Homeಮುಖಪುಟ'ಪಹಲ್ಗಾಮ್‌ ದಾಳಿಗೆ 3 ದಿನ ಮೊದಲೇ ಮೋದಿಗೆ ಮಾಹಿತಿ ಇತ್ತು, ಹಾಗಾಗಿ ಕಾಶ್ಮೀರ ಭೇಟಿ ರದ್ದುಗೊಳಿಸಿದ್ದರು':...

‘ಪಹಲ್ಗಾಮ್‌ ದಾಳಿಗೆ 3 ದಿನ ಮೊದಲೇ ಮೋದಿಗೆ ಮಾಹಿತಿ ಇತ್ತು, ಹಾಗಾಗಿ ಕಾಶ್ಮೀರ ಭೇಟಿ ರದ್ದುಗೊಳಿಸಿದ್ದರು’: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

“ಪಹಲ್ಗಾಮ್ ದಾಳಿ ನಡೆಯುವ ಮೂರು ದಿನಗಳ ಮೊದಲೇ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆಯಬಹುದು ಎಂದು ಗುಪ್ತಚರ ಇಲಾಖೆ ಪ್ರಧಾನಿ ಮೋದಿಯವರಿಗೆ ವರದಿ ಕೊಟ್ಟಿತ್ತು. ಈ ಕಾರಣಕ್ಕೆ ಅವರು ಅಲ್ಲಿಯ ಪ್ರವಾಸವನ್ನು ರದ್ದುಗೊಳಿಸಿದ್ದರು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ (ಮೇ.6) ಆರೋಪಿಸಿದ್ದಾರೆ.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ‘ಸಂವಿಧಾನ್ ಬಚಾವೋ’ ಸಮಾವೇಶದಲ್ಲಿ ಮಾತನಾಡಿದ ಅವರು, “ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ‘ಗುಪ್ತಚರ ವೈಫಲ್ಯ’ ಕಾರಣ ಎಂಬುವುದನ್ನು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ. ಹಾಗಾಗಿ, ಜನರನ್ನು ರಕ್ಷಿಸಲು ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಲಪಡಿಸದಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ಹೇಳಿದ್ದಾರೆ.

“ಪಹಲ್ಗಾಮ್ ದಾಳಿಯ ಮೂರು ದಿನ ಮುನ್ನ ಭಯೋತ್ಪಾದಕ ದಾಳಿಯ ಸಾಧ್ಯತೆಯ ಬಗ್ಗೆ ಮೋದಿಯವರಿಗೆ ಗುಪ್ತಚರ ಇಲಾಖೆ ವರದಿ ನೀಡಿದೆ. ಈ ಕಾರಣಕ್ಕೆ ಅವರು ಅಲ್ಲಿಯ ಭೇಟಿಯನ್ನು ರದ್ದುಗೊಳಿಸಿದ್ದರು ಎಂದು ನನಗೆ ಮಾಹಿತಿ ದೊರೆತಿದೆ. ಕೆಲವು ಪತ್ರಿಕೆಗಳು ಈ ಬಗ್ಗೆ ವರದಿ ಮಾಡಿವೆ” ಎಂದಿರುವ ಖರ್ಗೆ, “ನಿಮ್ಮ ಭದ್ರತೆಗಾಗಿ ಅಲ್ಲಿಗೆ ಭೇಟಿ ನೀಡುವುದು ಸೂಕ್ತವಲ್ಲ ಎಂದು ಗುಪ್ತಚರ ವರದಿ ಹೇಳಿದಾಗ, ಜನರನ್ನು ರಕ್ಷಿಸಲು ನೀವು ನಿಮ್ಮ ಭದ್ರತೆ, ಗುಪ್ತಚರ, ಸ್ಥಳೀಯ ಪೊಲೀಸರು ಮತ್ತು ಗಡಿ ಪಡೆಗೆ ಏಕೆ ತಿಳಿಸಲಿಲ್ಲ? ನಿಮಗೆ ಮಾಹಿತಿ ಬಂದಾಗ, ನೀವು ನಿಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದೀರಿ. ಆದರೆ, ಅಲ್ಲಿಯ ಪ್ರವಾಸಿಗರನ್ನು ರಕ್ಷಿಸಲು ಹೆಚ್ಚಿನ ಪಡೆಗಳನ್ನು ಏಕೆ ಕಳುಹಿಸಲಿಲ್ಲ?” ಎಂದು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಗುಪ್ತಚರ ವೈಫಲ್ಯವನ್ನು ಒಪ್ಪಿಕೊಂಡಿರುವ ಕೇಂದ್ರ ಸರ್ಕಾರ, ಪಹಲ್ಗಾಮ್ ದಾಳಿಯ ಜೀವಹಾನಿಗೆ ಹೊಣೆಗಾರನಾಗಬೇಕಲ್ಲವೇ? ಎಂದು ಖರ್ಗೆ ಕೇಳಿದ್ದಾರೆ.

ಅವರು (ಕೇಂದ್ರ ಸರ್ಕಾರ) ವ್ಯವಸ್ಥೆಯನ್ನು ಸುಧಾರಿಸುತ್ತೇವೆ ಎನ್ನುತ್ತಿದ್ದಾರೆ. ನಿಮಗೆ ದಾಳಿಯ ಬಗ್ಗೆ ಮೊದಲೇ ಮಾಹಿತಿಯಿದ್ದರೂ ಪ್ರವಾಸಿಗರ ಭದ್ರತೆಯ ನಿಟ್ಟಿನಲ್ಲಿ ಸರಿಯಾದ ವ್ಯವಸ್ಥೆ ಏಕೆ ಮಾಡಿಲ್ಲ? ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಪಹಲ್ಗಾಮ್ ದಾಳಿಯ ಹಿನ್ನೆಲೆ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾದರೂ ಕಾಂಗ್ರೆಸ್ ಅದರ ಬೆಂಬಲಕ್ಕೆ ನಿಲ್ಲುತ್ತದೆ. ಏಕೆಂದರೆ ದೇಶವು ಪಕ್ಷ, ಧರ್ಮ ಮತ್ತು ಜಾತಿಯನ್ನು ಮೀರಿದ್ದು” ಎಂದು ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಹೇಳಿದ್ದಾರೆ.

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಇಪ್ಪತ್ತೈದು ಪ್ರವಾಸಿಗರು ಮತ್ತು ಸ್ಥಳೀಯ ಕಾಶ್ಮೀರಿ ವ್ಯಕ್ತಿ ಸಾವಿಗೀಡಾಗಿದ್ದಾರೆ.

ಹೈದರಾಬಾದ್: ವಿಶ್ವ ಸುಂದರಿ ಸ್ಪರ್ಧೆಗೆ ಬಜರಂಗದಳದಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...