Homeಮುಖಪುಟರಾಮಜನ್ಮಭೂಮಿ ವಿವಾದ ಬಗೆಹರಿದಿದ್ದು ನಮ್ಮಿಂದ ಮಾತ್ರ : ಪ್ರಧಾನಿ ಮೋದಿ

ರಾಮಜನ್ಮಭೂಮಿ ವಿವಾದ ಬಗೆಹರಿದಿದ್ದು ನಮ್ಮಿಂದ ಮಾತ್ರ : ಪ್ರಧಾನಿ ಮೋದಿ

- Advertisement -
- Advertisement -

“ರಾಷ್ಟ್ರವು ಹೊಸ ಮನಸ್ಥಿತಿಯೊಂದಿಗೆ ಕೆಲಸ ಮಾಡಲು ಬಯಸಿದೆ ಆದ್ದರಿಂದಲೇ ನಾವು ಇಲ್ಲಿದ್ದೇವೆ. ಆದರೆ ನೀವು ಮಾಡಿದ ರೀತಿಯಲ್ಲಿ ನಾವು ಸಾಗಿದ್ದರೆ 70 ವರ್ಷಗಳ ನಂತರವೂ 370 ನೇ ವಿಧಿಯನ್ನು ರದ್ದುಗೊಳಿಸಲು ಆಗುತ್ತಿರಲಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.

ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ಕೋವಿಂದ್ ಮಾಡಿದ ಭಾಷಣಕ್ಕೆ ವಂದನೆ ಸಲ್ಲಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಿದ್ದಾರೆ. ತಮ್ಮ ಸರ್ಕಾರವು ಕಳೆದ 70 ವರ್ಷಗಳಂತೆಯೇ ಅದೇ ಹಾದಿಯನ್ನು ಅನುಸರಿಸಿದ್ದರೆ, ಆರ್ಟಿಕಲ್ 370 ಮತ್ತು ಟ್ರಿಪಲ್ ತಲಾಕ್ ಕೊನೆಗೊಳ್ಳುತ್ತಿರಲಿಲ್ಲ, ರಾಮ ಮಂದಿರ-ಬಾಬರಿ ಮಸೀದಿ ವಿವಾದ ಕೊನೆಗೊಳ್ಳುತ್ತಿರಲಿಲ್ಲ ಎಂದಿದ್ದಾರೆ.

ನಾನು ಸೂರ್ಯ ನಮಸ್ಕಾರ ಮಾಡುವುದನ್ನು ಹೆಚ್ಚಿಸಿಕೊಳ್ಳುತ್ತೇನೆ. ಪ್ರತಿಪಕ್ಷಗಳು ನನ್ನ ಬೆನ್ನಿಗೆ ಕಡ್ಡಿಗಳಿಂದ ಹೊಡೆದರೂ ತಡೆಯುವ ಶಕ್ತಿ ಇದೆ. ನನ್ನ ಬೆನ್ನು ಮೂಳೆಯನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳಲು ಸೂರ್ಯನಮಸ್ಕಾರ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು.

ನಾನು ನಿಮ್ಮ ಹೆಜ್ಜೆಯ ಮೇಲೆಯೇ ಹೆಜ್ಜೆ ಹಾಕಿ ನಡೆಯುತ್ತಿದ್ದೇವೆ. 370 ವಿಧಿ ರದ್ದು, ತ್ರಿವಳಿ ತಲಾಕ್, ಅಯೋಧ್ಯ ವಿವಾದ, ಕರ್ತಾರ್ ಪುರ ಕಾರಿಡಾರ್, ಇಂಡಿಯಾ-ಬಾಂಗ್ಲಾ ಗಡಿವಿವಾದ ಮೊದಲಾದವುಗಳನ್ನು ಬಗೆಹರಿಸಿದ್ದೇವೆ. ಸಮಸ್ಯೆ ನಿವಾರಣೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಇದಕ್ಕಾಗಿ ಯಾರೂ ಕಾದುಕೂರಬೇಕಾಗಿಲ್ಲ ಎಂದು ಹೇಳಿದರು.
ರಾಷ್ಟ್ರಪತಿಗಳು ಕೃಷಿ ಮತ್ತು ರೈತರ ಕಲ್ಯಾಣದ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡುವ ಬೇಡಿಕೆ ಬಹು ಹಳೆಯದು. ಅದು ಇನ್ನೂ ಬಾಕಿ ಇದೆ. ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುತ್ತೇವೆ. ಇದೇ ನೀತಿ ಬೆಳೆ ವಿಮೆ ಮತ್ತು ನೀರಾವರಿಗೆ ಸಂಬಂಧಿಸಿದ ನಿವಾರಣೆಗೂ ಅನ್ವಯಿಸುತ್ತೇವೆ ಎಂದು ತಿಳಿಸಿದರು.
ಕೃಷಿ ಬಜೆಟ್ ಗೆ ಮೊದಲು 27 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದೆವು. ಈಗ 1.5 ಲಕ್ಷ ಕೋಟಿ ಮೀಸಲಿಟ್ಟಿದ್ದು ಐದು ಪಟ್ಟು ಹೆಚ್ಚಿಸಲಾಗಿದೆ. ಪ್ರಧಾನಮಂತ್ರಿ ಕೃಷಿ ಸನ್ಮಾನ್ ನಿಧಿ ಯೋಜನೆಯಡಿ ರೈತರಿಗೆ ನೆರವು ನೀಡುತ್ತಿದ್ದೇವೆ. ಆದರೆ ಕೆಲವು ರಾಜ್ಯಗಳು ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು ಅನುಷ್ಠಾನ ಮಾಡದೆ ರಾಜಕೀಯ ಮಾಡುತ್ತಿವೆ. ಅಂಥವರಿಗೆ ನಾನು ಮನವಿ ಮಾಡುತ್ತೇನೆ. ರೈತರ ಕಲ್ಯಾಣದ ವಿಷಯದಲ್ಲಿ ರಾಜಕೀಯ ಬಿಡಿ. ಭಾರತದ ರೈತರ ಹಿತಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಮನವಿ ಮಾಡಿದರು.
ದೇಶದಲ್ಲಿ ವಿತ್ತೀಯ ಕೊರತೆ ಮತ್ತು ಬೆಲೆ ಏರಿಕೆ ನಿಯಂತ್ರಣದಲ್ಲಿದೆ. ಮೈಕ್ರೋ ಫೈನಾನ್ಸ್ ಸ್ಥಿರವಾಗಿದೆ. ಹೂಡಿಕೆದಾರರು ಮತ್ತು ದೇಶದ ಆರ್ಥಿಕತೆಯ ವಿಶ್ವಾಸ ಗಳಿಸಲು ನಾವು ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.
“ಸರ್ಕಾರವು ಕೆಲಸಗಳನ್ನು ಮಾಡಲು ಯಾಕೆ ಆತುರಪಡುತ್ತಿದೆ” ಎಂಬ ವಿರೋಧ ಪಕ್ಷಗಳ ಟೀಕೆಗೆ “ನಾವು ನಿಮ್ಮ ದಾರಿಯನ್ನು ಅನುಸರಿಸಿದ್ದರೆ, ಬಾಲಾಪರಾಧಿ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ಕಾನೂನನ್ನು ರೂಪಿಸಲಾಗುತ್ತಿರಲಿಲ್ಲ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...