Homeಮುಖಪುಟಲಾಕ್‌ಡೌನ್ 15 ದಿನ ವಿಸ್ತರಣೆಗೆ ಹಲವು ಮುಖ್ಯಮಂತ್ರಿಗಳು ಹೇಳಿದ್ದೇನು?

ಲಾಕ್‌ಡೌನ್ 15 ದಿನ ವಿಸ್ತರಣೆಗೆ ಹಲವು ಮುಖ್ಯಮಂತ್ರಿಗಳು ಹೇಳಿದ್ದೇನು?

- Advertisement -
- Advertisement -

ಕೊರೊನಾ ಲಾಕ್‌ಡೌನ್ ಅನ್ನು ಎಪ್ರಿಲ್ 30 ವರೆಗೆ ಮುಂದುವರೆಸಲು, ಪ್ರಧಾನಿ ಮೋದಿ ಮತ್ತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವಿಡಿಯೋ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ.

ಇಂದು ವಿಡಿಯೋ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಲಾಕ್‌ಡೌನ್ ಅನ್ನು ಎರಡು ವಾರಗಳವರೆಗೆ ವಿಸ್ತರಿಸಲಾಗುವುದು ಎಂದು ಸೂಚಿಸಿದ್ದಾರೆ. ಈ ಹಿಂದೆ ಘೋಷಿಸಿದ್ದ 21 ದಿನಗಳ ಲಾಕ್‌ಡೌನ್ ಮಂಗಳವಾರ ಕೊನೆಕೊಳ್ಳುತ್ತದೆ.

“ಪ್ರಧಾನಿ ಲಾಕ್‌ಡೌನ್ ವಿಸ್ತರಿಸಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಲಾಕ್‌ಡೌನ್ ಅನ್ನು ಮೊದಲೇ ಪ್ರಾರಂಭಿಸಿದ್ದರಿಂದ, ಮುಂದುವರಿದ ದೇಶಗಳಿಗಿಂತ ಭಾರತದ ಪರಿಸ್ಥಿತಿ ಉತ್ತಮವಾಗಿದೆ. ಅದನ್ನು ಈಗ ನಿಲ್ಲಿಸಿದರೆ ಎಲ್ಲಾವು ನಷ್ಟವಾಗುತ್ತದೆ. ಲಾಕ್ ಡೌನ್ ವಿಸ್ತರಿಸುವುದು ಮುಖ್ಯವಾಗಿದೆ” ಸಭೆಯ ಕೆಲವೇ ನಿಮಿಷಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಒಡಿಶಾ ಮತ್ತು ಪಂಜಾಬ್ ಈಗಾಗಲೇ ಲಾಕ್ ಡೌನ್ ವಿಸ್ತರಣೆಯನ್ನು ಘೋಷಿಸಿವೆ. ಬಿಹಾರ ಸರ್ಕಾರ ಕೇಂದ್ರಕ್ಕೆ ಬರೆದ ಪತ್ರದಲ್ಲಿ ಲಾಕ್ ಡೌನ್ ಅನ್ನು ವಿಸ್ತರಿಸಲು ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ; ಆದರೆ ಗ್ರಾಮೀಣ ನಿರ್ಮಾಣ ಮತ್ತು ಪ್ರವಾಹ ಪರಿಹಾರ ಕಾರ್ಯಗಳನ್ನು ಮುಂದುವರೆಸಲು ಬಯಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಬಿಹಾರದಲ್ಲಿ ಕಳೆದ ವರ್ಷ ಭಾರಿ ಪ್ರವಾಹ ಬಂದಿದ್ದರಿಂದ ಅಲ್ಲಿ ಪುನರ್ನಿರ್ಮಾಣ ಕಾರ್ಯಗಳು ಇನ್ನೂ ನಡೆಯುತ್ತಿವೆ.

ಲಾಕ್‌ಡೌನ್ ಅನ್ನು ಈಗಲೇ ತೆಗೆದುಹಾಕಿ ಕೊರೊನಾ ಪ್ರಕರಣಗಳು ಹೆಚ್ಚಾದರೆ ಅದನ್ನು ಎದುರಿಸಲು ಅಗತ್ಯವಾದ ಬೃಹತ್ ಸಂಪನ್ಮೂಲಗಳು ಇಲ್ಲ ಎಂದು ವಿಡಿಯೋ ಸಮ್ಮೇಳನದಲ್ಲಿ ಭಾಗವಹಿಸಿದ ಹೆಚ್ಚಿನ ಮುಖ್ಯಮಂತ್ರಿಗಳು ಹೇಳಿದರು. ಬಿಜೆಪಿ ಅಲ್ಲದ ಎಲ್ಲ ಮುಖ್ಯಮಂತ್ರಿಗಳು ಪ್ರಧಾನಿಯ ಬಳಿ ಪರಿಹಾರ ಪ್ಯಾಕೇಜ್ ಕೇಳಿದರು.

ಲಾಕ್ ಡೌನ್ ವಿಸ್ತರಣೆಯನ್ನು ಘೋಷಿಸಲು ಪ್ರಧಾನಿ ಮೋದಿ ಮತ್ತೆ ರಾಷ್ಟ್ರಕ್ಕೆ ದೂರದರ್ಶನ ಭಾಷಣ ಮಾಡುವ ಸಾಧ್ಯತೆ ಇದೆ. ಇಂದು ನಡೆದ ಸಭೆಯ ಅಂತ್ಯದ ವೇಳೆಗೆ, ಕೈಗಾರಿಕೆಗಳನ್ನು ಶ್ರೇಣೀಕೃತ ರೀತಿಯಲ್ಲಿ ಮತ್ತೆ ತೆರೆಯಲು ಅವಕಾಶ ನೀಡುವುದಾಗಿ ಪ್ರಧಾನಿ ಮೋದಿ ಹೇಳಿದರು.

“ಲಾಕ್‌ಡೌನ್ ಅನ್ನು ವಿಸ್ತರಿಸಿ. ಕೊರೊನಾ ವೈರಸ್ ಅನ್ನು ಎದುರಿಸಲು ಮೂಲಸೌಕರ್ಯಗಳ ಕೊರತೆಯಿಲ್ಲ, ಆದರೆ ನೀತಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದೇ ಪ್ರಶ್ನೆ. ಪ್ರಧಾನಿ ಮೋದಿ ಯಾವಾಗಲೂ ರಾಜ್ಯಗಳ ಸಲಹೆಗಳನ್ನು ಸ್ವಾಗತಿಸಿದ್ದಾರೆ” ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.

“ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಸ್ತರಿಸುವುದು ಮುಖ್ಯ …ಚಳಿಗಾಲದ ಬೆಳೆಗೆ ನಮಗೆ ಸಾಮಾನ್ಯ ಪರಿಹಾರ ನೀಡಬೇಕು” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಪರಿಸ್ಥಿತಿಗಳು ಕಳವಳಕಾರಿ ಆಗಿರುವುದರಿಂದ ಮಂಗಳವಾರ ಕೊನೆಗೊಳ್ಳಲಿರುವ ಪ್ರಸ್ತುತ ಲಾಕ್‌ಡೌನ್ ವಿಸ್ತರಣೆಯನ್ನು ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಭಾರತದಲ್ಲಿ 7,400 ಕ್ಕೂ ಹೆಚ್ಚು ಕರೋನವೈರಸ್ ಪ್ರಕರಣಗಳನ್ನು ದೃಡಪಟ್ಟಿವೆ ಮತ್ತು 239 ಸಾವುಗಳು ವರದಿಯಾಗಿದೆ. ದೆಹಲಿಯಲ್ಲಿ 903 ಪ್ರಕರಣಗಳು (ದೇಶದಲ್ಲಿ ಮೂರನೇ ಅತಿ ಹೆಚ್ಚು) ಮತ್ತು 13 ಸಾವುಗಳು ವರದಿಯಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...