Homeಕರ್ನಾಟಕ40% ಕಮೀಷನ್ ಬೇಡಿಕೆಯ ಆರೋಪಿಗೆ ಪ್ರಧಾನಿ ಮೋದಿ ಕರೆ ಮಾಡಿ ಭ್ರಷ್ಟಾಚಾರಕ್ಕೆ ಬೆಂಬಲ: ಕಾಂಗ್ರೆಸ್ ಆರೋಪ

40% ಕಮೀಷನ್ ಬೇಡಿಕೆಯ ಆರೋಪಿಗೆ ಪ್ರಧಾನಿ ಮೋದಿ ಕರೆ ಮಾಡಿ ಭ್ರಷ್ಟಾಚಾರಕ್ಕೆ ಬೆಂಬಲ: ಕಾಂಗ್ರೆಸ್ ಆರೋಪ

- Advertisement -
- Advertisement -

ಇಂದು (ಶುಕ್ರವಾರ) ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಬಳಿಕ ಕಾಂಗ್ರೆಸ್ ಪಕ್ಷ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ”40% ಕಮಿಷನ್ ಬೇಡಿಕೆಯ ಆರೋಪ ಹೊತ್ತಿರುವ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ರಾಜೀನಾಮೆ ನೀಡಿರುವವರಿಗೆ ಕರೆ ಮಾಡಿ ನಿಮ್ಮ ಜೊತೆ ಸದಾ ಬೆಂಬಲವಾಗಿರುತ್ತೇವೆ” ಎಂದು ಹೇಳುವುದು ಯಾವ ಸಂದೇಶ ನೀಡಿದಂತಾಗುತ್ತದೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಮುಂದಿನ ತಿಂಗಳು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈಶ್ವರಪ್ಪ ಸ್ಪರ್ಧಿಸುವುದಿಲ್ಲ ಎಂದು ಚುನಾವಣಾ ರಾಜಕೀಯದ ನಿವೃತ್ತಿ ಘೋಷಿಸಿದ್ದರು. ತಮ್ಮ ಮಗನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು, ಆದರೆ ಮಗನಿಗೂ ಟಿಕೆಟ್ ಕೈ ತಪ್ಪಿತು. ಇದೀಗ ಈಶ್ವರಪ್ಪ ಅವರಿಗೆ ಮೋದಿ ಕರೆ ಬಂದಿದೆ. ಈ ದೂರವಾಣಿ ಸಂಭಾಷಣೆಯಲ್ಲಿ ಮೋದಿ ಅವರು ಈಶ್ವರಪ್ಪರನ್ನು ಹೊಗಳಿದ ಮೋದಿ, ಪಕ್ಷ ಸದಾ ಜೊತೆಗಿರುತ್ತದೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ”ಬಿಜೆಪಿ ಟಿಕೆಟ್ ನಿರಾಕರಿಸಿದರೂ ಬಂಡಾಯವೆದ್ದ ಬಿಜೆಪಿ ನಾಯಕ ಈಶ್ವರಪ್ಪ ಅವರನ್ನು ಪ್ರಧಾನಿ ಮೋದಿ ಅಭಿನಂದಿಸುವುದು ಸ್ವೀಕಾರಾರ್ಹವಲ್ಲ! ಈ ವ್ಯಕ್ತಿ 40% ಕಮಿಷನ್ ಬೇಡಿಕೆಯ ಆರೋಪ ಹೊತ್ತಿದ್ದು, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ನಂತರ ಭ್ರಷ್ಟಾಚಾರ ಆರೋಪದ ಮೇಲೆ ರಾಜೀನಾಮೆ ನೀಡಬೇಕಾಯಿತು. ಇಂತಹ ಭ್ರಷ್ಟ ನಾಯಕರನ್ನು ಹೊಗಳುವ ಮೂಲಕ ಬಿಜೆಪಿ ಭ್ರಷ್ಟಾಚಾರ ಮತ್ತು ಅಕ್ರಮ ಚಟುವಟಿಕೆಗಳನ್ನು ಬೆಂಬಲಿಸುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸುತ್ತಿದೆ.” ಎಂದು ಹೇಳಿದೆ.

ಇದನ್ನೂ ಓದಿ: ಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

”ಒಂದು ಕಡೆ ಈಶ್ವರಪ್ಪ ಮೇಲೆ ಕಮಿಷನ್ ಆರೋಪ. ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ. ಇನ್ನೊಂದೆಡೆ ಸ್ವತಃ ಕರೆ ಮಾಡಿ ಈಶ್ವರಪ್ಪರನ್ನು ಶ್ಲಾಘಿಸಿದ ಪ್ರಧಾನಿ ಮೋದಿ. ಪ್ರಧಾನಿ ಮೋದಿ ‘ಭ್ರಷ್ಟಾಚಾರ’ದ ಪರ ನಿಂತಿದ್ದಾರೆ ಎನ್ನುವುದಕ್ಕೆ ಇದಕ್ಕಿಂದ ಸಾಕ್ಷಿ ಬೇಕೆ?” ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

”ಪ್ರಧಾನಿ ನರೇಂದ್ರ ಮೋದಿ ಅವರು ಈಶ್ವರಪ್ಪನವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ಈ ಶ್ಲಾಘನೆ ಏಕೆ? 40% ಕಮಿಷನ್ ಲೂಟಿ ಮಾಡಿದ್ದಕ್ಕಾ? ಸಂತೋಷ್ ಪಾಟೀಲರ ಜೀವ ತೆಗೆದಿದ್ದಕ್ಕಾ? ಭ್ರಷ್ಟಾಚಾರದ ಪೋಷಣೆ ಮಾಡಿದ್ದಕ್ಕಾ? ಕಮಿಷನ್ ಬಗ್ಗೆ ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಮೋದಿ ಕಮಿಷನ್ ಲೂಟಿಕೋರನಿಗೆ ಬೆಂಬಲಿಸಿದ್ದಾರೆ” ಎಂದು ಟ್ವೀಟ್ ಮಾಡಿದೆ.

”ರೌಡಿಗಳಿಗೆ ಕೈ ಮುಗಿಯುತ್ತಾರೆ. ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ. ಆದರೆ ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನವಹಿಸುತ್ತಾರೆ. ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಇಂತಹ ಅಪರೂಪದ ಪ್ರಧಾನಿ ನರೇಂದ್ರ ಮೋದಿ. ಭ್ರಷ್ಟಾಚಾರಕ್ಕೆ ಮೋದಿಯೇ ಮಹಾಪೋಷಕರು” ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಕೂಡ ಟ್ವಿಟ್ಟರ್ ನಲ್ಲಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ಕರ್ನಾಟಕ ಬಿಜೆಪಿಯಲ್ಲಿ ಎಲ್ಲರೂ ಪಕ್ಷ ಬಿಟ್ಟು ಓಡಿ ಹೋಗುತ್ತಿದ್ದಾರೆ. ಈ ನಡುವೆ ಇದೀಗ ಖುದ್ದು ಪ್ರಧಾನಿ ಮೋದಿಯೇ ಈಶ್ವರಪ್ಪ ಅವರಿಗೆ ಕರೆ ಮಾಡಿ ಬೇಡಿಕೊಳ್ಳಬೇಕಾಗಿದೆ. 40% ಕಮಿಷನ್ ಆರೋಪ ಮಾಡಿ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು ಇದೇ ಈಶ್ವರಪ್ಪ ಅವರ ಕಾರಣಕ್ಕೆ ಎಂಬುದನ್ನು ದಯವಿಟ್ಟು ತಿಳಿಸಿ. ಇದಾದ ಬಳಿಕ ಕರ್ನಾಟಕ ಗುತ್ತಿಗೆದಾರರ ಸಂಘ ಶೇ.40 ಕಮಿಷನ್ ಕುರಿತು ಪ್ರಧಾನಿಗೆ ಪತ್ರ ಬರೆದಿತ್ತು. ಆದರೆ ಪ್ರಧಾನಿಯವರಿಗೆ ಭ್ರಷ್ಟಾಚಾರ ಎನ್ನುವುದು ಅವರಿಗೆ ಸಮಸ್ಯೆಯೇನೂ ಇಲ್ಲ, ಹಾಗಾಗಿಯೇ ಅವರು ತಲೆಕೆಡಿಸಿಕೊಳ್ಳಲಿಲ್ಲ. ಈ ಕರ್ನಾಟಕದ ಭ್ರಷ್ಟಾಚಾರದಲ್ಲಿ ಇಡಿ, ಸಿಬಿಐ, ಆದಾಯ ತೆರಿಗೆ ಯಾರೂ ತಮ್ಮ ಸಮಯವನ್ನು ವ್ಯರ್ಥ ಮಾಡಲಿಲ್ಲ” ಎಂದು ಸುಪ್ರಿಯಾ ಶ್ರೀನಾಟೆ ಟ್ವೀಟ್ ಮಾಡಿದ್ದಾರೆ.

”ಕರ್ನಾಟಕದಲ್ಲಿ ಬಂಡಾಯದ ಧ್ವನಿ ಎಷ್ಟು ಪ್ರಬಲವಾಗಿದೆ ಎಂದರೆ ಬಿಜೆಪಿಯ ಮುಂದೆ 40ಕ್ಕೂ ಹೆಚ್ಚು ಬಂಡಾಯಗಾರರು ಕಣದಲ್ಲಿದ್ದಾರೆ. ಈಗ ಈ ಭ್ರಷ್ಟರನ್ನು ಕರೆಸಿ ಸಮಾಧಾನ ಪಡಿಸಲಾಗುತ್ತಿದೆ. ಹಿಮಾಚಲದಲ್ಲಿಯೂ ಅದೇ ಕೆಲಸ ಮಾಡಿದೆ – ಫಲಿತಾಂಶ ನೆನಪಿದೆ, ಅಲ್ಲವೇ? ಈ 40% ಕಮಿಷನೇರ್‌ಗಳು 40 ಕ್ಕಿಂತ ಕಡಿಮೆ ಇರುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ.

”ಪ್ರಧಾನಿ ಮೋದಿ, ಭ್ರಷ್ಟ ಈಶ್ವರಪ್ಪಗೆ ಕರೆ ಮಾಡಿ ಬಂಡಾಯ ಏಳಬೇಡಿ ಎಂದು ಹೇಳಿದ್ದೀರಿ. ಆದರೆ ನಿಮ್ಮ ಕೆಲಸಗಾರ ಸಂತೋಷ್ ಪಾಟೀಲ್ ಕುಟುಂಬದೊಂದಿಗೆ ಮಾತನಾಡಿದ್ದೀರಾ? 40% ಕಮಿಷನ್ ನಿಂದಾಗಿ ಆತ್ಮಹತ್ಯೆ ಮಾಡಿಕೊಂಡವರು ಯಾರು? ನೀವು ನಿರ್ದಿಷ್ಟವಾಗಿ ಭ್ರಷ್ಟಾಚಾರವನ್ನು ದ್ವೇಷಿಸುವುದಿಲ್ಲ. ವಾಸ್ತವವಾಗಿ 40% ಜನರು ನಿಮ್ಮ ಆಶೀರ್ವಾದವನ್ನು ಹೊಂದಿದ್ದಾರೆ. ಮೋದಿ ಆಶೀರ್ವಾದ್ ಶೇ.40 ಕಮೀಷನ್‌ಗೆ” ಎಂದು  ಸುಪ್ರಿಯಾ ಶ್ರಿನೇಟ್ ರೀಟ್ವೀಟ್ ಮಾಡಿದ್ದಾರೆ.

ಮೋದಿ ಕರೆ ಬಳಿಕ ಈಶ್ವರಪ್ಪ ಹೇಳಿದ್ದೇನು?

”ಪ್ರಧಾನಿ ಮೋದಿ ಅವರ ಕರೆಯನ್ನು ನಾನು ನಿರೀಕ್ಷಿಸಿರಲಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ನಗರವನ್ನು ಗೆಲ್ಲಲು ಇದು ನನಗೆ ಸ್ಫೂರ್ತಿ ನೀಡುತ್ತದೆ ಮತ್ತು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವನ್ನು ಮರಳಿ ತರಲು ನಾವು ಎಲ್ಲಾ ಪ್ರಯತ್ನ ಮಾಡುತ್ತೇವೆ. ನಾನು ಮಾಡಿದ್ದು ವಿಶೇಷವೇನಲ್ಲ. ನಾನು ಪ್ರಧಾನಿ ಮೋದಿಯವರಿಗೂ ಅದನ್ನೇ ಹೇಳಿದ್ದೇನೆ” ಎಂದು ಈಶ್ವರಪ್ಪ ಹೇಳಿದರು.

”ಮಾಜಿ ಉಪಮುಖ್ಯಮಂತ್ರಿಯಾಗಿದ್ದ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ತಮ್ಮ ನಿರ್ಧಾರವನ್ನು ಪಕ್ಷದ ಕೇಂದ್ರ ನಾಯಕತ್ವಕ್ಕೆ ಇತ್ತೀಚೆಗೆ ತಿಳಿಸಿದ್ದರು. ಟಿಕೆಟ್ ಘೋಷಣೆಗೂ ಮುನ್ನವೇ ಹೈಕಮಾಂಡ್ ಟಿಕಟ್ ನೀಡದಿರುವ ಬಗ್ಗೆ ಈಶ್ವರಪ್ಪ ಅವರಿಗೆ ತಿಳಿಸಿದ್ದರು ಮತ್ತು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಣೆ ಮಾಡಬೇಕು ಎಂದು ಹೇಳಿದ್ದರು” ಅದರಂತೆ ಅವರು ನಿವೃತ್ತಿ ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...