Homeಮುಖಪುಟರಾಮಜನ್ಮಭೂಮಿ ವಿವಾದ ಬಗೆಹರಿದಿದ್ದು ನಮ್ಮಿಂದ ಮಾತ್ರ : ಪ್ರಧಾನಿ ಮೋದಿ

ರಾಮಜನ್ಮಭೂಮಿ ವಿವಾದ ಬಗೆಹರಿದಿದ್ದು ನಮ್ಮಿಂದ ಮಾತ್ರ : ಪ್ರಧಾನಿ ಮೋದಿ

- Advertisement -
- Advertisement -

“ರಾಷ್ಟ್ರವು ಹೊಸ ಮನಸ್ಥಿತಿಯೊಂದಿಗೆ ಕೆಲಸ ಮಾಡಲು ಬಯಸಿದೆ ಆದ್ದರಿಂದಲೇ ನಾವು ಇಲ್ಲಿದ್ದೇವೆ. ಆದರೆ ನೀವು ಮಾಡಿದ ರೀತಿಯಲ್ಲಿ ನಾವು ಸಾಗಿದ್ದರೆ 70 ವರ್ಷಗಳ ನಂತರವೂ 370 ನೇ ವಿಧಿಯನ್ನು ರದ್ದುಗೊಳಿಸಲು ಆಗುತ್ತಿರಲಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.

ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ಕೋವಿಂದ್ ಮಾಡಿದ ಭಾಷಣಕ್ಕೆ ವಂದನೆ ಸಲ್ಲಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಿದ್ದಾರೆ. ತಮ್ಮ ಸರ್ಕಾರವು ಕಳೆದ 70 ವರ್ಷಗಳಂತೆಯೇ ಅದೇ ಹಾದಿಯನ್ನು ಅನುಸರಿಸಿದ್ದರೆ, ಆರ್ಟಿಕಲ್ 370 ಮತ್ತು ಟ್ರಿಪಲ್ ತಲಾಕ್ ಕೊನೆಗೊಳ್ಳುತ್ತಿರಲಿಲ್ಲ, ರಾಮ ಮಂದಿರ-ಬಾಬರಿ ಮಸೀದಿ ವಿವಾದ ಕೊನೆಗೊಳ್ಳುತ್ತಿರಲಿಲ್ಲ ಎಂದಿದ್ದಾರೆ.

ನಾನು ಸೂರ್ಯ ನಮಸ್ಕಾರ ಮಾಡುವುದನ್ನು ಹೆಚ್ಚಿಸಿಕೊಳ್ಳುತ್ತೇನೆ. ಪ್ರತಿಪಕ್ಷಗಳು ನನ್ನ ಬೆನ್ನಿಗೆ ಕಡ್ಡಿಗಳಿಂದ ಹೊಡೆದರೂ ತಡೆಯುವ ಶಕ್ತಿ ಇದೆ. ನನ್ನ ಬೆನ್ನು ಮೂಳೆಯನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳಲು ಸೂರ್ಯನಮಸ್ಕಾರ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು.

ನಾನು ನಿಮ್ಮ ಹೆಜ್ಜೆಯ ಮೇಲೆಯೇ ಹೆಜ್ಜೆ ಹಾಕಿ ನಡೆಯುತ್ತಿದ್ದೇವೆ. 370 ವಿಧಿ ರದ್ದು, ತ್ರಿವಳಿ ತಲಾಕ್, ಅಯೋಧ್ಯ ವಿವಾದ, ಕರ್ತಾರ್ ಪುರ ಕಾರಿಡಾರ್, ಇಂಡಿಯಾ-ಬಾಂಗ್ಲಾ ಗಡಿವಿವಾದ ಮೊದಲಾದವುಗಳನ್ನು ಬಗೆಹರಿಸಿದ್ದೇವೆ. ಸಮಸ್ಯೆ ನಿವಾರಣೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಇದಕ್ಕಾಗಿ ಯಾರೂ ಕಾದುಕೂರಬೇಕಾಗಿಲ್ಲ ಎಂದು ಹೇಳಿದರು.
ರಾಷ್ಟ್ರಪತಿಗಳು ಕೃಷಿ ಮತ್ತು ರೈತರ ಕಲ್ಯಾಣದ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡುವ ಬೇಡಿಕೆ ಬಹು ಹಳೆಯದು. ಅದು ಇನ್ನೂ ಬಾಕಿ ಇದೆ. ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುತ್ತೇವೆ. ಇದೇ ನೀತಿ ಬೆಳೆ ವಿಮೆ ಮತ್ತು ನೀರಾವರಿಗೆ ಸಂಬಂಧಿಸಿದ ನಿವಾರಣೆಗೂ ಅನ್ವಯಿಸುತ್ತೇವೆ ಎಂದು ತಿಳಿಸಿದರು.
ಕೃಷಿ ಬಜೆಟ್ ಗೆ ಮೊದಲು 27 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದೆವು. ಈಗ 1.5 ಲಕ್ಷ ಕೋಟಿ ಮೀಸಲಿಟ್ಟಿದ್ದು ಐದು ಪಟ್ಟು ಹೆಚ್ಚಿಸಲಾಗಿದೆ. ಪ್ರಧಾನಮಂತ್ರಿ ಕೃಷಿ ಸನ್ಮಾನ್ ನಿಧಿ ಯೋಜನೆಯಡಿ ರೈತರಿಗೆ ನೆರವು ನೀಡುತ್ತಿದ್ದೇವೆ. ಆದರೆ ಕೆಲವು ರಾಜ್ಯಗಳು ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು ಅನುಷ್ಠಾನ ಮಾಡದೆ ರಾಜಕೀಯ ಮಾಡುತ್ತಿವೆ. ಅಂಥವರಿಗೆ ನಾನು ಮನವಿ ಮಾಡುತ್ತೇನೆ. ರೈತರ ಕಲ್ಯಾಣದ ವಿಷಯದಲ್ಲಿ ರಾಜಕೀಯ ಬಿಡಿ. ಭಾರತದ ರೈತರ ಹಿತಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಮನವಿ ಮಾಡಿದರು.
ದೇಶದಲ್ಲಿ ವಿತ್ತೀಯ ಕೊರತೆ ಮತ್ತು ಬೆಲೆ ಏರಿಕೆ ನಿಯಂತ್ರಣದಲ್ಲಿದೆ. ಮೈಕ್ರೋ ಫೈನಾನ್ಸ್ ಸ್ಥಿರವಾಗಿದೆ. ಹೂಡಿಕೆದಾರರು ಮತ್ತು ದೇಶದ ಆರ್ಥಿಕತೆಯ ವಿಶ್ವಾಸ ಗಳಿಸಲು ನಾವು ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.
“ಸರ್ಕಾರವು ಕೆಲಸಗಳನ್ನು ಮಾಡಲು ಯಾಕೆ ಆತುರಪಡುತ್ತಿದೆ” ಎಂಬ ವಿರೋಧ ಪಕ್ಷಗಳ ಟೀಕೆಗೆ “ನಾವು ನಿಮ್ಮ ದಾರಿಯನ್ನು ಅನುಸರಿಸಿದ್ದರೆ, ಬಾಲಾಪರಾಧಿ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ಕಾನೂನನ್ನು ರೂಪಿಸಲಾಗುತ್ತಿರಲಿಲ್ಲ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...