Homeಮುಖಪುಟರಾಮಜನ್ಮಭೂಮಿ ವಿವಾದ ಬಗೆಹರಿದಿದ್ದು ನಮ್ಮಿಂದ ಮಾತ್ರ : ಪ್ರಧಾನಿ ಮೋದಿ

ರಾಮಜನ್ಮಭೂಮಿ ವಿವಾದ ಬಗೆಹರಿದಿದ್ದು ನಮ್ಮಿಂದ ಮಾತ್ರ : ಪ್ರಧಾನಿ ಮೋದಿ

- Advertisement -
- Advertisement -

“ರಾಷ್ಟ್ರವು ಹೊಸ ಮನಸ್ಥಿತಿಯೊಂದಿಗೆ ಕೆಲಸ ಮಾಡಲು ಬಯಸಿದೆ ಆದ್ದರಿಂದಲೇ ನಾವು ಇಲ್ಲಿದ್ದೇವೆ. ಆದರೆ ನೀವು ಮಾಡಿದ ರೀತಿಯಲ್ಲಿ ನಾವು ಸಾಗಿದ್ದರೆ 70 ವರ್ಷಗಳ ನಂತರವೂ 370 ನೇ ವಿಧಿಯನ್ನು ರದ್ದುಗೊಳಿಸಲು ಆಗುತ್ತಿರಲಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.

ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ಕೋವಿಂದ್ ಮಾಡಿದ ಭಾಷಣಕ್ಕೆ ವಂದನೆ ಸಲ್ಲಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಿದ್ದಾರೆ. ತಮ್ಮ ಸರ್ಕಾರವು ಕಳೆದ 70 ವರ್ಷಗಳಂತೆಯೇ ಅದೇ ಹಾದಿಯನ್ನು ಅನುಸರಿಸಿದ್ದರೆ, ಆರ್ಟಿಕಲ್ 370 ಮತ್ತು ಟ್ರಿಪಲ್ ತಲಾಕ್ ಕೊನೆಗೊಳ್ಳುತ್ತಿರಲಿಲ್ಲ, ರಾಮ ಮಂದಿರ-ಬಾಬರಿ ಮಸೀದಿ ವಿವಾದ ಕೊನೆಗೊಳ್ಳುತ್ತಿರಲಿಲ್ಲ ಎಂದಿದ್ದಾರೆ.

ನಾನು ಸೂರ್ಯ ನಮಸ್ಕಾರ ಮಾಡುವುದನ್ನು ಹೆಚ್ಚಿಸಿಕೊಳ್ಳುತ್ತೇನೆ. ಪ್ರತಿಪಕ್ಷಗಳು ನನ್ನ ಬೆನ್ನಿಗೆ ಕಡ್ಡಿಗಳಿಂದ ಹೊಡೆದರೂ ತಡೆಯುವ ಶಕ್ತಿ ಇದೆ. ನನ್ನ ಬೆನ್ನು ಮೂಳೆಯನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳಲು ಸೂರ್ಯನಮಸ್ಕಾರ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು.

ನಾನು ನಿಮ್ಮ ಹೆಜ್ಜೆಯ ಮೇಲೆಯೇ ಹೆಜ್ಜೆ ಹಾಕಿ ನಡೆಯುತ್ತಿದ್ದೇವೆ. 370 ವಿಧಿ ರದ್ದು, ತ್ರಿವಳಿ ತಲಾಕ್, ಅಯೋಧ್ಯ ವಿವಾದ, ಕರ್ತಾರ್ ಪುರ ಕಾರಿಡಾರ್, ಇಂಡಿಯಾ-ಬಾಂಗ್ಲಾ ಗಡಿವಿವಾದ ಮೊದಲಾದವುಗಳನ್ನು ಬಗೆಹರಿಸಿದ್ದೇವೆ. ಸಮಸ್ಯೆ ನಿವಾರಣೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಇದಕ್ಕಾಗಿ ಯಾರೂ ಕಾದುಕೂರಬೇಕಾಗಿಲ್ಲ ಎಂದು ಹೇಳಿದರು.
ರಾಷ್ಟ್ರಪತಿಗಳು ಕೃಷಿ ಮತ್ತು ರೈತರ ಕಲ್ಯಾಣದ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡುವ ಬೇಡಿಕೆ ಬಹು ಹಳೆಯದು. ಅದು ಇನ್ನೂ ಬಾಕಿ ಇದೆ. ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುತ್ತೇವೆ. ಇದೇ ನೀತಿ ಬೆಳೆ ವಿಮೆ ಮತ್ತು ನೀರಾವರಿಗೆ ಸಂಬಂಧಿಸಿದ ನಿವಾರಣೆಗೂ ಅನ್ವಯಿಸುತ್ತೇವೆ ಎಂದು ತಿಳಿಸಿದರು.
ಕೃಷಿ ಬಜೆಟ್ ಗೆ ಮೊದಲು 27 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದೆವು. ಈಗ 1.5 ಲಕ್ಷ ಕೋಟಿ ಮೀಸಲಿಟ್ಟಿದ್ದು ಐದು ಪಟ್ಟು ಹೆಚ್ಚಿಸಲಾಗಿದೆ. ಪ್ರಧಾನಮಂತ್ರಿ ಕೃಷಿ ಸನ್ಮಾನ್ ನಿಧಿ ಯೋಜನೆಯಡಿ ರೈತರಿಗೆ ನೆರವು ನೀಡುತ್ತಿದ್ದೇವೆ. ಆದರೆ ಕೆಲವು ರಾಜ್ಯಗಳು ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು ಅನುಷ್ಠಾನ ಮಾಡದೆ ರಾಜಕೀಯ ಮಾಡುತ್ತಿವೆ. ಅಂಥವರಿಗೆ ನಾನು ಮನವಿ ಮಾಡುತ್ತೇನೆ. ರೈತರ ಕಲ್ಯಾಣದ ವಿಷಯದಲ್ಲಿ ರಾಜಕೀಯ ಬಿಡಿ. ಭಾರತದ ರೈತರ ಹಿತಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಮನವಿ ಮಾಡಿದರು.
ದೇಶದಲ್ಲಿ ವಿತ್ತೀಯ ಕೊರತೆ ಮತ್ತು ಬೆಲೆ ಏರಿಕೆ ನಿಯಂತ್ರಣದಲ್ಲಿದೆ. ಮೈಕ್ರೋ ಫೈನಾನ್ಸ್ ಸ್ಥಿರವಾಗಿದೆ. ಹೂಡಿಕೆದಾರರು ಮತ್ತು ದೇಶದ ಆರ್ಥಿಕತೆಯ ವಿಶ್ವಾಸ ಗಳಿಸಲು ನಾವು ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.
“ಸರ್ಕಾರವು ಕೆಲಸಗಳನ್ನು ಮಾಡಲು ಯಾಕೆ ಆತುರಪಡುತ್ತಿದೆ” ಎಂಬ ವಿರೋಧ ಪಕ್ಷಗಳ ಟೀಕೆಗೆ “ನಾವು ನಿಮ್ಮ ದಾರಿಯನ್ನು ಅನುಸರಿಸಿದ್ದರೆ, ಬಾಲಾಪರಾಧಿ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ಕಾನೂನನ್ನು ರೂಪಿಸಲಾಗುತ್ತಿರಲಿಲ್ಲ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....