Homeಕರ್ನಾಟಕ40% ಕಮೀಷನ್ ಬೇಡಿಕೆಯ ಆರೋಪಿಗೆ ಪ್ರಧಾನಿ ಮೋದಿ ಕರೆ ಮಾಡಿ ಭ್ರಷ್ಟಾಚಾರಕ್ಕೆ ಬೆಂಬಲ: ಕಾಂಗ್ರೆಸ್ ಆರೋಪ

40% ಕಮೀಷನ್ ಬೇಡಿಕೆಯ ಆರೋಪಿಗೆ ಪ್ರಧಾನಿ ಮೋದಿ ಕರೆ ಮಾಡಿ ಭ್ರಷ್ಟಾಚಾರಕ್ಕೆ ಬೆಂಬಲ: ಕಾಂಗ್ರೆಸ್ ಆರೋಪ

- Advertisement -
- Advertisement -

ಇಂದು (ಶುಕ್ರವಾರ) ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಬಳಿಕ ಕಾಂಗ್ರೆಸ್ ಪಕ್ಷ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ”40% ಕಮಿಷನ್ ಬೇಡಿಕೆಯ ಆರೋಪ ಹೊತ್ತಿರುವ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ರಾಜೀನಾಮೆ ನೀಡಿರುವವರಿಗೆ ಕರೆ ಮಾಡಿ ನಿಮ್ಮ ಜೊತೆ ಸದಾ ಬೆಂಬಲವಾಗಿರುತ್ತೇವೆ” ಎಂದು ಹೇಳುವುದು ಯಾವ ಸಂದೇಶ ನೀಡಿದಂತಾಗುತ್ತದೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಮುಂದಿನ ತಿಂಗಳು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈಶ್ವರಪ್ಪ ಸ್ಪರ್ಧಿಸುವುದಿಲ್ಲ ಎಂದು ಚುನಾವಣಾ ರಾಜಕೀಯದ ನಿವೃತ್ತಿ ಘೋಷಿಸಿದ್ದರು. ತಮ್ಮ ಮಗನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು, ಆದರೆ ಮಗನಿಗೂ ಟಿಕೆಟ್ ಕೈ ತಪ್ಪಿತು. ಇದೀಗ ಈಶ್ವರಪ್ಪ ಅವರಿಗೆ ಮೋದಿ ಕರೆ ಬಂದಿದೆ. ಈ ದೂರವಾಣಿ ಸಂಭಾಷಣೆಯಲ್ಲಿ ಮೋದಿ ಅವರು ಈಶ್ವರಪ್ಪರನ್ನು ಹೊಗಳಿದ ಮೋದಿ, ಪಕ್ಷ ಸದಾ ಜೊತೆಗಿರುತ್ತದೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ”ಬಿಜೆಪಿ ಟಿಕೆಟ್ ನಿರಾಕರಿಸಿದರೂ ಬಂಡಾಯವೆದ್ದ ಬಿಜೆಪಿ ನಾಯಕ ಈಶ್ವರಪ್ಪ ಅವರನ್ನು ಪ್ರಧಾನಿ ಮೋದಿ ಅಭಿನಂದಿಸುವುದು ಸ್ವೀಕಾರಾರ್ಹವಲ್ಲ! ಈ ವ್ಯಕ್ತಿ 40% ಕಮಿಷನ್ ಬೇಡಿಕೆಯ ಆರೋಪ ಹೊತ್ತಿದ್ದು, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ನಂತರ ಭ್ರಷ್ಟಾಚಾರ ಆರೋಪದ ಮೇಲೆ ರಾಜೀನಾಮೆ ನೀಡಬೇಕಾಯಿತು. ಇಂತಹ ಭ್ರಷ್ಟ ನಾಯಕರನ್ನು ಹೊಗಳುವ ಮೂಲಕ ಬಿಜೆಪಿ ಭ್ರಷ್ಟಾಚಾರ ಮತ್ತು ಅಕ್ರಮ ಚಟುವಟಿಕೆಗಳನ್ನು ಬೆಂಬಲಿಸುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸುತ್ತಿದೆ.” ಎಂದು ಹೇಳಿದೆ.

ಇದನ್ನೂ ಓದಿ: ಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

”ಒಂದು ಕಡೆ ಈಶ್ವರಪ್ಪ ಮೇಲೆ ಕಮಿಷನ್ ಆರೋಪ. ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ. ಇನ್ನೊಂದೆಡೆ ಸ್ವತಃ ಕರೆ ಮಾಡಿ ಈಶ್ವರಪ್ಪರನ್ನು ಶ್ಲಾಘಿಸಿದ ಪ್ರಧಾನಿ ಮೋದಿ. ಪ್ರಧಾನಿ ಮೋದಿ ‘ಭ್ರಷ್ಟಾಚಾರ’ದ ಪರ ನಿಂತಿದ್ದಾರೆ ಎನ್ನುವುದಕ್ಕೆ ಇದಕ್ಕಿಂದ ಸಾಕ್ಷಿ ಬೇಕೆ?” ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

”ಪ್ರಧಾನಿ ನರೇಂದ್ರ ಮೋದಿ ಅವರು ಈಶ್ವರಪ್ಪನವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ಈ ಶ್ಲಾಘನೆ ಏಕೆ? 40% ಕಮಿಷನ್ ಲೂಟಿ ಮಾಡಿದ್ದಕ್ಕಾ? ಸಂತೋಷ್ ಪಾಟೀಲರ ಜೀವ ತೆಗೆದಿದ್ದಕ್ಕಾ? ಭ್ರಷ್ಟಾಚಾರದ ಪೋಷಣೆ ಮಾಡಿದ್ದಕ್ಕಾ? ಕಮಿಷನ್ ಬಗ್ಗೆ ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಮೋದಿ ಕಮಿಷನ್ ಲೂಟಿಕೋರನಿಗೆ ಬೆಂಬಲಿಸಿದ್ದಾರೆ” ಎಂದು ಟ್ವೀಟ್ ಮಾಡಿದೆ.

”ರೌಡಿಗಳಿಗೆ ಕೈ ಮುಗಿಯುತ್ತಾರೆ. ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ. ಆದರೆ ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನವಹಿಸುತ್ತಾರೆ. ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಇಂತಹ ಅಪರೂಪದ ಪ್ರಧಾನಿ ನರೇಂದ್ರ ಮೋದಿ. ಭ್ರಷ್ಟಾಚಾರಕ್ಕೆ ಮೋದಿಯೇ ಮಹಾಪೋಷಕರು” ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಕೂಡ ಟ್ವಿಟ್ಟರ್ ನಲ್ಲಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ಕರ್ನಾಟಕ ಬಿಜೆಪಿಯಲ್ಲಿ ಎಲ್ಲರೂ ಪಕ್ಷ ಬಿಟ್ಟು ಓಡಿ ಹೋಗುತ್ತಿದ್ದಾರೆ. ಈ ನಡುವೆ ಇದೀಗ ಖುದ್ದು ಪ್ರಧಾನಿ ಮೋದಿಯೇ ಈಶ್ವರಪ್ಪ ಅವರಿಗೆ ಕರೆ ಮಾಡಿ ಬೇಡಿಕೊಳ್ಳಬೇಕಾಗಿದೆ. 40% ಕಮಿಷನ್ ಆರೋಪ ಮಾಡಿ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು ಇದೇ ಈಶ್ವರಪ್ಪ ಅವರ ಕಾರಣಕ್ಕೆ ಎಂಬುದನ್ನು ದಯವಿಟ್ಟು ತಿಳಿಸಿ. ಇದಾದ ಬಳಿಕ ಕರ್ನಾಟಕ ಗುತ್ತಿಗೆದಾರರ ಸಂಘ ಶೇ.40 ಕಮಿಷನ್ ಕುರಿತು ಪ್ರಧಾನಿಗೆ ಪತ್ರ ಬರೆದಿತ್ತು. ಆದರೆ ಪ್ರಧಾನಿಯವರಿಗೆ ಭ್ರಷ್ಟಾಚಾರ ಎನ್ನುವುದು ಅವರಿಗೆ ಸಮಸ್ಯೆಯೇನೂ ಇಲ್ಲ, ಹಾಗಾಗಿಯೇ ಅವರು ತಲೆಕೆಡಿಸಿಕೊಳ್ಳಲಿಲ್ಲ. ಈ ಕರ್ನಾಟಕದ ಭ್ರಷ್ಟಾಚಾರದಲ್ಲಿ ಇಡಿ, ಸಿಬಿಐ, ಆದಾಯ ತೆರಿಗೆ ಯಾರೂ ತಮ್ಮ ಸಮಯವನ್ನು ವ್ಯರ್ಥ ಮಾಡಲಿಲ್ಲ” ಎಂದು ಸುಪ್ರಿಯಾ ಶ್ರೀನಾಟೆ ಟ್ವೀಟ್ ಮಾಡಿದ್ದಾರೆ.

”ಕರ್ನಾಟಕದಲ್ಲಿ ಬಂಡಾಯದ ಧ್ವನಿ ಎಷ್ಟು ಪ್ರಬಲವಾಗಿದೆ ಎಂದರೆ ಬಿಜೆಪಿಯ ಮುಂದೆ 40ಕ್ಕೂ ಹೆಚ್ಚು ಬಂಡಾಯಗಾರರು ಕಣದಲ್ಲಿದ್ದಾರೆ. ಈಗ ಈ ಭ್ರಷ್ಟರನ್ನು ಕರೆಸಿ ಸಮಾಧಾನ ಪಡಿಸಲಾಗುತ್ತಿದೆ. ಹಿಮಾಚಲದಲ್ಲಿಯೂ ಅದೇ ಕೆಲಸ ಮಾಡಿದೆ – ಫಲಿತಾಂಶ ನೆನಪಿದೆ, ಅಲ್ಲವೇ? ಈ 40% ಕಮಿಷನೇರ್‌ಗಳು 40 ಕ್ಕಿಂತ ಕಡಿಮೆ ಇರುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ.

”ಪ್ರಧಾನಿ ಮೋದಿ, ಭ್ರಷ್ಟ ಈಶ್ವರಪ್ಪಗೆ ಕರೆ ಮಾಡಿ ಬಂಡಾಯ ಏಳಬೇಡಿ ಎಂದು ಹೇಳಿದ್ದೀರಿ. ಆದರೆ ನಿಮ್ಮ ಕೆಲಸಗಾರ ಸಂತೋಷ್ ಪಾಟೀಲ್ ಕುಟುಂಬದೊಂದಿಗೆ ಮಾತನಾಡಿದ್ದೀರಾ? 40% ಕಮಿಷನ್ ನಿಂದಾಗಿ ಆತ್ಮಹತ್ಯೆ ಮಾಡಿಕೊಂಡವರು ಯಾರು? ನೀವು ನಿರ್ದಿಷ್ಟವಾಗಿ ಭ್ರಷ್ಟಾಚಾರವನ್ನು ದ್ವೇಷಿಸುವುದಿಲ್ಲ. ವಾಸ್ತವವಾಗಿ 40% ಜನರು ನಿಮ್ಮ ಆಶೀರ್ವಾದವನ್ನು ಹೊಂದಿದ್ದಾರೆ. ಮೋದಿ ಆಶೀರ್ವಾದ್ ಶೇ.40 ಕಮೀಷನ್‌ಗೆ” ಎಂದು  ಸುಪ್ರಿಯಾ ಶ್ರಿನೇಟ್ ರೀಟ್ವೀಟ್ ಮಾಡಿದ್ದಾರೆ.

ಮೋದಿ ಕರೆ ಬಳಿಕ ಈಶ್ವರಪ್ಪ ಹೇಳಿದ್ದೇನು?

”ಪ್ರಧಾನಿ ಮೋದಿ ಅವರ ಕರೆಯನ್ನು ನಾನು ನಿರೀಕ್ಷಿಸಿರಲಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ನಗರವನ್ನು ಗೆಲ್ಲಲು ಇದು ನನಗೆ ಸ್ಫೂರ್ತಿ ನೀಡುತ್ತದೆ ಮತ್ತು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವನ್ನು ಮರಳಿ ತರಲು ನಾವು ಎಲ್ಲಾ ಪ್ರಯತ್ನ ಮಾಡುತ್ತೇವೆ. ನಾನು ಮಾಡಿದ್ದು ವಿಶೇಷವೇನಲ್ಲ. ನಾನು ಪ್ರಧಾನಿ ಮೋದಿಯವರಿಗೂ ಅದನ್ನೇ ಹೇಳಿದ್ದೇನೆ” ಎಂದು ಈಶ್ವರಪ್ಪ ಹೇಳಿದರು.

”ಮಾಜಿ ಉಪಮುಖ್ಯಮಂತ್ರಿಯಾಗಿದ್ದ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ತಮ್ಮ ನಿರ್ಧಾರವನ್ನು ಪಕ್ಷದ ಕೇಂದ್ರ ನಾಯಕತ್ವಕ್ಕೆ ಇತ್ತೀಚೆಗೆ ತಿಳಿಸಿದ್ದರು. ಟಿಕೆಟ್ ಘೋಷಣೆಗೂ ಮುನ್ನವೇ ಹೈಕಮಾಂಡ್ ಟಿಕಟ್ ನೀಡದಿರುವ ಬಗ್ಗೆ ಈಶ್ವರಪ್ಪ ಅವರಿಗೆ ತಿಳಿಸಿದ್ದರು ಮತ್ತು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಣೆ ಮಾಡಬೇಕು ಎಂದು ಹೇಳಿದ್ದರು” ಅದರಂತೆ ಅವರು ನಿವೃತ್ತಿ ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...