Homeಕರ್ನಾಟಕ40% ಕಮೀಷನ್ ಬೇಡಿಕೆಯ ಆರೋಪಿಗೆ ಪ್ರಧಾನಿ ಮೋದಿ ಕರೆ ಮಾಡಿ ಭ್ರಷ್ಟಾಚಾರಕ್ಕೆ ಬೆಂಬಲ: ಕಾಂಗ್ರೆಸ್ ಆರೋಪ

40% ಕಮೀಷನ್ ಬೇಡಿಕೆಯ ಆರೋಪಿಗೆ ಪ್ರಧಾನಿ ಮೋದಿ ಕರೆ ಮಾಡಿ ಭ್ರಷ್ಟಾಚಾರಕ್ಕೆ ಬೆಂಬಲ: ಕಾಂಗ್ರೆಸ್ ಆರೋಪ

- Advertisement -
- Advertisement -

ಇಂದು (ಶುಕ್ರವಾರ) ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಬಳಿಕ ಕಾಂಗ್ರೆಸ್ ಪಕ್ಷ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ”40% ಕಮಿಷನ್ ಬೇಡಿಕೆಯ ಆರೋಪ ಹೊತ್ತಿರುವ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ರಾಜೀನಾಮೆ ನೀಡಿರುವವರಿಗೆ ಕರೆ ಮಾಡಿ ನಿಮ್ಮ ಜೊತೆ ಸದಾ ಬೆಂಬಲವಾಗಿರುತ್ತೇವೆ” ಎಂದು ಹೇಳುವುದು ಯಾವ ಸಂದೇಶ ನೀಡಿದಂತಾಗುತ್ತದೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಮುಂದಿನ ತಿಂಗಳು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈಶ್ವರಪ್ಪ ಸ್ಪರ್ಧಿಸುವುದಿಲ್ಲ ಎಂದು ಚುನಾವಣಾ ರಾಜಕೀಯದ ನಿವೃತ್ತಿ ಘೋಷಿಸಿದ್ದರು. ತಮ್ಮ ಮಗನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು, ಆದರೆ ಮಗನಿಗೂ ಟಿಕೆಟ್ ಕೈ ತಪ್ಪಿತು. ಇದೀಗ ಈಶ್ವರಪ್ಪ ಅವರಿಗೆ ಮೋದಿ ಕರೆ ಬಂದಿದೆ. ಈ ದೂರವಾಣಿ ಸಂಭಾಷಣೆಯಲ್ಲಿ ಮೋದಿ ಅವರು ಈಶ್ವರಪ್ಪರನ್ನು ಹೊಗಳಿದ ಮೋದಿ, ಪಕ್ಷ ಸದಾ ಜೊತೆಗಿರುತ್ತದೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ”ಬಿಜೆಪಿ ಟಿಕೆಟ್ ನಿರಾಕರಿಸಿದರೂ ಬಂಡಾಯವೆದ್ದ ಬಿಜೆಪಿ ನಾಯಕ ಈಶ್ವರಪ್ಪ ಅವರನ್ನು ಪ್ರಧಾನಿ ಮೋದಿ ಅಭಿನಂದಿಸುವುದು ಸ್ವೀಕಾರಾರ್ಹವಲ್ಲ! ಈ ವ್ಯಕ್ತಿ 40% ಕಮಿಷನ್ ಬೇಡಿಕೆಯ ಆರೋಪ ಹೊತ್ತಿದ್ದು, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ನಂತರ ಭ್ರಷ್ಟಾಚಾರ ಆರೋಪದ ಮೇಲೆ ರಾಜೀನಾಮೆ ನೀಡಬೇಕಾಯಿತು. ಇಂತಹ ಭ್ರಷ್ಟ ನಾಯಕರನ್ನು ಹೊಗಳುವ ಮೂಲಕ ಬಿಜೆಪಿ ಭ್ರಷ್ಟಾಚಾರ ಮತ್ತು ಅಕ್ರಮ ಚಟುವಟಿಕೆಗಳನ್ನು ಬೆಂಬಲಿಸುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸುತ್ತಿದೆ.” ಎಂದು ಹೇಳಿದೆ.

ಇದನ್ನೂ ಓದಿ: ಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

”ಒಂದು ಕಡೆ ಈಶ್ವರಪ್ಪ ಮೇಲೆ ಕಮಿಷನ್ ಆರೋಪ. ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ. ಇನ್ನೊಂದೆಡೆ ಸ್ವತಃ ಕರೆ ಮಾಡಿ ಈಶ್ವರಪ್ಪರನ್ನು ಶ್ಲಾಘಿಸಿದ ಪ್ರಧಾನಿ ಮೋದಿ. ಪ್ರಧಾನಿ ಮೋದಿ ‘ಭ್ರಷ್ಟಾಚಾರ’ದ ಪರ ನಿಂತಿದ್ದಾರೆ ಎನ್ನುವುದಕ್ಕೆ ಇದಕ್ಕಿಂದ ಸಾಕ್ಷಿ ಬೇಕೆ?” ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

”ಪ್ರಧಾನಿ ನರೇಂದ್ರ ಮೋದಿ ಅವರು ಈಶ್ವರಪ್ಪನವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ಈ ಶ್ಲಾಘನೆ ಏಕೆ? 40% ಕಮಿಷನ್ ಲೂಟಿ ಮಾಡಿದ್ದಕ್ಕಾ? ಸಂತೋಷ್ ಪಾಟೀಲರ ಜೀವ ತೆಗೆದಿದ್ದಕ್ಕಾ? ಭ್ರಷ್ಟಾಚಾರದ ಪೋಷಣೆ ಮಾಡಿದ್ದಕ್ಕಾ? ಕಮಿಷನ್ ಬಗ್ಗೆ ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಮೋದಿ ಕಮಿಷನ್ ಲೂಟಿಕೋರನಿಗೆ ಬೆಂಬಲಿಸಿದ್ದಾರೆ” ಎಂದು ಟ್ವೀಟ್ ಮಾಡಿದೆ.

”ರೌಡಿಗಳಿಗೆ ಕೈ ಮುಗಿಯುತ್ತಾರೆ. ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ. ಆದರೆ ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನವಹಿಸುತ್ತಾರೆ. ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಇಂತಹ ಅಪರೂಪದ ಪ್ರಧಾನಿ ನರೇಂದ್ರ ಮೋದಿ. ಭ್ರಷ್ಟಾಚಾರಕ್ಕೆ ಮೋದಿಯೇ ಮಹಾಪೋಷಕರು” ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಕೂಡ ಟ್ವಿಟ್ಟರ್ ನಲ್ಲಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ಕರ್ನಾಟಕ ಬಿಜೆಪಿಯಲ್ಲಿ ಎಲ್ಲರೂ ಪಕ್ಷ ಬಿಟ್ಟು ಓಡಿ ಹೋಗುತ್ತಿದ್ದಾರೆ. ಈ ನಡುವೆ ಇದೀಗ ಖುದ್ದು ಪ್ರಧಾನಿ ಮೋದಿಯೇ ಈಶ್ವರಪ್ಪ ಅವರಿಗೆ ಕರೆ ಮಾಡಿ ಬೇಡಿಕೊಳ್ಳಬೇಕಾಗಿದೆ. 40% ಕಮಿಷನ್ ಆರೋಪ ಮಾಡಿ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು ಇದೇ ಈಶ್ವರಪ್ಪ ಅವರ ಕಾರಣಕ್ಕೆ ಎಂಬುದನ್ನು ದಯವಿಟ್ಟು ತಿಳಿಸಿ. ಇದಾದ ಬಳಿಕ ಕರ್ನಾಟಕ ಗುತ್ತಿಗೆದಾರರ ಸಂಘ ಶೇ.40 ಕಮಿಷನ್ ಕುರಿತು ಪ್ರಧಾನಿಗೆ ಪತ್ರ ಬರೆದಿತ್ತು. ಆದರೆ ಪ್ರಧಾನಿಯವರಿಗೆ ಭ್ರಷ್ಟಾಚಾರ ಎನ್ನುವುದು ಅವರಿಗೆ ಸಮಸ್ಯೆಯೇನೂ ಇಲ್ಲ, ಹಾಗಾಗಿಯೇ ಅವರು ತಲೆಕೆಡಿಸಿಕೊಳ್ಳಲಿಲ್ಲ. ಈ ಕರ್ನಾಟಕದ ಭ್ರಷ್ಟಾಚಾರದಲ್ಲಿ ಇಡಿ, ಸಿಬಿಐ, ಆದಾಯ ತೆರಿಗೆ ಯಾರೂ ತಮ್ಮ ಸಮಯವನ್ನು ವ್ಯರ್ಥ ಮಾಡಲಿಲ್ಲ” ಎಂದು ಸುಪ್ರಿಯಾ ಶ್ರೀನಾಟೆ ಟ್ವೀಟ್ ಮಾಡಿದ್ದಾರೆ.

”ಕರ್ನಾಟಕದಲ್ಲಿ ಬಂಡಾಯದ ಧ್ವನಿ ಎಷ್ಟು ಪ್ರಬಲವಾಗಿದೆ ಎಂದರೆ ಬಿಜೆಪಿಯ ಮುಂದೆ 40ಕ್ಕೂ ಹೆಚ್ಚು ಬಂಡಾಯಗಾರರು ಕಣದಲ್ಲಿದ್ದಾರೆ. ಈಗ ಈ ಭ್ರಷ್ಟರನ್ನು ಕರೆಸಿ ಸಮಾಧಾನ ಪಡಿಸಲಾಗುತ್ತಿದೆ. ಹಿಮಾಚಲದಲ್ಲಿಯೂ ಅದೇ ಕೆಲಸ ಮಾಡಿದೆ – ಫಲಿತಾಂಶ ನೆನಪಿದೆ, ಅಲ್ಲವೇ? ಈ 40% ಕಮಿಷನೇರ್‌ಗಳು 40 ಕ್ಕಿಂತ ಕಡಿಮೆ ಇರುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ.

”ಪ್ರಧಾನಿ ಮೋದಿ, ಭ್ರಷ್ಟ ಈಶ್ವರಪ್ಪಗೆ ಕರೆ ಮಾಡಿ ಬಂಡಾಯ ಏಳಬೇಡಿ ಎಂದು ಹೇಳಿದ್ದೀರಿ. ಆದರೆ ನಿಮ್ಮ ಕೆಲಸಗಾರ ಸಂತೋಷ್ ಪಾಟೀಲ್ ಕುಟುಂಬದೊಂದಿಗೆ ಮಾತನಾಡಿದ್ದೀರಾ? 40% ಕಮಿಷನ್ ನಿಂದಾಗಿ ಆತ್ಮಹತ್ಯೆ ಮಾಡಿಕೊಂಡವರು ಯಾರು? ನೀವು ನಿರ್ದಿಷ್ಟವಾಗಿ ಭ್ರಷ್ಟಾಚಾರವನ್ನು ದ್ವೇಷಿಸುವುದಿಲ್ಲ. ವಾಸ್ತವವಾಗಿ 40% ಜನರು ನಿಮ್ಮ ಆಶೀರ್ವಾದವನ್ನು ಹೊಂದಿದ್ದಾರೆ. ಮೋದಿ ಆಶೀರ್ವಾದ್ ಶೇ.40 ಕಮೀಷನ್‌ಗೆ” ಎಂದು  ಸುಪ್ರಿಯಾ ಶ್ರಿನೇಟ್ ರೀಟ್ವೀಟ್ ಮಾಡಿದ್ದಾರೆ.

ಮೋದಿ ಕರೆ ಬಳಿಕ ಈಶ್ವರಪ್ಪ ಹೇಳಿದ್ದೇನು?

”ಪ್ರಧಾನಿ ಮೋದಿ ಅವರ ಕರೆಯನ್ನು ನಾನು ನಿರೀಕ್ಷಿಸಿರಲಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ನಗರವನ್ನು ಗೆಲ್ಲಲು ಇದು ನನಗೆ ಸ್ಫೂರ್ತಿ ನೀಡುತ್ತದೆ ಮತ್ತು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವನ್ನು ಮರಳಿ ತರಲು ನಾವು ಎಲ್ಲಾ ಪ್ರಯತ್ನ ಮಾಡುತ್ತೇವೆ. ನಾನು ಮಾಡಿದ್ದು ವಿಶೇಷವೇನಲ್ಲ. ನಾನು ಪ್ರಧಾನಿ ಮೋದಿಯವರಿಗೂ ಅದನ್ನೇ ಹೇಳಿದ್ದೇನೆ” ಎಂದು ಈಶ್ವರಪ್ಪ ಹೇಳಿದರು.

”ಮಾಜಿ ಉಪಮುಖ್ಯಮಂತ್ರಿಯಾಗಿದ್ದ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ತಮ್ಮ ನಿರ್ಧಾರವನ್ನು ಪಕ್ಷದ ಕೇಂದ್ರ ನಾಯಕತ್ವಕ್ಕೆ ಇತ್ತೀಚೆಗೆ ತಿಳಿಸಿದ್ದರು. ಟಿಕೆಟ್ ಘೋಷಣೆಗೂ ಮುನ್ನವೇ ಹೈಕಮಾಂಡ್ ಟಿಕಟ್ ನೀಡದಿರುವ ಬಗ್ಗೆ ಈಶ್ವರಪ್ಪ ಅವರಿಗೆ ತಿಳಿಸಿದ್ದರು ಮತ್ತು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಣೆ ಮಾಡಬೇಕು ಎಂದು ಹೇಳಿದ್ದರು” ಅದರಂತೆ ಅವರು ನಿವೃತ್ತಿ ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...