Homeನಿಜವೋ ಸುಳ್ಳೋಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

ಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

- Advertisement -
- Advertisement -

ನೀವು ಮನೆಯಲ್ಲಿಯೇ ಕೂತು ಆರ್ಡರ್‌ ಮಾಡಿದರೆ ಸಾಕು ನಿಮ್ಮ ಮನೆಬಾಗಿಲಿಗೆ ಉಚಿತವಾಗಿ ಮಾಸ್ಕ್‌ ಬರಲಿದೆ. ಇದು ನರೇಂದ್ರ ಮೋದಿಯವರ ಹೊಚ್ಚಹೊಸ ಪ್ಲಾನ್‌ ಎಂಬ ಸಂದೇಶಗಳು ವೈರಲ್‌ ಆಗಿವೆ.

ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ‘ಪಿಎಂ ಮಾಸ್ಕ್ ಯೋಜನೆ’ ಎಂಬುಂದು ಇಲ್ಲ. ವೈರಲ್‌ ಆಗಿರುವ ಮಾಹಿತಿಯೂ ನಕಲಿ ಎಂದು ಪಿಐಬಿ (ಪ್ರೆಸ್‌ ಇನ್ಫರ್ಮೇಷನ್‌ ಬ್ಯೂರೋ) ಫ್ಯಾಕ್ಟ್ ಚೆಕ್ ಹೇಳಿದೆ.

‘ಪಿಎಂ ಮಾಸ್ಕ್ ಯೋಜನೆ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶಗಳು ನಕಲಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಖಚಿತಪಡಿಸಿದೆ. ಸರಕಾರಿ ಫ್ಯಾಕ್ಟ್ ಚೆಕಿಂಗ್ ಹ್ಯಾಂಡಲ್ ಅಂತಹ ಉಚಿತವಾಗಿ ಮಾಸ್ಕ್ ಗಳನ್ನು ಆರ್ಡರ್ ಮಾಡಬಹುದಾದ ಯಾವುದೇ ಯೋಜನೆ ಇಲ್ಲ. ಹಾಗೂ ಅದಕ್ಕೆ ಸಂಬಂಧಿತ ಯಾವುದೆ ಲಿಂಕ್ ಇಲ್ಲ ಎಂದು ಅದು ಹೇಳಿದೆ. ಟ್ವಿಟ್ಟರ್‌ನಲ್ಲಿ ಪಿಐಬಿ ಫ್ಯಾಕ್ಟ್ ಚೆಕ್ ಪೋಸ್ಟ್ ಮಾಡಿದ ಚಿತ್ರದಲ್ಲಿ, ಮಾಸ್ಕನ್ನು ಆರ್ಡರ್ ಮಾಡಬಹುದಾದ ಲಿಂಕ್ www.narendramodiawasyojna ನೊಂದಿಗೆ ಈ ಸಂದೇಶಗಳು ಪ್ರಾರಂಭವಾಗುತ್ತದೆ.

ಈ ತಪ್ಪು ಮಾಹಿತಿಯು ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್ ಗಳಲ್ಲಿ ಹರಡಲಾಗುತ್ತಿತ್ತು. “ಅಂತಹ ಯಾವುದೇ ಯೋಜನೆಯನ್ನು ಭಾರತ ಸರ್ಕಾರ ಪ್ರಾರಂಭಿಸಿಲ್ಲ. ನಿಮ್ಮ ವೈಯಕ್ತಿಕ ಮಾಹಿತಿ / ಶುಲ್ಕವನ್ನು ಸಂಗ್ರಹಿಸುವ ಇಂತಹ ನಕಲಿ ಮತ್ತು ಮೋಸದ ಸೈಟ್‌ಗಳ ಬಗ್ಗೆ ಎಚ್ಚರದಿಂದಿರಿ ”ಎಂದು ಪಿಬಿಐ ಟ್ವೀಟ್ ಮಾಡಿದೆ.

ತಪ್ಪು ಮಾಹಿತಿ ಮತ್ತು ಮೋಸದ ಲಿಂಕ್‌ಗಳನ್ನು ಹರಡುವುದು ಹೊಸತಲ್ಲ ಅಲ್ಲದೆ ಅನೇಕರು ಇದಕ್ಕೆ ಬಲಿಯಾಗಿದ್ದಾರೆ. ಆದ್ದರಿಂದ ಮಾಹಿತಿಯನ್ನು ಪರಿಶೀಲಿಸಿದ ನಂತರ ವಿಶೇಷವಾಗಿ ಸಾಂಕ್ರಾಮಿಕ ಸಮಯದಲ್ಲಿ ಇಂತಹವುಗಳನ್ನು ಖಚಿತಪಡಿಸಿಕೊಂಡ ನಂತರವೇ ಅದನ್ನು ರವಾನಿಸಲು ನಾವು ಬಳಕೆದಾರರಿಗೆ ಶಿಫಾರಸು ಮಾಡುತ್ತೇವೆ. ತೀರಾ ಇತ್ತೀಚೆಗೆ, ಎಲ್ಲಾ ಪಡಿತರ ಚೀಟಿ ಹೊಂದಿರುವವರಿಗೆ 50,000 ರೂ.ಗಳ ಆನ್‌ಲೈನ್ ವರ್ಗಾವಣೆಯನ್ನು ಒದಗಿಸುವ ರಾಷ್ಟ್ರೀಯ ಶಿಕ್ಷಿತ್ ಬೆರೋಜ್ಗಾರ್ ಯೋಜನೆ ಇಲ್ಲ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಸ್ಪಷ್ಟಪಡಿಸಿದೆ. ಅಂತಹ ಸೈಟ್‌ಗಳು ನಿಮ್ಮ ಬ್ಯಾಂಕಿಂಗ್ ಡೇಟಾವನ್ನು ಹಿಡಿದಿಟ್ಟುಕೊಂಡು ನಿಮ್ಮನ್ನು ಮೋಸಗೊಳಿಸಬಹುದು ಎಂದು ಟ್ವಿಟರ್ ಪೋಸ್ಟ್‌ಗಳಲ್ಲಿ ಪಿಐಬಿ ಹೇಳಿದೆ.

ಕಳೆದ ತಿಂಗಳು, ವಾಟ್ಸಪ್ ನಲ್ಲಿನ ನಮ್ಮ ಸಂದೇಶಗಳನ್ನು ಸರಕಾರ ಗಮನಿಸುತ್ತಿದೆ ಎಂದು ಸೂಚಿಸಲು ಮೂರನೇ ಟಿಕ್ ಅನ್ನು ತೋರಿಸಲಾಗುತ್ತಿದೆ ಎಂಬ ಸಂದೇಶ ಹರಿದಾಡಿತ್ತು. ಇದರ ಬಗ್ಗೆ ಕೂಡಾ ಪಿಐಬಿ ಫ್ಯಾಕ್ಟ್ ಚೆಕ್ ನಡೆಸಿ ವಾಟ್ಸಾಪ್ ಸಂದೇಶಗಳನ್ನು ಸರ್ಕಾರ ಬೇಹುಗಾರಿಕೆ ಮಾಡುತ್ತಿಲ್ಲ ಎಂದು ಪಿಐಬಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Please check the headline. It’s not PBI. It’s PIB.
    These kind of mistakes will bring down the credibility of your articles and concern over the issues.

    Please take note. Thanks.

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...