Homeಮುಖಪುಟಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ: ಮನೆಯೇ ಇಲ್ಲದವರು ಏನು ಮಾಡಬೇಕು?

ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ: ಮನೆಯೇ ಇಲ್ಲದವರು ಏನು ಮಾಡಬೇಕು?

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ನಡೆದ ವಸತಿರಹಿತರ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ 39.21 ಲಕ್ಷ ಜನರಿಗೆ ವಾಸಿಸಲು ಸೂರಿಲ್ಲ.

- Advertisement -
- Advertisement -

ಭಾರತ ದೇಶವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವದ ಹೊಸ್ತಿಲಲ್ಲಿದೆ. ಲಕ್ಷಾಂತರ ಜನರ ವಿರೋಚಿತ ಹೋರಾಟದ ಫಲವಾಗಿ ಬ್ರಿಟಿಷ್ ವಸಾಹತುಶಾಹಿಯಿಂದ ವಿಮೋಚನೆಗೊಂಡು ಸ್ವತಂತ್ರ ರಾಷ್ಟ್ರದ ಅಸ್ತಿತ್ವ ಪಡೆದಿದ್ದೇವೆ. ಅದರ ಆಧಾರದಲ್ಲಿ ಶಿಕ್ಷಣ, ಆರೋಗ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಮೋಘ ಸಾಧನೆಗೈದಿದ್ದೇವೆ. ಆದರೂ ಎಲ್ಲರಿಗೂ ಶಿಕ್ಷಣ ಮತ್ತು ಉದ್ಯೋಗ, ಆರೋಗ್ಯ ಮತ್ತು ವಸತಿ ಹಾಗು ಆತ್ಮಗೌರವದಿಂದ ಬದುಕಲು ಸಾಧ್ಯವಾಗಿದೆಯೆ ಎಂದರೆ ನಾವು ಸಾಗಬೇಕಾದ ಹಾದಿ ಇನ್ನೂ ದೂರ ಅನಿಸುತ್ತದೆ.

ಭಾರತ ಸ್ವಾತಂತ್ರ್ಯ ಗಳಿಸಿದ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಆ ಮೂಲಕ ಜನರು ರಾಷ್ಟ್ರಭಕ್ತಿಯನ್ನು ಪ್ರದರ್ಶನ ಮಾಡಬೇಕೆಂದು ಮನವಿ ಮಾಡಿದ್ದಾರೆ. ಅದಕ್ಕಾಗಿ ತ್ರಿವರ್ಣ ಧ್ವಜಗಳನ್ನು ಮಾರಲು ರಾಜ್ಯ ಬಿಜೆಪಿ ಸರ್ಕಾರಗಳು ಮುಂದಾಗಿವೆ. ಅದರೆ ಅದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಬಂದು 75 ವರ್ಷ ಆದರೂ ವಾಸಿಸಲು ಕನಿಷ್ಠ ಮನೆ ಇಲ್ಲದವರು ಏನು ಮಾಡಬೇಕು? ಅವರು ಎಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕು ಎಂಬ ಪ್ರಶ್ನೆ ಎದ್ದಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ನಡೆದ ವಸತಿರಹಿತರ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ 39.21 ಲಕ್ಷ ಜನರಿಗೆ ವಾಸಿಸಲು ಸೂರಿಲ್ಲ. 21.78 ಲಕ್ಷ ಗ್ರಾಮೀಣ ಭಾಗದ ಜನರು ವಸತಿ ವಂಚಿತರಾದರೆ, 18.17 ಲಕ್ಷ ಜನರು ನಗರ ಭಾಗಗಳಲ್ಲಿ ಸೂರು ವಂಚಿತರಾಗಿದ್ದಾರೆ.

ಕಳೆದ ವರ್ಷ ವಿಧಾನ ಪರಿಷತ್‌ನಲ್ಲಿ ಸದಸ್ಯ ವಿಜಯ್ ಸಿಂಗ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ವಸತಿ ಸಚಿವ ವಿ.ಸೋಮಣ್ಣನವರು, “ರಾಜ್ಯದ ಕೇವಲ ನಗರ ಪ್ರದೇಶಗಳಲ್ಲಿಯೇ 14,15,121 ಜನರು ವಸತಿಗಾಗಿ ಅರ್ಜಿ ಸಲ್ಲಿಸಿದ್ದಾರೆ” ಎಂದು ಉತ್ತರಿಸಿದ್ದರು. ಗ್ರಾಮೀಣ ಪ್ರದೇಶದಲ್ಲಿ 18,71,691 ಮನೆಗಳ ಬೇಡಿಕೆಯಿದೆ ಎಂದು ಅವರು ಅಂಕಿ ಅಂಶಗಳನ್ನು ನೀಡಿದ್ದರು.

ಚಾಮರಾಜನಗರ, ಬೀದರ್ ಜಿಲ್ಲೆಗಳಲ್ಲಿ ಮನೆಗಳಿಗಾಗಿ ಅತಿ ಹೆಚ್ಚು ಅರ್ಜಿಗಳು ಬಂದಿವೆ, ಜಿಪಿಎಸ್ ಮೂಲಕ ನಿವೇಶನಗಳನ್ನು ಪತ್ತೆ ಹಚ್ಚಲಾಗಿದೆ ಎಂಬ ವರದಿಗಳು ಪ್ರಕಟವಾಗುತ್ತಲೇ ಇವೆ. ಇವೆಲ್ಲವೂ ರಾಜ್ಯದಲ್ಲಿ ವಸತಿ ರಹಿತರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಸೂಚಿಸುತ್ತದೆ. ಅಭಿವೃದ್ದಿ ಹೊಂದಿದ ರಾಜ್ಯಗಳ ಪಟ್ಟಿಯಲ್ಲಿರುವ ಕರ್ನಾಟಕದ ಪರಿಸ್ಥಿತಿಯೇ ಇಷ್ಟು ಕೆಟ್ಟದಿರಬೇಕಾದರೆ ಇನ್ನು ಒಟ್ಟಾರೆ ಭಾರತದ ಪರಿಸ್ಥಿತಿ ಎಷ್ಟು ಕೆಟ್ಟದಾಗಿರಬೇಕು ಅಲ್ಲವೇ?

ಉದ್ಯೋಗ ಸಿಗದ ಕಾರಣಕ್ಕೆ ನಗರ ಪ್ರದೇಶಗಳಿಗೆ ವಲಸೆ ಹೋಗಿ ಅಲ್ಲಿ ನೆಲೆ ಸಿಗದೆ ಸ್ಲಂಗಳಲ್ಲಿ ವಾಸಿಸುತ್ತಿರುವ ಜನರ ಲೆಕ್ಕ ಅಷ್ಟು ಸುಲಭಕ್ಕೆ ಸಿಗುವುದಿಲ್ಲ. ನಗರ ಪ್ರದೇ‍ಶಗಳಲ್ಲಿ ನೂರಾರು ವರ್ಷಗಳಿಂದ ಸ್ಲಂಗಳಲ್ಲಿ ವಾಸಿಸುತ್ತ ದುಡಿಯುತ್ತಿರುವ ಜನರು ಸಣ್ಣ ಸಣ್ಣ ಗುಡಿಸಲುಗಳನ್ನ ಹಾಕಿಕೊಂಡು ವಾಸಿಸುತ್ತಿದ್ದಾರೆ. ಆದರೆ ಅಂತಹ 90% ಜನರು ವಾಸಿಸುವ ಮನೆಗಳಿಗೆ ಇನ್ನೂ ಹಕ್ಕುಪತ್ರ ಸಿಕ್ಕಿಲ್ಲ. ಅವರನ್ನು ಯಾವ ಸಂದರ್ಭದಲ್ಲಿ ಬೇಕಾದರೂ ಅಲ್ಲಿಂದ ಎತ್ತಂಗಡಿ ಮಾಡಬಹುದು ಎನ್ನುವ ಆತಂಕದಲ್ಲಿ ದಿನದೂಡುತ್ತಿದ್ದಾರೆ.

ಇನ್ನು ಮಹಾನಗರಗಳಲ್ಲಿ ದುಡಿಯಲು ಬಂದವರು ಚಿಕ್ಕ ಪುಟ್ಟ ಬಾಡಿಗೆ ಮನೆಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ಜೀವನಪೂರ್ತಿ ದಿನದೂಡುತ್ತಿದ್ದಾರೆ. ಇನ್ನು ಮನೆ ಇಲ್ಲದ ನಿರ್ಗತಿಕರು, ಭಿಕ್ಷುಕರು ಇವರೆಲ್ಲರೂ ತ್ರಿವರ್ಣ ಧ್ವಜ ಹಾರಿಸಬೇಕು ಸರಿ, ಆದರೆ ಅವರ ಪರಿಸ್ಥಿತಿಗಳು ಬದಲಾಗುವುದು ಯಾವಾಗ?

ಜನರ ಸಮಸ್ಯೆಗಳನ್ನು ಮರೆಮಾಚುವ ಹುನ್ನಾರ- ಸಿರಿಮನೆ ನಾಗರಾಜ್

ದೇಶದಲ್ಲಿ ಕೋಟ್ಯಾನುಕೋಟಿ ಕುಟುಂಬಗಳಿಗೆ ಮನೆಗಳಿಲ್ಲ. ಇದ್ದ ಬದ್ದ ಮನೆಗಳನ್ನು ಅನಧಿಕೃತ ಎಂದು ಅಧಿಕಾರಿಗಳು ಪೊಲೀಸ್ ಪಹರೆಯಲ್ಲಿ ಬುಲ್ಡೋಜರ್ ಮೂಲಕ ನೆಲಸಮ ಮಾಡುತ್ತಿದ್ದಾರೆ. ಸರ್ಕಾರಿ ನಿವೇಶನಗಳಲ್ಲಿ ಗುಡಿಸಲು ಹಾಕಿಕೊಂಡು ಬದಕುತ್ತಿರುವವರಿಗೆ ಅಕ್ರಮ-ಸಕ್ರಮ ಯೋಜನೆಯಡಿ ಹಕ್ಕುಪತ್ರ ನೀಡುತ್ತೇವೆ ಎಂದು ಭಾಷಣ ಮಾಡುತ್ತಿದ್ದಾರೆ ಹೊರತು ಇದುವರೆಗೂ ಸಮರ್ಪಕವಾಗಿ ಜನರಿಗೆ ಮನೆಗಳ ಹಸ್ತಾಂತರ ಮಾಡಿಲ್ಲ. ಈ ಮಳೆಗಾಲದಲ್ಲಿ ಅಲ್ಲಿನ ಜನರ ಪರಿಸ್ಥಿತಿ ಹೇಳಲು ಅಸಾಧ್ಯ. ಆ ಬಡಜನರು ಯಾವ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕು ಎಂದು ಪ್ರಶ್ನಿಸುತ್ತಾರೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಪರವಾಗಿ ದಶಕಗಳಿಂದ ಹೋರಾಡುತ್ತಿರುವ ಹಿರಿಯ ಹೋರಾಟಗಾರ ಸಿರಿಮನೆ ನಾಗರಾಜ್.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಹಿಂದೆ ಆಳಿದ ಕಾಂಗ್ರೆಸ್ ಮತ್ತು ಜನತಾ ಪಕ್ಷಗಳಿಗಾಗಲಿ, ಈಗ ಆಳುತ್ತಿರುವ ಬಿಜೆಪಿ ಪಕ್ಷಕ್ಕಾಗಲಿ ಬಡಜನರಿಗೆ ಕನಿಷ್ಠ ಸೂರು ಒದಗಿಸುವ ಯೋಗ್ಯತೆ ಇಲ್ಲ. ಬದಲಿಗೆ ಹರ್‌ ಘರ್‌ ಪೆ ತಿಂರಂಗ ಎಂಬ ನಕಲಿ ಘೋಷಣೆಗಳನ್ನು ಹೇಳಿ ಜನರನ್ನು ಮರಳು ಮಾಡುತ್ತಿದ್ದಾರೆ. ಇದೊಂದು ಅಪ್ಪಟ ಜನದ್ರೋಹದ ಕೆಲಸವಾಗಿದೆ. ಇಂತಹ ಪೊಳ್ಳು ಯೋಜನೆಗಳ ಬದಲಿಗೆ ಜನರಿಗೆ ನೆತ್ತಿಯ ಮೇಲೆ ಸೂರು, ದುಡಿದು ಬದುಕಲು ತುಂಡು ಭೂಮಿ ನೀಡಿ ಘನತೆಯಿಂದ ಬದಕುವ ಹಕ್ಕು ನೀಡಬೇಕೆಂದು ಒತ್ತಾಯಿಸಬೇಕು” ಎಂದರು.

ಮೋದಿ ಸರ್ಕಾರ ಈ ತಂತ್ರದ ಮೂಲಕ ದಿನನಿತ್ಯದ ಸಮಸ್ಯೆ, ಬವಣೆಗಳಿಂದ ಜನಸಾಮಾನ್ಯರ ಗಮನವನ್ನು ಬೇರೆಕಡೆ ತಿರುಗಿಸುತ್ತಿದೆ. ಆ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ತಾನು ಬಗೆದ ದ್ರೋಹದ ಕತೆಯನ್ನು ಮರೆಮಾಚಿ, ತಾವೇ ದೊಡ್ಡ ದೇಶಪ್ರೇಮಿಗಳೆಂದು ಬಿಂಬಿಸಿಕೊಳ್ಳುತ್ತಿದೆ. ಅದು ಇಡೀ ಸ್ವಾತಂತ್ರ್ಯ ಚಳವಳಿಯನ್ನೂ ಈಗಲೂ ಅಲ್ಲಗಳೆಯುತ್ತ ಅದರ ಧೀರೋದಾತ್ತ ಚರಿತ್ರೆಯನ್ನು ಅಳಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಪ್ರಸ್ತುತಗೊಳಿಸಲು ಬಿಜೆಪಿ ತಾನು ನಡೆಸುತ್ತಿರುವ ಪ್ರಯತ್ನದ ಭಾಗವಾಗಿ, ಸ್ವಾತಂತ್ರ್ಯ ಚಳವಳಿಯ ಅವಿಭಾಜ್ಯ ಭಾಗವೇ ಆಗಿರುವ ಖಾದಿಯನ್ನೂ ಕೊಲ್ಲಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ದೇಶಾದ್ಯಂತ ಪ್ರಜ್ಞಾವಂತರು ಎಷ್ಟು ಮನವಿ ಮಾಡಿದರೂ ಕೇಳದೆ ಖಾದಿಯ ಮೇಲೆ ಜಿಎಸ್‌ಟಿ ತೆರಿಗೆ ಹಾಕಿದೆ. ಅದಕ್ಕೋಸ್ಕರವೇ ಪಾಲಿಯೆಸ್ಟರ್ ಧ್ವಜಕ್ಕೆ ಅನುಮತಿ ನೀಡಿದೆ. ಸಂವಿಧಾನದ ವಿಧಿಗೆ ವಿರುದ್ಧವಾಗಿ, ಖಾದಿಯ ಬದಲು ಪಾಲಿಯೆಸ್ಟರ್ ಬಟ್ಟೆಯ ಧ್ವಜಗಳಿಗೆ ಅನುಮತಿ ನೀಡುವ ಮೂಲಕ ಅಂಬಾನಿಯ ಪಾಲಿಯೆಸ್ಟರ್ ಬಟ್ಟೆ ಉದ್ಯಮಕ್ಕೆ ಸಾವಿರಾರು ಕೋಟಿ ರೂಪಾಯಿಗಳ ದಿಡೀರ್ ಲಾಭ ಮಾಡಿಕೊಡಲು ಹವಣಿಸುತ್ತಿದೆ ಎಂದು ಸಹ ಸಿರಿಮನೆ ನಾಗರಾಜ್ ಆರೋಪಿಸಿದ್ದಾರೆ.

ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಐತಿಹಾಸಿಕ ಸಂದರ್ಭದಲ್ಲಿ ಇದುವರೆಗೆ ಆಗಿರುವ ಸಾಧನೆಗಳು ಮತ್ತು ಮುಂದೆ ಮಾಡಬೇಕಿರುವ ಕಾರ್ಯಕ್ರಮಗಳನ್ನು ಸರ್ಕಾರ ಘೋಷಿಸಬೇಕು. ಆ ಮೂಲಕ ದೇಶವಾಸಿಗಳ ಕಲ್ಯಾಣಕ್ಕೆ ಪಣ ತೊಡಬೇಕು. ಆದರೆ ಮೋದಿ ಸರ್ಕಾರ ಕೇವಲ ಹೆಸರು ಬದಲಾವಣೆ, ಕೆಲಸಕ್ಕೆ ಬಾರದ ಹೊಸ ಘೋಷಣೆಗಳಲ್ಲಿ ಮುಳುಗಿದೆ. ಆ ಪಟ್ಟಿಗೆ ಹೊಸ ಸೇರ್ಪಡೆ ಪ್ರತಿ ಮನೆಗಳಲ್ಲಿ ತ್ರಿವರ್ಣ ಧ್ವಜ ಆಗಿದೆ.

ಇದನ್ನೂ ಓದಿ: ದೊರೆಸ್ವಾಮಿ ಮತ್ತು ಬಡಜನರ ಭೂಮಿ-ವಸತಿ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಖಂಡಿತ ನಿಮ್ಮ ಮಾಹಿತಿ ಸತ್ಯ ಆದರೆ ಇವರ ವಂಚಿತರಾಗಲು ರಾಜಕೀಯ ಮುಖಂಡರುಗಳೇ ಮುಖ್ಯ ಕಾರಣ ಅವರಿಗೆ ಸುಮಾರು 50 ಲಕ್ಷದಿಂದ 500 ಕೋಟಿ ವರೆಗೂ ಸಹ ಆಸ್ತಿಗಳನ್ನು ಹೊಂದಿರುತ್ತಾರೆ, ಆದರೂ ಸಹ ಸರ್ಕಾರದ ಕಟ್ಟ ಕಡೆಯ ವ್ಯಕ್ತಿಗೆ ತಲುಪಬೇಕಾದ ಅಂದರೆ ತಲುಪಬೇಕಾದ ವಸತಿಗಳು ಅಥವಾ ನಿವೇಶನಗಳು ಮುಖಂಡರುಗಳ ಪಾಲಾಗುತ್ತಿದೆ ಇದು ನನಗೆ ತಿಳಿದಿರುವ ಕಹಿ ಸತ್ಯ

  2. ಹೌದು ಸರ್ ನಿಮ್ಮ ಮಾತು ಒಪ್ಪೋಣ.
    ಕಾಂಗ್ರೇಸ್ ಪಕ್ಷದ ಸ್ವಾತಂತ್ರ್ಯ ದ ಹೋರಾಟದ ಕೊಡುಗೆಯನ್ನು ಮರೆಮಾಚುತ್ತಿದ್ದಾರೆ ನೀವು ನಿಮ್ಮ ಲೇಖನದಲ್ಲಿ ಅಷ್ಟು ಜನಕ್ಕೆ ಸೂರಿಲ್ಲದಿರುವುದಕ್ಕೆ ಮೋದಿಯೇ ಕಾರಣ ಕಾಂಗ್ರೇಸ್ ಪಾತ್ರವಿಲ್ಲ ಎಂದು ಬಿಂಬಿಸಬೇಡಿ. ಈಗಿನ ಕಾಂಗ್ರೇಸ್ ಹಾಗೂ ಸ್ವಾತಂತ್ರ್ಯ ಪೂರ್ವ ಕಾಂಗ್ರೇಸ್ ಎರಡೂ ಬೇರೆ ಎಂದು ಒಪ್ಪಿಕೊಳ್ಳಿ .

  3. ನಿಮ್ಮ ಮಾತು ನೂರಕ್ಕೆ ನೂರರಷ್ಟು ಸತ್ಯ..
    ಪ್ರಜಾಪ್ರಭುತ್ವವನ್ನು ಮರೆಮಾಚಿ ನಿರಂಕುಶ ಪ್ರಭುತ್ವ ಆಡಳಿತ ನಡೆಸುತ್ತಿರುವ ಮನುವಾದಿಗಳು ಹೇಗೆ ತಾನೇ ದೇಶ ಪ್ರೇಮಿಗಳು ಆಗಲೂ ಸಾಧ್ಯ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...