Homeಕರ್ನಾಟಕOBC ಸಿಎಂ ಘೋಷಣೆ; ಮೋದಿಗೆ ಒವೈಸಿ ತಿರುಗೇಟು

OBC ಸಿಎಂ ಘೋಷಣೆ; ಮೋದಿಗೆ ಒವೈಸಿ ತಿರುಗೇಟು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಜಾತಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ, ಆದರೆ ಅವರು ಹಿಂದುಳಿದ ವರ್ಗದ ಜನರಿಗೆ ನ್ಯಾಯ ಒದಗಿಸಲು ಬಯಸುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು ಮೋದಿಯ ‘ಒಬಿಸಿ ಸಿಎಂ’ ಹೇಳಿಕೆಗೆ ಪ್ರತಿಕ್ರಿಯಿಸಿ ಹೇಳಿದ್ದಾರೆ.

ಮಂಗಳವಾರ ರಾತ್ರಿ  ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ತೆಲಂಗಾಣದ ಹಿಂದುಳಿದ ಸಮುದಾಯಗಳಿಗೆ ಸೇರಿದ ಬಿಜೆಪಿ ಪಕ್ಷದ ಮುಖ್ಯಮಂತ್ರಿಗೆ ಕ್ಷಣಗಣನೆಯು ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಿಂದ ಪ್ರಾರಂಭವಾಗಿದೆ ಎಂದು ಹೇಳಿದ್ದರು. ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ಅವರು ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಅದಕ್ಕೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಒವೈಸಿ, ಹಿಂದುಳಿದ ಮುಸ್ಲಿಮರಿಗೆ ಮೀಸಲಾತಿಯನ್ನು ತೆಗೆದುಹಾಕುವುದಾಗಿ ಪ್ರಧಾನಿ ಮೋದಿ ಭರವಸೆ ನೀಡುತ್ತಾರೆ. 27% OBCಗಳಿಗೆ ಮೀಸಲಾತಿ ನೀಡುವುದನ್ನು ವಿರೋಧಿಸುತ್ತಾರೆ. ಪ್ರಧಾನಿ ಅವರು ಜಾತಿ ಗುರುತಿನ ಮೇಲೆ ಮತಗಳನ್ನು ಕೇಳುತ್ತಿದ್ದಾರೆ. ಆದರೆ ಅವರು ಒಬಿಸಿಗಳಿಗೆ ನ್ಯಾಯ ಒದಗಿಸಲು ಬಯಸುವುದಿಲ್ಲ. ಭಾರತೀಯ ರಾಜಕೀಯದಲ್ಲಿ ಮುಸ್ಲಿಮರು ಕಡಿಮೆ ಪ್ರಾತಿನಿಧ್ಯವನ್ನು ಹೊಂದಿದ್ದಾರೆ ಎಂದು ನಾನು ಹೇಳಿದಾಗ ನನ್ನನ್ನು ದೇಶವಿರೋಧಿ ಮತ್ತು ಕೋಮುವಾದಿ ಎಂದು ಕರೆಯಲಾಗುತ್ತದೆ. ಮೋದಿ ಹತಾಶರಾಗಿದ್ದಾರೆ ಮತ್ತು ಅದನ್ನು ಅವರ ಹೇಳಿಕೆಗಳು ತೋರಿಸುತ್ತಿದೆ ಎಂದು ಒವೈಸಿ ಹೇಳಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಬಿಆರ್‌ಎಸ್‌ನ್ನು ಟೀಕಿಸಿದ ಮೋದಿ, ಈ ಪಕ್ಷಗಳು ಎಂದಿಗೂ ಹಿಂದುಳಿದ ಜಾತಿಯ ಅಭ್ಯರ್ಥಿಯನ್ನು ತೆಲಂಗಾಣದಲ್ಲಿ ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ಸಮುದಾಯದ ಬಿಜೆಪಿ ನಾಯಕನನ್ನು ಸಿಎಂ ಮಾಡುವುದಾಗಿ ಹೇಳಿದ್ದಾರೆ.

ನ.30ರಂದು ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಆತ್ಮ ಗೌರವ ಸಭೆ ಉದ್ದೇಶಿಸಿ ಮೋದಿ ಮಾತನಾಡಿದ್ದರು.

ಹೈದರಾಬಾದ್‌ಗೆ ಬರುವುದು ಯಾವಾಗಲೂ ವಿಶೇಷವಾಗಿದೆ ಮತ್ತು ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣಕ್ಕೆ ಬರುವುದು ಮತ್ತೂ ವಿಶೇಷವಾಗಿದೆ. 2013ರಲ್ಲಿ ನಡೆದ ಇಲ್ಲಿನ ನನ್ನ ರ್ಯಾಲಿಯನ್ನು ನಾನು ಎಂದಿಗೂ ಮರೆಯಲಾರೆ. ಆ ಸಮಯದಲ್ಲಿ OBC ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡುವ ಬಗ್ಗೆ ಹೇಳಲಾಗಿತ್ತು. ಇಂದು ಇದೇ ಸ್ಥಳದಿಂದ ಹಿಂದುಳಿದ ಸಮುದಾಯಗಳಿಗೆ ಸೇರಿದ ತೆಲಂಗಾಣದ ಬಿಜೆಪಿ ಸಿಎಂಗೆ ಕ್ಷಣಗಣನೆ ಆರಂಭವಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಮಾದ್ಯಮ ಪ್ರತಿನಿಧಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳ ಜಪ್ತಿ: ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...