Homeಕರ್ನಾಟಕ40% ಕಮೀಷನ್ ಬೇಡಿಕೆಯ ಆರೋಪಿಗೆ ಪ್ರಧಾನಿ ಮೋದಿ ಕರೆ ಮಾಡಿ ಭ್ರಷ್ಟಾಚಾರಕ್ಕೆ ಬೆಂಬಲ: ಕಾಂಗ್ರೆಸ್ ಆರೋಪ

40% ಕಮೀಷನ್ ಬೇಡಿಕೆಯ ಆರೋಪಿಗೆ ಪ್ರಧಾನಿ ಮೋದಿ ಕರೆ ಮಾಡಿ ಭ್ರಷ್ಟಾಚಾರಕ್ಕೆ ಬೆಂಬಲ: ಕಾಂಗ್ರೆಸ್ ಆರೋಪ

- Advertisement -
- Advertisement -

ಇಂದು (ಶುಕ್ರವಾರ) ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಬಳಿಕ ಕಾಂಗ್ರೆಸ್ ಪಕ್ಷ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ”40% ಕಮಿಷನ್ ಬೇಡಿಕೆಯ ಆರೋಪ ಹೊತ್ತಿರುವ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ರಾಜೀನಾಮೆ ನೀಡಿರುವವರಿಗೆ ಕರೆ ಮಾಡಿ ನಿಮ್ಮ ಜೊತೆ ಸದಾ ಬೆಂಬಲವಾಗಿರುತ್ತೇವೆ” ಎಂದು ಹೇಳುವುದು ಯಾವ ಸಂದೇಶ ನೀಡಿದಂತಾಗುತ್ತದೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಮುಂದಿನ ತಿಂಗಳು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈಶ್ವರಪ್ಪ ಸ್ಪರ್ಧಿಸುವುದಿಲ್ಲ ಎಂದು ಚುನಾವಣಾ ರಾಜಕೀಯದ ನಿವೃತ್ತಿ ಘೋಷಿಸಿದ್ದರು. ತಮ್ಮ ಮಗನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು, ಆದರೆ ಮಗನಿಗೂ ಟಿಕೆಟ್ ಕೈ ತಪ್ಪಿತು. ಇದೀಗ ಈಶ್ವರಪ್ಪ ಅವರಿಗೆ ಮೋದಿ ಕರೆ ಬಂದಿದೆ. ಈ ದೂರವಾಣಿ ಸಂಭಾಷಣೆಯಲ್ಲಿ ಮೋದಿ ಅವರು ಈಶ್ವರಪ್ಪರನ್ನು ಹೊಗಳಿದ ಮೋದಿ, ಪಕ್ಷ ಸದಾ ಜೊತೆಗಿರುತ್ತದೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ”ಬಿಜೆಪಿ ಟಿಕೆಟ್ ನಿರಾಕರಿಸಿದರೂ ಬಂಡಾಯವೆದ್ದ ಬಿಜೆಪಿ ನಾಯಕ ಈಶ್ವರಪ್ಪ ಅವರನ್ನು ಪ್ರಧಾನಿ ಮೋದಿ ಅಭಿನಂದಿಸುವುದು ಸ್ವೀಕಾರಾರ್ಹವಲ್ಲ! ಈ ವ್ಯಕ್ತಿ 40% ಕಮಿಷನ್ ಬೇಡಿಕೆಯ ಆರೋಪ ಹೊತ್ತಿದ್ದು, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ನಂತರ ಭ್ರಷ್ಟಾಚಾರ ಆರೋಪದ ಮೇಲೆ ರಾಜೀನಾಮೆ ನೀಡಬೇಕಾಯಿತು. ಇಂತಹ ಭ್ರಷ್ಟ ನಾಯಕರನ್ನು ಹೊಗಳುವ ಮೂಲಕ ಬಿಜೆಪಿ ಭ್ರಷ್ಟಾಚಾರ ಮತ್ತು ಅಕ್ರಮ ಚಟುವಟಿಕೆಗಳನ್ನು ಬೆಂಬಲಿಸುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸುತ್ತಿದೆ.” ಎಂದು ಹೇಳಿದೆ.

ಇದನ್ನೂ ಓದಿ: ಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

”ಒಂದು ಕಡೆ ಈಶ್ವರಪ್ಪ ಮೇಲೆ ಕಮಿಷನ್ ಆರೋಪ. ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ. ಇನ್ನೊಂದೆಡೆ ಸ್ವತಃ ಕರೆ ಮಾಡಿ ಈಶ್ವರಪ್ಪರನ್ನು ಶ್ಲಾಘಿಸಿದ ಪ್ರಧಾನಿ ಮೋದಿ. ಪ್ರಧಾನಿ ಮೋದಿ ‘ಭ್ರಷ್ಟಾಚಾರ’ದ ಪರ ನಿಂತಿದ್ದಾರೆ ಎನ್ನುವುದಕ್ಕೆ ಇದಕ್ಕಿಂದ ಸಾಕ್ಷಿ ಬೇಕೆ?” ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

”ಪ್ರಧಾನಿ ನರೇಂದ್ರ ಮೋದಿ ಅವರು ಈಶ್ವರಪ್ಪನವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ಈ ಶ್ಲಾಘನೆ ಏಕೆ? 40% ಕಮಿಷನ್ ಲೂಟಿ ಮಾಡಿದ್ದಕ್ಕಾ? ಸಂತೋಷ್ ಪಾಟೀಲರ ಜೀವ ತೆಗೆದಿದ್ದಕ್ಕಾ? ಭ್ರಷ್ಟಾಚಾರದ ಪೋಷಣೆ ಮಾಡಿದ್ದಕ್ಕಾ? ಕಮಿಷನ್ ಬಗ್ಗೆ ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಮೋದಿ ಕಮಿಷನ್ ಲೂಟಿಕೋರನಿಗೆ ಬೆಂಬಲಿಸಿದ್ದಾರೆ” ಎಂದು ಟ್ವೀಟ್ ಮಾಡಿದೆ.

”ರೌಡಿಗಳಿಗೆ ಕೈ ಮುಗಿಯುತ್ತಾರೆ. ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ. ಆದರೆ ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನವಹಿಸುತ್ತಾರೆ. ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಇಂತಹ ಅಪರೂಪದ ಪ್ರಧಾನಿ ನರೇಂದ್ರ ಮೋದಿ. ಭ್ರಷ್ಟಾಚಾರಕ್ಕೆ ಮೋದಿಯೇ ಮಹಾಪೋಷಕರು” ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಕೂಡ ಟ್ವಿಟ್ಟರ್ ನಲ್ಲಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ಕರ್ನಾಟಕ ಬಿಜೆಪಿಯಲ್ಲಿ ಎಲ್ಲರೂ ಪಕ್ಷ ಬಿಟ್ಟು ಓಡಿ ಹೋಗುತ್ತಿದ್ದಾರೆ. ಈ ನಡುವೆ ಇದೀಗ ಖುದ್ದು ಪ್ರಧಾನಿ ಮೋದಿಯೇ ಈಶ್ವರಪ್ಪ ಅವರಿಗೆ ಕರೆ ಮಾಡಿ ಬೇಡಿಕೊಳ್ಳಬೇಕಾಗಿದೆ. 40% ಕಮಿಷನ್ ಆರೋಪ ಮಾಡಿ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು ಇದೇ ಈಶ್ವರಪ್ಪ ಅವರ ಕಾರಣಕ್ಕೆ ಎಂಬುದನ್ನು ದಯವಿಟ್ಟು ತಿಳಿಸಿ. ಇದಾದ ಬಳಿಕ ಕರ್ನಾಟಕ ಗುತ್ತಿಗೆದಾರರ ಸಂಘ ಶೇ.40 ಕಮಿಷನ್ ಕುರಿತು ಪ್ರಧಾನಿಗೆ ಪತ್ರ ಬರೆದಿತ್ತು. ಆದರೆ ಪ್ರಧಾನಿಯವರಿಗೆ ಭ್ರಷ್ಟಾಚಾರ ಎನ್ನುವುದು ಅವರಿಗೆ ಸಮಸ್ಯೆಯೇನೂ ಇಲ್ಲ, ಹಾಗಾಗಿಯೇ ಅವರು ತಲೆಕೆಡಿಸಿಕೊಳ್ಳಲಿಲ್ಲ. ಈ ಕರ್ನಾಟಕದ ಭ್ರಷ್ಟಾಚಾರದಲ್ಲಿ ಇಡಿ, ಸಿಬಿಐ, ಆದಾಯ ತೆರಿಗೆ ಯಾರೂ ತಮ್ಮ ಸಮಯವನ್ನು ವ್ಯರ್ಥ ಮಾಡಲಿಲ್ಲ” ಎಂದು ಸುಪ್ರಿಯಾ ಶ್ರೀನಾಟೆ ಟ್ವೀಟ್ ಮಾಡಿದ್ದಾರೆ.

”ಕರ್ನಾಟಕದಲ್ಲಿ ಬಂಡಾಯದ ಧ್ವನಿ ಎಷ್ಟು ಪ್ರಬಲವಾಗಿದೆ ಎಂದರೆ ಬಿಜೆಪಿಯ ಮುಂದೆ 40ಕ್ಕೂ ಹೆಚ್ಚು ಬಂಡಾಯಗಾರರು ಕಣದಲ್ಲಿದ್ದಾರೆ. ಈಗ ಈ ಭ್ರಷ್ಟರನ್ನು ಕರೆಸಿ ಸಮಾಧಾನ ಪಡಿಸಲಾಗುತ್ತಿದೆ. ಹಿಮಾಚಲದಲ್ಲಿಯೂ ಅದೇ ಕೆಲಸ ಮಾಡಿದೆ – ಫಲಿತಾಂಶ ನೆನಪಿದೆ, ಅಲ್ಲವೇ? ಈ 40% ಕಮಿಷನೇರ್‌ಗಳು 40 ಕ್ಕಿಂತ ಕಡಿಮೆ ಇರುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ.

”ಪ್ರಧಾನಿ ಮೋದಿ, ಭ್ರಷ್ಟ ಈಶ್ವರಪ್ಪಗೆ ಕರೆ ಮಾಡಿ ಬಂಡಾಯ ಏಳಬೇಡಿ ಎಂದು ಹೇಳಿದ್ದೀರಿ. ಆದರೆ ನಿಮ್ಮ ಕೆಲಸಗಾರ ಸಂತೋಷ್ ಪಾಟೀಲ್ ಕುಟುಂಬದೊಂದಿಗೆ ಮಾತನಾಡಿದ್ದೀರಾ? 40% ಕಮಿಷನ್ ನಿಂದಾಗಿ ಆತ್ಮಹತ್ಯೆ ಮಾಡಿಕೊಂಡವರು ಯಾರು? ನೀವು ನಿರ್ದಿಷ್ಟವಾಗಿ ಭ್ರಷ್ಟಾಚಾರವನ್ನು ದ್ವೇಷಿಸುವುದಿಲ್ಲ. ವಾಸ್ತವವಾಗಿ 40% ಜನರು ನಿಮ್ಮ ಆಶೀರ್ವಾದವನ್ನು ಹೊಂದಿದ್ದಾರೆ. ಮೋದಿ ಆಶೀರ್ವಾದ್ ಶೇ.40 ಕಮೀಷನ್‌ಗೆ” ಎಂದು  ಸುಪ್ರಿಯಾ ಶ್ರಿನೇಟ್ ರೀಟ್ವೀಟ್ ಮಾಡಿದ್ದಾರೆ.

ಮೋದಿ ಕರೆ ಬಳಿಕ ಈಶ್ವರಪ್ಪ ಹೇಳಿದ್ದೇನು?

”ಪ್ರಧಾನಿ ಮೋದಿ ಅವರ ಕರೆಯನ್ನು ನಾನು ನಿರೀಕ್ಷಿಸಿರಲಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ನಗರವನ್ನು ಗೆಲ್ಲಲು ಇದು ನನಗೆ ಸ್ಫೂರ್ತಿ ನೀಡುತ್ತದೆ ಮತ್ತು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವನ್ನು ಮರಳಿ ತರಲು ನಾವು ಎಲ್ಲಾ ಪ್ರಯತ್ನ ಮಾಡುತ್ತೇವೆ. ನಾನು ಮಾಡಿದ್ದು ವಿಶೇಷವೇನಲ್ಲ. ನಾನು ಪ್ರಧಾನಿ ಮೋದಿಯವರಿಗೂ ಅದನ್ನೇ ಹೇಳಿದ್ದೇನೆ” ಎಂದು ಈಶ್ವರಪ್ಪ ಹೇಳಿದರು.

”ಮಾಜಿ ಉಪಮುಖ್ಯಮಂತ್ರಿಯಾಗಿದ್ದ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ತಮ್ಮ ನಿರ್ಧಾರವನ್ನು ಪಕ್ಷದ ಕೇಂದ್ರ ನಾಯಕತ್ವಕ್ಕೆ ಇತ್ತೀಚೆಗೆ ತಿಳಿಸಿದ್ದರು. ಟಿಕೆಟ್ ಘೋಷಣೆಗೂ ಮುನ್ನವೇ ಹೈಕಮಾಂಡ್ ಟಿಕಟ್ ನೀಡದಿರುವ ಬಗ್ಗೆ ಈಶ್ವರಪ್ಪ ಅವರಿಗೆ ತಿಳಿಸಿದ್ದರು ಮತ್ತು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಣೆ ಮಾಡಬೇಕು ಎಂದು ಹೇಳಿದ್ದರು” ಅದರಂತೆ ಅವರು ನಿವೃತ್ತಿ ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...