Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿ OBC ಅಲ್ಲ, ಅವರು ಜಾತಿ ಬಗ್ಗೆ ಸುಳ್ಳು ಹೇಳಿದ್ದಾರೆ:...

ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿ OBC ಅಲ್ಲ, ಅವರು ಜಾತಿ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್‌ ಗಾಂಧಿ

- Advertisement -
- Advertisement -

ಭಾರತ್‌ ಜೋಡೋ ನ್ಯಾಯ ಯಾತ್ರೆ ಒಡಿಶಾದಲ್ಲಿ ಮುಂದುವರಿದಿದೆ. ಇಂದು ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜಾತಿಯ ಬಗ್ಗೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ಸಾಮಾನ್ಯ ವರ್ಗಕ್ಕೆ ಸೇರಿದ್ದು, ಇತರೆ ಹಿಂದುಳಿದ ವರ್ಗಕ್ಕೆ (ಒಬಿಸಿ ಸಮುದಾಯಕ್ಕೆ) ಸೇರಿಲ್ಲ ಎಂದು ಹೇಳಿದ್ದಾರೆ.

ಒಡಿಶಾದ ಝಾರ್ಸುಗುಡಾದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಪ್ರಧಾನಿ ಮೋದಿ ಒಬಿಸಿ ಸಮುದಾಯದಲ್ಲಿ ಹುಟ್ಟಿಲ್ಲ. ಅವರು ಗುಜರಾತ್‌ನ ತೇಲಿ ಜಾತಿಯಲ್ಲಿ ಜನಿಸಿದ್ದಾರೆ. 2000ನೇ ಇಸವಿಯಲ್ಲಿ ಬಿಜೆಪಿಯಿಂದ ಆ ಸಮುದಾಯಕ್ಕೆ ಒಬಿಸಿ ಎಂಬ ಟ್ಯಾಗ್ ನೀಡಲಾಗಿದೆ. ಅವರು ಸಾಮಾನ್ಯ ವರ್ಗದಲ್ಲಿ ಜನಿಸಿದ್ದಾರೆ ಎಂದು ಹೇಳಿದ್ದಾರೆ.

ಅವರು ತಮ್ಮ ಇಡೀ ಜೀವನದಲ್ಲಿ ಜಾತಿ ಗಣತಿಯನ್ನು ನಡೆಸಲು ಬಿಡುವುದಿಲ್ಲ, ಏಕೆಂದರೆ ಅವರು ಒಬಿಸಿ ಸಮುದಾಯದಲ್ಲಿ ಹುಟ್ಟಿಲ್ಲ, ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದ್ದಾರೆ ಎಂದು ರಾಹುಲ್ ಗಾಂಧಿ ಯಾತ್ರೆಯ ವೇಳೆ ಹೇಳಿದ್ದಾರೆ.

ಒಡಿಶಾದಲ್ಲಿ ನಿನ್ನೆ ಭಾರತ್‌ ಜೊಡೋ ನ್ಯಾಯ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್‌ ಗಾಂಧಿ, ಬಿಜೆಪಿ ಮತ್ತು ಬಿಜೆಡಿ ಪಾಲುದಾರಿಕೆಯನ್ನು ಹೊಂದಿದೆ, ರಾಜ್ಯದ ಜನರ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಮತ್ತು ಬಿಜೆಡಿಯನ್ನು ವಿರೋಧಿಸುತ್ತಿದ್ದೇವೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಮತ್ತು ನರೇಂದ್ರ ಮೋದಿ ಪಾಲುದಾರಿ ಸರಕಾರವನ್ನು ಹೊಂದಿದ್ದಾರೆ. ಅವರಿಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಬಿಜೆಡಿ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ನಾನು ಸಂಸತ್ತಿನಲ್ಲಿ ಕಂಡುಕೊಂಡಿದ್ದೇನೆ ಎಂದು ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾನು ಒಡಿಶಾಗೆ ಬಂದಿದ್ದೇನೆ. ರಾಜ್ಯದಿಂದ 30 ಲಕ್ಷ ಜನರು ಜೀವನೋಪಾಯಕ್ಕಾಗಿ ಇತರ ರಾಜ್ಯಗಳಿಗೆ ಕಾರ್ಮಿಕರಾಗಿ ವಲಸೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಒಡಿಶಾದಲ್ಲಿ ಬುಡಕಟ್ಟು ಜನಾಂಗದ ಹೆಚ್ಚಿನ ಜನಸಂಖ್ಯೆ ಇದೆ. ದಲಿತರ ಜೊತೆಗೆ ಬುಡಕಟ್ಟು ಜನರನ್ನು ಕೂಡ ಸರ್ಕಾರವು ರಾಜ್ಯದಲ್ಲಿ ನಿರ್ಲಕ್ಷಿಸಿದೆ. ನಾನು 6-7 ಗಂಟೆಗಳ ಕಾಲ ನಿಮ್ಮ ‘ಮಾನ್ ಕಿ ಬಾತ್’ ಕೇಳಲು ಮತ್ತು 15 ನಿಮಿಷಗಳ ಕಾಲ ಸ್ವಲ್ಪ ಮಾತನಾಡಲು ಇಲ್ಲಿಗೆ ಬಂದಿದ್ದೇನೆ. ಕೈಗಾರಿಕೆಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಒಡಿಶಾದ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದರು.

ಭಾರತ್ ಜೋಡೋ ನ್ಯಾಯ ಯಾತ್ರೆಯು ನೆರೆಯ ಒಡಿಶಾದಿಂದ ಇಂದು ಛತ್ತೀಸ್‌ಗಢವನ್ನು ಪ್ರವೇಶಿಸಲಿದೆ. ಇದು ನವೆಂಬರ್ 2023ರ ವಿಧಾನಸಭೆ ಚುನಾವಣೆಯ ನಂತರ ಛತ್ತೀಸ್‌ಗಢಕ್ಕೆ ರಾಹುಲ್‌ ಗಾಂಧಿಯವರ ಮೊದಲ ಭೇಟಿಯಾಗಿದೆ. ಜನವರಿ 14ರಂದು ಮಣಿಪುರದಿಂದ ಆರಂಭವಾದ ಯಾತ್ರೆ ಎರಡು ದಿನಗಳ ವಿರಾಮದ ಬಳಿಕ  ಫೆ.11ರಂದು ರಾಯ್‌ಗಢ, ಶಕ್ತಿ ಮತ್ತು ಕೊರ್ಬಾ ಜಿಲ್ಲೆಗಳಲ್ಲಿ ಸಂಚರಿಸಲಿದೆ. ಫೆಬ್ರವರಿ 14ರಂದು ಯಾತ್ರೆಯು ಬಲರಾಂಪುರದಿಂದ ಜಾರ್ಖಂಡ್‌ಗೆ ತೆರಳಲಿದೆ.

ಇದನ್ನು ಓದಿ: ಬಿಜೆಪಿಯ ಮುಂದಿನ ಟಾರ್ಗೆಟ್‌ ಕಾಶಿ, ಮಥುರಾ! ಯೋಗಿ ಆದಿತ್ಯನಾಥ್‌ ಹೇಳಿಕೆಯಲ್ಲೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...