Homeನಿಜವೋ ಸುಳ್ಳೋಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

ಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

- Advertisement -
- Advertisement -

ನೀವು ಮನೆಯಲ್ಲಿಯೇ ಕೂತು ಆರ್ಡರ್‌ ಮಾಡಿದರೆ ಸಾಕು ನಿಮ್ಮ ಮನೆಬಾಗಿಲಿಗೆ ಉಚಿತವಾಗಿ ಮಾಸ್ಕ್‌ ಬರಲಿದೆ. ಇದು ನರೇಂದ್ರ ಮೋದಿಯವರ ಹೊಚ್ಚಹೊಸ ಪ್ಲಾನ್‌ ಎಂಬ ಸಂದೇಶಗಳು ವೈರಲ್‌ ಆಗಿವೆ.

ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ‘ಪಿಎಂ ಮಾಸ್ಕ್ ಯೋಜನೆ’ ಎಂಬುಂದು ಇಲ್ಲ. ವೈರಲ್‌ ಆಗಿರುವ ಮಾಹಿತಿಯೂ ನಕಲಿ ಎಂದು ಪಿಐಬಿ (ಪ್ರೆಸ್‌ ಇನ್ಫರ್ಮೇಷನ್‌ ಬ್ಯೂರೋ) ಫ್ಯಾಕ್ಟ್ ಚೆಕ್ ಹೇಳಿದೆ.

‘ಪಿಎಂ ಮಾಸ್ಕ್ ಯೋಜನೆ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶಗಳು ನಕಲಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಖಚಿತಪಡಿಸಿದೆ. ಸರಕಾರಿ ಫ್ಯಾಕ್ಟ್ ಚೆಕಿಂಗ್ ಹ್ಯಾಂಡಲ್ ಅಂತಹ ಉಚಿತವಾಗಿ ಮಾಸ್ಕ್ ಗಳನ್ನು ಆರ್ಡರ್ ಮಾಡಬಹುದಾದ ಯಾವುದೇ ಯೋಜನೆ ಇಲ್ಲ. ಹಾಗೂ ಅದಕ್ಕೆ ಸಂಬಂಧಿತ ಯಾವುದೆ ಲಿಂಕ್ ಇಲ್ಲ ಎಂದು ಅದು ಹೇಳಿದೆ. ಟ್ವಿಟ್ಟರ್‌ನಲ್ಲಿ ಪಿಐಬಿ ಫ್ಯಾಕ್ಟ್ ಚೆಕ್ ಪೋಸ್ಟ್ ಮಾಡಿದ ಚಿತ್ರದಲ್ಲಿ, ಮಾಸ್ಕನ್ನು ಆರ್ಡರ್ ಮಾಡಬಹುದಾದ ಲಿಂಕ್ www.narendramodiawasyojna ನೊಂದಿಗೆ ಈ ಸಂದೇಶಗಳು ಪ್ರಾರಂಭವಾಗುತ್ತದೆ.

ಈ ತಪ್ಪು ಮಾಹಿತಿಯು ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್ ಗಳಲ್ಲಿ ಹರಡಲಾಗುತ್ತಿತ್ತು. “ಅಂತಹ ಯಾವುದೇ ಯೋಜನೆಯನ್ನು ಭಾರತ ಸರ್ಕಾರ ಪ್ರಾರಂಭಿಸಿಲ್ಲ. ನಿಮ್ಮ ವೈಯಕ್ತಿಕ ಮಾಹಿತಿ / ಶುಲ್ಕವನ್ನು ಸಂಗ್ರಹಿಸುವ ಇಂತಹ ನಕಲಿ ಮತ್ತು ಮೋಸದ ಸೈಟ್‌ಗಳ ಬಗ್ಗೆ ಎಚ್ಚರದಿಂದಿರಿ ”ಎಂದು ಪಿಬಿಐ ಟ್ವೀಟ್ ಮಾಡಿದೆ.

ತಪ್ಪು ಮಾಹಿತಿ ಮತ್ತು ಮೋಸದ ಲಿಂಕ್‌ಗಳನ್ನು ಹರಡುವುದು ಹೊಸತಲ್ಲ ಅಲ್ಲದೆ ಅನೇಕರು ಇದಕ್ಕೆ ಬಲಿಯಾಗಿದ್ದಾರೆ. ಆದ್ದರಿಂದ ಮಾಹಿತಿಯನ್ನು ಪರಿಶೀಲಿಸಿದ ನಂತರ ವಿಶೇಷವಾಗಿ ಸಾಂಕ್ರಾಮಿಕ ಸಮಯದಲ್ಲಿ ಇಂತಹವುಗಳನ್ನು ಖಚಿತಪಡಿಸಿಕೊಂಡ ನಂತರವೇ ಅದನ್ನು ರವಾನಿಸಲು ನಾವು ಬಳಕೆದಾರರಿಗೆ ಶಿಫಾರಸು ಮಾಡುತ್ತೇವೆ. ತೀರಾ ಇತ್ತೀಚೆಗೆ, ಎಲ್ಲಾ ಪಡಿತರ ಚೀಟಿ ಹೊಂದಿರುವವರಿಗೆ 50,000 ರೂ.ಗಳ ಆನ್‌ಲೈನ್ ವರ್ಗಾವಣೆಯನ್ನು ಒದಗಿಸುವ ರಾಷ್ಟ್ರೀಯ ಶಿಕ್ಷಿತ್ ಬೆರೋಜ್ಗಾರ್ ಯೋಜನೆ ಇಲ್ಲ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಸ್ಪಷ್ಟಪಡಿಸಿದೆ. ಅಂತಹ ಸೈಟ್‌ಗಳು ನಿಮ್ಮ ಬ್ಯಾಂಕಿಂಗ್ ಡೇಟಾವನ್ನು ಹಿಡಿದಿಟ್ಟುಕೊಂಡು ನಿಮ್ಮನ್ನು ಮೋಸಗೊಳಿಸಬಹುದು ಎಂದು ಟ್ವಿಟರ್ ಪೋಸ್ಟ್‌ಗಳಲ್ಲಿ ಪಿಐಬಿ ಹೇಳಿದೆ.

ಕಳೆದ ತಿಂಗಳು, ವಾಟ್ಸಪ್ ನಲ್ಲಿನ ನಮ್ಮ ಸಂದೇಶಗಳನ್ನು ಸರಕಾರ ಗಮನಿಸುತ್ತಿದೆ ಎಂದು ಸೂಚಿಸಲು ಮೂರನೇ ಟಿಕ್ ಅನ್ನು ತೋರಿಸಲಾಗುತ್ತಿದೆ ಎಂಬ ಸಂದೇಶ ಹರಿದಾಡಿತ್ತು. ಇದರ ಬಗ್ಗೆ ಕೂಡಾ ಪಿಐಬಿ ಫ್ಯಾಕ್ಟ್ ಚೆಕ್ ನಡೆಸಿ ವಾಟ್ಸಾಪ್ ಸಂದೇಶಗಳನ್ನು ಸರ್ಕಾರ ಬೇಹುಗಾರಿಕೆ ಮಾಡುತ್ತಿಲ್ಲ ಎಂದು ಪಿಐಬಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Please check the headline. It’s not PBI. It’s PIB.
    These kind of mistakes will bring down the credibility of your articles and concern over the issues.

    Please take note. Thanks.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...