Homeನಿಜವೋ ಸುಳ್ಳೋಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

ಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

- Advertisement -
- Advertisement -

ನೀವು ಮನೆಯಲ್ಲಿಯೇ ಕೂತು ಆರ್ಡರ್‌ ಮಾಡಿದರೆ ಸಾಕು ನಿಮ್ಮ ಮನೆಬಾಗಿಲಿಗೆ ಉಚಿತವಾಗಿ ಮಾಸ್ಕ್‌ ಬರಲಿದೆ. ಇದು ನರೇಂದ್ರ ಮೋದಿಯವರ ಹೊಚ್ಚಹೊಸ ಪ್ಲಾನ್‌ ಎಂಬ ಸಂದೇಶಗಳು ವೈರಲ್‌ ಆಗಿವೆ.

ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ‘ಪಿಎಂ ಮಾಸ್ಕ್ ಯೋಜನೆ’ ಎಂಬುಂದು ಇಲ್ಲ. ವೈರಲ್‌ ಆಗಿರುವ ಮಾಹಿತಿಯೂ ನಕಲಿ ಎಂದು ಪಿಐಬಿ (ಪ್ರೆಸ್‌ ಇನ್ಫರ್ಮೇಷನ್‌ ಬ್ಯೂರೋ) ಫ್ಯಾಕ್ಟ್ ಚೆಕ್ ಹೇಳಿದೆ.

‘ಪಿಎಂ ಮಾಸ್ಕ್ ಯೋಜನೆ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶಗಳು ನಕಲಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಖಚಿತಪಡಿಸಿದೆ. ಸರಕಾರಿ ಫ್ಯಾಕ್ಟ್ ಚೆಕಿಂಗ್ ಹ್ಯಾಂಡಲ್ ಅಂತಹ ಉಚಿತವಾಗಿ ಮಾಸ್ಕ್ ಗಳನ್ನು ಆರ್ಡರ್ ಮಾಡಬಹುದಾದ ಯಾವುದೇ ಯೋಜನೆ ಇಲ್ಲ. ಹಾಗೂ ಅದಕ್ಕೆ ಸಂಬಂಧಿತ ಯಾವುದೆ ಲಿಂಕ್ ಇಲ್ಲ ಎಂದು ಅದು ಹೇಳಿದೆ. ಟ್ವಿಟ್ಟರ್‌ನಲ್ಲಿ ಪಿಐಬಿ ಫ್ಯಾಕ್ಟ್ ಚೆಕ್ ಪೋಸ್ಟ್ ಮಾಡಿದ ಚಿತ್ರದಲ್ಲಿ, ಮಾಸ್ಕನ್ನು ಆರ್ಡರ್ ಮಾಡಬಹುದಾದ ಲಿಂಕ್ www.narendramodiawasyojna ನೊಂದಿಗೆ ಈ ಸಂದೇಶಗಳು ಪ್ರಾರಂಭವಾಗುತ್ತದೆ.

ಈ ತಪ್ಪು ಮಾಹಿತಿಯು ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್ ಗಳಲ್ಲಿ ಹರಡಲಾಗುತ್ತಿತ್ತು. “ಅಂತಹ ಯಾವುದೇ ಯೋಜನೆಯನ್ನು ಭಾರತ ಸರ್ಕಾರ ಪ್ರಾರಂಭಿಸಿಲ್ಲ. ನಿಮ್ಮ ವೈಯಕ್ತಿಕ ಮಾಹಿತಿ / ಶುಲ್ಕವನ್ನು ಸಂಗ್ರಹಿಸುವ ಇಂತಹ ನಕಲಿ ಮತ್ತು ಮೋಸದ ಸೈಟ್‌ಗಳ ಬಗ್ಗೆ ಎಚ್ಚರದಿಂದಿರಿ ”ಎಂದು ಪಿಬಿಐ ಟ್ವೀಟ್ ಮಾಡಿದೆ.

ತಪ್ಪು ಮಾಹಿತಿ ಮತ್ತು ಮೋಸದ ಲಿಂಕ್‌ಗಳನ್ನು ಹರಡುವುದು ಹೊಸತಲ್ಲ ಅಲ್ಲದೆ ಅನೇಕರು ಇದಕ್ಕೆ ಬಲಿಯಾಗಿದ್ದಾರೆ. ಆದ್ದರಿಂದ ಮಾಹಿತಿಯನ್ನು ಪರಿಶೀಲಿಸಿದ ನಂತರ ವಿಶೇಷವಾಗಿ ಸಾಂಕ್ರಾಮಿಕ ಸಮಯದಲ್ಲಿ ಇಂತಹವುಗಳನ್ನು ಖಚಿತಪಡಿಸಿಕೊಂಡ ನಂತರವೇ ಅದನ್ನು ರವಾನಿಸಲು ನಾವು ಬಳಕೆದಾರರಿಗೆ ಶಿಫಾರಸು ಮಾಡುತ್ತೇವೆ. ತೀರಾ ಇತ್ತೀಚೆಗೆ, ಎಲ್ಲಾ ಪಡಿತರ ಚೀಟಿ ಹೊಂದಿರುವವರಿಗೆ 50,000 ರೂ.ಗಳ ಆನ್‌ಲೈನ್ ವರ್ಗಾವಣೆಯನ್ನು ಒದಗಿಸುವ ರಾಷ್ಟ್ರೀಯ ಶಿಕ್ಷಿತ್ ಬೆರೋಜ್ಗಾರ್ ಯೋಜನೆ ಇಲ್ಲ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಸ್ಪಷ್ಟಪಡಿಸಿದೆ. ಅಂತಹ ಸೈಟ್‌ಗಳು ನಿಮ್ಮ ಬ್ಯಾಂಕಿಂಗ್ ಡೇಟಾವನ್ನು ಹಿಡಿದಿಟ್ಟುಕೊಂಡು ನಿಮ್ಮನ್ನು ಮೋಸಗೊಳಿಸಬಹುದು ಎಂದು ಟ್ವಿಟರ್ ಪೋಸ್ಟ್‌ಗಳಲ್ಲಿ ಪಿಐಬಿ ಹೇಳಿದೆ.

ಕಳೆದ ತಿಂಗಳು, ವಾಟ್ಸಪ್ ನಲ್ಲಿನ ನಮ್ಮ ಸಂದೇಶಗಳನ್ನು ಸರಕಾರ ಗಮನಿಸುತ್ತಿದೆ ಎಂದು ಸೂಚಿಸಲು ಮೂರನೇ ಟಿಕ್ ಅನ್ನು ತೋರಿಸಲಾಗುತ್ತಿದೆ ಎಂಬ ಸಂದೇಶ ಹರಿದಾಡಿತ್ತು. ಇದರ ಬಗ್ಗೆ ಕೂಡಾ ಪಿಐಬಿ ಫ್ಯಾಕ್ಟ್ ಚೆಕ್ ನಡೆಸಿ ವಾಟ್ಸಾಪ್ ಸಂದೇಶಗಳನ್ನು ಸರ್ಕಾರ ಬೇಹುಗಾರಿಕೆ ಮಾಡುತ್ತಿಲ್ಲ ಎಂದು ಪಿಐಬಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Please check the headline. It’s not PBI. It’s PIB.
    These kind of mistakes will bring down the credibility of your articles and concern over the issues.

    Please take note. Thanks.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...