Homeಮುಖಪುಟರಾಮಜನ್ಮಭೂಮಿ ವಿವಾದ ಬಗೆಹರಿದಿದ್ದು ನಮ್ಮಿಂದ ಮಾತ್ರ : ಪ್ರಧಾನಿ ಮೋದಿ

ರಾಮಜನ್ಮಭೂಮಿ ವಿವಾದ ಬಗೆಹರಿದಿದ್ದು ನಮ್ಮಿಂದ ಮಾತ್ರ : ಪ್ರಧಾನಿ ಮೋದಿ

- Advertisement -
- Advertisement -

“ರಾಷ್ಟ್ರವು ಹೊಸ ಮನಸ್ಥಿತಿಯೊಂದಿಗೆ ಕೆಲಸ ಮಾಡಲು ಬಯಸಿದೆ ಆದ್ದರಿಂದಲೇ ನಾವು ಇಲ್ಲಿದ್ದೇವೆ. ಆದರೆ ನೀವು ಮಾಡಿದ ರೀತಿಯಲ್ಲಿ ನಾವು ಸಾಗಿದ್ದರೆ 70 ವರ್ಷಗಳ ನಂತರವೂ 370 ನೇ ವಿಧಿಯನ್ನು ರದ್ದುಗೊಳಿಸಲು ಆಗುತ್ತಿರಲಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.

ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ಕೋವಿಂದ್ ಮಾಡಿದ ಭಾಷಣಕ್ಕೆ ವಂದನೆ ಸಲ್ಲಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಿದ್ದಾರೆ. ತಮ್ಮ ಸರ್ಕಾರವು ಕಳೆದ 70 ವರ್ಷಗಳಂತೆಯೇ ಅದೇ ಹಾದಿಯನ್ನು ಅನುಸರಿಸಿದ್ದರೆ, ಆರ್ಟಿಕಲ್ 370 ಮತ್ತು ಟ್ರಿಪಲ್ ತಲಾಕ್ ಕೊನೆಗೊಳ್ಳುತ್ತಿರಲಿಲ್ಲ, ರಾಮ ಮಂದಿರ-ಬಾಬರಿ ಮಸೀದಿ ವಿವಾದ ಕೊನೆಗೊಳ್ಳುತ್ತಿರಲಿಲ್ಲ ಎಂದಿದ್ದಾರೆ.

ನಾನು ಸೂರ್ಯ ನಮಸ್ಕಾರ ಮಾಡುವುದನ್ನು ಹೆಚ್ಚಿಸಿಕೊಳ್ಳುತ್ತೇನೆ. ಪ್ರತಿಪಕ್ಷಗಳು ನನ್ನ ಬೆನ್ನಿಗೆ ಕಡ್ಡಿಗಳಿಂದ ಹೊಡೆದರೂ ತಡೆಯುವ ಶಕ್ತಿ ಇದೆ. ನನ್ನ ಬೆನ್ನು ಮೂಳೆಯನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳಲು ಸೂರ್ಯನಮಸ್ಕಾರ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು.

ನಾನು ನಿಮ್ಮ ಹೆಜ್ಜೆಯ ಮೇಲೆಯೇ ಹೆಜ್ಜೆ ಹಾಕಿ ನಡೆಯುತ್ತಿದ್ದೇವೆ. 370 ವಿಧಿ ರದ್ದು, ತ್ರಿವಳಿ ತಲಾಕ್, ಅಯೋಧ್ಯ ವಿವಾದ, ಕರ್ತಾರ್ ಪುರ ಕಾರಿಡಾರ್, ಇಂಡಿಯಾ-ಬಾಂಗ್ಲಾ ಗಡಿವಿವಾದ ಮೊದಲಾದವುಗಳನ್ನು ಬಗೆಹರಿಸಿದ್ದೇವೆ. ಸಮಸ್ಯೆ ನಿವಾರಣೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಇದಕ್ಕಾಗಿ ಯಾರೂ ಕಾದುಕೂರಬೇಕಾಗಿಲ್ಲ ಎಂದು ಹೇಳಿದರು.
ರಾಷ್ಟ್ರಪತಿಗಳು ಕೃಷಿ ಮತ್ತು ರೈತರ ಕಲ್ಯಾಣದ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡುವ ಬೇಡಿಕೆ ಬಹು ಹಳೆಯದು. ಅದು ಇನ್ನೂ ಬಾಕಿ ಇದೆ. ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುತ್ತೇವೆ. ಇದೇ ನೀತಿ ಬೆಳೆ ವಿಮೆ ಮತ್ತು ನೀರಾವರಿಗೆ ಸಂಬಂಧಿಸಿದ ನಿವಾರಣೆಗೂ ಅನ್ವಯಿಸುತ್ತೇವೆ ಎಂದು ತಿಳಿಸಿದರು.
ಕೃಷಿ ಬಜೆಟ್ ಗೆ ಮೊದಲು 27 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದೆವು. ಈಗ 1.5 ಲಕ್ಷ ಕೋಟಿ ಮೀಸಲಿಟ್ಟಿದ್ದು ಐದು ಪಟ್ಟು ಹೆಚ್ಚಿಸಲಾಗಿದೆ. ಪ್ರಧಾನಮಂತ್ರಿ ಕೃಷಿ ಸನ್ಮಾನ್ ನಿಧಿ ಯೋಜನೆಯಡಿ ರೈತರಿಗೆ ನೆರವು ನೀಡುತ್ತಿದ್ದೇವೆ. ಆದರೆ ಕೆಲವು ರಾಜ್ಯಗಳು ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು ಅನುಷ್ಠಾನ ಮಾಡದೆ ರಾಜಕೀಯ ಮಾಡುತ್ತಿವೆ. ಅಂಥವರಿಗೆ ನಾನು ಮನವಿ ಮಾಡುತ್ತೇನೆ. ರೈತರ ಕಲ್ಯಾಣದ ವಿಷಯದಲ್ಲಿ ರಾಜಕೀಯ ಬಿಡಿ. ಭಾರತದ ರೈತರ ಹಿತಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಮನವಿ ಮಾಡಿದರು.
ದೇಶದಲ್ಲಿ ವಿತ್ತೀಯ ಕೊರತೆ ಮತ್ತು ಬೆಲೆ ಏರಿಕೆ ನಿಯಂತ್ರಣದಲ್ಲಿದೆ. ಮೈಕ್ರೋ ಫೈನಾನ್ಸ್ ಸ್ಥಿರವಾಗಿದೆ. ಹೂಡಿಕೆದಾರರು ಮತ್ತು ದೇಶದ ಆರ್ಥಿಕತೆಯ ವಿಶ್ವಾಸ ಗಳಿಸಲು ನಾವು ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.
“ಸರ್ಕಾರವು ಕೆಲಸಗಳನ್ನು ಮಾಡಲು ಯಾಕೆ ಆತುರಪಡುತ್ತಿದೆ” ಎಂಬ ವಿರೋಧ ಪಕ್ಷಗಳ ಟೀಕೆಗೆ “ನಾವು ನಿಮ್ಮ ದಾರಿಯನ್ನು ಅನುಸರಿಸಿದ್ದರೆ, ಬಾಲಾಪರಾಧಿ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ಕಾನೂನನ್ನು ರೂಪಿಸಲಾಗುತ್ತಿರಲಿಲ್ಲ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...