Homeಮುಖಪುಟರಾಮಜನ್ಮಭೂಮಿ ವಿವಾದ ಬಗೆಹರಿದಿದ್ದು ನಮ್ಮಿಂದ ಮಾತ್ರ : ಪ್ರಧಾನಿ ಮೋದಿ

ರಾಮಜನ್ಮಭೂಮಿ ವಿವಾದ ಬಗೆಹರಿದಿದ್ದು ನಮ್ಮಿಂದ ಮಾತ್ರ : ಪ್ರಧಾನಿ ಮೋದಿ

- Advertisement -
- Advertisement -

“ರಾಷ್ಟ್ರವು ಹೊಸ ಮನಸ್ಥಿತಿಯೊಂದಿಗೆ ಕೆಲಸ ಮಾಡಲು ಬಯಸಿದೆ ಆದ್ದರಿಂದಲೇ ನಾವು ಇಲ್ಲಿದ್ದೇವೆ. ಆದರೆ ನೀವು ಮಾಡಿದ ರೀತಿಯಲ್ಲಿ ನಾವು ಸಾಗಿದ್ದರೆ 70 ವರ್ಷಗಳ ನಂತರವೂ 370 ನೇ ವಿಧಿಯನ್ನು ರದ್ದುಗೊಳಿಸಲು ಆಗುತ್ತಿರಲಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.

ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ಕೋವಿಂದ್ ಮಾಡಿದ ಭಾಷಣಕ್ಕೆ ವಂದನೆ ಸಲ್ಲಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಿದ್ದಾರೆ. ತಮ್ಮ ಸರ್ಕಾರವು ಕಳೆದ 70 ವರ್ಷಗಳಂತೆಯೇ ಅದೇ ಹಾದಿಯನ್ನು ಅನುಸರಿಸಿದ್ದರೆ, ಆರ್ಟಿಕಲ್ 370 ಮತ್ತು ಟ್ರಿಪಲ್ ತಲಾಕ್ ಕೊನೆಗೊಳ್ಳುತ್ತಿರಲಿಲ್ಲ, ರಾಮ ಮಂದಿರ-ಬಾಬರಿ ಮಸೀದಿ ವಿವಾದ ಕೊನೆಗೊಳ್ಳುತ್ತಿರಲಿಲ್ಲ ಎಂದಿದ್ದಾರೆ.

ನಾನು ಸೂರ್ಯ ನಮಸ್ಕಾರ ಮಾಡುವುದನ್ನು ಹೆಚ್ಚಿಸಿಕೊಳ್ಳುತ್ತೇನೆ. ಪ್ರತಿಪಕ್ಷಗಳು ನನ್ನ ಬೆನ್ನಿಗೆ ಕಡ್ಡಿಗಳಿಂದ ಹೊಡೆದರೂ ತಡೆಯುವ ಶಕ್ತಿ ಇದೆ. ನನ್ನ ಬೆನ್ನು ಮೂಳೆಯನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳಲು ಸೂರ್ಯನಮಸ್ಕಾರ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು.

ನಾನು ನಿಮ್ಮ ಹೆಜ್ಜೆಯ ಮೇಲೆಯೇ ಹೆಜ್ಜೆ ಹಾಕಿ ನಡೆಯುತ್ತಿದ್ದೇವೆ. 370 ವಿಧಿ ರದ್ದು, ತ್ರಿವಳಿ ತಲಾಕ್, ಅಯೋಧ್ಯ ವಿವಾದ, ಕರ್ತಾರ್ ಪುರ ಕಾರಿಡಾರ್, ಇಂಡಿಯಾ-ಬಾಂಗ್ಲಾ ಗಡಿವಿವಾದ ಮೊದಲಾದವುಗಳನ್ನು ಬಗೆಹರಿಸಿದ್ದೇವೆ. ಸಮಸ್ಯೆ ನಿವಾರಣೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಇದಕ್ಕಾಗಿ ಯಾರೂ ಕಾದುಕೂರಬೇಕಾಗಿಲ್ಲ ಎಂದು ಹೇಳಿದರು.
ರಾಷ್ಟ್ರಪತಿಗಳು ಕೃಷಿ ಮತ್ತು ರೈತರ ಕಲ್ಯಾಣದ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡುವ ಬೇಡಿಕೆ ಬಹು ಹಳೆಯದು. ಅದು ಇನ್ನೂ ಬಾಕಿ ಇದೆ. ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುತ್ತೇವೆ. ಇದೇ ನೀತಿ ಬೆಳೆ ವಿಮೆ ಮತ್ತು ನೀರಾವರಿಗೆ ಸಂಬಂಧಿಸಿದ ನಿವಾರಣೆಗೂ ಅನ್ವಯಿಸುತ್ತೇವೆ ಎಂದು ತಿಳಿಸಿದರು.
ಕೃಷಿ ಬಜೆಟ್ ಗೆ ಮೊದಲು 27 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದೆವು. ಈಗ 1.5 ಲಕ್ಷ ಕೋಟಿ ಮೀಸಲಿಟ್ಟಿದ್ದು ಐದು ಪಟ್ಟು ಹೆಚ್ಚಿಸಲಾಗಿದೆ. ಪ್ರಧಾನಮಂತ್ರಿ ಕೃಷಿ ಸನ್ಮಾನ್ ನಿಧಿ ಯೋಜನೆಯಡಿ ರೈತರಿಗೆ ನೆರವು ನೀಡುತ್ತಿದ್ದೇವೆ. ಆದರೆ ಕೆಲವು ರಾಜ್ಯಗಳು ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು ಅನುಷ್ಠಾನ ಮಾಡದೆ ರಾಜಕೀಯ ಮಾಡುತ್ತಿವೆ. ಅಂಥವರಿಗೆ ನಾನು ಮನವಿ ಮಾಡುತ್ತೇನೆ. ರೈತರ ಕಲ್ಯಾಣದ ವಿಷಯದಲ್ಲಿ ರಾಜಕೀಯ ಬಿಡಿ. ಭಾರತದ ರೈತರ ಹಿತಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಮನವಿ ಮಾಡಿದರು.
ದೇಶದಲ್ಲಿ ವಿತ್ತೀಯ ಕೊರತೆ ಮತ್ತು ಬೆಲೆ ಏರಿಕೆ ನಿಯಂತ್ರಣದಲ್ಲಿದೆ. ಮೈಕ್ರೋ ಫೈನಾನ್ಸ್ ಸ್ಥಿರವಾಗಿದೆ. ಹೂಡಿಕೆದಾರರು ಮತ್ತು ದೇಶದ ಆರ್ಥಿಕತೆಯ ವಿಶ್ವಾಸ ಗಳಿಸಲು ನಾವು ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.
“ಸರ್ಕಾರವು ಕೆಲಸಗಳನ್ನು ಮಾಡಲು ಯಾಕೆ ಆತುರಪಡುತ್ತಿದೆ” ಎಂಬ ವಿರೋಧ ಪಕ್ಷಗಳ ಟೀಕೆಗೆ “ನಾವು ನಿಮ್ಮ ದಾರಿಯನ್ನು ಅನುಸರಿಸಿದ್ದರೆ, ಬಾಲಾಪರಾಧಿ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ಕಾನೂನನ್ನು ರೂಪಿಸಲಾಗುತ್ತಿರಲಿಲ್ಲ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...