Homeಮುಖಪುಟಲಾಕ್‌ಡೌನ್ 15 ದಿನ ವಿಸ್ತರಣೆಗೆ ಹಲವು ಮುಖ್ಯಮಂತ್ರಿಗಳು ಹೇಳಿದ್ದೇನು?

ಲಾಕ್‌ಡೌನ್ 15 ದಿನ ವಿಸ್ತರಣೆಗೆ ಹಲವು ಮುಖ್ಯಮಂತ್ರಿಗಳು ಹೇಳಿದ್ದೇನು?

- Advertisement -
- Advertisement -

ಕೊರೊನಾ ಲಾಕ್‌ಡೌನ್ ಅನ್ನು ಎಪ್ರಿಲ್ 30 ವರೆಗೆ ಮುಂದುವರೆಸಲು, ಪ್ರಧಾನಿ ಮೋದಿ ಮತ್ತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವಿಡಿಯೋ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ.

ಇಂದು ವಿಡಿಯೋ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಲಾಕ್‌ಡೌನ್ ಅನ್ನು ಎರಡು ವಾರಗಳವರೆಗೆ ವಿಸ್ತರಿಸಲಾಗುವುದು ಎಂದು ಸೂಚಿಸಿದ್ದಾರೆ. ಈ ಹಿಂದೆ ಘೋಷಿಸಿದ್ದ 21 ದಿನಗಳ ಲಾಕ್‌ಡೌನ್ ಮಂಗಳವಾರ ಕೊನೆಕೊಳ್ಳುತ್ತದೆ.

“ಪ್ರಧಾನಿ ಲಾಕ್‌ಡೌನ್ ವಿಸ್ತರಿಸಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಲಾಕ್‌ಡೌನ್ ಅನ್ನು ಮೊದಲೇ ಪ್ರಾರಂಭಿಸಿದ್ದರಿಂದ, ಮುಂದುವರಿದ ದೇಶಗಳಿಗಿಂತ ಭಾರತದ ಪರಿಸ್ಥಿತಿ ಉತ್ತಮವಾಗಿದೆ. ಅದನ್ನು ಈಗ ನಿಲ್ಲಿಸಿದರೆ ಎಲ್ಲಾವು ನಷ್ಟವಾಗುತ್ತದೆ. ಲಾಕ್ ಡೌನ್ ವಿಸ್ತರಿಸುವುದು ಮುಖ್ಯವಾಗಿದೆ” ಸಭೆಯ ಕೆಲವೇ ನಿಮಿಷಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಒಡಿಶಾ ಮತ್ತು ಪಂಜಾಬ್ ಈಗಾಗಲೇ ಲಾಕ್ ಡೌನ್ ವಿಸ್ತರಣೆಯನ್ನು ಘೋಷಿಸಿವೆ. ಬಿಹಾರ ಸರ್ಕಾರ ಕೇಂದ್ರಕ್ಕೆ ಬರೆದ ಪತ್ರದಲ್ಲಿ ಲಾಕ್ ಡೌನ್ ಅನ್ನು ವಿಸ್ತರಿಸಲು ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ; ಆದರೆ ಗ್ರಾಮೀಣ ನಿರ್ಮಾಣ ಮತ್ತು ಪ್ರವಾಹ ಪರಿಹಾರ ಕಾರ್ಯಗಳನ್ನು ಮುಂದುವರೆಸಲು ಬಯಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಬಿಹಾರದಲ್ಲಿ ಕಳೆದ ವರ್ಷ ಭಾರಿ ಪ್ರವಾಹ ಬಂದಿದ್ದರಿಂದ ಅಲ್ಲಿ ಪುನರ್ನಿರ್ಮಾಣ ಕಾರ್ಯಗಳು ಇನ್ನೂ ನಡೆಯುತ್ತಿವೆ.

ಲಾಕ್‌ಡೌನ್ ಅನ್ನು ಈಗಲೇ ತೆಗೆದುಹಾಕಿ ಕೊರೊನಾ ಪ್ರಕರಣಗಳು ಹೆಚ್ಚಾದರೆ ಅದನ್ನು ಎದುರಿಸಲು ಅಗತ್ಯವಾದ ಬೃಹತ್ ಸಂಪನ್ಮೂಲಗಳು ಇಲ್ಲ ಎಂದು ವಿಡಿಯೋ ಸಮ್ಮೇಳನದಲ್ಲಿ ಭಾಗವಹಿಸಿದ ಹೆಚ್ಚಿನ ಮುಖ್ಯಮಂತ್ರಿಗಳು ಹೇಳಿದರು. ಬಿಜೆಪಿ ಅಲ್ಲದ ಎಲ್ಲ ಮುಖ್ಯಮಂತ್ರಿಗಳು ಪ್ರಧಾನಿಯ ಬಳಿ ಪರಿಹಾರ ಪ್ಯಾಕೇಜ್ ಕೇಳಿದರು.

ಲಾಕ್ ಡೌನ್ ವಿಸ್ತರಣೆಯನ್ನು ಘೋಷಿಸಲು ಪ್ರಧಾನಿ ಮೋದಿ ಮತ್ತೆ ರಾಷ್ಟ್ರಕ್ಕೆ ದೂರದರ್ಶನ ಭಾಷಣ ಮಾಡುವ ಸಾಧ್ಯತೆ ಇದೆ. ಇಂದು ನಡೆದ ಸಭೆಯ ಅಂತ್ಯದ ವೇಳೆಗೆ, ಕೈಗಾರಿಕೆಗಳನ್ನು ಶ್ರೇಣೀಕೃತ ರೀತಿಯಲ್ಲಿ ಮತ್ತೆ ತೆರೆಯಲು ಅವಕಾಶ ನೀಡುವುದಾಗಿ ಪ್ರಧಾನಿ ಮೋದಿ ಹೇಳಿದರು.

“ಲಾಕ್‌ಡೌನ್ ಅನ್ನು ವಿಸ್ತರಿಸಿ. ಕೊರೊನಾ ವೈರಸ್ ಅನ್ನು ಎದುರಿಸಲು ಮೂಲಸೌಕರ್ಯಗಳ ಕೊರತೆಯಿಲ್ಲ, ಆದರೆ ನೀತಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದೇ ಪ್ರಶ್ನೆ. ಪ್ರಧಾನಿ ಮೋದಿ ಯಾವಾಗಲೂ ರಾಜ್ಯಗಳ ಸಲಹೆಗಳನ್ನು ಸ್ವಾಗತಿಸಿದ್ದಾರೆ” ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.

“ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಸ್ತರಿಸುವುದು ಮುಖ್ಯ …ಚಳಿಗಾಲದ ಬೆಳೆಗೆ ನಮಗೆ ಸಾಮಾನ್ಯ ಪರಿಹಾರ ನೀಡಬೇಕು” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಪರಿಸ್ಥಿತಿಗಳು ಕಳವಳಕಾರಿ ಆಗಿರುವುದರಿಂದ ಮಂಗಳವಾರ ಕೊನೆಗೊಳ್ಳಲಿರುವ ಪ್ರಸ್ತುತ ಲಾಕ್‌ಡೌನ್ ವಿಸ್ತರಣೆಯನ್ನು ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಭಾರತದಲ್ಲಿ 7,400 ಕ್ಕೂ ಹೆಚ್ಚು ಕರೋನವೈರಸ್ ಪ್ರಕರಣಗಳನ್ನು ದೃಡಪಟ್ಟಿವೆ ಮತ್ತು 239 ಸಾವುಗಳು ವರದಿಯಾಗಿದೆ. ದೆಹಲಿಯಲ್ಲಿ 903 ಪ್ರಕರಣಗಳು (ದೇಶದಲ್ಲಿ ಮೂರನೇ ಅತಿ ಹೆಚ್ಚು) ಮತ್ತು 13 ಸಾವುಗಳು ವರದಿಯಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...