದೇಶಗಳು ಪ್ರಾರಂಭವಾಗುತ್ತದೆ.

ಈ ತಪ್ಪು ಮಾಹಿತಿಯು ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್ ಗಳಲ್ಲಿ ಹರಡಲಾಗುತ್ತಿತ್ತು. “ಅಂತಹ ಯಾವುದೇ ಯೋಜನೆಯನ್ನು ಭಾರತ ಸರ್ಕಾರ ಪ್ರಾರಂಭಿಸಿಲ್ಲ. ನಿಮ್ಮ ವೈಯಕ್ತಿಕ ಮಾಹಿತಿ / ಶುಲ್ಕವನ್ನು ಸಂಗ್ರಹಿಸುವ ಇಂತಹ ನಕಲಿ ಮತ್ತು ಮೋಸದ ಸೈಟ್‌ಗಳ ಬಗ್ಗೆ ಎಚ್ಚರದಿಂದಿರಿ ”ಎಂದು ಪಿಬಿಐ ಟ್ವೀಟ್ ಮಾಡಿದೆ.

ತಪ್ಪು ಮಾಹಿತಿ ಮತ್ತು ಮೋಸದ ಲಿಂಕ್‌ಗಳನ್ನು ಹರಡುವುದು ಹೊಸತಲ್ಲ ಅಲ್ಲದೆ ಅನೇಕರು ಇದಕ್ಕೆ ಬಲಿಯಾಗಿದ್ದಾರೆ. ಆದ್ದರಿಂದ ಮಾಹಿತಿಯನ್ನು ಪರಿಶೀಲಿಸಿದ ನಂತರ ವಿಶೇಷವಾಗಿ ಸಾಂಕ್ರಾಮಿಕ ಸಮಯದಲ್ಲಿ ಇಂತಹವುಗಳನ್ನು ಖಚಿತಪಡಿಸಿಕೊಂಡ ನಂತರವೇ ಅದನ್ನು ರವಾನಿಸಲು ನಾವು ಬಳಕೆದಾರರಿಗೆ ಶಿಫಾರಸು ಮಾಡುತ್ತೇವೆ. ತೀರಾ ಇತ್ತೀಚೆಗೆ, ಎಲ್ಲಾ ಪಡಿತರ ಚೀಟಿ ಹೊಂದಿರುವವರಿಗೆ 50,000 ರೂ.ಗಳ ಆನ್‌ಲೈನ್ ವರ್ಗಾವಣೆಯನ್ನು ಒದಗಿಸುವ ರಾಷ್ಟ್ರೀಯ ಶಿಕ್ಷಿತ್ ಬೆರೋಜ್ಗಾರ್ ಯೋಜನೆ ಇಲ್ಲ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಸ್ಪಷ್ಟಪಡಿಸಿದೆ. ಅಂತಹ ಸೈಟ್‌ಗಳು ನಿಮ್ಮ ಬ್ಯಾಂಕಿಂಗ್ ಡೇಟಾವನ್ನು ಹಿಡಿದಿಟ್ಟುಕೊಂಡು ನಿಮ್ಮನ್ನು ಮೋಸಗೊಳಿಸಬಹುದು ಎಂದು ಟ್ವಿಟರ್ ಪೋಸ್ಟ್‌ಗಳಲ್ಲಿ ಪಿಐಬಿ ಹೇಳಿದೆ.

ಕಳೆದ ತಿಂಗಳು, ವಾಟ್ಸಪ್ ನಲ್ಲಿನ ನಮ್ಮ ಸಂದೇಶಗಳನ್ನು ಸರಕಾರ ಗಮನಿಸುತ್ತಿದೆ ಎಂದು ಸೂಚಿಸಲು ಮೂರನೇ ಟಿಕ್ ಅನ್ನು ತೋರಿಸಲಾಗುತ್ತಿದೆ ಎಂಬ ಸಂದೇಶ ಹರಿದಾಡಿತ್ತು. ಇದರ ಬಗ್ಗೆ ಕೂಡಾ ಪಿಐಬಿ ಫ್ಯಾಕ್ಟ್ ಚೆಕ್ ನಡೆಸಿ ವಾಟ್ಸಾಪ್ ಸಂದೇಶಗಳನ್ನು ಸರ್ಕಾರ ಬೇಹುಗಾರಿಕೆ ಮಾಡುತ್ತಿಲ್ಲ ಎಂದು ಪಿಐಬಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Please check the headline. It’s not PBI. It’s PIB.
    These kind of mistakes will bring down the credibility of your articles and concern over the issues.

    Please take note. Thanks.

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...